ದೇಶ

ಜೂ. 21: ಆಂಧ್ರ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಯೋಗ ದಿನಾಚರಣೆ

ಅಮರಾವತಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಆಂಧ್ರಪ್ರದೇಶದಲ್ಲಿ ಜೂನ್ 21 ರಂದು ಆಯೋಜನೆ ಮಾಡಲಾಗಿರುವ ಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ವಿಶಾಖಪಟ್ಟಣಂನ ಆರ್‌ ಕೆ ಬೀಚ್‌ ನಿಂದ ಭೋಗಪುರಂ ವರೆಗಿನ 26 ಕಿ ಮೀ ಕಾರಿಡಾರ್‌ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮ ನಡೆಯಲಿದ್ದು, ಸುಮಾರು 3 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಬೆಳಗ್ಗೆ 6.30 ರಿಂದ ತೊಡಗಿ 8 ಗಂಟೆಯ ವರೆಗೆ ನಡೆಯಲಿರುವ ಈ ಯೋಗ ದಿನಾಚರಣೆ ಗಿನ್ನಿಸ್ ಸೇರಿದಂತೆ ಹಲವಾರು ದಾಖಲೆಗಳನ್ನು […]

ಜೂ. 21: ಆಂಧ್ರ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಯೋಗ ದಿನಾಚರಣೆ Read More »

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ

ಡಿಎನ್‌ಎ ಪರೀಕ್ಷೆ ವರದಿ ಬಂದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಅಹಮದಾಬಾದ್‌: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತು ಕೆನಡಿಯನ್‌ ಪ್ರಜೆಗಳ

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ Read More »

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ

ಆ್ಯಕ್ಸಿಯಂ–4 ಮಿಷನ್‌ ಉಡಾವಣೆ ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಕಳುಹಿಸುವ ಮಹತ್ವಾಕಾಂಕ್ಷೆಯ ಆ್ಯಕ್ಸಿಯಂ–4 ಮಿಷನ್ ಮತ್ತೆ ಮುಂದೂಡಿಕೆಯಾಗಿದೆ. ಜೂನ್ 22ರಂದು ನಡೆಯಬೇಕಿದ್ದ ಉಡಾವಣೆಯನ್ನು ಮುಂದೂಡಲು ನಾಸಾ ನಿರ್ಧರಿಸಿದ್ದು, ಹೊಸ ಉಡಾವಣಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ನಾಸಾ ಮೂಲಗಳು ತಿಳಿಸವೆ. ಬಾಹ್ಯಾಕಾಶ ನಿಲ್ದಾಣದ ಕಾರ್ಯಾಚರಣೆಗಳನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರಿಸಲು ಬಾಹ್ಯಾಕಾಶ ಸಂಸ್ಥೆಗೆ ಹೆಚ್ಚುವರಿ ಸಮಯ ಬೇಕಾಗುತ್ತದೆ. ಬಾಹ್ಯಾಕಾಶ ನಿಲ್ದಾಣದ ಪರಸ್ಪರ ಸಂಪರ್ಕಿತ ಮತ್ತು ಪರಸ್ಪರ

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ಇರಾನ್‌ನಿಂದ ಸುರಕ್ಷಿತವಾಗಿ ದಿಲ್ಲಿ ತಲುಪಿದ 110 ವಿದ್ಯಾರ್ಥಿಗಳು

ಭಾರತೀಯರನ್ನು ಕರೆತರಲು ಆಪರೇಷನ್‌ ಸಿಂಧು ಕಾರ್ಯಾಚರಣೆ ನವದೆಹಲಿ: ಯುದ್ಧಪೀಡಿತ ಇರಾನ್‌ನಲ್ಲಿ ಸಿಲುಕಿಕೊಂಡಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಇಂದು ಭಾರತಕ್ಕೆ ಕರೆತರಲಾಗಿದೆ. ಇರಾನ್‌ನಿಂದ ಸ್ಥಳಾಂತರಿಸಲಾದ ಮೊದಲ ಗುಂಪಿನ ವಿದ್ಯಾರ್ಥಿಗಳು ತಡರಾತ್ರಿ ದೆಹಲಿಗೆ ವಿಮಾನ ಹತ್ತಿದ್ದು, ಇಂದು ಮುಂಜಾನೆ ಬಂದಿಳಿದಿದ್ದಾರೆ. ವಿಮಾನ ಮೂರು ಗಂಟೆಗಳ ಕಾಲ ವಿಳಂಬವಾಗಿ ಹೊರಟಿತ್ತು. ಈ ವಿದ್ಯಾರ್ಥಿಗಳನ್ನು ಮೊದಲ ಹಂತದಲ್ಲಿ ಇರಾನ್‌ನಿಂದ ಅರ್ಮೇನಿಯಾ ಮತ್ತು ದೋಹಾಗೆ ಸ್ಥಳಾಂತರಿಸಲಾಗಿತ್ತು. ಇಂದು ಅವರ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅವರಲ್ಲಿ ಹೆಚ್ಚಿನವರು (90)

ಇರಾನ್‌ನಿಂದ ಸುರಕ್ಷಿತವಾಗಿ ದಿಲ್ಲಿ ತಲುಪಿದ 110 ವಿದ್ಯಾರ್ಥಿಗಳು Read More »

ಇರಾನ್‌ನಲ್ಲಿ ಆಪತ್ತಿನಲ್ಲಿದ್ದಾರೆ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

