ದೇಶ

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ

ಎಲ್ಲ ದೀಪಗಳನ್ನು ಆರಿಸಿ ಅರ್ಧ ತಾಸು ಯುದ್ಧಾಭ್ಯಾಸ ಮಾಡಿದ ಸೇನೆ ಹೊಸದಿಲ್ಲಿ : ಪಹಲ್ಗಾಮ್ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಯುದ್ಧದ ಕಾರ್ಮೋಡ ಕವಿದಿರುವಂತೆಯೇ ಭಾರತೀಯ ಸೇನೆ ನಿನ್ನೆ ರಾತ್ರಿ ಪಂಜಾಬ್‌ನ ಫಿರೋಜ್‌ಪುರ ಗಡಿ ಭಾಗದಲ್ಲಿ ಅಣಕು ಸಮರ ನಡೆಸಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ಥಾನದ ನಡುವಿನ ಉದ್ವಿಗ್ನ ನೆಲೆಸಿದೆ. ಯಾವುದೇ ಕ್ಷಣದಲ್ಲಿ ಯುದ್ಧ ಶುರುವಾಗಬಹುದು ಎಂಬ ಪರಿಸ್ಥಿಯಿದ್ದು, […]

ಯುದ್ಧದ ಕಾರ್ಮೋಡ : ಭಾರತೀಯ ಸೇನೆಯಿಂದ ರಾತ್ರಿ ಅಣಕು ಸಮರ Read More »

ಶಾಸ್ತ್ರೋಕ್ತವಾದ ಆಚರಣೆ ಇಲ್ಲದ ವಿವಾಹ ವಿವಾಹವೇ ಅಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೂರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಅಲ್ಲದೆ ಇಂಥ ಆಚರಣೆಗಳಿಲ್ಲದೆ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪೈಲಟ್ ದಂಪತಿಯ ವಿಚ್ಚೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾ.ಅಗಾಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ಇತ್ತೀಚೆಗೆ ಈ ಮಹತ್ವದ ತೀರ್ಪು

ಶಾಸ್ತ್ರೋಕ್ತವಾದ ಆಚರಣೆ ಇಲ್ಲದ ವಿವಾಹ ವಿವಾಹವೇ ಅಲ್ಲ : ಸುಪ್ರೀಂ ಕೋರ್ಟ್ Read More »

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಗ್ರಾಮದೇವತೆಯ ಜಾತ್ರೆ ಮೆರವಣಿಗೆ ವೇಳೆ ವದಂತಿಗಳಿಂದ ನೂಕುನುಗ್ಗಲು ಉಂಟಾಗಿ ದುರಂತ ಪಣಜಿ: ಉತ್ತರ ಗೋವಾದ ಶಿರಗಾವ್‌ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 50ಕ್ಕೂ ಅಧಿಕ ಜನರಿಗೆ ಗಾಯಂಡಿದ್ದಾರೆ. ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಾತ್ರೆಯಲ್ಲಿ ಭೀಕರ ಕಾಲ್ತುಳಿತ : 7 ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ Read More »

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ. ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ಉಸಿರುಕಟ್ಟಿ ಐವರು ರೋಗಿಗಳು ಸಾವು Read More »

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು

100ಕ್ಕೂ ಹೆಚ್ಚು ವಿಮಾನಗಳು ವಿಳಂಬ, 40 ವಿಮಾನಗಳ ಮಾರ್ಗ ಬದಲು ನವದೆಹಲಿ: ರಾಜಧಾನಿ ದೆಹಲಿ ಎನ್​ಸಿಆರ್​ನಲ್ಲಿ ಇಂದು ಬೆಳಗ್ಗಿನಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಅನೇಕೆ ಅನಾಹುತಗಳು ಸೃಷ್ಟಿಯಾಗಿವೆ. ನಜಾಫ್‌ಗಢ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ಮನೆ ಕುಸಿದು ಓರ್ವ ಮಹಿಳೆ ಮತ್ತು ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಜಮೀನಿನಲ್ಲಿ ನಿರ್ಮಿಸಲಾದ ಮನೆಯ ಮೇಲೆ ಮರ ಬಿದ್ದು ಈ ದುರಂತ ಅಪಘಾತ ಸಂಭವಿಸಿದೆ. ದೆಹಲಿಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಂಚಾರ ವ್ಯವಸ್ಥೆಯನ್ನೂ ಮಳೆ

ದೆಹಲಿಯಲ್ಲಿ ಭಾರಿ ಮಳೆಗೆ ಹಲವು ಅನಾಹುತ : ನಾಲ್ವರು ಸಾವು Read More »

ಪಹಲ್ಗಾಮ್ ಯುದ್ದದಿಂದ ಕರ್ನಾಟಕ ಕರವಾಳಿಯಲ್ಲಿ ಕಟ್ಟುನಿಟ್ಟಿನ ಎಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆಲ್ಲಾ ಪೊಲೀಸರ ಕಣ್ಗಾವಲು

ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ದೇಶದಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ಬೆಳವಣಿಗೆಗಳಾಗುತ್ತಿವೆ. ದೇಶದ ಸುರಕ್ಷತೆಯ ವಿಚಾರವಾಗಿ ಭಾರಿ ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಕಾವಲು ಪಡೆ, ಭಾರತೀಯ ಕೊಸ್ಟ್ ಗಾರ್ಡ್ ನೌಕಾ ನೆಲೆ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಸಕ್ರಿಯರಾಗಿದ್ದಾರೆ. ಒಂದು ಕಡೆ ಅರಬ್ಬಿ ಸಮುದ್ರ, ಇನ್ನೊಂದು ಕಡೆ ದೇಶದ ದೊಡ್ಡ ನೌಕಾ ನೆಲೆ. ಮತ್ತೊಂದೆಡೆ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಬರುವ ದೇಶ ವಿದೇಶಿಗರು. ಈ ಎಲ್ಲ ಸೂಕ್ಷ್ಮ ಕಾರಣಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ

ಪಹಲ್ಗಾಮ್ ಯುದ್ದದಿಂದ ಕರ್ನಾಟಕ ಕರವಾಳಿಯಲ್ಲಿ ಕಟ್ಟುನಿಟ್ಟಿನ ಎಚ್ಚರ: ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆಲ್ಲಾ ಪೊಲೀಸರ ಕಣ್ಗಾವಲು Read More »

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ

ಮಧ್ಯರಾತ್ರಿ ಸುದ್ದಿಗೋಷ್ಠಿ ನಡೆಸಿದ ಪಾಕ್‌ ಸರಕಾರ ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಾಚರಣೆ ನಡೆಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಇದರ ಬೆನ್ನಿಗೆ ಪಾಕಿಸ್ಥಾನದಲ್ಲಿ ಯುದ್ಧ ಭೀತಿ ತಾರಕಕ್ಕೇರಿದೆ. ಸ್ವತಹ ಪಾಕಿಸ್ಥಾನದ ಸಚಿವರೇ 36 ತಾಸಿನೊಳಗೆ ನಮ್ಮ ಮೇಲೆ ದಾಳಿಯಾಗಬಹುದು ಎಂದು ಹೇಳಿಕೊಂಡಿದ್ದಾರೆ. ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ

ಪಾಕಿಸ್ಥಾನದಲ್ಲಿ ತಾರಕಕ್ಕೇರಿದ ಯುದ್ಧ ಭೀತಿ : 36 ತಾಸಿನೊಳಗೆ ದಾಳಿ ಶುರುವಾಗಬಹುದು ಎಂದ ಸಚಿವ Read More »

ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ಉತ್ಸವದ ವೇಳೆಯೇ ಭಾರಿ ಗಾಳಿ-ಮಳೆಗೆ ಕುಸಿದ ಗೋಡೆ ಹೈದರಾಬಾದ್‌: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಸಿಂಹಾಚಲಂನಲ್ಲಿರುವ ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದ ಗೋಡೆ ಕುಸಿದು ಎಂಟು ಜನರು ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ವೇಳೆ ಸಂಭವಿಸಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ

ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು Read More »

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ

ಕೋಲ್ಕತ್ತಾ: ಕೋಲ್ಕತ್ತಾದ ಬುರ್ರಾಬಜಾರ್​ನಲ್ಲಿರುವ ಹೋಟೆಲ್​ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 15 ಮಂದಿ ಜೀವಂತ ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಅನೇಕ ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್‌ನಲ್ಲಿ ನಿನ್ನೆ ರಾತ್ರಿ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಮಹಡಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ಹೋಟೆಲ್‌ನಿಂದ 15 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ. ಕೋಲ್ಕತ್ತ ನಗರದ ಹಳೆ

ಹೋಟೆಲ್‌ನಲ್ಲಿ ಭೀಕರ ಬೆಂಕಿ ಅವಘಡ : 15 ಮಂದಿ ಜೀವಂತ ದಹನ Read More »

ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್‌ ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌

ವೀಡಿಯೊದಲ್ಲಿ ಕಂಡು ಬಂದ ದೃಶ್ಯದ ಬಳಿಕ ನಾನಾ ಅನುಮಾನ ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸುವ ಸಂದರ್ಭದಲ್ಲೇ ಜಿಪ್‌ಲೈನ್‌ ಆಪರೇಟರ್‌ವೊಬ್ಬ ಅಲ್ಲಾಹು ಅಕ್ಬರ್ ಎಂದು ಮೂರು ಬಾರಿ ಕೂಗಿರುವುದು ಕಂಡುಬಂದಿದೆ. ಈ ದೃಶ್ಯ ಪ್ರವಾಸಿಗರೊಬ್ಬರ ಸೆಲ್ಫಿ ವೀಡಿಯೊದಲ್ಲಿ ಸೆರೆಯಾಗಿದೆ. ‘ಅಲ್ಲಾಹು ಅಕ್ಬರ್‌’ ಎಂದು ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ವಿಚಾರಣೆಗಾಗಿ ಕರೆಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳದಲ್ಲಿದ್ದ ಎಲ್ಲರನ್ನೂ ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡಿವೆ. ಜಿಪ್‌ಲೈನ್ ಆಪರೇಟರ್‌ನನ್ನು

ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್‌ ಕೂಗಿದ್ದ ಜಿಪ್‌ಲೈನ್‌ ಆಪರೇಟರ್‌ Read More »

error: Content is protected !!
Scroll to Top