ದೇಶ

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ

ಚೆನಾಬ್ ನದಿಯ ಮೇಲೆ ನಿರ್ಮಿಸಿದ 1.3 ಕಿಮೀ ಉದ್ದ 359 ಮೀಟರ್ ಎತ್ತರದ ಬ್ರಿಜ್‌ ನವದೆಹಲಿ: ಪ್ಯಾರಿಸ್‌ನ ಐಫೆಲ್‌ ಟವರ್‌ಗಿಂತಲೂ ಎತ್ತರವಾದ ರೈಲ್ವೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ ಮೋದಿ ಇಂದು ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಒಟ್ಟು ಸುಮಾರು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಪ್ರಧಾನಿ ಮೋದಿ ಇಂದು ಕಾಶ್ಮೀರದಲ್ಲಿ ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಚೆನಾಬ್‌ ಸೇತುವೆ ವಿಶ್ವದ […]

ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇಂದು ಕಾಶ್ಮೀರದಲ್ಲಿ ಲೋಕಾರ್ಪಣೆ Read More »

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌

ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತ ನವದೆಹಲಿ: ಪಾಕಿಸ್ತಾನ ಪರ ಗೂಢಚಾರಿಕೆ ಮಾಡಿ ಸೆರೆಯಾಗಿರುವ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರಳ ಸ್ನೇಹಿತನನ್ನು ಕೂಡ ಪೊಲೀಸರು ಇಂದು ಇದೇ ಆರೋಪದಲ್ಲಿ ಬಂಧಿಸಿದ್ದಾರೆ. ಈತನೂ ಯೂಟ್ಯೂಬರ್‌ ಆಗಿದ್ದಾನೆ ಮತ್ತು ಜ್ಯೋತಿ ಮಲ್ಹೋತ್ರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 11 ಲಕ್ಷ ಫಾಲೋವರ್‌ಗಳನ್ನು ಹೊಂದಿರುವ ಜಾನ್‌ ಮಹಲ್‌ ಎಂಬ ಯೂ ಟ್ಯೂಬ್‌ ಚಾನೆಲ್‌ ನಡೆಸುತ್ತಿರುವ ಜಸ್ಬೀರ್‌ ಸಿಂಗ್‌ ಸೆರೆಯಾಗಿರುವ ಯೂಟ್ಯೂಬರ್‌. ಗೂಢಚಾರಿಕೆಗೆ ಸಂಬಂಧಿಸಿ ಸೆರೆಯಾಗಿರುವ ಎರಡನೇ ಯೂಟ್ಯೂಬರ್‌ ಈತ. ಗೂಢಚಾರಿಕೆಗೆ

ಪಾಕ್‌ ಪರ ಬೇಹುಗಾರಿಕೆ : ಇನ್ನೋರ್ವ ಯೂಟ್ಯೂಬರ್‌ ಅರೆಸ್ಟ್‌ Read More »

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು

ಭೋಪಾಲ: ಸಿಮೆಂಟ್ ತುಂಬಿದ್ದ ಟ್ರಕ್ ವ್ಯಾನ್​ ಮೇಲೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಝಬುವಾ ಎಂಬಲ್ಲಿ ಇಂದು ನಸುಕಿನ ಹೊತ್ತು ಸಂಭವಿಸಿದೆ. ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 9 ಸದಸ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಝಬುವಾ ಜಿಲ್ಲೆಯ ಮೇಘನಗರ ತಹಸಿಲ್​ನ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ತಾತ್ಕಾಲಿಕ ರಸ್ತೆ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ಸಮತೋಲನ

ವ್ಯಾನಿನ ಮೇಲೆ ಉರುಳಿ ಬಿದ್ದ ಟ್ರಕ್‌ : 9 ಮಂದಿ ಸ್ಥಳದಲ್ಲೇ ಸಾವು Read More »

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು

ನೆರಳಿನಂತೆ ಬಂದು ಕಚ್ಚಿ ಕಣ್ಮರೆಯಾಗುತ್ತಿದೆ ಪ್ರಾಣಿ ಭೋಪಾಲ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ಎರಡು ವಾರಗಳಲ್ಲಿ ನಿಗೂಢ ಪ್ರಾಣಿಯೊಂದು 6 ಮಂದಿಯನ್ನು ಕಚ್ಚಿ ಸಾಯಿಸಿದೆ. ಪ್ರಾಣಿಯಿಂದ ದಾಳಿಗೊಳಗಾದ ಎಲ್ಲರಿಗೂ ರೇಬಿಸ್ ಚುಚ್ಚುಮದ್ದನ್ನು ನೀಡಲಾಗಿತ್ತು. ಮೇ 5ರಂದು ಬೆಳಗಿನ ಜಾವ 1 ರಿಂದ 5 ಗಂಟೆ ನಡುವೆ ಈ ಘಟನೆ ನಡೆದಿದೆ. ಗ್ರಾಮದ 17 ಮಂದಿ ಒಂದೆಡೆ ಮಲಗಿದ್ದಾಗ ನಿಗೂಢ ಪ್ರಾಣಿ ದಾಳಿ ಮಾಡಿದೆ. ಪ್ರಾಣಿ ಯಾವುದೆಂದು ಗುರುತಿಸಲು ಸಾಧ್ಯವಾಗಲಿಲ್ಲ. ಲಿಂಬೈ ಗ್ರಾಮದ ಮೂರು ಸ್ಥಳಗಳಲ್ಲಿ ಆ ಪ್ರಾಣಿ ದಾಳಿ

