ದೇಶ

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಸಿಲಿಂಡರ್ ಬೆಲೆಯಲ್ಲಿ 41 ರೂ. ಇಳಿಕೆ ಮಾಡಿವೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತ ಘೋಷಿಸಿದ್ದು, ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ. ತಕ್ಷಣದಿಂದ ಜಾರಿಗೆ ಬರುವಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 1,762 ರೂ. ಆಗಿದೆ. […]

ಗ್ಯಾಸ್‌ ಸಿಲಿಂಡರ್‌ ಬೆಲೆ 41 ರೂ. ಇಳಿಕೆ Read More »

ವಕ್ಫ್‌ ಮಸೂದೆಗೆ ವಿರೋಧ : ಮುಸ್ಲಿಮರಿಂದ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ

ದೇಶಾದ್ಯಂತ ಮಸೀದಿಗಳಲ್ಲಿ ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಈದ್‌ ನಮಾಜು ಮಾಡಿದ ಮುಸ್ಲಿಮರು ಬೆಂಗಳೂರು : ದೇಶಾದ್ಯಂತ ಮುಸ್ಲಿಮರು ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಈದ್-ಉಲ್-ಫಿತ್ ವಿಶೇಷ ಪ್ರಾರ್ಥನೆ ಸಂದರ್ಭ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿದ್ದಾರೆ. ಕೈಗೆ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ ಮಾಡುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮನವಿ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಮರು ಪ್ರಾರ್ಥನೆ ವೇಳೆ ಕೈಗೆ

ವಕ್ಫ್‌ ಮಸೂದೆಗೆ ವಿರೋಧ : ಮುಸ್ಲಿಮರಿಂದ ಕಪ್ಪುಪಟ್ಟಿ ಧರಿಸಿ ಪ್ರಾರ್ಥನೆ Read More »

ಎಟಿಎಂ ವಿದ್‌ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆಯಲ್ಲಿರುವ ಹಣದ ಬಡ್ಡಿದರ ಏರಿಕೆ

ಹೊಸ ಹಣಕಾಸು ವರ್ಷದಿಂದ ಬ್ಯಾಂಕಿಂಗ್‌ ನಿಯಮಗಳಲ್ಲಿ ಹಲವು ಬದಲಾವಣೆ ನವದೆಹಲಿ: ಏಪ್ರಿಲ್ 1ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ಎಟಿಎಂ ಕ್ಯಾಷ್ ವಿತ್​ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆ ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ.ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್‌ಬಿಐ ಸಾಕಷ್ಟು ಬದಲಾವಣೆ ಮಾಡಿದೆ. ಎಟಿಎಂ ಹಣ ವಿತ್‌ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ

ಎಟಿಎಂ ವಿದ್‌ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆಯಲ್ಲಿರುವ ಹಣದ ಬಡ್ಡಿದರ ಏರಿಕೆ Read More »

ಇಂದು ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬ

ನವದೆಹಲಿ: ನಿನ್ನೆ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರಂದು ಭಾರತದಲ್ಲಿ ಈದ್-ಉಲ್-ಫಿತರ್ ಆಚರಿಸಲಾಗುವುದು. ರಮ್ಜಾನ್ ಉಪವಾಸ ಮಾಸದ ಮುಕ್ತಾಯವನ್ನು ಸೂಚಿಸುವ ಈದ್-ಉಲ್-ಫಿತರ್ ಇಂದು ಸಂಜೆ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಸೋಮವಾರ ದೇಶದಲ್ಲಿ ಆಚರಿಸಲಾಗುವುದು. ಭಾರತದಲ್ಲಿ ರಮ್ಜಾನ್ ಉಪವಾಸ ವ್ರತ ಮಾರ್ಚ್ 2 ರಂದು ಪ್ರಾರಂಭವಾಗಿದ್ದು, ಸೋಮವಾರ ಅಂತ್ಯವಾಗಲಿದೆ. ಫತೇಪುರಿ ಮಸೀದಿ ಇಮಾಮ್ ಮುಫ್ತಿ ಮುಕರ್ರಮ್ ಅಹ್ಮದ್ ತಿಳಿಸಿದಂತೆ, ಮಸೀದಿಯ ರೂಟ್-ಎ-ಹಿಲಾಲ್ ಸಮಿತಿ ಅನೇಕ ಸ್ಥಳಗಳನ್ನು ಸಂಪರ್ಕಿಸಿದೆ. ಅಲ್ಲಿನ ಹಲವಾರು ಸ್ಥಳಗಳಲ್ಲಿ ಅರ್ಧ ಚಂದ್ರ ದರ್ಶನವಾಗಿದೆ. ಹೀಗಾಗಿ ಸೋಮವಾರ

