ದೇಶ

ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ

ಸಮುದ್ರದಲ್ಲಿ ಕಟ್ಟೆಚ್ಚರದಿಂದ ಗುಂಪಾಗಿ ಮೀನುಗಾರಿಕೆ ನಡೆಸಲು ಸಲಹೆ ಉಡುಪಿ: ಯುದ್ಧದ ಕಾರ್ಮೋಡ ಸದ್ಯಕ್ಕೆ ಸರಿದಿದ್ದರೂ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವಾಗ ಕಟ್ಟೆಚ್ಚರದಿಂದಿರಲು ಮೀನುಗಾರರಿಗೆ ಸರಕಾರ ಸೂಚನೆ ನೀಡಿದೆ. ಎರಡು-ಮೂರು ದೋಣಿಗಳು ಗುಂಪಾಗಿ ಮೀನುಗಾರಿಕೆ ನಡೆಸಲು ಸೂಚಿಸಲಾಗಿದೆ ಮತ್ತು ಪ್ರತಿಕ್ಷಣವೂ ಕಟ್ಟೆಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ದೋಣಿ ಮತ್ತು ಅಪರಿಚಿತ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಡಲು ಮೀನುಗಾರಿಕಾ ಮೀನುಗಾರಿಕೆ ಇಲಖೆಯ ಜಂಟಿ ನಿರ್ದೇಶಕ ವಿವೇಕ್ ಆರ್. ಮೀನುಗಾರರಿಗೆ ಸೂಚಿಸಿದ್ದಾರೆ. ಯಾವುದೇ ಸಂದೇಹ ಅಥವಾ ಅನುಮಾನಾಸ್ಪದ ದೃಶ್ಯ ಕಂಡುಬಂದರೆ […]

ಅನುಮಾನಾಸ್ಪದ ಚಲನವಲನಗಳ ಮೇಲೆ ಕಣ್ಣಿಡಲು ಮೀನುಗಾರರಿಗೆ ಸೂಚನೆ Read More »

ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ

ಕಿರಾನ ಬೆಟ್ಟದಡಿಯಲ್ಲಿರುವ ಅಣ್ವಸ್ತ್ರ ಸಂಗ್ರಹಕ್ಕೆ ಭಾರತದ ಕ್ಷಿಪಣಿಗಳು ಅಪ್ಪಳಿಸಿರುವ ಕುರಿತು ಚರ್ಚೆ ನವದೆಹಲಿ: ಭಾರತದ ಕ್ಷಿಪಣಿಗಳು ಪಾಕಿಸ್ಥಾನದ ಅಣ್ವಸ್ತ್ರಗಳ ಮೇಲೆಯೇ ದಾಳಿ ನಡೆಸಿವೆ ಎಂಬ ದಟ್ಟ ವದಂತಿಯೊಂದು ಹರಿದಾಡುತ್ತಿದೆ. ಭಾರತದ ಸೇನೆ ಪಾಕ್‌ನ ಅಣ್ವಸ್ತ್ರಗಳನ್ನು ಗುರಿ ಮಾಡಿಕೊಂಡು ದಾಳಿ ನಡೆಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರೂ ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಾಕಿಸ್ಥಾನದಲ್ಲಿ ಪರಮಾಣು ವಿಕಿರಣ ಸೋರಿಕೆ ಆಗುತ್ತಿದ್ಯಾ ಎಂಬ ಅನುಮಾನ ಹುಟ್ಟಿಸಿದೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ತೀವ್ರ ಸಂಘರ್ಷ ನಡೆಯುತ್ತಿದ್ದಾಗ ದಿಢೀರ್‌ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾರಣ

ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗುತ್ತಿರುವ ಅನುಮಾನ Read More »

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು

ನವದೆಹಲಿ: ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 16 ಮಂದಿ ಸಾವಿಗೀಡಾದ ಘಟನೆ ಪಂಜಾಬಿನ ಅಮೃತಸರ ಜಿಲ್ಲೆಯ ಐದು ಹಳ್ಳಿಗಳಲ್ಲಿ ಸಂಭವಿಸಿದೆ. ಈ ದುರಂತಕ್ಕೆ ಸಂಭವಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಹಳ್ಳಿಗಳ ಜನ ನಿನ್ನೆ ರಾತ್ರಿ ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕನಿಷ್ಠ 6 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 9.30ರ ವೇಳೆಗೆ ಜನರು ಕಳ್ಳಭಟ್ಟಿ ಸಾರಾಯಿ ಸೇವಿಸಿ ತೀವ್ರ ಅಸ್ವಸ್ಥರಾಗತೊಡಗಿದರು. ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ

ಕಳ್ಳಭಟ್ಟಿ ಸಾರಾಯಿ ಸೇವಿಸಿ 16 ಮಂದಿ ಸಾವು Read More »