ನಿಗೂಢ ಪ್ರಾಣಿಯ ದಾಳಿಯಿಂದ 6 ಮಂದಿ ಸಾವು Read More »

ಬೆಂಗಳೂರು ಮುಡಿಗೆ ಐಪಿಎಲ್‌ ಚಾಂಪಿಯನ್‌ ಕಿರೀಟ : ಎಲ್ಲೆಡೆ ಮುಗಿಲು ಮುಟ್ಟಿದ ಕನ್ನಡಿಗರ ಸಂಭ್ರಮ

18 ವರ್ಷಗಳ ಬಳಿಕ ಕಪ್‌ ಗೆದ್ದು ಬೀಗಿದ ಆರ್‌ಸಿಬಿ ಅಹಮದಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ೧೮ ವರ್ಷಗಳ ಸತತ ನಿರೀಕ್ಷೆಯ ಬಳಿಕ ಕೊನೆಗೂ ಟ್ರೋಫಿ ಎತ್ತಿ ಹಿಡಿದಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಕಾದಾಟದಲ್ಲಿ ಆರ್​ಸಿಬಿ 6 ರನ್​ಗಳ ಜಯ ಸಾಧಿಸಿ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಶ್ರೇಯಸ್ ಪಡೆಗೆ ಗೆಲ್ಲಲು ಆರ್​ಸಿಬಿ 191 ರನ್​ಗಳ ಟಾರ್ಗೆಟ್ ನೀಡಿತ್ತು. ಆದರೆ ರಜತ್ ಪಡೆಯ

ಬೆಂಗಳೂರು ಮುಡಿಗೆ ಐಪಿಎಲ್‌ ಚಾಂಪಿಯನ್‌ ಕಿರೀಟ : ಎಲ್ಲೆಡೆ ಮುಗಿಲು ಮುಟ್ಟಿದ ಕನ್ನಡಿಗರ ಸಂಭ್ರಮ Read More »

ಹೇಳಿಕೆ ವಿವಾದ : ಕಮಲಹಾಸನ್‌ಗೆ ಕೋರ್ಟ್‌ ತರಾಟೆ

ಕ್ಷಮೆ ಕೇಳಲು ಆಗದಿದ್ದರೆ ಕರ್ನಾಟಕವನ್ನು ಬಿಟ್ಟುಬಿಡಿ ಭಾಷೆಯ ಬಗ್ಗೆ ಮಾತನಾಡಲು ನೀವು ಭಾಷಾ ತಜ್ಞರೆ? ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರನ್ನು ಕೆಣಕಿರುವ ನಟ ಕಮಲಹಾಸನ್‌ ಅವರನ್ನು ನ್ಯಾಯಾಲಯ ಇಂದು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದೆ. ತನ್ನ ಥಗ್‌ಲೈಫ್‌ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕಮಲಹಾಸನ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೊಳಪಡಿಸಿದ ಹೈಕೋರ್ಟ್‌ ನ್ಯಾಯಾಧೀಶ ನಾಗಪ್ರಸನ್ನ ಅವರ ಪೀಠ ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ ಎಂದು

ಹೇಳಿಕೆ ವಿವಾದ : ಕಮಲಹಾಸನ್‌ಗೆ ಕೋರ್ಟ್‌ ತರಾಟೆ Read More »

