ದೇಶ

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಉಪರಾಷ್ಟ್ರಪತಿ ಹುದ್ದೆ ಅಲಂಕಿರಿಸ್ದದ ಜಗದೀಪ್ ಧನ್ಕರ್ ಅವರು ತಮ್ಮ ಸ್ಥಾನಕ್ಕೆ ಅನಾರೋಗ್ಯದ ನೆಪವೊಡ್ಡಿ ರಾಜೀನಾಮೆ ನೀಡಿದ್ದು, ಈ ಸಂಬಂಧ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ತಮ್ಮ ಸಾಮರ್ಥ್ಯಕ್ಕೆ ಸರಿಯಾಗಿ ಧನ್ಕರ್ ಅವರಿದೆ ದೇಶಕ್ಕಾಗಿ ಸೇವೆ ಸಲ್ಲಿಸಲು ಹಲವಾರು ಅವಕಾಶಗಳು ಲಭಿಸಿವೆ. ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಎಂದು ಹಾರೈಸುವುದಾಗಿ ‌ತಿಳಿಸಿದ್ದಾರೆ. ಧನ್ಕರ್ ಅವರು ಅನಾರೋಗ್ಯವನ್ನು ಕಾರಣವನ್ನಾಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಪತ್ರ ಬರೆದಿದ್ದರು. ಈ ಬೆಳವಣಿಗೆ ಸಾರ್ವಜನಿಕ […]

ಜಗದೀಪ್ ಧನ್ಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ: ಪ್ರಧಾನಿ ಮೋದಿ ಟ್ವೀಟ್ Read More »

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ!

ಹೈಕೋರ್ಟ್‌ ನ್ಯಾಯಾಧೀಶ ಯಶವಂತ್‌ ವರ್ಮಾ ಮನೆಯಲ್ಲಿ ಕೋಟಿಗಟ್ಟಲೆ ಹಣ ಪತ್ತೆಯಾದ ಪ್ರಕರಣದ ಜೊತೆಗೆ ತಳಕು ಹಾಕಿಕೊಂಡಿದೆ ಧನ್ಕರ್‌ ದಿಢೀರ್‌ ನಿರ್ಧಾರ ನಿನ್ನೆ ರಾತ್ರಿ ರಾಜಧಾನಿಯ ರಾಜಕೀಯ ಪಡಸಾಲೆಯಲ್ಲಿ ನಡೆದ್ದಾದರೂ ಏನು…? ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ಹಠಾತ್‌ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ವಿಪಕ್ಷ ಎರಡೂ ಕಡೆಯವರಿಗೂ ಉಪರಾಷ್ಟ್ರಪತಿಯವರ ಈ ದಿಢೀರ್‌ ನಿರ್ಧಾರ ಅಚ್ಚರಿಗೆ ಮತ್ತು ಆಘಾತ ನೀಡಿದೆ. ಧನ್ಕರ್‌ ರಾಜೀನಾಮೆಗೆ ಅನಾರೋಗ್ಯದ ಕಾರಣ ನೀಡಿದ್ದರೂ ಒಳಗಿನ ಗುಟ್ಟು

ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ರಾಜೀನಾಮೆಗೆ ಕಾರಣ ಅನಾರೋಗ್ಯವಲ್ಲ! Read More »

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌

ಪತಿಯನ್ನು ಕೊಂದು ಮನೆಯೊಳಗೇ ಹೂತು ಹಾಕಿ ಪತ್ನಿ ಪ್ರಿಯಕರನೊಂದಿಗೆ ಪರಾರಿ ಮುಂಬೈ : ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಂದು ಮನೆಯೊಳಗೆ ಹೂತು ಹಾಕಿ ಪಲಾಯನ ಮಾಡಿದ ದೃಶ್ಯಂ ಸಿನಿಮಾ ರೀತಿಯ ಆಘಾತಕಾರಿ ಘಟನೆ ಮುಂಬೈ ಸಮೀಪದ ನಲ್ಲಸೋಪಾರದಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಮನೆಯ ನೆಲದ ಟೈಲ್ಸ್ ಅಗೆದು ಪತಿಯ ಶವವನ್ನು ಅದರಡಿಯಲ್ಲಿ ಹೂತು ಹಾಕಿದ್ದಳು. ನಂತರ ಅದರ ಮೇಲೆ ಬೇರೆ ಟೈಲ್ಸ್ ಹಾಕಿದ್ದಳು. ಕೊಲೆಯಾದ ವ್ಯಕ್ತಿಯನ್ನು

ಮುಂಬಯಿಯಲ್ಲೊಂದು ದೃಶ್ಯಂ ಶೈಲಿಯ ಮರ್ಡರ್‌ Read More »

