ದೇಶ

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ

ಗುರುವಾರ ರಾತ್ರಿಯಿಡೀ ಎಲ್‌ಒಸಿಯಲ್ಲಿ ಭಾರಿ ಗುಂಡಿನ ಚಕಮಕಿ ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ಮಾಡಿದ ಮೂರು ದಿನಗಳ ಬಳಿಕ ಪಾಕಿಸ್ಥಾನ ಗಡಿಯಾಚೆಗಿನಿಂದ ಗುಂಡಿನ ದಾಳಿ ಪ್ರಾರಂಭಿಸಿದ್ದು, ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಾಚೆಯಿಂದ ರಾತ್ರಿಯಿಡೀ ಶೆಲ್‌ ಮತ್ತು ಮೋರ್ಟರ್‌ ದಾಳಿಯಾಗಿದೆ. ಇದು ಅಸ್ವಾಭಾವಿಕ ಬೆಳವಣಿಗೆಯಾಗಿದ್ದು, ಪಾಕಿಸ್ಥಾನ ಕಾಲು ಕೆದರಿ ಯುದ್ಧಕ್ಕೆ ಬರುವ ಲಕ್ಷಣದಂತೆ ಕಾಣಿಸುತ್ತಿದೆ ಎಂದು ಭದ್ರತಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನಿ ಸೈನಿಕರು ಶೆಲ್‌ ಮತ್ತು ಮೋರ್ಟರ್‌ಗಳಿಂದ ದಾಳಿ ನಡೆಸಿದ್ದು, […]

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ Read More »

ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು

ಕಾಶ್ಮೀರದಲ್ಲಿ ಭದ್ರತಾ ಲೋಪವಾಗಿದೆ ಎಂದು ಒಪ್ಪಿಕೊಂಡ ಸರಕಾರ ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಹಿನ್ನೆಲೆಯಲ್ಲಿ ಉಗ್ರರನ್ನು ಮಟ್ಟ ಹಾಕಲು ಸರಕಾರ ಕೈಗೊಳ್ಳುವ ಯಾವುದೇ ಕ್ರಮವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಹೇಳಿವೆ. ಸಂಸತ್ ಭವನದಲ್ಲಿ ನಿನ್ನೆ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಎಲ್ಲ ಪ್ರಮುಖ ವಿಪಕ್ಷಗಳು ಉಗ್ರರನ್ನು ಮಟ್ಟಹಾಕಲೇ ಬೇಕು ಎಂದು ಪ್ರತಿಪಾದಿಸಿವೆ. ಸಭೆಯಲ್ಲಿ ಕೆಲ ಮಹತ್ವದ ಅಂಶಗಳನ್ನು ಚರ್ಚಿಸಿ ಉಗ್ರರ ಕೃತ್ಯವನ್ನು ಒಕ್ಕೂರಲಿನಿಂದ ಖಂಡಿಸಲಾಗಿದೆ. ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ತಮ್ಮ ಬೆಂಬಲವಿದೆ

ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು Read More »

ಹಿಂದೂಗಳ ಹತ್ಯೆಯನ್ನು ಸಮರ್ಥಿಸಿಕೊಂಡ ಅಸ್ಸಾಂನ ಶಾಸಕ

ಗುವಾಹಟಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ನಡೆದ ಹಿಂದೂಗಳ ನರಮೇಧಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಅಸ್ಸಾಂನ ವಿರೋಧ ಪಕ್ಷವಾಗಿರುವ ಎಐಯುಡಿಎಫ್‌ ಶಾಸಕ ಅಮಿನುಲ್‌ ಇಸ್ಲಾಂನನ್ನು ಪೊಲೀಸರು ಬಂಧಿಸಿದ್ದಾರೆ. ನಾಗಾಂವ್ ಜಿಲ್ಲೆಯ ನಿವಾಸದಲ್ಲಿ ಶಾಸಕನನ್ನು ಬಂಧಿಸಲಾಗಿದೆ. ಪಕ್ಷದ ಶಾಸಕನ ಹೇಳಿಕೆ ಕುರಿತು ಎಐಯುಡಿಎಫ್ ಅಂತರ ಕಾಯ್ದುಕೊಂಡಿದೆ. ಇದು ಶಾಸಕನ ವೈಯಕ್ತಿಕ ಹೇಳಿಕೆ, ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಪಾಕಿಸ್ತಾನ ಸಮರ್ಥಿಸಿಕೊಂಡಿರುವ ಶಾಸಕನ ವಿಡಿಯೋ ನೋಡಿದ್ದೇವೆ. ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಶಾಸಕರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಮಾಹಿತಿ ನೀಡಿದ್ದಾರೆ.

ಹಿಂದೂಗಳ ಹತ್ಯೆಯನ್ನು ಸಮರ್ಥಿಸಿಕೊಂಡ ಅಸ್ಸಾಂನ ಶಾಸಕ Read More »

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ

ಐಸಿಸ್‌ ಕಾಶ್ಮೀರ ಖಾತೆಯಿಂದ ಐ ಕಿಲ್‌ ಯೂ ಎಂದು ಧಮ್ಕಿ ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಐಸಿಸ್ ಕಾಶ್ಮೀರ ಎಂಬ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.ಗೌತಮ್ ಗಂಭೀರ್ ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ

ಕ್ರಿಕೆಟ್‌ ತಂಡದ ಕೋಚ್‌ ಗೌತಮ್‌ ಗಂಭೀರ್‌ಗೆ ಕೊಲೆ ಬೆದರಿಕೆ Read More »

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು?