ಭಾರತ-ಪಾಕ್‌ ನಡುವೆ ಮತ್ತೆ ಉದ್ವಿಗ್ನತೆ : ಹಲವು ವಿಮಾನಗಳ ಸಂಚಾರ ರದ್ದು

ನಿನ್ನೆ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಡ್ರೋನ್‌ ದಾಳಿ ನಡೆಸಿದ ಪಾಕ್‌ ನವದೆಹಲಿ: ನಿನ್ನೆ ರಾತ್ರಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗಡಿ ಭಾಗದಲ್ಲಿ ಡ್ರೋನ್‌ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಮತ್ತೊಮ್ಮೆ ವ್ಯತ್ಯಯವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ಕಾರಣಕ್ಕಾಗಿ ಇಂದು ಇಂಡಿಗೊ ಮತ್ತು ಏರ್‌ ಇಂಡಿಯಾ ಉತ್ತರ ಮತ್ತು ಪಶ್ಚಿಮ ಭಾರತದ ಹಲವು ನಗರಗಳ ವಿಮಾನ ಸಂಚಾರವನ್ನು ರದ್ದುಗೊಳಿಸಿವೆ. ಇಂಡಿಗೊ, ಶ್ರೀನಗರ, ಜಮ್ಮು, ಲೇಹ್‌,

ಭಾರತ-ಪಾಕ್‌ ನಡುವೆ ಮತ್ತೆ ಉದ್ವಿಗ್ನತೆ : ಹಲವು ವಿಮಾನಗಳ ಸಂಚಾರ ರದ್ದು Read More »

ಐಪಿಎಲ್‌ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್‌

ಆರ್‌ಸಿಬಿ-ಕೆಕೆಆರ್‌ ಮುಖಾಮುಖಿಯೊಂದಿಗೆ ಐಪಿಎಲ್‌ ಮರಳಿ ಅರಂಭ ಮುಂಬಯಿ: ಯುದ್ಧದ ಕಾರಣದಿಂದ ರದ್ದುಪಡಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳನ್ನು ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಹೊಸ ವೇಳಪಟ್ಟಿಯನ್ನು ರಚಿಲಾಗಿದೆ. ಅದರಂತೆ ಮೇ 17ರಿಂದ ಐಪಿಎಲ್​ಗೆ ಮತ್ತೆ ಚಾಲನೆ ದೊರೆಯಲಿದೆ. ಆದರೆ ಐಪಿಎಲ್‌ ಪಂದ್ಯಗಳು ನಡೆಯುವ ಸ್ಥಳಗಳು ಬದಲಾಗಲಿವೆ ಮತ್ತು ಪಂದ್ಯಗಳ ನಡುವಿನ ಅಂತರವೂ ವ್ಯತ್ಯಾಸವಾಗಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಈಗಾಗಲೇ 57 ಪಂದ್ಯಗಳು ಪೂರ್ಣಗೊಂಡಿದ್ದು, ಇದೀಗ ಉಳಿದ ಪಂದ್ಯಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಮೇ 9ರ

ಐಪಿಎಲ್‌ ಪಂದ್ಯಗಳ ವೇಳಾಪಟ್ಟಿ ಮರು ನಿಗದಿ : ಮೇ 17ರಂದು ಬೆಂಗಳೂರಿನಲ್ಲಿ ಮೊದಲ ಮ್ಯಾಚ್‌ Read More »

ಭಾರತ-ಪಾಕ್‍ ನಡುವಿನ ಕದನ ವಿರಾಮ : ಬಂದ್ ಆಗಿದ್ದ 32 ವಿಮಾನ ನಿಲ್ದಾಣ ಕಾರ್ಯಾರಂಭಿಸುವಂತೆ ವಾಯುಪಡೆಯಿಂದ ಸೂಚನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡುವಂತೆ ವಾಯುಪಡೆ ಸೂಚನೆ ನೀಡಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಭಾರತ ಪಾಕ್ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ಏರ್‌ ಪೋರ್ಟ್‌ಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ

ಭಾರತ-ಪಾಕ್‍ ನಡುವಿನ ಕದನ ವಿರಾಮ : ಬಂದ್ ಆಗಿದ್ದ 32 ವಿಮಾನ ನಿಲ್ದಾಣ ಕಾರ್ಯಾರಂಭಿಸುವಂತೆ ವಾಯುಪಡೆಯಿಂದ ಸೂಚನೆ Read More »

30 ಶತಕ, 31 ಅರ್ಧಶತಕ, 9230 ರನ್ : ಟೆಸ್ಟ್‌ನಲ್ಲಿ ಕೊಹ್ಲಿ ಸಾಧನೆ

ಟೆಸ್ಟ್‌ ಪಂದ್ಯಗಳಿಗೆ ವಿದಾಯ ದೃಢಪಡಿಸಿದ ಕಿಂಗ್‌ ಕೊಹ್ಲಿ ಮುಂಬಯಿ: ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳುತ್ತಿರುವುದು ದೃಢಪಟ್ಟಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದು, ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ. ಕೆಲ ದಿನಗಳ ಹಿಂದೆ ಕೊಹ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಬಿಸಿಸಿಐ ಅವರ ಮನವೊಲಿಸಲು ಮುಂದಾಗಿತ್ತು. ಆದರೆ ಈ ಮಾತುಕತೆ ಫಲಪ್ರದವಾಗಿಲ್ಲ. ಹೀಗಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ

