ದೇಶ

ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ಗ್ಯಾಸ್‌ ಅಭಾವದ ಹಿನ್ನೆಲೆಯಲ್ಲಿ ಸೀಮೆಏಣ್ಣೆ ವಿತರಿಸಲು ಪೆಟ್ರೋಲ್‌ ಪಂಪ್‌ಗಳಿಗೆ ಅನುಮತಿ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಅಡುಗೆ ಅನಿಲ ಅಭಾವ ತಲೆದೋರಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೀಮೆಎಣ್ಣೆ ವಿತರಣೆ ಮಾಡುವ ನಿಯಮವನ್ನು ಸಡಿಲಗೊಳಿಸಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತೈಲ ಬಿಕ್ಕಟ್ಟು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ಮನೆಗಳಿಗೆ (ಅಡುಗೆ ಮತ್ತು ದೀಪಗಳ ಬಳಕೆಗೆ) ಅಗತ್ಯವಾದ ಇಂಧನ ತಲುಪಿಸಲು ಈ ನಿರ್ಧಾರ ತೆಗೆದುಕೊಂಡಿದೆ. ಮಾರ್ಚ್ 29ರಂದು ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ಗುಜರಾತ್ […]

ಸೀಮೆಎಣ್ಣೆ ವಿತರಣೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ Read More »

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ

ಟೋಲ್ ದರ ಶೇ 4ರಿಂದ 5ರಷ್ಟು ಏರಿಕೆ ಬೆಂಗಳೂರು : ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4ರಿಂದ 5ರಷ್ಟು ಏರಿಕೆಯಾಗಲಿದೆ. ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ ಬೆಂಗಳೂರು-ಮಂಗಳೂರು, ಮಂಗಳೂರು-ಉಡುಪಿ-ಕುಂದಾಪುರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ, ಬೆಂಗಳೂರು-ತುಮಕೂರು, ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಹಾಸನ ಸೇರಿದಂತೆ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ದರ

ಏ.1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ Read More »

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬೆಂಗಳೂರು: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್‌ಎಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌

ಐಪಿಎಲ್‌ : ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಗೆ ಭರ್ಜರಿ ಜಯ Read More »

ಜಾಗತಿಕ ತೈಲ ಬೆಲೆ ಏರಿಕೆಯ ನಡುವೆ ಬೆಲೆ ಏರಿಸದ ಏಕೈಕ ರಾಷ್ಟ್ರ ಭಾರತ: ಅಮಿತ್ ಶಾ

ನವದೆಹಲಿ: ಭಾರತದಲ್ಲಿ ಎಲ್‌ಪಿ‌ಜಿ ಮತ್ತು ಇಂಧನಕ್ಕೆ ಕೊರತೆ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ಕಾರಣಕ್ಕೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಕಂಡಿದ್ದರೂ, ಭಾರತ ಮಾತ್ರ ಸರಬರಾಜು ಮತ್ತು ಬೆಲೆಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಎಲ್ಲಾ ಕಾರಣಗಳಿಂದ ಜನರು ಪ್ರಧಾನಿ ಮೋದಿ ಸರ್ಕಾರವನ್ನು ನಂಬಬೇಕು ಎಂದವರು ತಿಳಿಸಿದ್ದಾರೆ. ಜಗತ್ತಿನಾದ್ಯಂತ ಚಿಲ್ಲರೆ ಬೆಲೆಗಳು ಏರುತ್ತಿರುವಾಗ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗದ ಏಕೈಕ ದೇಶ ಭಾರತವಾಗಿದೆ. ಪ್ರಧಾನಿಯವರು

ಜಾಗತಿಕ ತೈಲ ಬೆಲೆ ಏರಿಕೆಯ ನಡುವೆ ಬೆಲೆ ಏರಿಸದ ಏಕೈಕ ರಾಷ್ಟ್ರ ಭಾರತ: ಅಮಿತ್ ಶಾ Read More »

