ದೇಶ

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ?

ಉಗ್ರ ದಾಳಿಗೆ ಕುಮ್ಮಕ್ಕು ನೀಡಿದ ಪಾಕ್‌ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟ ಭಾರತ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ದಾಳಿಯಿಂದ ಇಡೀ ದೇಶ ಕನಲಿ ಹೋಗಿದ್ದು, ದೇಶದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಪಾಕ್‌ ಸಂಬಂಧಕ್ಕೆ ಎಳ್ಳುನೀರು ಬಿಡಲು ತೀರ್ಮಾನಿಸಲಾಗಿದೆ. ದಾಳಿ ನಡೆಸಿದ ಟಿಆರ್​ಎಫ್​ ಪಾಕಿಸ್ಥಾನ ಮೂಲದ ನಿಷೇಧಿತ ಭಯೋತ್ಪಾದಕ […]

ಸಿಂಧೂ ನದಿ ಒಪ್ಪಂದ ರದ್ದು ಮಾಡುವುದರಿಂದ ಏನಾಗುತ್ತದೆ? Read More »

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ

ಪಶ್ಚಿಮ ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ದಾಳಿ ಮಾಡಿದ್ದು, ಈ ದಾಳಿಯಲ್ಲಿ 30 ಪ್ರವಾಸಿಗರು ಸಾವನ್ನಪಿರುವ ಮಾಹಿತಿ ಈಗಾಗಲೇ ತಿಳಿದುಬಂದಿದೆ. ಹಿಂದೂಗಳನ್ನೇ ಟಾರ್ಗೆಟ್​ ಮಾಡಿ ಭಯೋತ್ಪಾದಕರು ಫೈರಿಂಗ್​ ಮಾಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎನ್ನಲಾಗ್ತಿದೆ. ಇನ್ನೂ ಹಲವು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ. ಇದರ ಮಧ್ಯೆ ಪುಟ್ಟ ಮಗುವೊಂದು ತನ್ನ ತಂದೆಯ ಮೃತದೇಹದ ಮೇಲೆ ಕುಳಿತು ಕಣ್ಣೀರಿಡುವ ಭಾವನಾತ್ಮಕ ದೃಶ್ಯ ಕಂಡು ಬಂದಿದೆ. ತನ್ನ ತಂದೆಯನ್ನ ಕಳೆದುಕೊಂಡು ಕಂದಮ್ಮ ಕಣ್ಣೀರು ಹಾಕಿದೆ.

ಅಪ್ಪನ ಮೃತದೇಹವನ್ನು ಕಂಡು ಕಣ್ಣೀರಿಟ್ಟ ಕಂದಮ್ಮ | ಚಾಕೊಲೇಟ್ ಇದೆ ಎಂದಾಗ ಅಪ್ಪ ಬೇಕು ಎಂದ ಕಂದಮ್ಮ Read More »

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ

ಬಾಡಿ ಕ್ಯಾಮೆರಾ ಧರಿಸಿದ್ದ ಭಯೋತ್ಪಾದಕರು; ರೇಖಾಚಿತ್ರ ಬಿಡುಗಡೆಗೊಳಿಸಿದ ಭದ್ರತಾ ಪಡೆ ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಮತ್ತೆ ನಮ್ಮ ಗುಪ್ತಚರ ವಿಭಾಗ ವಿಫಲವಾಯಿತೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ದಾಳೀಗೆ ಉಗ್ರರು ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ಥಾನಿ ಮತ್ತು ಸ್ಥಳೀಯ ಕಾಶ್ಮೀರಿ ಭಯೋತ್ಪಾದಕರು ಸೇರಿ ಈ ಕೃತ್ಯ ಎಸಗಿದ್ದಾರೆ. 6-8 ಮಂದಿ ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ದಾಳಿ ನಡೆಸುವ ಮೊದಲು ಸಂಪೂರ್ಣ

ಪಕ್ಕಾ ಪ್ಲ್ಯಾನ್‌ ಮಾಡಿ ನಡೆಸಿದ ಉಗ್ರ ದಾಳಿ : ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದ ಮಾಹಿತಿ Read More »