ಇಂದು ದೇಶಾದ್ಯಂತ ಈದ್-ಉಲ್-ಫಿತರ್ ಹಬ್ಬ Read More »

ಛತ್ತೀಸ್‌ಗಢದಲ್ಲಿ 16 ನಕ್ಸಲರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಮತ್ತು ದಾಂತೆವಾಡ ಜಿಲ್ಲೆಗಳ ಗಡಿಭಾಗದಲ್ಲಿರುವ ಗೋಮಗುಂಡ ದಟ್ಟಾರಣ್ಯದಲ್ಲಿ ಇಂದು ಮತ್ತೆ 16 ನಕ್ಸಲರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. ನಸುಕಿನ ವೇಳೆಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ. ನಿನ್ನೆಯಿಂದೀಚೆಗೆ ಇಲ್ಲಿ ನಕ್ಸಲ್‌ ನಿಗ್ರಹ ಪಡೆಯ ಪೊಲೀಸರು ಭದ್ರತಾ ಪಡೆಯ ಸಹಕಾರದೊಂದಿಗೆ ಕೂಂಬಿಂಗ್‌ ನಡೆಸುತ್ತಿದ್ದರು. ಇಂದು ನಸುಕಿನ ಹೊತ್ತು ಪೊಲೀಸರಿಗೆ ನಕ್ಸಲರು ಎದುರಾಗಿದ್ದು, ಗುಂಡಿನ ಕಾಳಗದಲ್ಲಿ 16 ನಕ್ಸಲರು ಸತ್ತಿರುವುದು ದೃಢಪಟ್ಟಿದೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ

ಛತ್ತೀಸ್‌ಗಢದಲ್ಲಿ 16 ನಕ್ಸಲರ ಹತ್ಯೆ Read More »

ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ

ಕೇಂದ್ರ ಸರಕಾರಿ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳಿಗೆ ಏ.14ರಂದು ರಜೆ ನವದೆಹಲಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನವಾದ ಏ.14ರಂದು ಸಾರ್ವತ್ರಿಕ ರಜೆ ಘೋಷಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಕೇಂದ್ರದ ಎಲ್ಲ ಸರ್ಕಾರಿ ಕಚೇರಿಗಳಿಗೆ ಅಂದು ರಜೆಯಿರುತ್ತದೆ.ಅಂಬೇಡ್ಕರರ ಜಯಂತಿ ದಿನದಂದು ರಾಷ್ಟ್ರೀಯ ರಜೆ ಇರಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಘೋಷಣೆ ಮಾಡಿದ್ದಾರೆ. ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದ ಸಂವಿಧಾನ ಶಿಲ್ಪಿ, ನಮ್ಮ ಬಾಬಾ ಸಾಹೇಬ್ ಪೂಜ್ಯ ಡಾ.ಭೀಮರಾವ್ ಅಂಬೇಡ್ಕರ್‌ಜಿ

ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಣೆ Read More »

