ದೇಶ

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ

ಅಮೆರಿಕಕ್ಕೆ ಭಾರತದ ಸ್ಪಷ್ಟ ನಿಲುವು ತಿಳಿಸಿದ ಪ್ರಧಾನಿ ಮೋದಿ ನವದೆಹಲಿ: ಪಾಕಿಸ್ಥಾನ ಮತ್ತೆ ದಾಳಿ ನಡೆಸಿದರೆ ತಕ್ಕ ತಿರುಗೇಟು ನೀಡುತ್ತೇವೆ. ಆ ಕಡೆಯಿಂದ ಗುಂಡು ಹಾರಿಸಿದರೆ ಇಲ್ಲಿಂದಲೂ ಗುಂಡು ಸಿಡಿಯುತ್ತದೆ. ನಮಗೆ ಯಾರ ಮಧ್ಯಸ್ಥಿಕೆ ಕೂಡ ಬೇಕಾಗಿಲ್ಲ ಎಂದು ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಮೆರಿಕ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್​ ಜೊತೆ ಪಾಕ್ ಕದನ ವಿರಾಮ ಉಲ್ಲಂಘಿಸಿದ ಬಳಿಕ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿ ಭಾರತದ ನಿಲುವನ್ನು ತಿಳಿಸಿದ್ದಾರೆ. ಕಾಶ್ಮೀರದ ಬಗ್ಗೆ ಭಾರತ […]

ಪಾಕಿಸ್ಥಾನ ಭಯೋತ್ಪಾದಕರನ್ನು ಹಸ್ತಾಂತರಿಸಿದರೆ ಮಾತ್ರ ಮಾತುಕತೆ Read More »

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು

ರಾಯ್​ಪುರ: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ಮುಖಾಮುಖಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿ 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಮಡಿದವರಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸೇರಿದ್ದಾರೆ. ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ರಾಯ್‌ಪುರ ಎಸ್‌ಪಿ

ಭೀಕರ ಅಪಘಾತ : 13 ಮಂದಿ ಸ್ಥಳದಲ್ಲೇ ಸಾವು Read More »

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ

ಸಾಕ್ಷಿ ಸಮೇತ ಮಾಹಿತಿ ನೀಡಿದ ಸೇನೆಯ ಡಿಜಿಎಂಒ ನವದೆಹಲಿ : ಪಹಲ್ಗಾಮ್‌ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಗುಂಡಿಕ್ಕಿ ಸಾಯಿಸಿದ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮೇ 7ರಂದು ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ 9 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಹೇಳಿದ್ದಾರೆ. ಕದನ ವಿರಾಮ ಘೋಷಣೆಯಾಗಿ ಒಂದು ದಿನದ ಬಳಿಕ ಭಾರತದ ವಿವಿಧ ಪಡೆಗಳ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಆಪರೇಷನ್ ಸಿಂದೂರ್ ಹಾಗೂ ನಂತರದ ಭಾರತದ

ಆಪರೇಷನ್‌ ಸಿಂದೂರ್‌ನಲ್ಲಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ

ಸುಳ್ಳು ಸುದ್ದಿ ಹರಡಿ ಗೊಂದಲ ಸೃಷ್ಟಿಸಲು ಪಾಕ್‌ ಕುತಂತ್ರ ಎಂದ ಸ್ಪಷ್ಟನೆ ನವದೆಹಲಿ : ಇದುವರೆಗಿನ ಯುದ್ಧದಲ್ಲಿ ಪಾಕಿಸ್ಥಾನದ 5 ವಾಯುನೆಲೆಗಳನ್ನು ಹಾಗೂ 2 ರಾಡಾರ್ ಬೇಸ್​ಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಭಾರತದ ವಾಯುನೆಲೆಗಳನ್ನು ಧ್ವಂಸ ಮಾಡಲಾಗಿದೆ ಎಂಬ ಪಾಕಿಸ್ಥಾನದ ಸುದ್ದಿಗಳು ಸುಳ್ಳು. ಭಾರತದ ಎಲ್ಲ ವಾಯುನೆಲೆಗಳು ಸುರಕ್ಷಿತವಾಗಿವೆ. ಆದರೆ, ಪಾಕಿಸ್ಥನವು ನಾಗರಿಕರನ್ನು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ. ಪಾಕಿಸ್ಥಾನದ ಎಲ್ಲ ದಾಳಿಗಳನ್ನು ತಡೆಯಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೇನೆ ಮಾಹಿತಿ ನೀಡಿದೆ. ದಾಳಿ ಮತ್ತು ಪ್ರತಿ ದಾಳಿ

ಪಾಕಿಸ್ಥಾನದ 5 ವಾಯುನೆಲೆ, 2 ರಾಡಾರ್‌ ಬೇಸ್‌ ಧ್ವಂಸ : ರಕ್ಷಣಾ ಇಲಾಖೆ ಮಾಹಿತಿ Read More »

