ದೇಶ

ಆಧುನಿಕ ಶಸ್ತ್ರಾಸ್ತ್ರಗಳನ್ನು ನಾವೇ ತಯಾರಿಸುವಂತಾಗಬೇಕು: ಜನರಲ್ ಅನಿಲ್ ಚೌಹಾಣ್

ನವದೆಹಲಿ: ನಾವು ಇಂದು ಗೆಲುವು ಪಡೆಯಬೇಕಾದರೆ ‌ನಿನ್ನೆಯ ಶಸ್ತ್ರಾಸ್ತ್ರಗಳಿಂದ ಸಾಧ್ಯವಿಲ್ಲ. ಬದಲಾಗಿ ನಾಳಿನ ತಂತ್ರಜ್ಞಾನದ ಶಸ್ತ್ರಾಸ್ತ್ರಗಳು ನಮ್ಮ ಬತ್ತಳಿಕೆಯಲ್ಲಿ ಇರಬೇಕು ಎಂದು ಸೇನಾಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ನುಡಿದಿದ್ದಾರೆ. ಸ್ವದೇಶಿ ನಿರ್ಮಿತ ಮಾನವ ರಹಿತ ವೈಮಾನಿಕ ಸಾಧನಗಳು (UAV) ಮತ್ತು ಅವುಗಳನ್ನು ಎದುರಿಸುವ C-UAVಗಳ ಕುರಿತ ಕಾರ್ಯಾಗಾರದಲ್ಲಿ ಭಾಗವಹಿಸಿ ಆಪರೇಷನ್ ಸಿಂಧೂರ್ ಕುರಿತಾಗಿಯೂ ಮಾತನಾಡಿದ ಅವರು, ಪಾಕಿಸ್ತಾನದ ಸಿಡಿತಲೆ ಹೊತ್ತ ಡ್ರೋನ್‌ಗಳ ದಾಳಿಯಲ್ಲಿ ಭಾರತೀಯ ಸೇನೆ ಅಥವಾ ನಾಗರಿಕರ ಮೂಲಸೌಕರ್ಯಗಳಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಭವಿಷ್ಯದಲ್ಲಿ […]

ಆಧುನಿಕ ಶಸ್ತ್ರಾಸ್ತ್ರಗಳನ್ನು ನಾವೇ ತಯಾರಿಸುವಂತಾಗಬೇಕು: ಜನರಲ್ ಅನಿಲ್ ಚೌಹಾಣ್ Read More »

ಭೂಮಿಗೆ ಮರಳಿದ ಶುಭಾಂಶು ಶುಕ್ಲಾ : ಪ್ರಧಾನಿ ಮೋದಿ ಹರ್ಷ

ನವದೆಹಲಿ: ಬಾಹ್ಯಾಶಕ್ಕೆ ಕಳೆದ ಜು. 25 ರಂದು ತೆರಳಿದ್ದ ‌ಭಾರತದ ಶುಭಾಂಶು ಶುಕ್ಲಾ ಅವರನ್ನೊಳಗೊಂಡ ನಾಲ್ವರ ‌ತಂಡ ಇಂದು ಅಪರಾಹ್ನ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಐತಿಹಾಸಿಕ ಬಾಹ್ಯಾಕಾಶ ಯಾನದಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ಇಡೀ ದೇಶದೊಂದಿಗೆ ಸೇರುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ

ಭೂಮಿಗೆ ಮರಳಿದ ಶುಭಾಂಶು ಶುಕ್ಲಾ : ಪ್ರಧಾನಿ ಮೋದಿ ಹರ್ಷ Read More »

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ

ಜಲಂಧರ್: ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಜಲಂಧರ್‌ನ ತಮ್ಮ ಮನೆಯ ಸಮೀಪ ಸೋಮವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ಕಾರೊಂದು ಫೌಜಾ ಸಿಂಗ್ ಅವರಿಗೆ ಢಿಕ್ಕಿ ಹೊಡೆದಿದೆ. ಈ ಅಪಘಾತದಿಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿದೆ. ಸಿಂಗ್ ಅವರು 2000 ನೇ ಇಸವಿಯಲ್ಲಿ ಮ್ಯಾರಥಾನ್ ಪಯಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್‌ಗಳಲ್ಲಿ ಅವರು ಭಾಗವಹಿಸಿದ್ದರು. ಟೊರೆಂಟೋ ಮ್ಯಾರಥಾನ್‌ನಲ್ಲಿ 2011 ರಲ್ಲಿ ಭಾಗವಹಿಸಿದ

ಅಪರಿಚಿತ ವಾಹನ ಢಿಕ್ಕಿ ಹೊಡೆದು ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ Read More »