ಹರ್ಮುಜ್ ಜಲಸಂಧಿ ಮಿತ್ರ ರಾಷ್ಟ್ರಗಳಿಗೆ ಮುಕ್ತ: ನಿಲುವು ಸ್ಪಷ್ಟಪಡಿಸಿದ ಇರಾನ್

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಸದ್ಯಕ್ಕೆ ಮುಗಿಯದ ಇಕ್ಕಟ್ಟು ಎಂಬಂತಾಗಿದೆ. ಇರಾನ್ ದೇಶವು ಹರ್ಮುಜ್ ಜಲಸಂಧಿಗೆ ‌ಸಂಬಂಧಿಸಿದ ಹಾಗೆ ತನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದೆ. ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟನಿಯಾ ಗುಟೆರಸ್ ಅವರ ಜೊತೆಗೆ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ ನಡೆಸಿದ್ದು, ದೇಶದ ಭದ್ರತೆಯ ಹಿನ್ನೆಲೆಯಲ್ಲಿ ಮಿತ್ರರಿಗೆ ಜಲಸಂಧಿ ತೆರೆಯುವ ಮತ್ತು ಶತ್ರುಗಳಿಗೆ ಜಲಸಂಧಿ ಮುಚ್ಚುವ ಸಂಪೂರ್ಣ ಹಕ್ಕು ಇರಾನಿಗೆ ಇದೆ ಎಂದು ಹೇಳಿದ್ದಾರೆ. ಅಮೆರಿಕಾ ಮತ್ತು ಇಸ್ರೇಲಿನ ಆಕ್ರಮಣಕಾರಿ ಧೋರಣೆಯಿಂದ ಗಲ್ಫ್

ಹರ್ಮುಜ್ ಜಲಸಂಧಿ ಮಿತ್ರ ರಾಷ್ಟ್ರಗಳಿಗೆ ಮುಕ್ತ: ನಿಲುವು ಸ್ಪಷ್ಟಪಡಿಸಿದ ಇರಾನ್ Read More »

ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಂವಾದ

ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ದೇಶದ ಒಟ್ಟಾರೆ ಸಿದ್ಧತೆ ಬಗ್ಗೆ ಚರ್ಚೆ ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ದೇಶದ ಒಟ್ಟಾರೆ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸುವ ಮುಖ್ಯ ಉದ್ದೇಶವನ್ನು ಈ ಸಭೆ ಹೊಂದಿದೆ. ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸುವುದಿಲ್ಲ. ಹೀಗಾಗಿ ಬದಲಿಗೆ,

ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಂವಾದ Read More »

ನಾಳೆಯಿಂದ ಶುರುವಾಗಲಿದೆ ಐಪಿಎಲ್‌ ಹಬ್ಬ : 2 ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಭರಪೂರ ಮನರಂಜನೆ

ಮಾ.28ರಂದು ಆರ್‌ಸಿಬಿ-ಸನ್‌ರೈಸರ್ಸ್‌ ಹೈದರಾಬಾದ್ ಮಧ್ಯೆ ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ಬೆಂಗಳೂರು : ಶನಿವಾರದಿಂದ ಸುಮಾರು ಎರಡು ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಐಪಿಎಲ್‌ ಪಂದ್ಯಗಳ ಹಬ್ಬ. ಈ ವರ್ಷದ ಐಪಿಎಲ್ ಪಂದ್ಯಗಳು ಮಾರ್ಚ್ 28ರಿಂದ ಪ್ರಾರಂಭವಾಗಲಿವೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗುತ್ತವೆ. 19ನೇ ಆವೃತ್ತಿಯ ಐಪಿಎಲ್​ನ ವೇಳಾಪಟ್ಟಿಯನ್ನು ಬಿಸಿಸಿಐ ಎರಡು ಹಂತದಲ್ಲಿ ಪ್ರಕಟಿಸಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ

ನಾಳೆಯಿಂದ ಶುರುವಾಗಲಿದೆ ಐಪಿಎಲ್‌ ಹಬ್ಬ : 2 ತಿಂಗಳು ಕ್ರಿಕೆಟ್‌ ಪ್ರೇಮಿಗಳಿಗೆ ಭರಪೂರ ಮನರಂಜನೆ Read More »