ರೋಹಿತ್‌ ಶರ್ಮಾ ಬೆನ್ನಲ್ಲೇ ವಿರಾಟ್‌ ಕೊಹ್ಲಿ ಟೆಸ್ಟ್‌ಗೆ ವಿದಾಯ

ನಿರ್ಧಾರ ಪನರ್‌ ಪರಿಶೀಲಿಸಲು ಬಿಸಿಸಿಐ ಮನವಿ ಮುಂಬಯಿ: ರೋಹಿತ್‌ ಶರ್ಮ ಬಳಿಕ ವಿರಾಟ್‌ ಕೊಹ್ಲಿ ಕೂಡ ಟಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ತನ್ನ ನಿರ್ಧಾರವನ್ನು ಈಗಾಗಲೇ ಬಿಸಿಸಿಐಗೆ ತಿಳಿಸಿದ್ದು, ಆದರೆ ಬಿಸಿಸಿಐ ನಿವೃತ್ತಿ ನೀಡಲು ಒಪ್ಪದೆ ನಿರ್ಧಾರ ಪುನಃಪರಿಶೀಲಿಸಲು ಕೇಳಿಕೊಂಡಿದೆ ಎನ್ನಲಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿರಾಟ್

ರೋಹಿತ್‌ ಶರ್ಮಾ ಬೆನ್ನಲ್ಲೇ ವಿರಾಟ್‌ ಕೊಹ್ಲಿ ಟೆಸ್ಟ್‌ಗೆ ವಿದಾಯ Read More »

ಪಾಕ್‌ ಶೆಲ್‌ ದಾಳಿಯಲ್ಲಿ ಭಾರತದ ಅಧಿಕಾರಿ ಸಾವು; ಇಬ್ಬರಿಗೆ ಗಂಭೀರ ಗಾಯ

ಯುದ್ಧದ ಕರ್ತವ್ಯದಲ್ಲಿದ್ದ ಅಧಿಕಾರಿಗೆ ಬಡಿದ ಶೆಲ್‌ ಶ್ರೀನಗರ: ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಪಾಕಿಸ್ಥಾನ ನಾಗರಿಕರ ಮೇಲೆ ಶನಿವಾರ ಮುಂಜಾನೆ ನಡೆಸಿದ ಶೆಲ್‌ ದಾಳಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲಾ ಹೆಚ್ಚುವರಿ ಅಭಿವೃದ್ಧಿ ಆಯುಕ್ತ ರಾಜ್‌ಕುಮಾರ್‌ ಥಾಪಾ ಎಂಬವರು ಮೃತಪಟ್ಟು ಅವರ ಕಚೇರಿಯ ಇಬ್ಬರು ಸಿಬ್ಬಂದಿ ಶೆಲ್‌ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಸರಕಾರ ತಿಳಿಸಿದೆ. ಶೆಲ್‌ ಬಡಿದಾಗ ಥಾಪಾ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಸರಕಾರಿ ಮೆಡಿಕಲ್‌ ಕಾಲೇಜಿಗೆ ದಾಖಲಿಸಿದರೂ ಥಾಪಾ

ಪಾಕ್‌ ಶೆಲ್‌ ದಾಳಿಯಲ್ಲಿ ಭಾರತದ ಅಧಿಕಾರಿ ಸಾವು; ಇಬ್ಬರಿಗೆ ಗಂಭೀರ ಗಾಯ Read More »

ಪರಮಾಣು ಬಾಂಬ್‌ ಬಳಕೆಗೆ ಮುಂದಾಯಿತೇ ಪಾಕ್‌?

ದೆಹಲಿಯತ್ತ ಬ್ಯಾಲಿಸ್ಟಿಕ್‌ ಮಿಸೈಲ್‌ ಪ್ರಯೋಗ ಇಸ್ಲಾಮಾಬಾದ್‌: ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ ಈಗ ಪರಮಾಣು ಶಸ್ತ್ರಾಸ್ತ್ರ ಬಳಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ತುರ್ತು ಸಭೆ ಕರೆದಿದೆ. ಪ್ರಧಾನಿ ಶೆಹಬಾಜ್ ಷರೀಫ್ ನ್ಯಾಶನಲ್‌ ಕಮಾಂಡ್‌ ಅಥಾರಿಟಿ ತುರ್ತು ಸಭೆಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾಶನಲ್‌ ಕಮಾಂಡ್‌ ಅಥಾರಿಟಿ ಪಾಕಿಸ್ಥಾನದ ಪರಮಾಣು ಶಸ್ತ್ರಾಸ್ತ್ರಗಳ ನಿಯಂತ್ರಣ ಮತ್ತು ಕಾರ್ಯಾಚರಣೆಯ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಯಾಗಿದೆ. ಯುದ್ಧದ ಸಂದರ್ಭದಲ್ಲಿ ಮಾತ್ರ ಈ ಸಭೆಯನ್ನು ಕರೆಯಲಾಗುತ್ತದೆ. ಭಾರತ ಮತ್ತು ಪಾಕಿಸ್ಥಾನ ಎರಡೂ ಪರಮಾಣು

