ದೇಶ

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ

ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರೊಂದಿಗೆ ಎರಡನೆಯ ದಿನವೂ ದೂರುಗಳ ಸುರಿಮಳೆದೈದಿದ್ದಾರೆ. ಕಾಂಗ್ರೆಸ್ ನಾಯಕರುಗಳ ಜೊತೆಗೆ ಸುರ್ಜೇವಾಲಾ ನಡೆಸಿದ ಮ್ಯಾರಥಾನ್ ಮುಖಾಮುಖಿ ಸಭೆಯಲ್ಲಿ ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೂರುಗಳ ಮಳೆಯನ್ನೇ ಸುರಿಸಿದ್ದಾರೆ. ಸುಮಾರು 20 ಕ್ಕೂ ಅಧಿಕ ಕಾಂಗ್ರೆಸ್ ಶಾಸಕರುಗಳ ಜೊತೆಗೆ ಸಭೆ ನಡೆಸಿದ್ದು, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸಾಕಷ್ಟು ಅನುದಾನ ನೀಡುವಂತೆ, ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ವಿನಂತಿಸಿದ್ದಾರೆ. ಹಾಗೆಯೇ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿ ಆಗುತ್ತಿರುವ […]

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ Read More »

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ

ಮೊದಲ ಸುತ್ತಿನಲ್ಲೇ ಭಾರತ-ಪಾಕಿಸ್ತಾನ ಮುಖಾಮುಖಿ ನವದೆಹಲಿ : ಏಷ್ಯಾ ಉಪಖಂಡದ ಕ್ರಿಕೆಟ್‌ ರಾಷ್ಟ್ರಗಳ ನಡುವಿನ ಮಿನಿ ಸಮರ ಏಷ್ಯಾಕಪ್‌ ಕೂಟದ ಕರಡು ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಿದ್ಧಪಡಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 5ರಿಂದ 17ನೇ ಆವೃತ್ತಿಯ ಏಷ್ಯಾ ಕಪ್ ಶುರುವಾಗಲಿದೆ. ಫೈನಲ್ ಪಂದ್ಯವನ್ನು ಸೆಪ್ಟೆಂಬರ್ 21ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಾರಿಯ ಟೂರ್ನಿಯನ್ನು ಯುಎಇನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಆ ಸಂದರ್ಭದ ಪರಿಸ್ಥಿತಿಯನ್ನು ಹೊಂದಿಕೊಂಡು ಪಂದ್ಯಗಳ ದಿನಾಂಕ ಮತ್ತು ಸ್ಥಳದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ Read More »

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ

ಪ್ರಯಾಣಿಕರಿಗೆ ಅನುಕೂಲವಾಗುವ ಸೂಪರ್‌ ಆ್ಯಪ್ ನವದೆಹಲಿ: ಭಾರತೀಯ ರೈಲ್ವೆ ರೈಲ್ ಒನ್ ಎಂಬ ಹೊಸ ಆ್ಯಪ್ ಬಿಡುಗಡೆ ಮಾಡಿದೆ. ರೈಲ್ವೆ ಪ್ರಯಾಣಿಕರ ಎಲ್ಲ ಅಗತ್ಯಗಳನ್ನು ಪೂರೈಸಬಲ್ಲ ಸೂಪರ್ ಆ್ಯಪ್ ಇದು. ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಮ್ಸ್​​ನ 40ನೇ ಸಂಸ್ಥಾಪನಾ ದಿನ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ ಒನ್ ಆ್ಯಪ್ ಬಿಡುಗಡೆ ಮಾಡಿದ್ದಾರೆ. ರೈಲ್ ​ಒನ್ ಆ್ಯಪ್ ಆಂಡ್ರಾಯ್ಡ್ ಮತ್ತು ಆ್ಯಪಲ್ ಪ್ಲಾಟ್​​ಫಾರ್ಮ್ ಎರಡರಲ್ಲೂ ಲಭ್ಯ ಇದೆ. ರೈಲ್ವೆಗೆ ಸಂಬಂಧಿತ ಯಾವುದೇ ಮಾಹಿತಿಯನ್ನು ಪಡೆಯಲು

ಎಲ್ಲ ಸೇವೆಗಳು ಒಂದೆಡೆ ಸಿಗುವ ರೈಲ್‌ ಒನ್‌ ಆ್ಯಪ್ ಬಿಡುಗಡೆ ಮಾಡಿದ ರೈಲ್ವೆ Read More »

1.07 ಲಕ್ಷ ಕೋಟಿ ರೂ.ಗಳ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡುವ ಯೋಜನೆಗೆ ಪ್ರಧಾನಿ ಮೋದಿ ಸರ್ಕಾರ ಅಸ್ತು

