ದೇಶ

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ಇರುಮುಡಿ ಹೊತ್ತು ಅಯ್ಯಪ್ಪನ ಸನ್ನಿಧಾನಕ್ಕೆ ಹೋಗಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ ಇಳಿಯಲು ಸನ್ನಿಧಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು ಆದರೆ ವಿರೋಧದಿಂದಾಗಿ ಆ ಆಲೋಚನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ನಿಲಕ್ಕಲ್‌ನಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲಿದ್ದಾರೆ. […]

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ

ಶ್ರೀನಗರ: ಕಾಶ್ಮೀರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಹಿತ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಬಂಧಿಸಿದೆ. ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಬುಚ್‌ಪೋರಾ ಪಟ್ಟಣದಲ್ಲಿ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ಸಹಚರರನ್ನು ಬಂಧಿಸಲಾಗಿದೆ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ನರಮೇಧದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದ್ದು 10ಕ್ಕೂ ಹೆಚ್ಚು ಉಗ್ರರ ಮನೆಗಳನ್ನು ಸ್ಫೋಟಿಸಲಾಗಿದೆ. ಕಾಡಿನಲ್ಲಿ ಅಡಗಸಿಟ್ಟಿದ್ದ ಅಪಾರ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ.

ಶಸ್ತ್ರಾಸ್ತ್ರ ಸಹಿತ ಇಬ್ಬರು ಉಗ್ರರು ಸೆರೆ Read More »

ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸಲು ಸಿದ್ಧತೆ ಹೊಸದಿಲ್ಲಿ: ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯಗಳು ಬುಧವಾರ ಅಣಕು ರಕ್ಷಣಾ ಕವಾಯತುಗಳನ್ನು ನಡೆಸಲಿವೆ. ಯುದ್ಧ ಸಂಭವಿಸಿದರೆ ನಾಗರಿಕರನ್ನು ರಕ್ಷಿಸುವ ಉದ್ದೇಶದಿಂದ ರಕ್ಷಣಾ ಕವಾಯತು ನಡೆಸಲಾಗುತ್ತಿದೆ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಗುಂಡಿಕ್ಕಿ ಸಾಯಿಸಿದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದ್ದು, ಯುದ್ಧದ ಕಾರ್ಮೋಡ ಆವರಿಸಿದೆ. ಇದರ ಬೆನ್ನಲ್ಲೇ ಕೇಂದ್ರದಿಂದ ರಕ್ಷಣಾ ಕವಾಯತು ನಡೆಸಲು ಸೂಚನೆ ಬಂದಿರುವುದು ಮಹತ್ವ ಪಡೆದುಕೊಂಡಿದೆ. ಮೇ 7ರಂದು ಅಣಕು ರಕ್ಷಣಾ ಕವಾಯತುಗಳನ್ನು

ಬುಧವಾರ ರಕ್ಷಣಾ ಕವಾಯತು ನಡೆಸಲು ರಾಜ್ಯಗಳಿಗೆ ಕೇಂದ್ರ ಸೂಚನೆ Read More »

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು

ತಪ್ಪಿಸಿಕೊಳ್ಳಲು ನದಿಗೆ ಹಾರಿ ಈಜಲಾಗದೆ ಮುಳುಗಿದ ಯುವಕ ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಉಗ್ರರಿಗೆ ಊಟ ಮತ್ತು ಆಶ್ರಯ ನೀಡಿದ ಸ್ಥಳೀಯ ಯುವಕನೊಬ್ಬ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಮೃತಪಟ್ಟಿದ್ದಾನೆ. ಆದರೆ ಈ ಯುವಕನ ತಾಯಿ ಇದು ಪೊಲೀಸರು ಮತ್ತು ಭದ್ರತಾ ಪಡೆಯವರು ಉದ್ದೇಶಪೂರ್ವಕವಾಗಿ ನಡೆಸಿದ ಕೊಲೆ ಎಂದು ಅರೋಪಿಸಿ ಮಾಧ್ಯಮಗಳ ಮುಂದೆ ಗೋಳಾಡಿದ್ದಾರೆ. ಇಮ್ತಿಯಾಜ್‌ ಅಹ್ಮದ್ ಮಾಗ್ರೆ ಎಂಬ 23 ವರ್ಷದ ಯುವಕ ಪಹಲ್ಗಾಮ್‌ ದಾಳಿಕೋರರಿಗೆ ಸಕಲ ನೆರವು ನೀಡುತ್ತಿದ್ದ

ಪಹಲ್ಗಾಮ್‌ ಉಗ್ರರಿಗೆ ಊಟ-ಆಶ್ರಯ ಕೊಟ್ಟ ಯುವಕ ನದಿಯಲ್ಲಿ ಮುಳುಗಿ ಸಾವು Read More »

