ದೇಶ

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ

ಯುದ್ಧದಿಂದ ಸೃಷ್ಟಿಯಾದ ಬಿಕ್ಕಟ್ಟಿನಿಂದ ಪಾರಾಗಲು ವೋಕಲ್ ಫಾರ್ ಲೋಕಲ್ ಮಂತ್ರ ನವದೆಹಲಿ : ಕಳೆದ ಕೆಲವು ವರ್ಷಗಳಿಂದ ಜಗತ್ತು ನಿರಂತರವಾಗಿ ಅಸ್ಥಿರ ಪರಿಸ್ಥಿತಿಗಳ ಮೂಲಕ ಹಾದುಹೋಗುತ್ತಿದೆ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದಿಂದ ಸೃಷ್ಟಿಯಾದ ಸನ್ನಿವೇಶಗಳು ದಶಕದ ಪ್ರಮುಖ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, ‘ವೋಕಲ್ ಫಾರ್ ಲೋಕಲ್’ ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ. […]

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ Read More »

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ

ಬಾಂಬ್‌ ತಯಾರಿಸಲು ಬಳಸುವ ಜಿಲೆಟಿನ್‌ ಕಡ್ಡಿಗಳು ರಸ್ತೆಯಲ್ಲಿ ಪತ್ತೆ ಬೆಂಗಳೂರು: ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್‌ನ ಕಾರ್ಯಕ್ರಮದಲ್ಲಿ ಭಾನುವಾರ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್

ಮೋದಿ ಪ್ರಯಾಣಿಸಿದ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ : ತನಿಖೆಗೆ ತಂಡ ರಚನೆ Read More »

ತೈಲ ಕಂಪನಿಗಳಿಗೆ 10 ವಾರದಲ್ಲಿ 1 ಲಕ್ಷ ಕೋಟಿ ರೂ. ನಷ್ಟ!

ಶೀಘ್ರ ಬೆಲೆ ಏರಿಕೆ ಸಾಧ್ಯತೆ ನವದೆಹಲಿ: ಇರಾನ್‌, ಇಸ್ರೇಲ್‌ ಮತ್ತು ಅಮೆರಿಕದ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನತೆ ನೇರವಾಗಿ ಭಾರತದ ತೈಲ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಯುದ್ಧದಿಂದಾಗಿ ಕಚ್ಚಾತೈಲ ಬೇಲೆ ಏರಿಕೆಯಿಂದಾಗಿ ಭಾರತದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಳೆದ 10 ವಾರಗಳಲ್ಲಿ ಅಂದಾಜು 1 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ

ತೈಲ ಕಂಪನಿಗಳಿಗೆ 10 ವಾರದಲ್ಲಿ 1 ಲಕ್ಷ ಕೋಟಿ ರೂ. ನಷ್ಟ! Read More »

ಒಂದು ವರ್ಷ ಚಿನ್ನ ಖರೀದಿ ಬೇಡ : ಜನರಿಗೆ ಮೋದಿ ವಿನಂತಿ

ಪೆಟ್ರೋಲ್‌, ಡೀಸೆಲ್‌ ವಿವೇಚನೆಯಿಂದ ಬಳಸಲು ಪ್ರಧಾನಿ ಸಲಹೆ ನವದೆಹಲಿ: ಮಧ್ಯಪ್ರಾಚ್ಯ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತೀಯರು ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ. ವರ್ಕ್‌ ಫ್ರಮ್‌ ಹೋಮ್‌ಗೆ ಆದ್ಯತೆ ನೀಡಿ ಎಂದು ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಹೈದರಾಬಾದ್‍ನ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಅವರು, ಆಮದು ಮಾಡಿಕೊಂಡ ಪೆಟ್ರೋಲ್‌, ಡೀಸೆಲ್‌ ಸದ್ಬಳಕೆಯಾಗಬೇಕು ಎಂದು ಒತ್ತಿ ಹೇಳಿದರು. ಪೆಟ್ರೋಲಿಯಂ ಉತ್ಪನ್ನಗಳನ್ನು ವಿವೇಚನೆಯಿಂದ ಬಳಸಿ. ಪೆಟ್ರೋಲಿಯಂ ಉತ್ಪನ್ನಗಳಿಗೆ ಭಾರತ ಅವಲಂಬಿತವಾಗಿದೆ. ಪೆಟ್ರೋಲ್, ಡೀಸೆಲ್,

ಒಂದು ವರ್ಷ ಚಿನ್ನ ಖರೀದಿ ಬೇಡ : ಜನರಿಗೆ ಮೋದಿ ವಿನಂತಿ Read More »