ಉತ್ತರ ನೀಡಲು ಪಾಕಿಸ್ಥಾನ ಮಾಡುತ್ತಿದೆ ಭಾರಿ ಸಿದ್ಧತೆ ಇಸ್ಲಾಮಾಬಾದ್ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಕೈಗೊಂಡ ದಿಟ್ಟ ದೊಡ್ಡ ಕ್ರಮಗಳಿಗೆ ತಾನು ಉತ್ತರ ನೀಡಲಿದ್ದೇನೆ ಎಂದು ಒಪಾಕಿಸ್ಥಾನ ಹೇಳಿದೆ. ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ಥಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ, ಮತ್ತೊಂದೆಡೆ, ಪಾಕಿಸ್ಥಾನದ ರಾಯಭಾರ ಕಚೇರಿಯನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಾಕಿಸ್ಥಾನಿಗಳು 48 ಗಂಟೆಗಳ ಒಳಗೆ

ರಾಜತಾಂತ್ರಿಕ ಸಂಬಂಧ ಕಟ್‌ : ಸಚಿವೆ ನೀಡಿದ ಎಚ್ಚರಿಕೆ ಏನು? Read More »

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ?

ಉಗ್ರ ದಾಳಿಗೆ ಕುಮ್ಮಕ್ಕು ನೀಡಿದ ಪಾಕ್‌ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟ ಭಾರತ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ದಾಳಿಯಿಂದ ಇಡೀ ದೇಶ ಕನಲಿ ಹೋಗಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲು ತೀರ್ಮಾನಿಸಲಾಗಿದೆ. ದಾಳಿ ನಡೆಸಿದ ಟಿಆರ್​ಎಫ್​ ಪಾಕಿಸ್ಥಾನ ಮೂಲದ ನಿಷೇಧಿತ ಭಯೋತ್ಪಾದಕ

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ? Read More »

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ

ಪಶ್ಚಿಮ ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ್ದು, ಈ ದಾಳಿಯಲ್ಲಿ 30 ಪ್ರವಾಸಿಗರು ಸಾವನ್ನಪಿರುವ ಮಾಹಿತಿ ಈಗಾಗಲೇ ತಿಳಿದುಬಂದಿದೆ. ಹಿಂದೂಗಳನ್ನೇ ಟಾರ್ಗೆಟ್​ ಮಾಡಿ ಭಯೋತ್ಪಾದಕರು ಫೈರಿಂಗ್​ ಮಾಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎನ್ನಲಾಗ್ತಿದೆ. ಇನ್ನೂ ಹಲವು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇದರ ಮಧ್ಯೆ ಪುಟ್ಟ ಮಗುವೊಂದು ತನ್ನ ತಂದೆಯ ಮೃತದೇಹದ ಮೇಲೆ ಕುಳಿತು ಕಣ್ಣೀರಿಡುವ ಭಾವನಾತ್ಮಕ ದೃಶ್ಯ ಕಂಡು ಬಂದಿದೆ. ತನ್ನ ತಂದೆಯನ್ನ ಕಳೆದುಕೊಂಡು ಕಂದಮ್ಮ ಕಣ್ಣೀರು ಹಾಕಿದೆ.

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ Read More »

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ

ಬಾಡಿ ಕ್ಯಾಮೆರಾ ಧರಿಸಿದ್ದ ಭಯೋತ್ಪಾದಕರು; ರೇಖಾಚಿತ್ರ ಬಿಡುಗಡೆಗೊಳಿಸಿದ ಭದ್ರತಾ ಪಡೆ ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಮತ್ತೆ ನಮ್ಮ ಗುಪ್ತಚರ ವಿಭಾಗ ವಿಫಲವಾಯಿತೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ದಾಳೀಗೆ ಉಗ್ರರು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ಥಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ Read More »

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಸಾಯಿಸಿದ ಬೆನ್ನಿಗೆ ಸೇನೆ ಇಬ್ಬರು ಉಗ್ರರನ್ನು ಗಡಿ ರೇಖೆಯ ಬಳಿ ಸಾಯಿಸಿದೆ. ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನುಸುಳಿಕೊಂಡು ಬರಲು ಯತ್ನಿಸಿದ್ದ ಉಗ್ರರನ್ನು ಸೇನೆ ಸಾಯಿಸಿದೆ. ಭಾರಿ ಗುಂಡಿನ ಕಾಳಗದ ಬಳಿಕ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡು, ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾರಾಮುಲ್ಲಾದ ಉರಿನಾಲಾದ ಸರ್ಜೀವನ್‌ ಎಂಬ ಪ್ರದೇಶದಿಂದ ಮೂವರು ಉಗ್ರರು ಒಳನುಸುಳಲು ಯುತ್ನಿಸಿದ್ದರು. ಓರ್ವ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌

ಭಾರತದ ಪ್ರಧಾನಿಗಿಂತಲೂ ಹೆಚ್ಚಿನ ಭದ್ರತೆ ಇದೆಯಂತೆ ಪಾಕಿಸ್ಥಾನದ ಈ ಉಗ್ರನಿಗೆ ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೂತ್ರಧಾರ ಸೈಫುಲ್ಲಾ ಖಾಲಿದ್‌ ಎಂಬ ಉಗ್ರ ಮುಖಂಡ ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಅಂಗಸಂಸ್ಥೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಈ ಸೈಫುಲ್ಲಾ ಖಾಲಿದ್‌. ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌ Read More »

error: Content is protected !!
Scroll to Top