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು

ರಾಮ ಜನ್ಮಭೂಮಿ ಎಡಿಷನ್ ವಾಚ್‌ ಧರಿಸಿದ್ದಕ್ಕೆ ಆಕ್ರೋಶ ಮುಂಬಯಿ: ನಟ ಸಲ್ಮಾನ್ ಖಾನ್ ಧರಿಸಿರುವ ಕೈಗಡಿಯಾರವೊಂದು ಮುಸ್ಲಿಂ ಧರ್ಮಗುರುಗಳ ಆಕ್ರೋಶಕ್ಕೆ ಗುರಿಯಾಗಿದೆ. ಈ ಕೈಗಡಿಯಾರವನ್ನು ಹರಾಮ್‌ ಎಂದು ಬಣ್ಣಿಸಿರುವ ಧರ್ಮಗುರುಗಳು ಸಲ್ಮಾನ್‌ ಖಾನ್‌ ಕ್ಷಮೆ ಯಚಿಸಬೇಕೆಂದು ಹೇಳಿದ್ದಾರೆ.ಇಷ್ಟಕ್ಕೂ ಈ ವಾಚ್ ‘ರಾಮ ಜನ್ಮಭೂಮಿ ಎಡಿಷನ್’ ಬ್ರ್ಯಾಂಡ್‌ನದ್ದು. ಧರ್ಮಗುರುಗಳ ಕಾರಣ ಇದು. ಈ ಬಗ್ಗೆ ಅಪಸ್ವರ ತೆಗೆದು ಸಲ್ಮಾನ್ ಖಾನ್ ಹರಾಮ್ ಮಾಡಿದ್ದಾರೆ ಎಂದು ದೂರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಲ್ಮಾನ್

ಸಲ್ಮಾನ್‌ ಖಾನ್‌ ಧರಿಸಿದ ಕೈಗಡಿಯಾರ ಹರಾಮ್‌ ಎಂದ ಧರ್ಮಗುರು Read More »

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು

ಹೋಳಿಯ ಯಶಸ್ಸಿನ ಬಳಿಕ ಪೊಲೀಸರ ಇನ್ನೊಂದು ಕಟ್ಟುನಿಟ್ಟಿನ ಸೂಚನೆ ಲಖನೌ: ಹೋಳಿ ಹಬ್ಬದ ಬಣ್ಣದಿಂದ ಸಮಸ್ಯೆಯಾಗುವುದಿದ್ದರೆ ಮನೆಯೊಳಗೆ ನಮಾಜು ಮಾಡಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಉತ್ತರ ಪ್ರದೇಶ ಪೊಲೀಸರು ಈಗ ಈದ್-ಉಲ್-ಫಿತರ್ ಮತ್ತು ರಮ್ಜಾನ್‌ನ ಕೊನೆಯ ಶುಕ್ರವಾರದಂದು ರಸ್ತೆಗಳಲ್ಲಿ ನಮಾಜ್ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಅಂತಹವರ ಪಾಸ್‌ಪೋರ್ಟ್‌ ಹಾಗೂ ಡ್ರೈವಿಂಗ್‌ ಲೈಸೆನ್ಸ್‌ ರದ್ದುಗೊಳಿಸಬಹುದು ಎಂದು ಮೀರತ್ ಪೊಲೀಸ್ ಅಧೀಕ್ಷಕ (ನಗರ) ಆಯುಷ್ ವಿಕ್ರಮ್

ರಸ್ತೆಯಲ್ಲಿ ನಮಾಜ್‌ ಮಾಡಿದರೆ ಡ್ರೈವಿಂಗ್‌ ಲೈಸೆನ್ಸ್‌, ಪಾಸ್‌ಪೋರ್ಟ್‌ ರದ್ದು Read More »

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ

ಕಥುವಾದಲ್ಲಿ ಐದು ದಿನಗಳಿಂದ ಉಗ್ರರ ವಿರುದ್ಧ ಕಾರ್ಯಾಚರಣೆ ಶ್ರೀನಗರ: ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಈ ಗುಂಡಿನ ಕಾಳಗದಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಹಾಗೂ ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಥುವಾದಲ್ಲಿ ಉಗ್ರ ಬೇಟೆ ನಡೆಯುತ್ತಿದ್ದು, ನಿನ್ನೆ ರಾತ್ರಿ ತೀವ್ರ ಕಾಳಗ ನಡೆದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.ಕಥುವಾ ಜಿಲ್ಲೆಯ ಜುಥಾನ ಸಮೀಪ ದಟ್ಟಾರಣ್ಯದಲ್ಲಿ ಐವರು ಉಗ್ರರು ಅವಿತಿರುವ ಕುರಿತು ಮಾಹಿತಿ ಸಿಕ್ಕಿದ ಬಳಿಕ ಇಲ್ಲಿ ಕಾರ್ಯಾಚರಣೆ

ಇಬ್ಬರು ಉಗ್ರರು ಬಲಿ; ಮೂವರು ಯೋಧರು ಹುತಾತ್ಮ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

error: Content is protected !!
Scroll to Top