ದೇಶ

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ

ಪ್ಲಾಸ್ಟಿಕ್, ಪ್ಯಾಕೇಜಿಂಗ್, ಜವಳಿ, ಔಷಧ, ಆಟೋಮೊಬೈಲ್ ಕ್ಷೇತ್ರಗಳಿಗೆ ಅನುಕೂಲ ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಆಯ್ದ 40 ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲೆ ಶೂನ್ಯ ಸುಂಕವನ್ನು ವಿಧಿಸಿದೆ. ಈ ವಿನಾಯಿತಿ ಏಪ್ರಿಲ್‌ 2ರಿಂದ ಜೂನ್‌ 30ರವರೆಗೆ ಜಾರಿಯಲ್ಲಿರುತ್ತದೆ. ಮೆಥನಾಲ್, ಟೊಲ್ಯೂನ್, ಸ್ಟೈರೀನ್, ವಿನೈಲ್ ಕ್ಲೋರೈಡ್ ಮೊನೊಮರ್, […]

ಪೆಟ್ರೋಕೆಮಿಕಲ್ ಉತ್ಪನ್ನಗಳ ಕಸ್ಟಮ್ಸ್ ಸುಂಕ ಶೂನ್ಯಕ್ಕಿಳಿಸಿದ ಸರ್ಕಾರ Read More »

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ

ಜನಸಾಮಾನ್ಯರಿಗೆ ಹೊರೆ, ತೊಂದರೆ ಆಗದಂತೆ ನೋಡಿಕೊಳ್ಳಲು ಸಲಹೆ ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದ ಬಿಕ್ಕಟ್ಟಿನ ನಡುವೆಯೇ ದೇಶದ ಸ್ಥಿತಿಗತಿಗಳನ್ನು ಸಮತೋಲನದಲ್ಲಿಡಲು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಬಳಿಕ ಪ್ರಧಾನಿ ಮೋದಿಯವರು ಸಚಿವರೊಂದಿಗೆ ಬುಧವಾರ ಸಭೆ ನಡೆಸಿದ್ದು, ಜನಸಾಮಾನ್ಯರಿಗೆ ಯಾವುದೇ ರೀತಿಯ ಹೊರೆ ಅಥವಾ ತೊಂದರೆ ಆಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸಚಿವಾಲಯಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಭೆಯಲ್ಲಿ

ಎಲ್‌ಪಿಜಿ, ಪಿಎನ್‌ಜಿ ನಿರಂತರ ಪೂರೈಕೆ : ಮೋದಿ ಸೂಚನೆ Read More »

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ

ಹೊಸ ನಿಯಮದಿಂದ ಅಡಕತ್ತರಿಯಲ್ಲಿ ಸಿಲುಕಿದ ಅಡಿಕೆ ಬೆಳೆಗಾಗರರು ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳಗಾರರರಿಗೆ ಈ ರೀತಿಯ ತೇವಾಂಶ ಮಿತಿ ಹೇರಿಕೆಯು ಸಾಕಷ್ಟು ತೊಂದರೆಯುಂಟು ಮಾಡುತ್ತಿರುವುದನ್ನು ಮನವರಿಕೆ ಮಾಡಿದ್ದಾರೆ. ನಮ್ಮ ಪ್ರದೇಶದ ಹೆಚ್ಚಿನ ಸಂಖ್ಯೆಯ ಸಣ್ಣ

ಅಡಿಕೆ ತೇವಾಂಶ ಮಿತಿ ಸಡಿಲಿಕೆ : ಕ್ಯಾ.ಬ್ರಿಜೇಶ್‌ ಚೌಟ ಮನವಿ Read More »

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ

ಶೂಟಿಂಗ್‌ ಸೆಟ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಮಲಯಾಳಂನ ಜನಪ್ರಿಯ ನಿರ್ದೇಶಕ ಹಾಗೂ ನಟ ರಂಜಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ರಂಜಿತ್‌ ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ

ನಟಿಗೆ ಕಿರುಕುಳ : ಮಲಯಾಳಂನ ಜನಪ್ರಿಯ ನಿರ್ದೇಶಕ ಬಂಧನ Read More »