ನವದೆಹಲಿ: ಕೇಂದ್ರದ ಪ್ರಧಾನಿ ಮೋದಿ ಸರ್ಕಾರವು ಉತ್ಪಾದನಾ ವಲಯದ ಮೇಲೆ ವಿಶೇಷ ದೃಷ್ಟಿ ಹರಿಸಿದ್ದು, ಎಲ್ಲಾ ವಲಯಗಳಿಗೆ ಸಂಬಂಧಿಸಿದ ಹಾಗೆ ಉದ್ಯೋಗ ಸೃಷ್ಟಿ ಹೆಚ್ಚಿಸಲು ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಲು ಮಹತ್ವದ ನಿರ್ಣಯವೊಂದನ್ನು ಅನುಮೋದಿಸಿದೆ. ಉದ್ಯೋಗದ ಅವಕಾಶಗಳು ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚು ಮಾಡಲು 1.07 ಲಕ್ಷ ಕೋಟಿ ರೂ. ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆ ಇದಾಗಿದೆ. ಪಿಎಂ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ

1.07 ಲಕ್ಷ ಕೋಟಿ ರೂ.ಗಳ ಉದ್ಯೋಗ ಸೃಷ್ಟಿಗೆ ಪ್ರೋತ್ಸಾಹ ನೀಡುವ ಯೋಜನೆಗೆ ಪ್ರಧಾನಿ ಮೋದಿ ಸರ್ಕಾರ ಅಸ್ತು Read More »

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ?

ನವದೆಹಲಿ: ಭಾರತವು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಸಶಕ್ತಗೊಳಿಸುವ ಗುರಿಯನ್ನು ಹೊಂದಿದ್ದು, ಬಂಕರ್ ಬರ್ಸ್ಟರ್ ಕ್ಷಿಪಣಿ ಯೋಜನೆಯನ್ನು ತೀವ್ರಗೊಳಿಸಿದೆ. ಅಮೆರಿಕಾದ ಬಂಕರ್ ಬರ್ಸ್ಟರ್ ಬಾಂಬಿಗಿಂತಲೂ ಹೆಚ್ಚು ಬಲಿಷ್ಟವಾದ ಅಸ್ತ್ರವನ್ನು ಭಾರತ ಅಭಿವೃದ್ಧಿ ಮಾಡುತ್ತಿದೆ. ಈ ಹೊಸ ಅಗ್ನಿ -5 ಕ್ಷಿಪಣಿಯು ವಾಯುಸೇನೆಯ ಹೊಸ ಆವೃತ್ತಿಯಾಗಿದ್ದು ಇದು ಶತ್ರು ರಾಷ್ಟ್ರಗಳ ರಹಸ್ಯ ಪರಮಾಣು ಬಂಕರ್‌ಗಳನ್ನು ಕೆಲವೇ ನಿಮಿಷಗಳಲ್ಲಿ ನಾಶಪಡಿಸುವ ‌ಸಾಮರ್ಥ್ಯ ಹೊಂದಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಈಗಾಗಲೇ ಬಾಲಕೋಟ್

ಅಗ್ನಿ-5 ಬಂಕರ್ ಬರ್ಸ್ಟರ್ ಕ್ಷಿಪಣಿಯತ್ತ ಭಾರತದ ರಕ್ಷಣಾ ವಲಯದ ಚಿತ್ತ? Read More »

ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಡೆದ ಪಹಲ್ಗಾನ್ ದಾಳಿಗೆ ಪ್ರತೀಕಾರವಾಗಿ ಭಾರತ ಉಗ್ರವಾದದ ‌ವಿರುದ್ಧ ಶೂನ್ಯ ಸಹಿಷ್ಣುತೆ ಸಾರಿದ್ದು, ಉಗ್ರರಿಗೆ ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ‌ವಿನಾಯಿತಿ ನೀಡಲಾಗದು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಭಯೇತ್ಪಾದನೆಯ ವಿರುದ್ಧ ಜಾಗತಿಕ ಸಮುದಾಯ ಒಗ್ಗೂಡಬೇಕು ಎಂದು ಅವರು ವಿಶ್ವಸಂಸ್ಥೆಯಲ್ಲಿ ಒತ್ತಾಯಿಸಿದ್ದಾರೆ. ‘ದಿ ಹ್ಯುಮನ್ ಕಾಸ್ಟ್ ಆಫ್ ಟೆರರಿಸಂ’ ಹೆಸರಿನಲ್ಲಿ ವಿಶ್ವದ ಹಲವೆಡೆ ನಡೆಯುತ್ತಿರುವ ಭಯೋತ್ಪಾದನಾ ದಾಳಿಯ ಬಗ್ಗೆ ವಿವರಣೆ ನೀಡಲಾಗಿದೆ. ಭಯೋತ್ಪಾದನೆಯನ್ನು ತಡೆಯಲು ಮಾಡಲಾಗುತ್ತಿರುವ ಪ್ರಯತ್ನಗಳನ್ನು ಸಹ ಇದರಲ್ಲಿ ಹೇಳಲಾಗಿದೆ.