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ : ನಿತಿನ್ ಗಡ್ಕರಿ

ಬೆಂಗಳೂರು: ಸಿಗಂದೂರು ಸೇತುವೆ ಉದ್ಘಾಟನೆಯ ಆಹ್ವಾನದ ವಿಚಾರದಲ್ಲಿ ‌ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎನ್ನುವ ಸಿಎಂ ‌ಸಿದ್ದರಾಮಯ್ಯ ಅವರ ಆರೋಪಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗಡ್ಕರಿ, ಕಾರ್ಯಕ್ರಮದಲ್ಲಿ ಯಾವ ಶಿಷ್ಟಾಚಾರವೂ ಉಲ್ಲಂಘನೆ ಆಗಿಲ್ಲ. ಸಿದ್ದರಾಮಯ್ಯ ಅವರಿಗೆ ಜುಲೈ 11 ರಂದೇ ಅಧಿಕೃತ ಆಹ್ವಾನ ನೀಡಲಾಗಿದೆ. ಜುಲೈ 12 ರಂದು ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆಯಲಾಗಿದ್ದು, ಯಾವುದೇ ಪೂರ್ವಯೋಜಿತ ಕಾರ್ಯಕ್ರಮ ಇದ್ದರೂ ಸೇತುವೆ ಉದ್ಘಾಟನೆಗೆ ‌ವರ್ಚುವಲ್ ರೂಪದಲ್ಲಾದರೂ ಭಾಗಿಯಾಗಿ ಎಂದು

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ : ನಿತಿನ್ ಗಡ್ಕರಿ Read More »

ಮದ್ಯದ ದರದಲ್ಲಿ ಭಾರಿ ಇಳಿಕೆ!

ಬಾಟಲಿಗೆ 10ರಿಂದ 100 ರೂ. ತನಕ ಕಡಿತ ಮಾಡಿದ ಸರ್ಕಾರ ಅಮರಾವತಿ: ಸರ್ಕಾರ ಮದ್ಯದ ದರದಲ್ಲಿ ಭಾರಿ ಇಳಿಕೆ ಮಾಡಿದೆ. ಬಾಟಲಿಗೆ 10ರಿಂದ 100 ರೂ. ತನಕ ಇಳಿಕೆಯಾಗಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ ಈ ಸುದ್ದಿ ನೋಡಿ ಕರ್ನಾಟಕದ ಮದ್ಯಪ್ರಿಯರು ಖುಷಿಯಿಂದ ಕುಪ್ಪಳಿಸುವ ಅಗತ್ಯವಿಲ್ಲ. ದರ ಇಳಿಕೆಯಾಗಿರುವುದು ಪಕ್ಕದ ಆಂಧ್ರ ಪ್ರದೇಶದಲ್ಲಿ. ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳು ಕಂದಾಯ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತಿದ್ದರೆ ಆಂಧ್ರದ ಚಂದ್ರಬಾಬು ನಾಯ್ಡು ಸರ್ಕಾರ ಮಾತ್ರ ಮದ್ಯದ ದರ

ಮದ್ಯದ ದರದಲ್ಲಿ ಭಾರಿ ಇಳಿಕೆ! Read More »

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ದ್ವೇಷ ಭಾಷಣ ನಿಯಂತ್ರಣ ಮಾಡುವಂತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಿಯಂತ್ರಿಸುವ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ನ್ಯಾಯಮೂರ್ತಿ ಕೆ.ವಿ.‌ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠವು ಸರ್ಕಾರಗಳು ಜನರಿಗೆ ವಾಕ್ ಸ್ವಾತಂತ್ರ್ಯದ ಮೌಲ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದಿದೆ. ಇನ್ಸ್ಟಾಗ್ರಾಮ್ ಇನ್ಫುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ದೂರುದಾರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ಈ ಸೂಚನೆ ನೀಡಿರುವುದಾಗಿದೆ. ದ್ವೇಷ ಭಾಷಣಗಳನ್ನು ನಿಯಂತ್ರಣ ಮಾಡಬೇಕು.

