ದೇಶ

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ

ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ, ಮಾದಕ ವಸ್ತು ಬಳಸಿದ ಪ್ರಕರಣ ಹೈದರಾಬಾದ್‌: ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ ಮತ್ತು ಡ್ರಗ್ಸ್‌ ಪೂರೈಸಿರುವ ಆರೋಪಕ್ಕೆ ಒಳಗಾಗಿರುವ ತೆಲುಗಿನ ಪ್ರಸಿದ್ಧ ಗಾಯಕಿ ಮಂಗ್ಲಿ ಯಾನೆ ಸತ್ಯವತಿ ರಾಠೋಡ್‌, ಪಾರ್ಟಿಯಲ್ಲಿ ಮದ್ಯ ಸೇವಿಸಲು ಪೊಲೀಸರ ಅನುಮತಿ ಪಡೆಯಬೇಕೆಂದು ತನಗೆ ಗೊತ್ತಿರಲಿಲ್ಲ, ಇದು ಅರಿವಿಲ್ಲದೆ ಆಗಿರುವ ತಪ್ಪು ಎಂದು ಹೇಳಿಕೊಂಡಿದ್ದಾರೆ. ಪ್ರಸಿದ್ಧ ಜಾನಪದ ಗಾಯಕಿಯಾಗಿರುವ ಮಂಗ್ಲಿ ತೆಲುಗು ಮತ್ತು ಕನ್ನಡದ ಅನೇಕ ಸಿನಿಮಾಗಳಿಗೂ ಹಾಡಿದ್ದಾರೆ. ವಿಶಿಷ್ಟವಾದ ಧ್ವನಿ ಮತ್ತು ಜಾನಪದ ಶೈಲಿಯ ನೃತ್ಯಗಳಿಂದ ಅವರು ಸೋಷಿಯಲ್‌ […]

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ Read More »

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ

ಜುಲೈ 1ರಿಂದಲೇ ಜಾರಿಗೆ ಬರಲಿದೆ ಹೊಸ ನಿಯಮ ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯ ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕ್ಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್‌ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್‌ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ Read More »

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ

ರಾಸಾಯನಿಕ, ತೈಲ ತುಂಬಿರುವ ಕಂಟೈನರ್‌ಗಳು ಸ್ಫೋಟಿಸುವ ಆತಂಕ ಮಂಗಳೂರು: ಕೇರಳದ ಕರಾವಳಿ ಸಮೀಪ ಸಿಂಗಾಪುರ ಮೂಲದ ಕಂಟೈನರ್‌ ಸಾಗಿಸುತ್ತಿದ್ದ ಬೃಹತ್‌ ಹಡಗಿಗೆ ಭೀಕರ ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿಯನ್ನು ನಂದಿಸಲು 48 ತಾಸುಗಳ ಸತತ ಕಾರ್ಯಾಚರಣೆಯ ಬಳಿಕವೂ ಸಾಧ್ಯವಾಗಿಲ್ಲ. ಹಡಗಿನಲ್ಲಿ ರಾಸಾಯನಿಕವೂ ಸೇರಿದಂತೆ ಅಪಾಯಕಾರಿ ತೈಲ ಮತ್ತು ಅನಿಲ ಇರುವ ಕಂಟೈನರ್‌ಗಳು ಕೂಡ ಇವೆ. ಹೀಗಾಗಿ ಈ ಹಡಗು ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆಯಷ್ಟೇ ಕೇರಳ ಕರಾವಳಿಯಾಚೆ ಕಂಟೈನರ್‌ ಹಡಗೊಂದು ಮುಳುಗಿ ಅನೇಕ

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಬೃಹತ್‌ ಯೋಜನೆ ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿರುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ ರಸ್ತೆ ನಿರ್ಮಾಣದ ಕುರಿತಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌ Read More »

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ

ವಿಶೇಷ ಗೌರವಕ್ಕೆ ಪಾತ್ರರಾದ ಭಾರತದ 11ನೇ ಕ್ರಿಕೆಟಿಗ ಲಂಡನ್‌: ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ದಿಗ್ಗಜ ಕ್ರಿಕೆಟಿಗ ಎಂ.ಎಸ್‌.ಧೋನಿ 2025ನೇ ಸಾಲಿನ ಹಾಲ್‌ ಆಫ್ ಫೇಮ್‌ ಗೌರವಕ್ಕೆ ಭಾಜನರಾಗಿದ್ದಾರೆ. ಅವರ ಜತೆಗೆ ಇತರ 6 ಕ್ರಿಕೆಟಿಗರು ಕೂಡ ಈ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಧೋನಿ ಐಸಿಸಿ ಹಾಲ್‌ ಆಫ್‌ ಫೇಮ್‌ ಸೇರ್ಪಡೆಗೊಂಡ ಭಾರತದ 11ನೇ ಕ್ರಿಕೆಟಿಗ ಎನಿಸಿಕೊಂಡರು. ಧೋನಿಗೂ ಮುನ್ನ ಸುನಿಲ್‌ ಗವಾಸ್ಕರ್‌, ಬಿಶನ್‌ ಸಿಂಗ್‌ ಬೇಡಿ, ಕಪಿಲ್‌ ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ Read More »