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ

ಕಾರ್ಯಾಚರಣೆ ನಡೆಯುತ್ತಿರುವಾಗಲೇ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ನವದೆಹಲಿ: ಇನ್ನೋರ್ವ ಪಾಕಿಸ್ತಾನಿ ಗೂಢಚಾರ ಸೆರೆಯಾಗಿದ್ದಾನೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಯುತ್ತಿರುವಾಗ ಪಾಕಿಸ್ತಾನದ ಐಎಸ್​ಐ ಜತೆ ಸೇನೆಯ ಚಲನವಲನದ ಹಂಚಿಕೊಂಡಿದ್ದ ಗೂಢಚಾರನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಐಎಸ್‌ಐ ಜೊತೆ ಬಲವಾದ ಸಂಪರ್ಕ ಹೊಂದಿರುವ ಆರೋಪದ ಮೇಲೆ ಗೂಢಚಾರ ಗಗನ್‌ದೀಪ್ ಸಿಂಗ್​​ನನ್ನು ಬಂಧಿಸಲಾಗಿದೆ. ಆತ ಖಲಿಸ್ತಾನಿ ಉಗ್ರ ಗೋಪಾಲ್ ಸಿಂಗ್ ಚಾವ್ಲಾನೊಂದಿಗೂ ಸಂಬಂಧ ಹೊಂದಿದ್ದಾನೆ. ಆರೋಪಿಯು ಆಪರೇಷನ್ ಸಿಂದೂರ ಸೇರಿದಂತೆ ಗಡಿಯಾಚೆಗಿನ ಏಜೆಂಟರೊಂದಿಗೆ ಸೇನಾ ಚಲನವಲನಗಳ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾನೆ

ಆಪರೇಷನ್‌ ಸಿಂದೂರ ಮಾಹಿತಿ ರವಾನಿಸಿದ್ದ ಪಾಕ್‌ ಗೂಢಚಾರ ಸೆರೆ Read More »

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ

ಕೇರಳ : ಕಂಟೈನರ್‌ ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ 24 ದನಗಳನ್ನು ರಕ್ಷಿಸಿದ ಸಿಸಿಬಿ ಪೊಲೀಸರು ಕಂಟೈನರ್ ಲಾರಿಯನ್ನು ವಶಕ್ಕೆ ಪಡೆದುಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಬಂದ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಪಿಎಸ್ ಐ. ಶರಣಪ್ಪ ಭಂಡಾರಿ ನೇತೃತ್ವದ ತಂಡ ಜು. 1ರ ನಸುಕಿನ ಜಾವ ತಲಪಾಡಿ

ಕಂಟೈನರ್ ನಲ್ಲಿ ಅಕ್ರಮ ದನ ಸಾಗಾಟ : ಓರ್ವ ಆರೋಪಿ ಬಂಧನ Read More »

ಐಪಿಎಲ್‌ ಫೈನಲ್‌ಗೆ ಕ್ಷಣಗಣನೆ : ಮಳೆಯ ಆತಂಕದ ನಡುವೆಯೇ ಅಭಿಮಾನಿಗಳ ಹಾರೈಕೆ

ಮಳೆ ಬಂದರೆ ಫಲಿತಾಂಶ ಏನಾಗಬಹುದು? ಅಹಮದಾಬಾದ್‌ : ಐಪಿಎಲ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಕಾದಾಟವನ್ನು ನೋಡಲು ಅಭಿಮಾನಿಗಳು ಕಾತರದಿಂದ ಇದ್ದಾರೆ. ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳ ಮಧ್ಯೆ ಹಣಾಹಣಿ ನಡೆಯಲಿದ್ದು, ಯಾರು ಗೆದ್ದರೂ ಐಪಿಎಲ್‌ಗೆ ಹೊಸ ಚಾಂಪಿಯನ್‌ ಸಿಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್​ಗೆ ಅರ್ಹತೆ ಪಡೆದರೆ, ಪಂಜಾಬ್ ಕಿಂಗ್ಸ್

ಐಪಿಎಲ್‌ ಫೈನಲ್‌ಗೆ ಕ್ಷಣಗಣನೆ : ಮಳೆಯ ಆತಂಕದ ನಡುವೆಯೇ ಅಭಿಮಾನಿಗಳ ಹಾರೈಕೆ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 24 ರೂ. ಇಳಿಕೆ

ಸತತ ಮೂರನೇ ಸಲ ಬೆಲೆ ಇಳಿಸಿದ ತೈಲ ಕಂಪನಿಗಳು ನವದೆಹಲಿ: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್‌ ಬೆಲೆ 24 ರೂಪಾಯಿ ಕಡಿಮೆಯಾಗಿದೆ. ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ ಅನ್ವಯಿಸುತ್ತವೆ. ಹೊಸ ಪರಿಷ್ಕರಣೆ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 24 ರೂ. ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಸಿಲಿಂಡರ್‌ ಬೆಲೆ ದೆಹಲಿ: 1,723.50 ರೂ. ಕೋಲ್ಕತ್ತಾ 1,826 ರೂ., ಮುಂಬೈನಲ್ಲಿ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಈಗ 1,674.50 ರೂ. ಆಗಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ 24 ರೂ. ಇಳಿಕೆ Read More »

error: Content is protected !!
Scroll to Top