ಯುದ್ಧ ಉಲ್ಬಣಿಸುವ ಮೊದಲು ಪಾರು ಮಾಡಲು ಮೊರೆ ಟೆಹ್ರಾನ್‌ : ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ ತೀವ್ರಗೊಳ್ಳುತ್ತಿರುವಂತೆಯೇ ಇರಾನ್‌ನಲ್ಲಿರುವ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಮೇಲೆ ಆತಂಕದ ಕಾರ್ಮೋಡ ಕವಿದಿದೆ. ಯುದ್ಧದ ಪರಿಣಾಮವಾಗಿ ಇರಾನ್‌ ತನ್ನ ವಾಯುಮಾರ್ಗವನ್ನು ಪೂರ್ತಿಯಾಗಿ ಮುಚ್ಚಿದೆ. ಅಲ್ಲಿಂದ ಯಾವುದೇ ವಿಮಾನ ಟೇಕಾಫ್‌ ಆಗುವಂತಿಲ್ಲ ಹಾಗೂ ಇಳಿಯುವಂತಿಲ್ಲ. ಆದರೆ ಭಾರತದ ವಿನಂತಿಯ ಮೇರೆಗೆ ಭೂಮಾರ್ಗವಾಗಿ ಅಂತಾರಾಷ್ಟ್ರೀಯ ಗಡಿ ದಾಟಿ ಹೋಗಲು ಭಾರತೀಯರಿಗೆ ಇರಾನ್‌ ಅನುಮತಿ ನೀಡಿದೆ. ಅಜರ್‌ಬೈಜಾನ್‌, ಅಫಘಾನಿಸ್ಥಾನ್‌ ಅಥವಾ ತುರ್ಕಮೆನಿಸ್ಥಾನ್‌

ಇರಾನ್‌ನಲ್ಲಿ ಆಪತ್ತಿನಲ್ಲಿದ್ದಾರೆ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು Read More »

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಹೊಟ್ಟೆನೋವಿಗೆ ಗ್ಯಾಸ್ಟ್ರೋ ವಿಭಾಗದಲ್ಲಿ ಚಿಕಿತ್ಸೆ ನವದೆಹಲಿ : ಕಾಂಗ್ರೆಸ್​​ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಪಘಾತದ ನಿಖರ ಕಾರಣ ತಿಳಿಯುವ ಸಾಧ್ಯತೆ ಅಹಮದಾಬಾದ್‌: ಕಳೆದ ಗುರುವಾರ ಮಧ್ಯಾಹ್ನ ಟೇಕಾಫ್‌ ಆದ ಬೆನ್ನಲ್ಲೇ ವಿಮಾನ ನಿಲ್ದಾಣದ ಬಳಿಯಿರುವ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ. ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ Read More »

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು

ಹೂಡಿಕೆ ಮಾಡಿದರೆ ಲಾಭ, ನಿವೇಶನ ನೀಡುವ ನೆಪವೊಡ್ಡಿ ಭಾರಿ ಮೋಸ ನವದೆಹಲಿ:‌ ‘ಧೋಲೇರಾ ಸ್ಮಾರ್ಟ್ ಸಿಟಿ’ ಯೋಜನೆ ಹೆಸರಿನಲ್ಲಿ 70,000 ಜನರಿಗೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಸುಮಾರು 2,676 ಕೋಟಿ ರೂ. ವಂಚಿಸಿದ ರಾಜಸ್ಥಾನದ ಖತರ್ನಾಕ್‌ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಭಾಷ್ ಬಿಜಾರಾನಿ ಮತ್ತು ರಣವೀರ್ ಬಿಜಾರಾನಿ ಎಂದು ಗುರುತಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಇಬ್ಬರು ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ರಣವೀರ್ ಬಿಜಾರಾನಿ 2014ರಲ್ಲಿ ಮೊದಲ

ಸ್ಮಾರ್ಟ್‌ ಸಿಟಿ ಯೋಜನೆ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ರೂ. ವಂಚಿಸಿದ ಸಹೋದರರು Read More »

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು

ಡೆಹ್ರಾಡೂನ್: : ಅಹಮದಾಬಾದ್ ವಿಮಾನ ದುರಂತ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದ್ದು, ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಗೌರಿಕುಂಡ್ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿ ಹೆಲಿಕಾಪ್ಟರ್​​ನಲ್ಲಿದ್ದ ಪೈಲಟರ್​ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ. ಘಟನೆಯ ನಂತರ ಎನ್​​ಡಿಆರ್​ಎಫ್​ ತಂಡಗಳು ಸ್ಥಳಕ್ಕೆ ತಲುಪಿವೆ. ಹೆಲಿಕಾಪ್ಟರ್‌ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ. ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಪತನ : ಆರು ಮಂದಿ ಸಾವು Read More »

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ

ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ ಅಹಮದಾಬಾದ್‌: ಇಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 274ಕ್ಕೇರಿದೆ. ವಿಮಾನದಲ್ಲಿದ್ದ 230 ಪ್ರಯಾಣಿಕರು, 10 ಗಗನಸಖಿಯರು ಮತ್ತು ಇಬ್ಬರು ಪೈಲಟ್‌ಗಳ ಪೈಕಿ ಬದುಕುಳಿದಿರುವುದು ಒಬ್ಬ ಪ್ರಯಾಣಿಕ ಮಾತ್ರ. ವಿಮಾನ ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿ.ಜೆ.ಮೆಡಿಕಲ್‌ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿದ ಪರಿಣಾಮ ಇನ್ನಷ್ಟು ಸಾವುಗಳು ಸಂಭವಿಸಿವೆ. ಈ ಸಾವು-ನೋವುಗಳಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್‌ ಹಾಗೂ ಸಿಬ್ಬಂದಿ, ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ. ಮೇಘನಿ ನಗರದಲ್ಲಿ

ಅಹಮದಾಬಾದ್‌ : ವಿಮಾನ ದುರಂತದಲ್ಲಿ ಮಡಿದವರ ಸಂಖ್ಯೆ 274ಕ್ಕೇರಿಕೆ Read More »

error: Content is protected !!
Scroll to Top