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಹೊಸದಿಲ್ಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಸಾಯಿಸಿದ ಬೆನ್ನಿಗೆ ಸೇನೆ ಇಬ್ಬರು ಉಗ್ರರನ್ನು ಗಡಿ ರೇಖೆಯ ಬಳಿ ಸಾಯಿಸಿದೆ. ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ನುಸುಳಿಕೊಂಡು ಬರಲು ಯತ್ನಿಸಿದ್ದ ಉಗ್ರರನ್ನು ಸೇನೆ ಸಾಯಿಸಿದೆ. ಭಾರಿ ಗುಂಡಿನ ಕಾಳಗದ ಬಳಿಕ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ. ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡು, ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾರಾಮುಲ್ಲಾದ ಉರಿನಾಲಾದ ಸರ್ಜೀವನ್‌ ಎಂಬ ಪ್ರದೇಶದಿಂದ ಮೂವರು ಉಗ್ರರು ಒಳನುಸುಳಲು ಯುತ್ನಿಸಿದ್ದರು. ಓರ್ವ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ Read More »

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌

ಭಾರತದ ಪ್ರಧಾನಿಗಿಂತಲೂ ಹೆಚ್ಚಿನ ಭದ್ರತೆ ಇದೆಯಂತೆ ಪಾಕಿಸ್ಥಾನದ ಈ ಉಗ್ರನಿಗೆ ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೂತ್ರಧಾರ ಸೈಫುಲ್ಲಾ ಖಾಲಿದ್‌ ಎಂಬ ಉಗ್ರ ಮುಖಂಡ ಎಂದು ತಿಳಿದುಬಂದಿದೆ. ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಅಂಗಸಂಸ್ಥೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ ಎನ್ನಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಈ ಸೈಫುಲ್ಲಾ ಖಾಲಿದ್‌. ಸೈಫುಲ್ಲಾ ಖಾಲಿದ್​ನನ್ನು ಸೈಫುಲ್ಲಾ

ಪಹಲ್ಗಾಮ್‌ ದಾಳಿಯ ಮಾಸ್ಟರ್‌ಮೈಂಡ್‌ ಸೈಫುಲ್ಲಾ ಖಾಲಿದ್‌ Read More »

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು

ಬೆಂಗಳೂರಿನ ಭರತ್‌ಭೂಷಣ್‌, ಶಿವಮೊಗ್ಗದ ಮಂಜುನಾಥ್‌ ಹತ್ಯೆ ಅತಿ ದಾರುಣ ಬೆಂಗಳೂರು: ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಂವ್‌ನ ಬೈಸನ್‌ ಎಂಬ ಕಣಿವೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಉಗ್ರರ ಭೀಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ವ್ಯಕ್ತಿಗಳು ತಮ್ಮ ಹೆಂಡತಿ ಮತ್ತು ಮಕ್ಕಳ ಎದುರೇ ಗುಂಡೇಟು ತಿಂದು ಮರಣವನ್ನಪ್ಪಿದ್ದಾರೆ. ಉಗ್ರರು ಪ್ರವಾಸಿಗರ ಪೈಕಿ ಪುರುಷರನ್ನು ಪ್ರತ್ಯೇಕಿಸಿ ಅವರ ಧರ್ಮ ಕೇಳಿ, ಕುರಾನ್‌ನ ವಾಕ್ಯಗಳನ್ನು ಪಠಿಸಲು ಹೇಳಿ ಅವರು ಹಿಂದುಗಳು ಎಂದು ದೃಢಪಡಿಸಿಕೊಂಡು ಕುಟುಂಬದವರ ಎದುರೇ ಗುಂಡಿಕ್ಕಿದ್ದಾರೆ. ಬೆಂಗಳೂರು ಮೂಲದ ಟೆಕ್ಕಿ

ಖುಷಿಯಿಂದ ಪ್ರವಾಸಕ್ಕೆ ಹೋದವರು ಹೆಂಡತಿ, ಮಗನ ಎದುರೇ ಉಗ್ರರ ಗುಂಡಿಗೆ ಬಲಿಯಾದರು Read More »

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ

2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ – ಧರ್ಮ ಕೇಳಿ ಪ್ರವಾಸಿಗರಿಗೆ ಗುಂಡಿಕ್ಕಿದ ಉಗ್ರರು ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪ್ರವಾಸಿಗರ ಸ್ವರ್ಗ ಎಂದು ಕರೆಯಲ್ಪಡುವ ಪಹಲ್ಗಾಮ್‌ ಕಣಿವೆ ನಿನ್ನೆ ಅಕ್ಷರಶಃ ನರಕವಾಗಿ ಬದಲಾಗಿದೆ. ಪ್ರವಾಸಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರ ಸಹಿತ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಇದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸೌದಿ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಮೊಟಕುಗೊಳಿಸಿ