30 ಶತಕ, 31 ಅರ್ಧಶತಕ, 9230 ರನ್ : ಟೆಸ್ಟ್‌ನಲ್ಲಿ ಕೊಹ್ಲಿ ಸಾಧನೆ Read More »

ಮುಗಿದಿಲ್ಲ ಆಪರೇಷನ್‌ ಸಿಂದೂರ : ಪಾಕ್‌ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ

ಒಂದೇ ಒಂದು ಗುಂಡು ಹಾರಿದರೆ ಮತ್ತೆ ದಾಳಿ ಎಂದು ಖಡಕ್‌ ಎಚ್ಚರಿಕೆ ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆರಂಭಿಸಿರುವ ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಾಕಿಸ್ಥಾನದೊಂದಿಗೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲದ ಕಾರಣ ಆಪರೇಷನ್‌ ಸಿಂಧೂರ ಮುಂದುವರಿಯಲಿದೆ. ಮೂರೂ ಸಶಸ್ತ್ರ ಪಡೆಗಳು ಯುದ್ಧ ಸನ್ನದ್ಧತೆಯಲ್ಲಿದ್ದು, ಯಾವುದೇ ಸಂಭಾವ್ಯ ದಾಳಿಯನ್ನು ಎದುರಿಸಲು ಸಮರ್ಥವಾಗಿದ್ದೇವೆ. ಕದನ ವಿರಾಮ ಘೋಷಣೆಯಾಗಿದ್ದರೂ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಇನ್ನೂ ಸಕ್ರಿಯವಾಗಿದೆ ಎಂಬ ಸಂದೇಶವನ್ನು ಭಾರತದ

ಮುಗಿದಿಲ್ಲ ಆಪರೇಷನ್‌ ಸಿಂದೂರ : ಪಾಕ್‌ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ Read More »

19 ದಿನಗಳ ಬಳಿಕ ಶಾಂತವಾದ ಗಡಿ

ಶೆಲ್‌, ಗುಂಡಿನ ದಾಳಿಯಿಲ್ಲದೆ ನೆಮ್ಮದಿಯಾಗಿ ನಿದ್ದೆ ಮಾಡಿದ ಜನ ನವದೆಹಲಿ: ಭಾರತ ಹಾಗೂ ಪಾಕಿಸ್ಥಾನ​ ನಡುವೆ ಕಳೆದ 19 ದಿನಗಳಿಂದ ಮೊದಲ ಬಾರಿ ನಿನ್ನೆ ರಾತ್ರಿ ಗಡಿ ಶಾಂತವಾಗಿತ್ತು. ಯುದ್ಧ ಪ್ರಾರಂಭವಾದ ಬಳೀಕ ನಿತ್ಯ ಶೆಲ್ಲಿಂಗ್‌ ಮತ್ತಿತರ ದಾಳಿ ನಡೆಯುತ್ತಿದ್ದ ಗಡಿಯಲ್ಲಿ ನಿನ್ನೆ ರಾತ್ರಿ ಒಂದೇ ಒಂದು ಗುಂಡು ಹಾರಿಲ್ಲ. ಜಮ್ಮು ಮತ್ತು ಕಾಶ್ಮೀರ ಹಾಗೂ ಇತರ ಗಡಿ ಪ್ರದೇಶಗಳಲ್ಲಿ ಯಾವುದೇ ಹೊಸ ಘಟನೆಗಳು ಅಥವಾ ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿಲ್ಲ. ಶಾಂತಿ ನೆಲೆಸಿದೆ ಎಂದು ಭಾರತೀಯ

19 ದಿನಗಳ ಬಳಿಕ ಶಾಂತವಾದ ಗಡಿ Read More »

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ

ಅಮೆರಿಕಕ್ಕೆ ಭಾರತದ ಸ್ಪಷ್ಟ ನಿಲುವು ತಿಳಿಸಿದ ಪ್ರಧಾನಿ ಮೋದಿ ನವದೆಹಲಿ: ಪಾಕಿಸ್ಥಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಆ ಕಡೆಯಿಂದ ಗುಂಡು ಹಾರಿಸಿದರೆ ಇಲ್ಲಿಂದಲೂ ಗುಂಡು ಸಿಡಿಯುತ್ತದೆ. ನಮಗೆ ಯಾರ ಮಧ್ಯಸ್ಥಿಕೆ ಕೂಡ ಬೇಕಾಗಿಲ್ಲ ಎಂದು ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್​ ಜೊತೆ ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿ ಭಾರತದ ನಿಲುವನ್ನು ತಿಳಿಸಿದ್ದಾರೆ. ಕಾಶ್ಮೀರದ ಬಗ್ಗೆ ಭಾರತ

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ Read More »

error: Content is protected !!
Scroll to Top