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌

ಜು.30ರಂದು ಪ್ರಕಾಶ್‌ ರಾಜ್‌ ವಿಚಾರಣೆ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್‌ ರಾಜ್‌ ಸೇರಿ ಹಲವು ಸೆಲೆಬ್ರಿಟಿಗಳಿಗೆ ಇ.ಡಿ ಸಮನ್ಸ್‌ ನೀಡಿದೆ. ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಮತ್ತು ಮಂಚು ಲಕ್ಷ್ಮಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಕೊಟ್ಟಿದೆ. ಜು.23 ರಂದು ರಾಣಾ ದಗ್ಗುಬಾಟಿ, ಜು.30 ರಂದು ಪ್ರಕಾಶ್ ರಾಜ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆ.6ರಂದು ವಿಜಯ್ ದೇವರಕೊಂಡ ಅವರನ್ನು ವಿಚಾರಣೆಗೆ

ಬೆಟ್ಟಿಂಗ್‌ ಆ್ಯಪ್‌ ಪ್ರಚಾರ : ನಟ ಪ್ರಕಾಶ್‌ ರಾಜ್‌ ಸಹಿತ ಸೆಲೆಬ್ರಿಟಿಗಳಿಗೆ ಇ.ಡಿ. ಸಮನ್ಸ್‌ Read More »

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್‌ಖರ್ ನವದೆಹಲಿ : ದಿಢೀರ್‌ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.ಜಗದೀಪ್ ಧನ್‌ಖರ್ 2022ರ ಆಗಸ್ಟ್‌ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‌ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹೃದಯ

ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್‌ ರಾಜೀನಾಮೆ Read More »

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ಲೋಕಲ್‌ ರೈಲಿನಲ್ಲಿ ಬಾಂಬಿಟ್ಟು 189 ಮಂದಿಯನ್ನು ಕೊಂದ ಪ್ರಕರಣ ಮುಂಬೈ: ಮುಂಬೈಯ ಲೋಕಲ್‌ ರೈಲುಗಳಲ್ಲಿ 2006ರಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹತ್ತೊಂಬತ್ತು ವರ್ಷಗಳ ನಂತರ ಬಾಂಬೆ ಹೈಕೋರ್ಟ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಎಲ್ಲ 12 ಜನರನ್ನು ಖುಲಾಸೆಗೊಳಿಸಿದೆ. 2015ರಲ್ಲಿ ವಿಚಾರಣಾ ನ್ಯಾಯಾಲಯ ಈ 12

ಮುಂಬೈ ರೈಲು ಸ್ಫೋಟ ಪ್ರಕರಣ : ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌ Read More »

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್‌ನ ಯೋಧರ ವಿಜಯೋತ್ಸವ ಆಚರಿಸಿಲಿದೆ.‌ ಇಡೀ ಜಗತ್ತಿಗೆ ಭಾರತದ ಶಕ್ತಿಯ ಅರಿವನ್ನು ಆಪರೇಷನ್ ಸಿಂಧೂರ್ ಮಾಡಿಸಿದ್ದು, ಈ ವಿಜಯೋತ್ಸವದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡುವಂತೆ ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ. ಸಂಸತ್ ಕಲಾಪ ಆರಂಭದಲ್ಲೇ ಆಪರೇಷನ್ ಸಿಂಧೂರ್‌ನ ವಿಜಯೋತ್ಸವನ್ನು ಪಟಾಕಿ ಹಚ್ಚಿ ಸಂಭ್ರಮಿಸಲಾಯಿತು. ಹಾಗೆಯೇ ಇದರಲ್ಲಿ ಭಾಗವಹಿಸಿ 100% ಗುರಿ ಸಾಧಿಸಿದ ಸಶಸ್ತ್ರ ಪಡೆಗಳನ್ನು ಪ್ರಧಾನಿ ಅಭಿನಂದಿಸಿದರು. ಇದೇ‌ ಸಂದರ್ಭದಲ್ಲಿ ವಿಪಕ್ಷಗಳು ಆಪರೇಷನ್ ಸಿಂಧೂರ್ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿರುವುದಾಗಿ

ಆಪರೇಷನ್ ಸಿಂಧೂರ್ ವಿಜಯೋತ್ಸವ : ಯೋಧರಿಗೆ ಪ್ರಧಾನಿ ಮೋದಿ ಅಭಿನಂದನೆ Read More »