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ

ವಿಡಿಯೋ ವೈರಲ್‌ ಆಗಿ ಆಡಳಿತ ಪಕ್ಷಕ್ಕೆ ಮುಜುಗರ ತಂದ ಪ್ರಕರಣ ಮುಂಬೈ : ಸಚಿವರೊಬ್ಬರು ತೃತೀಯಲಿಂಗಿ ಜತೆ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಮಹಾರಾಷ್ಟ್ರ ಸಚಿವ, ಎನ್​ಸಿಪಿ ನಾಯಕ ನರಹರಿ ಜಿರ್ವಾಲ್ ತಮ್ಮ ಬಂಗಲೆಯಲ್ಲಿ ಟ್ರಾನ್ಸ್​ಜೆಂಡರ್ ಜತೆ ಇದ್ದ ವಿಡಿಯೋ ವೈರಲ್ ಆಗಿದೆ. ವಿರೋಧ ಪಕ್ಷ ಮಹಾ ವಿಕಾಸ್ ಅಘಾಡಿ ಅವರ ರಾಜೀನಾಮೆಗೆ ಒತ್ತಾಯಿಸಿದೆ. ಎರಡು ತಿಂಗಳಲ್ಲಿ ನರಹರಿ ಜಿರ್ವಾಲ್‌ ಹುಟ್ಟು ಹಾಕಿದ ಎರಡನೇ ವಿವಾದವಿದು. ಸಚಿವಾಲಯದಲ್ಲಿ 35 ಸಾವಿರ ರೂ.

ತೃತೀಯಲಿಂಗಿ ಜೊತೆ ಬಂಗಲೆಯಲ್ಲಿ ಸಿಕ್ಕಿಬಿದ್ದ ಸಚಿವ Read More »

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಶಮನಕ್ಕೆ ಭಾರತ ಪ್ರಯತ್ನ ನಡೆಸಬೇಕಿತ್ತು ಎಂಬ ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರ ತಕ್ಕ ತಿರುಗೇಟು ನೀಡಿದೆ. ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ‌ ವಿದೇಶಾಂಗ ಸಚಿವ ಎಸ್. ಜೈಶಂಕರ್, ಯುದ್ಧ ನಿಲ್ಲಿಸುವಂತೆ ಮಾತುಕತೆ ನಡೆಸಲು ಭಾರತ‌ವು ಪಾಕಿಸ್ತಾನದ ಹಾಗೆ ದಲ್ಲಾಳಿಯಲ್ಲ. ಈ ಸಂಘರ್ಷದಿಂದ ಎಲ್ಲರಿಗೂ ತೊಂದರೆಯಾಗುತ್ತಿದ್ದು, ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಮೋದಿ ಹೇಳಿದ್ದಾರೆ. ಪಾಕಿಸ್ಥಾನವು ಮಧ್ಯಸ್ಥಿಕೆ ವಹಿಸುತ್ತಿರುವುದು ಹೊಸ ವಿಚಾರವೇನಲ್ಲ. 1981ರಿಂ ದಲೂ ಅಮೆರಿಕವು

ಭಾರತ ಪಾಕಿಸ್ತಾನದಂತೆ ದಲ್ಲಾಳಿಯಲ್ಲ: ವಿಪಕ್ಷಗಳ ಟೀಕೆಗೆ ಕೇಂದ್ರ ಸರ್ಕಾರದ ತಿರುಗೇಟು Read More »

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು

ನವದೆಹಲಿ: 92,600 ಮೆಟ್ರಿಕ್ ಟನ್ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು ಹರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದ್ದು, ಇನ್ನೆರಡು ದಿನದಲ್ಲಿ ನವಮಂಗಳೂರು ಬಂದರಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಯುನೈಟೆಟ್ ಅರಬ್ ಎಮಿರೇಟ್ಸ್‌ನ (ಯುಎಇ) ರುವೈಸ್‌ನಿಂದ 45 ಸಾವಿರ ಮೆಟ್ರಿಕ್‌ ಎಲ್‌ಪಿಜಿ ಹೊತ್ತ ಫೈನ್‌ಗ್ಯಾಸ್ ಹಡಗು ಇದೇ 27 ರಂದು ನವಮಂಗಳೂರು ಬಂದರಿಗೆ ಆಗಮಿಸಲಿದೆ ಎಂದು ಬಂದರುಗಳು, ಹಡಗು ಸಾಗಾಣೆ ಮತ್ತು ಜಲಮಾರ್ಗಗಳ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿನ್ಹಾ ಮಾಹಿತಿ

ಹರ್ಮುಜ್ ದಾಟಿ ಭಾರತದತ್ತ ಬರುತ್ತಿವೆ ಎಲ್‌ಪಿ‌ಜಿ ಹೊತ್ತ ಎರಡು ಹಡಗುಗಳು Read More »

error: Content is protected !!
Scroll to Top