ಕಾಂಗ್ರೆಸ್‌ ಹೈಕಮಾಂಡ್‌ ಪಾಲಿಗೆ ಕಗ್ಗಂಟಾದ ಕೇರಳಂ ಸಿಎಂ ಆಯ್ಕೆ

ಕರ್ನಾಟಕದಂತೆ ಕಚ್ಚಾಟದತ್ತ ಮುಖಮಾಡಿದ ಕೇರಳಂ ತಿರುವನಂತಪುರಂ: ಕರ್ನಾಟಕದಂತೆ ಕೇರಳ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿದ್ದರೂ ಮುಖ್ಯಮಂತ್ರಿ ಪಟ್ಟ ಮಾತ್ರ ಕಗ್ಗಂಟಾಗಿ ಪರಿಣಮಿಸಿದೆ. ಕರ್ನಾಟಕದಲ್ಲಾದರೆ ಮುಖ್ಯಮಂತ್ರಿ ಪಟ್ಟಕ್ಕೆ ಇಬ್ಬರು ಮಾತ್ರ ಹಕ್ಕು ಮಂಡನೆ ಮಾಡಿದ್ದರು. ಆದರೆ ಕೇರಳದಲ್ಲಿ ಪ್ರಧಾನವಾಗಿ ಮೂವರು ಪ್ರಮುಖ ನಾಯಕರಿದ್ದಾರೆ, ಇವರ ಅಲ್ಲದಿದ್ದರೆ ತಮಗಾದರೂ ಕೊಡಿ ಎನ್ನುವ ಇನ್ನೂ ಕೆಲವರಿದ್ದಾರೆ. ನಿಚ್ಚಳ ಬಹುಮತದೊಂದಿಗೆ ಮುಸ್ಲಿಂ ಲೀಗ್‌ ಒಳಗೊಂಡಿರುವ ಯುಡಿಎಫ್ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದರೂ ಈಗ ಮುಖ್ಯಮಂತ್ರಿ ಆಯ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಾಲ್ವರು

ಕಾಂಗ್ರೆಸ್‌ ಹೈಕಮಾಂಡ್‌ ಪಾಲಿಗೆ ಕಗ್ಗಂಟಾದ ಕೇರಳಂ ಸಿಎಂ ಆಯ್ಕೆ Read More »

ಲೆ| ಜ| ಎನ್‌.ಎಸ್‌.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನ ನೇಮಕ ಮಾಡಿದೆ. ಮೇ 30ರಂದು ಸಿಡಿಎಸ್‌ ಆಗಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿರುವ ಜನರಲ್‌ ಅನಿಲ್‌ ಚೌಹಾಣ್‌ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ

ಲೆ| ಜ| ಎನ್‌.ಎಸ್‌.ಸುಬ್ರಮಣಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕ Read More »

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ

ಸರಳ ಬಹುಮತದ ಸ್ಥಾನಗಳನ್ನು ಒಗ್ಗೂಡಿಸುವಲ್ಲಿ ವಿಜಯ್‌ ವಿಫಲ ಚೆನ್ನೈ: ತಮಿಳುನಾಡಿನಲ್ಲಿ ಬಹುಮತದ ಕಣ್ಣಾಮುಚ್ಚಾಲೆ ಮುಂದುವರಿದಿದ್ದು, ತಡರಾತ್ರಿ ಸಂಭವಿಸಿದ ಬೆಳವಣಿಗೆಯಿಂದಾಗಿ ವಿಜಯ್‌ ನೇತೃತ್ವದ ಟಿವಿಕೆ ಇಂದು ಅಧಿಕಾರ ಗ್ರಹಣ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಬಹುಮತದ ಕೊರತೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿನ್ನೆ ಹೇಳಲಾಗಿತ್ತು. ಆದರೆ ಇಷ್ಟರ ತನಕ ರಾಜ್ಯಪಾಲರು ಅವರಿಗೆ ಆಹ್ವಾನ ನೀಡಿಲ್ಲ. ಈ ನಡುವೆ ನಿನ್ನೆ ರಾತ್ರಿಯಿಡೀ ತಮಿಳುನಾಡು ರಾಜಕೀಯದಲ್ಲಿ ನಾನಾ ರೀತಿಯ ಬೆಳವಣೆಗೆಗಳು ನಡೆದಿವೆ. ದಳಪತಿ

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ Read More »

ಇಂದಿನಿಂದ ತಮಿಳುನಾಡಿನಲ್ಲಿ ವಿಜಯಪಥ

ಕೊನೆಗೂ ಬಹುಮತ ಒಗ್ಗೂಡಿಸುಲ್ಲಿ ಯಶಸ್ವಿಯಾದ ವಿಜಯ್‌ ಚೆನ್ನೈ : ತಮಿಳುನಾಡಿನಲ್ಲಿ ಇಂದಿನಿಂದ ವಿಜಯ್ ದರ್ಬಾರ್ ಆರಂಭವಾಗಲಿದೆ. ಟಿವಿಕೆ ಮುಖ್ಯಸ್ಥ ಜೋಸೆಫ್ ವಿಜಯ್ ಬಹುಮತ ಸಾಬೀತುಪಡಿಸಲು ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಅಗತ್ಯವಿರುವ ಬಹುಮತವನ್ನು ವಿಜಯ್ ಸಾಬೀತುಪಡಿಸಿದ್ದರಿಂದ ರಾಜ್ಯಪಾಲರು ಸರ್ಕಾರ ರಚನೆಗೆ ಒಪ್ಪಿಗೆ ನೀಡಿದ್ದಾರೆ. ಶನಿವಾರ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರು ಜೋಸೆಫ್ ವಿಜಯ್ ಅವರಿಗೆ

