ದೇಶ

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ

ಗಾಯಗೊಂಡವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು : ಕೇರಳದ ಕೊಚ್ಚಿ ಕರಾವಳಿ ತೀರದಿಂದ ಸುಮಾರು 78 ನಾಟಿಕಲ್‌ ಮೈಲು ದೂರದಲ್ಲಿ ಸರಕು ಸಾಗಿಸುವ ಹಡಗಿಗೆ ಬೆಂಕಿ ಹತ್ತಿಕೊಂಡು ಭಾರಿ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಹಡಗಿನ 18 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಅಝಿಕ್ಕಲ್ ಮತ್ತು ಕೊಚ್ಚಿಯ ಮಧ್ಯದಲ್ಲಿ ಈ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಕಂಟೇನರ್ ಹಡಗಿನ ಎಂವಿ ವಾನ್ ಹೈ 503ನಲ್ಲಿದ್ದ 22 […]

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ Read More »

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ

ಚೆನ್ನೈ: ಯುವ ವೈದ್ಯನೋರ್ವ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ. ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಆತ್ಮಹತ್ಯೆ ಮಾಡಿಕೊಂಡವರು. ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ (ಡಾಕ್ಟರ್ ಆಫ್ ಮೆಡಿಸಿನ್) ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ Read More »

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು

ದಾರುಣ ಅಂತ್ಯ ಕಂಡ ರೈಲಿನ ಬಾಗಿಲಲ್ಲಿ ನೇತಾಡುತ್ತಿದ್ದ ಪ್ರಯಾಣಿಕರು ಮುಂಬಯಿ: ಮಹಾನಗರದ ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಬೆಳಗ್ಗಿನ ಹೊತ್ತು ಕಿಕ್ಕಿರಿದು ತುಂಬಿದ್ದ ಬಾಗಿಲಲ್ಲಿ ನೇತಾಡುತ್ತಿದ್ದ ಸುಮಾರು 12-15 ಮಂದಿ ಹಳಿ ಮೇಲೆ ಬಿದ್ದಿದ್ದಾರೆ. ಈ ಪೈಕಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಸರಾದಿಂದ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನಿಂದ ಹೋಗುತ್ತಿದ್ದ ಫಾಸ್ಟ್‌ ರೈಲಿನಲ್ಲಿ ಮುಂಬ್ರಾ ಮತ್ತು ದಿವಾ ರೈಲು ನಿಲ್ದಾಣಗಳ

ಮುಂಬಯಿ : ಲೋಕಲ್‌ ರೈಲಿನಿಂದ ಬಿದ್ದು 8 ಮಂದಿ ಸಾವು Read More »

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ

ಐಪಿಎಲ್‌ನಿಂದ ಬೆಂಗಳೂರು ತಂಡವನ್ನು ನಿಷೇಧಿಸುವ ಸಾಧ್ಯತೆ ಬೆಂಗಳೂರು: ಹದಿನೆಂಟು ವರ್ಷಗಳ ಬಳಿಕ ಕಪ್‌ ಗೆದ್ದುಕೊಂಡ ಆರ್‌ಸಿಬಿ ತಂಡದ ಪಾರಮ್ಯ ಈ ವರ್ಷಕ್ಕೆ ಮುಗಿದು ಹೋಯಿತಾ? ಗೆಲುವಿನ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿದ ಬಳಿಕ ಕರ್ನಾಟಕ ಸರ್ಕಾರದ ಜೊತೆಗೆ ಆರ್‌ಸಿಬಿ ತಂಡಕ್ಕೆ ಕೂಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಈ ನಡುವೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2026ರಿಂದ ಬ್ಯಾನ್ ಆಗಲಿದೆ ಎಂಬ ಪುಕಾರೊಂದು ಹುಟ್ಟಿಕೊಂಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ನೀಡಿರುವ

ಆರ್‌ಸಿಬಿ ಭವಿಷ್ಯಕ್ಕೂ ಕಪ್ಪುಚುಕ್ಕೆಯಾದ ಕಪ್‌ ಸಂಭ್ರಮದ ದುರಂತ Read More »

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ

ಸಾಧನೆ, ಸವಾಲುಗಳ ನಡುವೆ ಮೋದಿ ಜನಪ್ರಿಯತೆ ಅಬಾಧಿತ ನವದೆಹಲಿ: ಅನೇಕ ಸವಾಲು ಮತ್ತು ಸಾಧನೆಗಳ ನಡುವೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಅವಧಿಯ ಒಂದನೇ ವರ್ಷವನ್ನು ಪೂರ್ಣಗೊಳಿಸಿದೆ. ಒಂದು ವರ್ಷದ ಅವಧಿಯಲ್ಲಿ ಮೋದಿ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಇದರೊಂದಿಗೆ ಎನ್‌ಡಿಎ ಮತ್ತು ಮೋದಿ ಸತತ 11 ವರ್ಷ ಆಳ್ವಿಕೆ ನಡೆಸಿದಂತಾಗಿದೆ. ಈ ಹನ್ನೊಂದು ವರ್ಷಗಳಲ್ಲಿ ಮೋದಿ ಜನಪ್ರಿಯತೆ ಅಬಾಧಿತವಾಗಿ ಮುಂದುವರಿಯುತ್ತಿದೆ ಎನ್ನುವುದು ವಿಶೇಷ. ಲೋಕಸಭಾ ಚುನಾವಣೆಯಲ್ಲಿ