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ Read More »

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್

ನವದೆಹಲಿ: ಸಂಗಾತಿಯ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಅದನ್ನು ವೈವಾಹಿಕ ಸಮಸ್ಯೆಗಳ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳುವುದು ಸ್ವೀಕಾರಾರ್ಹ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಗಂಡ ಹೆಂಡತಿ ಒಬ್ಬರ ಮೇಲೊಬ್ಬರು ಬೇಹುಗಾರಿಕೆ ಮಾಡುತ್ತಿದ್ದಾರೆ, ರಹಸ್ಯವಾಗಿ ಸಂಭಾಷಣೆಗಳ ರೆಕಾರ್ಡ್ ಮಾಡುತ್ತಿದ್ದಾರೆ ಎಂದರೆ ಅವರಿಬ್ಬರ ದಾಂಪತ್ಯದಲ್ಲಿ ಏನೋ ಸಮಸ್ಯೆ ಇದೆ ಎಂದರ್ಥ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾ. ಸಂತೋಷ್‌ಚಂದ್ರ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಆ ಮೂಲಕ ದಂಪತಿಗಳ ನಡುವಿನ ರಹಸ್ಯ ಸಂಭಾಷಣೆಯು ಸಾಕ್ಷ್ಯ ಕಾಯ್ದೆಯಡಿ ರಕ್ಷಿಸಲ್ಪಟ್ಟಿದ್ದು, ಅದನ್ನು

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್ Read More »

ಯುಪಿಐ ಜಗತ್ತಿನ ಅತಿದೊಡ್ಡ ಡಿಜಿಟಲ್‌ ಪಾವತಿ ವ್ಯವಸ್ಥೆ

200 ದೇಶಗಳಲ್ಲಿರುವ ವೀಸಾವನ್ನು ಹಿಂದಿಕ್ಕಿದ 7 ರಾಷ್ಟ್ರಗಳಲ್ಲಿರುವ ಯುಪಿಐ ನವದೆಹಲಿ: ಭಾರತದಲ್ಲಿ ಮೊಬೈಲ್ ಮೂಲಕ ನಡೆಯುವ ವಹಿವಾಟಿನ ಮೂಲವಾದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಈ ಮೂಲಕ ಈ ವರೆಗೆ ನಂ.1 ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದ್ದ ವೀಸಾವನ್ನು ಹಿಂದಿಕ್ಕಿದೆ. ನಿತ್ಯ 65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಭಾರತದ ಯುಪಿಐ ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಈ ಕುರಿತು

ಯುಪಿಐ ಜಗತ್ತಿನ ಅತಿದೊಡ್ಡ ಡಿಜಿಟಲ್‌ ಪಾವತಿ ವ್ಯವಸ್ಥೆ Read More »

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕರ ಕಿರುಕುಳ ತಾಳಲಾರದೆ ಆತ್ಮಾಹುತಿಗೆ ಯತ್ನಿಸಿದ್ದ ಬಿ.ಎಡ್‌ ವಿದ್ಯಾರ್ಥಿನಿ ಭುವನೇಶ್ವರ : ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಲೇಜಿನಲ್ಲಿ ಪ್ರಾಧ್ಯಾಪಕರು ದೀರ್ಘಕಾಲದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸರಗೊಂಡಿದ್ದ ಆಕೆ ಕಾಲೇಜಿನಲ್ಲೇ ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿ ಬೆಂಕಿ ಹಚ್ಚಿಕೊಂಡಿದ್ದರು. ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ವಿಭಾಗದ ಮುಖ್ಯಸ್ಥರು

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು Read More »

ಲಾರ್ಡ್ಸ್‌ನ ಐತಿಹಾಸಿಕ ಗೆಲುವಿನ ಅವಕಾಶ ಕೈಚೆಲ್ಲಿದ ಭಾರತ

ಬೈಸ್‌ ಮೂಲಕ ನೀಡಿದ 6 ಬೌಂಡರಿಗಳೇ ಭಾರತದ ಪಾಲಿಗೆ ಮುಳುವಾಯಿತು ಲಂಡನ್‌ : ಪ್ರತಿಷ್ಠಿ ಲಾರ್ಡ್ಸ್‌ ಅಂಗಣದಲ್ಲಿ ಸಿಬಹುದಾಗಿದ್ದ ಐತಿಹಾಸಿಕ ಗೆಲುವೊಂದನ್ನು ಕೈಚೆಲ್ಲಿ ಶುಭಮನ್‌ ಗಿಲ್‌ ಪಡೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ರವೀಂದ್ರ ಜಡೇಜಾ ಕೊನೆಯವರೆಗೂ ಜಾರಿಯಲ್ಲಿಟ್ಟ ಕೆಚ್ಚಿನ ಹೋರಾಟ ವ್ಯರ್ಥವಾಗಿ 22 ರನ್‌ಗಳಿಂದ ಭಾರತ ಅಂಗ್ಲರಿಗೆ ಶರಣಾಗಿದೆ. ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 193 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 170 ರನ್​ಗಳಿಗೆ ಆಲೌಟ್

ಲಾರ್ಡ್ಸ್‌ನ ಐತಿಹಾಸಿಕ ಗೆಲುವಿನ ಅವಕಾಶ ಕೈಚೆಲ್ಲಿದ ಭಾರತ Read More »

error: Content is protected !!
Scroll to Top