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್‌ ಜಿಲ್ಲೆಯಲ್ಲಿ ಉಗ್ರರ ನಿಗ್ರಹಕ್ಕೆ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ನಿನ್ನೆ ರಾತ್ರಿಯಿಡೀ ನಡೆದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ ಸಾವನ್ನಪ್ಪಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿದೆ. ಗಂಡೇಬಲ್ ಜಿಲ್ಲೆಯ ಅರಹಮಾ ಪ್ರದೇಶದಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ಮುಂದುವರಿದಿದ್ದು, ಭದ್ರತಾ ಪಡೆಗಳು ಶೋಧ ನಡೆಸುತ್ತಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜೊತೆಗೆ ಭಾರತೀಯ ಸೇನೆಯ ಎರಡು ಅಸ್ಸಾಂ ರೆಜಿಮೆಂಟ್‌ಗಳು ಜಂಟಿ ಕಾರ್ಯಾಚರಣೆ

ಎನ್‌ಕೌಂಟರ್‌ಗೆ ಪಾಕಿಸ್ತಾನದ ಉಗ್ರ ಬಲಿ Read More »

ಇನ್ನು 20 ಸಾವಿರ ಮೇಲ್ಪಟ್ಟು ನಗದು ವ್ಯವಹಾರಕ್ಕೆ ಬ್ರೇಕ್‌

ಹೊಸ ಆರ್ಥಿಕ ವರ್ಷದಲ್ಲಿ ಹಲವು ಹೊಸ ನಿಯಮಗಳು ಬೆಂಗಳೂರು: ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಹಣಕಾಸು, ಬ್ಯಾಂಕಿಂಗ್, ಸಾರಿಗೆ, ತೆರಿಗೆ ಸೇರಿದಂತೆ ಹಲವು ದೈನಂದಿನ ಚಟುವಟಿಕೆಗಳು ಬದಲಾಗಲಿವೆ. ನಗದು ವ್ಯವಹಾರ ಮತ್ತಷ್ಟು ದುಬಾರಿ ಆಗಲಿದೆ. ಆದಾಯ ತೆರಿಗೆ ಕಾಯ್ದೆ ಅಡಿ ಹೊಸ ನಿಯಮಗಳು ಜಾರಿ ಆಗಲಿವೆ. ನಗದು ಡೆಪಾಸಿಟಿಗೂ ಮಿತಿ, ನಗದು ವಾಪಸ್‌ಗೂ ಮಿತಿ ಇರಲಿದ್ದು, ನಗದು ವ್ಯವಹಾರಕ್ಕೆ ಹೊಸ ಮಿತಿ ನಿಗದಿಗೊಳಿಸಲಾಗಿದೆ. ಬೇಕಾಬಿಟ್ಟಿ ನಗದು ವ್ಯವಹಾರಕ್ಕೆ ಬ್ರೇಕ್ ಹಾಕಿ, ಪಾರದರ್ಶಕತೆ ತರಲು ಕೇಂದ್ರ ಸರ್ಕಾರ

ಇನ್ನು 20 ಸಾವಿರ ಮೇಲ್ಪಟ್ಟು ನಗದು ವ್ಯವಹಾರಕ್ಕೆ ಬ್ರೇಕ್‌ Read More »

ಕಮರ್ಷಿಯಲ್‌ ಸಿಲಿಂಡರ್‌ ಬೆಲೆ 195.50 ರೂ. ಹೆಚ್ಚಳ

ಅಲಭ್ಯತೆ ನಡುವೆ ಬೆಲೆ ಏರಿಕೆಯ ಹೊಡೆತ ನವದೆಹಲಿ : ಕಮರ್ಷಿಯಲ್​​ ಸಿಲಿಂಡರ್​​ ಅಭಾವದ ನಡುವೆ ಬಳಕೆದಾರರಿಗೆ ಮತ್ತೊಂದು ಶಾಕ್​​ ಎದುರಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆ ಜಾಗತಿಕ ತೈಲ ಬೆಲೆ ಏರಿಕೆಯಾಗಿರುವ ಕಾರಣ ಏಪ್ರಿಲ್ 1ರಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 195.50 ರೂ. ಹೆಚ್ಚಳವಾಗಿದೆ. ಇದಕ್ಕೂ ಮೊದಲು ಮಾರ್ಚ್ 1ರಂದು 19 ಕೆ.ಜಿ. ಸಿಲಿಂಡರ್‌ ಬೆಲೆ 114.5 ರೂ. ಏರಿಕೆಯಾಗಿತ್ತು. ಒಂದು ತಿಂಗಳ ಅವಧಿಯಲ್ಲಿ 315 ರೂ. ಏರಿಕೆಯಾದಂತಾಗಿದೆ. ಯುದ್ಧದ ಕಾರಣಕ್ಕೆ ಭಾರತಕ್ಕೆ