ಮೋದಿ ಸರ್ಕಾರ 3.0ಗೆ ಒಂದು ವರ್ಷ ಪೂರ್ಣ Read More »

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಥ್ರಿಲ್ಲರ್‌ ಸಿನಿಮಾ ಮಾದರಿ ಇದೆ ಈ ಪ್ರಕರಣ ಶಿಲ್ಲಾಂಗ್: ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ ಬಳಿಕ ದಂಪತಿ ನಾಪತ್ತೆಯಾಗಿದ್ದ ಪ್ರಕರಣ ಥ್ರಿಲ್ಲರ್‌ ಸಿನಿಮಾ ಮಾದರಿ ಟ್ವಿಸ್ಟ್‌ ಪಡೆದುಕೊಂಡಿದ್ದು, ಪತಿಯನ್ನು ನವವಿವಾಹಿತ ಪತ್ನಿಯೇ ಕೊಲ್ಲಿಸಿರುವುದು ಬಯಲಾಗಿದೆ. ಹತ್ಯೆ ಆರೋಪದಲ್ಲಿ ಪೊಲೀಸರು ಪತ್ನಿಯನ್ನು ಬಂಧಿಸಿದ್ದಾರೆ. ಇಂದೋರ್‌ನ ದಂಪತಿ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ ಬಳಿಕ ನಿಗೂಢವಾಗಿ ನಾಪತ್ತೆಯಾದ ಪ್ರಕರಣ ದೇಶದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಟೂರಿಸ್ಟ್‌ ಗೈಡ್‌ ನೀಡಿದ್ದ ಸಣ್ಣ ಸುಳಿವೊಂದು ಇಡೀ ಪ್ರಕರಣವನ್ನು ಬಯಲೆಗೆಳೆಯಲು ಪೊಲೀಸರಿಗೆ ನೆರವಾಗಿದೆ. ಪತಿಯ ಕೊಲೆಗೆ ಸಂಚು

ಹನಿಮೂನ್‌ನಲ್ಲಿದ್ದ ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ

ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಈ ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು. ಮೇ 1 ರಂದು ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಕೊಲೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳದ ಹೆಗಲಿಗೆ Read More »

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ

ಮೈತೆಯಿ ಸಂಘಟನೆಯ ನಾಯಕನ ಬಂಧನ ವಿರೋಧಿಸಿ ಪ್ರತಿಭಟನೆ ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು, ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂಫಾಲ್

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಅಪಾರ ಹಾನಿ Read More »

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ

ದೇಶದಲ್ಲಿ ಕಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಮುಖ ಎಂದು ವಿಶ್ವಬ್ಯಾಂಕ್‌ ವರದಿ ನವದೆಹಲಿ: ದೇಶದಲ್ಲಿ ಕಡಡುಬಡವರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ ಎಂದು ವರದಿಯೊಂದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರದ ಆಡಳಿತದಲ್ಲಿ ಕಳೆದೊಂದು ದಶಕದಲ್ಲಿ ಕಡುಬಡತನದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. 2011-12ರಲ್ಲಿ ಶೇ. 27.1 ಇದ್ದ ಕಡುಬಡತನ ಪ್ರಮಾಣ 2022-23ರಲ್ಲಿ ಶೇ.5.3ಕ್ಕೆ ಇಳಿದಿದೆ ಎಂದು ವಿಶ್ವಬ್ಯಾಂಕ್ ಅಂಕಿಅಂಶಗಳು ಬಹಿರಂಗಪಡಿಸಿವೆ. 2022-23ರ ಅವಧಿಯಲ್ಲಿ ಭಾರತದಲ್ಲಿ ಸುಮಾರು 75.24 ಮಿಲಿಯನ್ ಜನರು ತೀವ್ರ ಬಡತನದಲ್ಲಿದ್ದರು. ಇದು

34.4 ಕೋಟಿಯಿಂದ 7.25 ಕೋಟಿಗಿಳಿದ ಕಡುಬಡವರ ಸಂಖ್ಯೆ Read More »

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ

50,000 ಅರೆಸೇನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರಿಂದ ಸರ್ಪಗಾವಲು ಶ್ರೀನಗರ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಪಾಕಿಸ್ಥಾನದ ಉಗ್ರರು ಧರ್ಮ ಕೇಳಿ ಹತ್ಯೆಗೈದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರನಾಥ ಯಾತ್ರೆಗೆ ಗರಿಷ್ಠ ಭದ್ರತೆ ಒದಗಿಸಲು ಏರ್ಪಾಡು ಮಾಡಿದೆ. ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ ಯೋಜನೆಯನ್ನು ಜಾರಿಗೆ ತಂದಿದೆ. ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣಕ್ಕೆ

ಅಮರನಾಥ ಯಾತ್ರೆಗೆ ಆಪರೇಷನ್‌ ಶಿವ ಭದ್ರತೆ Read More »

error: Content is protected !!
Scroll to Top