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ

ಗಾಯಗೊಂಡವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು : ಕೇರಳದ ಕೊಚ್ಚಿ ಕರಾವಳಿ ತೀರದಿಂದ ಸುಮಾರು 78 ನಾಟಿಕಲ್‌ ಮೈಲು ದೂರದಲ್ಲಿ ಸರಕು ಸಾಗಿಸುವ ಹಡಗಿಗೆ ಬೆಂಕಿ ಹತ್ತಿಕೊಂಡು ಭಾರಿ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಹಡಗಿನ 18 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಅಝಿಕ್ಕಲ್ ಮತ್ತು ಕೊಚ್ಚಿಯ ಮಧ್ಯದಲ್ಲಿ ಈ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಕಂಟೇನರ್ ಹಡಗಿನ ಎಂವಿ ವಾನ್ ಹೈ 503ನಲ್ಲಿದ್ದ 22

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ Read More »

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ

ಚೆನ್ನೈ: ಯುವ ವೈದ್ಯನೋರ್ವ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ. ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಆತ್ಮಹತ್ಯೆ ಮಾಡಿಕೊಂಡವರು. ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ (ಡಾಕ್ಟರ್ ಆಫ್ ಮೆಡಿಸಿನ್) ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ Read More »

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು

ದಾರುಣ ಅಂತ್ಯ ಕಂಡ ರೈಲಿನ ಬಾಗಿಲಲ್ಲಿ ನೇತಾಡುತ್ತಿದ್ದ ಪ್ರಯಾಣಿಕರು ಮುಂಬಯಿ: ಮಹಾನಗರದ ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗಿನ ಹೊತ್ತು ಕಿಕ್ಕಿರಿದು ತುಂಬಿದ್ದ ಬಾಗಿಲಲ್ಲಿ ನೇತಾಡುತ್ತಿದ್ದ ಸುಮಾರು 12-15 ಮಂದಿ ಹಳಿ ಮೇಲೆ ಬಿದ್ದಿದ್ದಾರೆ. ಈ ಪೈಕಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಸರಾದಿಂದ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಿಂದ ಹೋಗುತ್ತಿದ್ದ ಫಾಸ್ಟ್‌ ರೈಲಿನಲ್ಲಿ ಮುಂಬ್ರಾ ಮತ್ತು ದಿವಾ ರೈಲು ನಿಲ್ದಾಣಗಳ

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು Read More »

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ

ಐಪಿಎಲ್‌ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್‌ ಗೆದ್ದುಕೊಂಡ ಆರ್‌ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್‌ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ Read More »

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ

ಸಾಧನೆ, ಸವಾಲುಗಳ ನಡುವೆ ಮೋದಿ ಜನಪ್ರಿಯತೆ ಅಬಾಧಿತ ನವದೆಹಲಿ: ಅನೇಕ ಸವಾಲು ಮತ್ತು ಸಾಧನೆಗಳ ನಡುವೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯ ಒಂದನೇ ವರ್ಷವನ್ನು ಪೂರ್ಣಗೊಳಿಸಿದೆ. ಒಂದು ವರ್ಷದ ಅವಧಿಯಲ್ಲಿ ಮೋದಿ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇದರೊಂದಿಗೆ ಎನ್‌ಡಿಎ ಮತ್ತು ಮೋದಿ ಸತತ 11 ವರ್ಷ ಆಳ್ವಿಕೆ ನಡೆಸಿದಂತಾಗಿದೆ. ಈ ಹನ್ನೊಂದು ವರ್ಷಗಳಲ್ಲಿ ಮೋದಿ ಜನಪ್ರಿಯತೆ ಅಬಾಧಿತವಾಗಿ ಮುಂದುವರಿಯುತ್ತಿದೆ ಎನ್ನುವುದು ವಿಶೇಷ. ಲೋಕಸಭಾ ಚುನಾವಣೆಯಲ್ಲಿ

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ Read More »

error: Content is protected !!
Scroll to Top