ಉಗ್ರವಾದವನ್ನು ಜಗತ್ತು ಒಗ್ಗಟ್ಟಿನಿಂದ ಎದುರಿಸಬೇಕು: ಎಸ್. ಜೈಶಂಕರ್ Read More »

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ

ಅಕ್ರಮವಾಗಿ ನುಸುಳಿ ಬರುವ ದುಸ್ಸಾಹಸ ಪ್ರಾಣಕ್ಕೆ ಎರವಾಯಿತು ಜೈಪುರ: ಪಾಕಿಸ್ತಾನ ಮೂಲದ ಹಿಂದೂ ಧರ್ಮದ ಯುವಕ ಮತ್ತು ಯುವತಿಯ ಮೃತದೇಹ ಭಾರತ-ಪಾಕ್‌ ಅಂತಾರಾಷ್ಟ್ರೀಯ ಗಡಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಪಕ್ಕದಲ್ಲಿ ಗುರುತಿನ ಚೀಟಿಯೂ ಕಂಡು ಬಂದಿದೆ. ಜೈಸಲ್ಮೇರ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿಯ ಮರಳು ದಿಬ್ಬಗಳಲ್ಲಿ ಪತ್ತೆಯಾದ ಯುವಕ ಮತ್ತು ಅಪ್ರಾಪ್ತೆಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದವು. ಶವದ ಸ್ಥಿತಿ ನೋಡಿದರೆ ಇವರು ಮೃತಪಟ್ಟು ವಾರ ಕಳೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕುಡಿಯಲು

ಕುಡಿಯಲು ನೀರು ಸಿಗದೆ ಬಾಯಾರಿಕೆಯಿಂದ ಎದೆ ಒಣಗಿ ಸತ್ತ ಪಾಕಿಸ್ತಾನದ ಯುವ ಜೋಡಿ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ

ಗ್ರಾಹಕರಿಗೆ ದೊಡ್ಡ ರಿಲೀಫ್‌ ನೀಡಿದ ತೈಲ ಕಂಪನಿಗಳು ನವದೆಹಲಿ: ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 58.50 ರೂ.ಗಳಷ್ಟು ಕಡಿಮೆ ಮಾಡಿ ಗ್ರಾಹಕರಿಗೆ ಶುಭ ಸುದ್ದಿ ನೀಡಿವೆ. ಗೃಹಬಳಕೆಯ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜುಲೈ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,665

ಗ್ಯಾಸ್‌ ಸಿಲಿಂಡರ್‌ ಬೆಲೆ 58.50 ರೂ. ಇಳಿಕೆ Read More »

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ

ವೈಟಿಂಗ್‌ ಲಿಸ್ಟ್‌ನಲ್ಲಿರುವ ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ನವದೆಹಲಿ: ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆಯನ್ನು ಇನ್ನಷ್ಟು ಪ್ರಯಾಣಿಕಸ್ನೇಹಿಯಾಗಿಸಲು ಮುಂದಾಗಿರುವ ರೈಲ್ವೆ ರಿಸರ್ವೇಷನ್‌ ಚಾರ್ಟ್‌ ತಯಾರಿಯನ್ನು ಬದಲಾಯಿಸಲಿದೆ. ಇನ್ನು ಮುಂದೆ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆ ಮಾಡಲಾಗುತ್ತದೆ ಭಾರತೀಯ ರೈಲ್ವೆ ಸಚಿವಾಲಯ ತಿಳಿಸಿದೆ. ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ಜುಲೈ 1ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್‌ ಚಾರ್ಟ್‌ ಬಿಡುಗಡೆಯಾಗಲಿದೆ. ಇದರಿಂದ ಮುಖ್ಯವಾಗಿ ವೈಟಿಂಗ್‌ ಲಿಸ್ಟ್‌ನಲ್ಲಿರುವ

ಇನ್ನು ಮುಂದೆ ಪ್ರಯಾಣದ 8 ತಾಸು ಮೊದಲೇ ರೈಲ್ವೆ ಚಾರ್ಟ್‌ ಪ್ರಕಟ Read More »

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರನ್ನು ನೆನಪಿಸಿಕೊಳ್ಳಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರು ಸಂವಿಧಾನವನ್ನು ಹತ್ಯೆ ಮಾಡುವ ಜೊತೆಗೆ ನ್ಯಾಯಾಂಗ ವ್ಯವಸ್ಥೆಯನ್ನು ಸಹ ಕೈಗೊಂಬೆಯನ್ನಾಗಿ ಮಾಡಿದ್ದರು. ಇಂತಹ ವಿರುದ್ಧ ಹೋರಾಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ತಮ್ಮ ತಿಂಗಳ ರೆಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಇಪ್ಪತ್ತೊಂದು ತಿಂಗಳ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರಿಗೆ ಹಿಂಸೆ ನೀಡಲಾಯಿತು. ಗುಲಾಮಗಿರಿಗೆ ತಳ್ಳುವ ಪ್ರಯತ್ನ ನಡೆಯಿತು. ಇದಕ್ಕೆ ಸಾಕಷ್ಟು ಉದಾಹರಣೆಗಳು ನಮಗೆ ಸಿಗುವುದಾಗಿ ಅವರು ತಿಳಿಸಿದ್ದಾರೆ. ಭಾರತ ಟ್ರಕೋಮಾ ಮುಕ್ತ ದೇಶ

ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರನ್ನು ನೆನಪಿಸಿಕೊಳ್ಳಬೇಕು: ಪ್ರಧಾನಿ ಮೋದಿ Read More »

error: Content is protected !!
Scroll to Top