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

ಬಿರುಗಾಳಿ ಎಬ್ಬಿಸಲಿದೆ ಆಪರೇಷನ್‌ ಸಿಂದೂರ, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ನವದೆಹಲಿ : ಸಂಸತ್‌ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ವಿಪಕ್ಷ ಇಂಡಿ ಮೈತ್ರಿಕೂಟ ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂದೂರ, ಭಾರತದ ವಿದೇಶಾಂಗ ನೀತಿ, ಬುಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಇತ್ಯಾದಿ ವಿಚಾರಗಳನ್ನು ಬತ್ತಳಿಕೆಯಲ್ಲಿಟ್ಟುಕೊಂಡು ಸರ್ಕಾರದ ಮೇಲೆ ದಾಳಿಗೆ ಸಿದ್ಧವಾಗಿದೆ. ಆಪರೇಷನ್‌ ಸಿಂದೂರ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡುತ್ತಿರುವ ದಿನಕ್ಕೊಂದು ಹೇಳಿಕೆಗಳ ಕುರಿತು ಸ್ವತಹ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷ ಪಟ್ಟು

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ Read More »

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು

ಇರ್ಫಾನ್ ಪಠಾಣ್, ಹರ್ಭಜನ್ ಸಿಂಗ್, ಯೂಸುಫ್ ಪಠಾಣ್, ಸುರೇಶ್ ರೈನಾ, ಶಿಖರ್ ಧವನ್ ನಿರ್ಧಾರಕ್ಕೆ ಭಾರಿ ಮೆಚ್ಚುಗೆ ಲಂಡನ್‌ : ಭಾರತದ ತಂಡದ ಐವರು ಪ್ರಮುಖ ಆಟಗಾರರು ಪಾಕಿಸ್ತಾನ ವಿರುದ್ಧ ಯಾವ ಕಾರಣಕ್ಕೂ ಆಡುವುದಿಲ್ಲ ಎಂಬ ಗಟ್ಟಿ ನಿರ್ಧಾರ ತಳೆದ ಪರಿಣಾಮಬಾಗಿ ಕ್ರಿಕೆಟ್‌ ಪಂದ್ಯವೇ ರದ್ದಾಗಿದೆ. ವರ್ಲ್ಡ್​ ಚಾಂಪಿಯನ್​ಶಿಪ್​ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಇಂದು ನಡೆಯಬೇಕಿದ್ದ ಇಂಡಿಯಾ ಚಾಂಪಿಯನ್ಸ್ ಹಾಗೂ ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳ ನಡುವಣ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಿಂದ ಭಾರತೀಯ ಆಟಗಾರರು

ಪಾಕಿಸ್ತಾನ ವಿರುದ್ಧ ಆಡುವುದಿಲ್ಲ ಎಂದ ಭಾರತೀಯರು : ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯವೇ ರದ್ದು Read More »

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ

ಮತಾಂತರಕ್ಕೆ ಬರುತ್ತಿತ್ತು ಅಮೆರಿಕ, ಕೆನಡದಿಂದ ಫಂಡಿಂಗ್‌ ಲಖನೌ: ಉತ್ತರ ಪ್ರದೇಶದ ಸ್ವಯಂಘೋಷಿತ ದೇವಮಾನವ ಜಮಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತಾಂತರದ ಸೀಕ್ರೆಟ್‌ ಬಯಲಾದ ಬೆನ್ನಲ್ಲೇ ಉತ್ತರ ಪ್ರದೇಶದ ಪೊಲೀಸರು ಮತ್ತೊಂದು ಮತಾಂತರದ ಬೃಹತ್‌ ಜಾಲವನ್ನ ಭೇದಿಸಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನೆರವು ಪಡೆದು ಐಸಿಸ್‌ ಮಾದರಿಯಲ್ಲಿ ಮತಾಂತರ ದಂಧೆ ನಡೆಸುತ್ತಿದ್ದ ಬೃಹತ್‌ ಜಾಲ ಭೇದಿಸಿರುವ ಪೊಲೀಸರು 6 ರಾಜ್ಯಗಳಲ್ಲಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಗೋವಾದ ಆಯೇಷಾ (ಅಲಿಯಾಸ್ ಎಸ್.ಬಿ. ಕೃಷ್ಣ), ಕೋಲ್ಕತ್ತಾದ ಅಲಿ ಹಸನ್ (ಅಲಿಯಾಸ್ ಶೇಖರ್

ಮತಾಂತರದ ಬೃಹತ್‌ ಜಾಲ ಭೇದಿಸಿದ ಪೊಲೀಸರು : 6 ರಾಜ್ಯಗಳಲ್ಲಿ ಹತ್ತು ಮಂದಿ ಬಂಧನ Read More »

error: Content is protected !!
Scroll to Top