ಇಂದಿನಿಂದ ತಮಿಳುನಾಡಿನಲ್ಲಿ ವಿಜಯಪಥ Read More »

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್

25 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಕೊಂಡಿದ್ದ ಚಾಲಾಕಿ ಮುಂಬೈ: ನಾಸಿಕದಲ್ಲಿರುವ TCS ಕಚೇರಿಯಲ್ಲಿ ನಡೆದ ಲೈಂಗಿಕ ಕಿರುಕುಳ, ಮತಾಂತರ ಕೃತ್ಯದ ಕಿಂಗ್ ಪಿನ್ ನಿದಾ ‌ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ನಿದಾ ಖಾನ್ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದಿತ್ತು‌. ಆಕೆಯ ವಿರುದ್ಧ ಎಫ್‌ಐ‌ಆರ್ ದಾಖಲಾಗುತ್ತಿದ್ದ ಹಾಗೆಯೇ ನಾಪತ್ತೆಯಾಗಿದ್ದಳು. ಆಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಹಾ ಕೋರ್ಟ್ ವಜಾ ಮಾಡಿತ್ತು. ಆಕೆ ಕಳೆದ ನಾಲ್ಕು ದಿನಗಳಿಂದ ನರೇಂಗಾವ್‌ನ ಕೈಸರ್ ‌ಕಾಲನಿಯ ಫ್ಲ್ಯಾಟ್‌ನಲ್ಲಿ

ನಾಸಿಕ್ ಟಿಸಿಎಸ್ ಮತಾಂತರ ಪ್ರಕರಣ: ರೂವಾರಿ ನಿದಾಖಾನ್ ಕೊನೆಗೂ ಅರೆಸ್ಟ್ Read More »

ಐಪಿಎಲ್‌ ಸ್ಟಾರ್‌ ಆಟಗಾರರನ್ನು ಹನಿಟ್ರ್ಯಾಪ್‌ ಖೆಡ್ಡಾಕ್ಕೆ ಕೆಡವಲು ಸಂಚು

ಅಲರ್ಟ್‌ ಆದ ಬಿಸಿಸಿಐನಿಂದ ಆಟಗಾರರಿಗೆ ಗಂಭೀರ ಎಚ್ಚರಿಕೆ ಮುಂಬೈ: ಪ್ರಸ್ತುತ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 19ನೇ ಆವೃತ್ತಿಯಲ್ಲಿ ಆಡುತ್ತಿರುವ ಕೆಲವು ಸ್ಟಾರ್‌ ಆಟಗಾರರನ್ನು ಹನಿಟ್ರ್ಯಾಪ್‌ಗೆ ಕೆಡವಲು ಸಂಚು ನಡೆದಿದೆ ಎನ್ನುವ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಬಿಸಿಸಿಐ ಅಲರ್ಟ್‌ ಅಗಿದೆ. ಟಿ20 ಲೀಗ್‌ನಲ್ಲಿ ಪಾಲ್ಗೊಂಡಿರುವ ಆಟಗಾರರು ಮತ್ತು ಅಧಿಕಾರಿಗಳ ವಿರುದ್ಧ ಲೈಂಗಿಕ ದುರ್ನಡತೆ ಸೇರಿದಂತೆ ಗಂಭೀರ ಆರೋಪಗಳನ್ನು ಹೊರಿಸುವ ಯತ್ನ ನಡೆಯುತ್ತಿದೆ. ಈ ಪ್ರಯತ್ನವನ್ನು ತಡೆಯುವುದಕ್ಕಾಗಿ ಬಿಸಿಸಿಐ ಕಠಿಣ ನಿಲುವು ಕೈಗೊಂಡಿದೆ. ಎಲ್ಲ ಆಟಗಾರರ ಮೇಲೆ ಎಚ್ಚರಿಕೆ

ಐಪಿಎಲ್‌ ಸ್ಟಾರ್‌ ಆಟಗಾರರನ್ನು ಹನಿಟ್ರ್ಯಾಪ್‌ ಖೆಡ್ಡಾಕ್ಕೆ ಕೆಡವಲು ಸಂಚು Read More »

error: Content is protected !!
Scroll to Top