ಪರಮಾಣು ಬಾಂಬ್‌ ಬಳಕೆಗೆ ಮುಂದಾಯಿತೇ ಪಾಕ್‌? Read More »

ಮೇ 15ರ ತನಕ 32 ವಿಮಾನ ನಿಲ್ದಾಣಗಳು ಬಂದ್‌

ಗಡಿಭಾಗದಲ್ಲಿರುವ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತ ನವದೆಹಲಿ : ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 15ರ ಬೆಳಗ್ಗೆ 5.29ರವರೆಗೆ ದೇಶಾದ್ಯಂತ 32 ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲು ಸರಕಾರ ಆದೇಶಿಸಿದೆ. ಪಾಕಿಸ್ಥಾನ ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರಕಾರ ಹೇಳಿದೆ. ಈ ಹಿಂದೆ ಮೇ 10ರ ವರೆಗೆ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸುವ ತೀರ್ಮಾನ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ

ಮೇ 15ರ ತನಕ 32 ವಿಮಾನ ನಿಲ್ದಾಣಗಳು ಬಂದ್‌ Read More »

ಪಾಕಿಸ್ಥಾನದ ಮೂರು ವಾಯುನೆಲೆಗಳನ್ನು ಧ್ವಂಸ ಮಾಡಿದ ಭಾರತ : ಅಪಾರ ಶಸ್ತ್ರಾಸ್ತ್ರ ನಾಶ

ಗಡಿ ಭಾಗದಲ್ಲಿ ನಿನ್ನೆ ರಾತ್ರಿ ಭಾರಿ ಸಮರ ಡ್ರೋನ್‌, ಕ್ಷಿಪಣಿ ದಾಳಿ ಮಾಡಿದ ಪಾಕ್‌ ನವದೆಹಲಿ : ಪಾಕಿಸ್ಥಾನದ ಮೂರು ಪ್ರಮುಖ ವಾಯುನೆಲೆಗಳಿಗೆ ಭಾರತ ನಿನ್ನೆ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ದಾಳಿ ಮಾಡಿ ಭಾರಿ ಹಾನಿ ಉಂಟು ಮಾಡಿದೆ. ರಾವಲ್ಪಿಂಡಿಯ ನೂರ್‌ಖಾನ್‌, ಚಕ್ವಾಲ್‌ನ ಮುರಿಡ್‌ ಮತ್ತು ಶೋರ್‌ಕೋಟ್‌ನ ರಫೀಕಿ ವಾಯುನೆಲೆಗಳ ಮೇಲೆ ಕ್ಷಿಪಣಿ ಹಾರಿಸಲಾಗಿದ್ದು, ಪಾಕಿಸ್ಥಾನದ ಅಪಾರ ಶಸ್ತ್ರಾಸ್ತ್ರಗಳು ಮತ್ತು ಸ್ವತ್ತುಗಳು ನಾಶವಾಗಿವೆ. ಈ ದಾಳಿಯಿಂದ ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧ ಇನ್ನಷ್ಟು ತೀವ್ರಗೊಂಡಿದೆ. ಈ

ಪಾಕಿಸ್ಥಾನದ ಮೂರು ವಾಯುನೆಲೆಗಳನ್ನು ಧ್ವಂಸ ಮಾಡಿದ ಭಾರತ : ಅಪಾರ ಶಸ್ತ್ರಾಸ್ತ್ರ ನಾಶ Read More »

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ

ಉತ್ತರ ಭಾರತದಲ್ಲಿ ಪೆಟ್ರೋಲ್‌ ಪಂಪ್‌ಗಳ ಮುಂದೆ ಮೈಲುದ್ದ ಲೈನ್‌ ನವದೆಹಲಿ : ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಉತ್ತರ ಭಾರತದಲ್ಲಿ ಜನರು ಪೆಟ್ರೋಲ್ ಖರೀದಿಗೆ ಮುಗಿಬಿದ್ದಿದ್ದಾರೆ. ಪೆಟ್ರೋಲ್ ಬಂಕ್​​​​ಗಳಲ್ಲಿ ಉದ್ದುದ್ದ ಕ್ಯೂ ಇರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ದೇಶದಲ್ಲಿ ಇಂಧನ ಸಂಗ್ರಹ ಸಾಕಷ್ಟಿದೆ ಎಂದು ತಿಳಿಸಿದೆ. ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹ ಇಟ್ಟುಕೊಂಡಿದೆ. ನಮ್ಮ ಸಪ್ಲೈ ಲೈನ್​​​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಪೆಟ್ರೋಲ್‌, ಡೀಸೆಲ್‌ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ Read More »

error: Content is protected !!
Scroll to Top