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ

ಎಲ್ಲ ದೀಪಗಳನ್ನು ಆರಿಸಿ ಅರ್ಧ ತಾಸು ಯುದ್ಧಾಭ್ಯಾಸ ಮಾಡಿದ ಸೇನೆ ಹೊಸದಿಲ್ಲಿ : ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಯುದ್ಧದ ಕಾರ್ಮೋಡ ಕವಿದಿರುವಂತೆಯೇ ಭಾರತೀಯ ಸೇನೆ ನಿನ್ನೆ ರಾತ್ರಿ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಅಣಕು ಸಮರ ನಡೆಸಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವಿನ ಉದ್ವಿಗ್ನ ನೆಲೆಸಿದೆ. ಯಾವುದೇ ಕ್ಷಣದಲ್ಲಿ ಯುದ್ಧ ಶುರುವಾಗಬಹುದು ಎಂಬ ಪರಿಸ್ಥಿಯಿದ್ದು,

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ Read More »

ಶಾಸ್ತ್ರೋಕ್ತವಾದ ಆಚರಣೆ ಇಲ್ಲದ ವಿವಾಹ ವಿವಾಹವೇ ಅಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೂರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಅಲ್ಲದೆ ಇಂಥ ಆಚರಣೆಗಳಿಲ್ಲದೆ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪೈಲಟ್ ದಂಪತಿಯ ವಿಚ್ಚೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾ.ಅಗಾಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ಇತ್ತೀಚೆಗೆ ಈ ಮಹತ್ವದ ತೀರ್ಪು

ಶಾಸ್ತ್ರೋಕ್ತವಾದ ಆಚರಣೆ ಇಲ್ಲದ ವಿವಾಹ ವಿವಾಹವೇ ಅಲ್ಲ : ಸುಪ್ರೀಂ ಕೋರ್ಟ್ Read More »

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದೇವತೆಯ ಜಾತ್ರೆ ಮೆರವಣಿಗೆ ವೇಳೆ ವದಂತಿಗಳಿಂದ ನೂಕುನುಗ್ಗಲು ಉಂಟಾಗಿ ದುರಂತ ಪಣಜಿ: ಉತ್ತರ ಗೋವಾದ ಶಿರಗಾವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 50ಕ್ಕೂ ಅಧಿಕ ಜನರಿಗೆ ಗಾಯಂಡಿದ್ದಾರೆ. ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ. ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು Read More »

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು

100ಕ್ಕೂ ಹೆಚ್ಚು ವಿಮಾನಗಳು ವಿಳಂಬ, 40 ವಿಮಾನಗಳ ಮಾರ್ಗ ಬದಲು ನವದೆಹಲಿ: ರಾಜಧಾನಿ ದೆಹಲಿ ಎನ್​ಸಿಆರ್​ನಲ್ಲಿ ಇಂದು ಬೆಳಗ್ಗಿನಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಅನೇಕೆ ಅನಾಹುತಗಳು ಸೃಷ್ಟಿಯಾಗಿವೆ. ನಜಾಫ್‌ಗಢ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ಓರ್ವ ಮಹಿಳೆ ಮತ್ತು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು ಈ ದುರಂತ ಅಪಘಾತ ಸಂಭವಿಸಿದೆ. ದೆಹಲಿಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂಚಾರ ವ್ಯವಸ್ಥೆಯನ್ನೂ ಮಳೆ

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು Read More »

ಪಹಲ್ಗಾಮ್ ಯುದ್ದದಿಂದ ಕರ್ನಾಟಕ ಕರವಾಳಿಯಲ್ಲಿ ಕಟ್ಟುನಿಟ್ಟಿನ ಎಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆಲ್ಲಾ ಪೊಲೀಸರ ಕಣ್ಗಾವಲು

ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ದೇಶದಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳಾಗುತ್ತಿವೆ. ದೇಶದ ಸುರಕ್ಷತೆಯ ವಿಚಾರವಾಗಿ ಭಾರಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್ ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಸಕ್ರಿಯರಾಗಿದ್ದಾರೆ. ಒಂದು ಕಡೆ ಅರಬ್ಬಿ ಸಮುದ್ರ, ಇನ್ನೊಂದು ಕಡೆ ದೇಶದ ದೊಡ್ಡ ನೌಕಾ ನೆಲೆ. ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬರುವ ದೇಶ ವಿದೇಶಿಗರು. ಈ ಎಲ್ಲ ಸೂಕ್ಷ್ಮ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ

ಪಹಲ್ಗಾಮ್ ಯುದ್ದದಿಂದ ಕರ್ನಾಟಕ ಕರವಾಳಿಯಲ್ಲಿ ಕಟ್ಟುನಿಟ್ಟಿನ ಎಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆಲ್ಲಾ ಪೊಲೀಸರ ಕಣ್ಗಾವಲು Read More »

error: Content is protected !!
Scroll to Top