ಕಮರ್ಷಿಯಲ್‌ ಸಿಲಿಂಡರ್‌ ಬೆಲೆ 195.50 ರೂ. ಹೆಚ್ಚಳ Read More »

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು

ಚೈತ್ರ ಮಾಸದ ಕೊನೆಯ ಮಂಗಳವಾರದ ಪೂಜೆಗೆ ಸೇರಿದ್ದ ಭಕ್ತರು ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತಸಂಭವಿಸಿ 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ. ನಳಂದ ಜಿಲ್ಲೆಯ ಬಿಹಾರ ಶರೀಫ್‌ನಿಂದ ಸುಮಾರು 5 ಕಿಲೋಮೀಟರ್ ದೂರದ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾದ್ದರಿಂದ, ದೇವಾಲಯದಲ್ಲಿ ಅಪಾರ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಭಾರಿ ಸಂಖ್ಯೆಯಲ್ಲಿ ಜನರಿದ್ದ ಕಾರಣ ನೂಕುನುಗ್ಗಲು

ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ : 8 ಮಹಿಳೆಯರು ಸಾವು Read More »

ಹೋಟೆಲ್‌ಗಳ ಫ್ಯೂಯಲ್ ಸರ್ಚಾರ್ಜ್‌ಗೆ ಬ್ರೇಕ್‌

ಬಿಲ್‌ನಲ್ಲಿ ಎಲ್‌ಪಿಜಿ ಚಾರ್ಜ್ ಸೇರಿಸುವಂತಿಲ್ಲ ಬೆಂಗಳೂರು : ಬೆಂಗಳೂರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಇತ್ತೀಚೆಗೆ ಗ್ರಾಹಕರಿಗೆ ವಿಧಿಸಲಾಗುತ್ತಿದ್ದ ಎಲ್‌ಪಿಜಿ ಫೀಸ್ ಅಥವಾ ‘ಫ್ಯೂಯಲ್ ಸರ್‌ಚಾರ್ಜ್’ (ಇಂಧನ ಶುಲ್ಕ)ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಬ್ರೇಕ್ ಹಾಕಿದೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರಿನ ಹಲವು ಹೋಟೆಲ್‌ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ‘ಎಲ್‌ಪಿಜಿ ಚಾರ್ಜ್’ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ

ಹೋಟೆಲ್‌ಗಳ ಫ್ಯೂಯಲ್ ಸರ್ಚಾರ್ಜ್‌ಗೆ ಬ್ರೇಕ್‌ Read More »

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ

ಫ್ರಿಜ್‌, ವಾಷಿಂಗ್‌ ಮಷಿನ್‌ ದುರಸ್ತಿಗೆ 8 ಸಾವಿರ ರೂ, ತಿಂಗಳಿಗೆ 2 ಸಾವಿರ ರೂ. ಗ್ಯಾರಂಟಿ ಮೊತ್ತ ಘೋಷಿಸಿದ ಡಿಎಂಕೆ, ಕಾಂಗ್ರೆಸ್‌ ನವದೆಹಲಿ: ವಿಧಾನಸಭೆ ಚುನಾವಣೆ ಗೆಲ್ಲುವ ಸಲುವಾಗಿ ಡಿಎಂಕೆ ಮತ್ತು ಕಾಂಗ್ರೆಸ್‌ ಮತ್ತೆ ಉಚಿತ ಕೊಡುಗೆಗಳ ಮೊರೆ ಹೋಗಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ಆಡಳಿತರೂಢ ಡಿಎಂಕೆ ಭಾನುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳಲು ಮಹಿಳೆಯರಿಗೆ ತಿಂಗಳಿಗೆ 2,000 ರೂ. ಸೇರಿದಂತೆ ಭರಪೂರ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಭಾನುವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.

ತಮಿಳುನಾಡು, ಅಸ್ಸಾಂ ಮತದಾರರಿಗೆ ಭರಪೂರ ಕೊಡುಗೆ Read More »

error: Content is protected !!
Scroll to Top