26 ಜನರ ಹತ್ಯೆಗೆ ಜಾಗತಿಕ ಆಕ್ರೋಶ ವ್ಯಕ್ತ; ಸೌದಿ ಪ್ರವಾಸ ಮೊಟಕುಗೊಳಿಸಿ ವಾಪಸಾದ ಮೋದಿ Read More »

1 ಲಕ್ಷ ರೂ. ದಾಟಿ ಸಾರ್ವತ್ರಿಕ ದಾಖಲೆ ಬರೆದ ಚಿನ್ನ

ಮಂಗಳವಾರ ಬೆಳಗ್ಗೆ 10 ಗ್ರಾಂಗೆ 1,01,135 ರೂ. ದರ ನವದೆಹಲಿ: ಅಕ್ಷಯ ತೃತೀಯಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಚಿನ್ನದ ಬೆಲೆ ಒಂದು ಲಕ್ಷ ರೂ. ದಾಟಿ ಚಿನಿವಾರ ಮಾರುಕಟ್ಟೆಯಲ್ಲಿ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಅಮೆರಿಕದ ಸುಂಕ ನೀತಿ ಮತ್ತು ಚೀನದ ಜೊತೆಗಿನ ವ್ಯಾಪಾರ ಸಮರ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಲು ಕಾರಣ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ದಾಟಿದೆ. 24 ಕ್ಯಾರಟ್ ಚಿನ್ನದ

1 ಲಕ್ಷ ರೂ. ದಾಟಿ ಸಾರ್ವತ್ರಿಕ ದಾಖಲೆ ಬರೆದ ಚಿನ್ನ Read More »

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು

ಬೃಹತ್‌ ಸಮಾವೇಶಕ್ಕೆ ಜನ ಸೇರದೆ ಕಾಂಗ್ರೆಸ್‌ಗೆ ಮುಜುಗರ ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ ಬಿಹಾರದ ಬಕ್ಸರ್‌ನಲ್ಲಿ ಭಾನುವಾರ ಜರುಗಿದ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ವಿಫಲವಾಗಿರುವುದರಿಂದ ಆಕ್ರೋಶಗೊಂಡಿರುವ ಹೈಕಮಾಂಡ್‌ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರನ್ನೇ ಅಮಾನತುಗೊಳಿಸಿದೆ. ರಾಜಕೀಯ ಕಾರ್ಯಕ್ರಮದಲ್ಲಿ ಸಭಿಕರ ಸಂಖ್ಯೆ ತೀರಾ ವಿರಳವಾಗಿತ್ತು. ಖರ್ಗೆ ಖಾಲಿ ಕುರ್ಚಿಗಳನ್ನು ನೋಡಿಕೊಂಡು ಭಾಷಣ ಮಾಡಬೇಕಾಯಿತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರ ಮುಜುಗರಕ್ಕೊಳಗಾಗಿದೆ. ಹೀಗಾಗಿ ಬಕ್ಸರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮನೋಜ್ ಕುಮಾರ್ ಪಾಂಡೆಯನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮನೋಜ್

ಖರ್ಗೆ ಸಭೆ ಖಾಲಿ ಖಾಲಿ : ಕಾಂಗ್ರೆಸ್‌ ಜಿಲ್ಲಾಧ್ಯಕ್ಷನೇ ಅಮಾನತು Read More »

ಲಕ್ಷದ ಸನಿಹ ತಲುಪಿದ ಚಿನ್ನದ ಬೆಲೆ

24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 98,350 ರೂ. ದಾಖಲೆ ದರ ಬೆಂಗಳೂರು: ಚಿನ್ನದ ಬೆಲೆ ಸತತವಾಗಿ ಏರುತ್ತಿದ್ದು, ಸದ್ಯದಲ್ಲೇ 10 ಗ್ರಾಮ್‌ಗೆ 1 ಲಕ್ಷ ರೂ. ಆಗುವ ಸಾಧ್ಯತೆ ಇದೆ. ಮುಂಬಯಿಯ ಜವೇರಿ ಬಜಾರ್‌ನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ರೂ. ಸಮೀಪಕ್ಕೆ ಹೋಗಿ ಹೊಸ ದಾಖಲೆ ಬರೆದಿದೆ. 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ ಈಗ 98,350 ರೂ.ಗೆ

ಲಕ್ಷದ ಸನಿಹ ತಲುಪಿದ ಚಿನ್ನದ ಬೆಲೆ Read More »

error: Content is protected !!
Scroll to Top