ದೇಶ

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌

ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ […]

ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್‌ Read More »

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ

ಮುಂಬಯಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಮಹಾರಾಷ್ಟ್ರದಲ್ಲಿ ಕಲ್ಲುತೂರಲಾಗಿದೆ. ತಪತಿ ಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಮಾಹಾರಾಷ್ಟ್ರದ ಜಲಗಾಂವ್‌ನಲ್ಲಿ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ರೈಲಿನಲ್ಲಿ ಗುಜರಾತ್‌ನಿಂದ ಕುಂಭಮೇಳಕ್ಕೆ ಭಕ್ತರು ಪ್ರಯಾಣಿಸುತ್ತಿದ್ದರು. ರೈಲು ಸೂರತ್‌ನಿಂದ ಛಾಪ್ರಾಕ್ಕೆ ಹೋಗುತ್ತಿದ್ದ ವೇಳೆ ಜಲಗಾಂವ್‌ನಲ್ಲಿ ಕಿಡಿಗೇಡಿಯೋರ್ವ ಕಲ್ಲುತೂರಿದ್ದಾನೆ. ರೈಲಿನ ಕಿಟಿಕಿ ಗಾಜು ಒಡೆದಿದ್ದು, ಯಾರಿಗೂ ಗಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಬಾಬಾ ಬನಾರಸ್‌ ಎಂಬ ಎಕ್ಸ್‌ ಪೇಜ್‌ನಲ್ಲಿ ಕಲ್ಲುತೂರಾಟ ಮಾಡಿದ ವೀಡಿಯೊ ಮತ್ತು ಫೋಟೊ

ಮಹಾಕುಂಭ ಮೇಳಕ್ಕೆ ಹೋಗುವ ಭಕ್ತರಿದ್ದ ರೈಲಿಗೆ ಕಲ್ಲು ತೂರಾಟ Read More »

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ

ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಶುರು ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಇಂದು ನಸುಕಿನ ಹೊತ್ತು ವಿದ್ಯುಕ್ತ ಚಾಲನೆ ದೊರೆತಿದೆ.ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾಶಿವರಾತ್ರಿ ದಿನವಾದ ಫೆಬ್ರವರಿ 26ರಂದು ಕೊನೆಯ ಶಾಹಿ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಮಹಾಕುಂಭಮೇಳಕ್ಕೆ ಇಂದು ಬೆಳಗ್ಗಿನಜಾವ ಮೊದಲ ಶಾಹಿ ಸ್ನಾನ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಗಿದೆ. ಲಕ್ಷಾಂತರ ಸಂಖ್ಯೆಯಲ್ಲಿ ನಾಗಸಾಧುಗಳು ಶಾಹಿ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಮಹಾಕುಂಭಮೇಳಕ್ಕೆ ವಿಧ್ಯುಕ್ತ ಚಾಲನೆ : ನಾಗಸಾಧುಗಳಿಂದ ಮೊದಲ ಶಾಹಿ ಸ್ನಾನ Read More »

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ

ಪತ್ತನಂತಿಟ್ಟ : ಲೈಂಗಿಕ ಹಗರಣಗಳಿಗೆ ಕುಖ್ಯಾತವಾಗಿರುವ ಕೇರಳದಲ್ಲಿ ಇನ್ನೊಂದು ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ.ಈಗ 18 ವರ್ಷ ಪ್ರಾಯವಾಗಿರುವ ದಲಿತ ಸಮುದಾಯದ ಕ್ರೀಡಾಪಟುವೊಬ್ಬಳ ಮೇಲೆ ಕಳೆದ ಐದು ವರ್ಷಚಗಳಿಂದ 60ಕ್ಕೂ ಹೆಚ್ಚು ಮಂದಿ ಅತ್ಯಾಚಾರ ಎಸಗಿರುವ ಘಟನೆ ಸಂಭವಿಸಿದೆ. ಅಪ್ರಾಪ್ತ ವಯಸ್ಸಿನವಳ ಆಕೆಯ ಕ್ರೀಡಾ ಕೋಚ್‌ಗಳು, ಸಹ ಆಟಗಾರರು ಸೇರಿದಂತೆ 64 ಪುರುಷರು 5 ವರ್ಷಗಳಿಂದ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಇದೀಗ ದೂರು ನೀಡಿದ್ದು, ಇದರನ್ವಯ ಪೊಲೀಸರು ಆರೋಪಿಗಳ ವಿರುದ್ಧ 4 ಎಫ್‌ಐಆರ್‌ ದಾಖಲಿಸಿ 15 ಮಂದಿಯನ್ನು

ಅಪ್ರಾಪ್ತ ಬಾಲಕಿ ಮೇಲೆ 64 ಜನರಿಂದ ಅತ್ಯಾಚಾರ : ಕೇರಳದಲ್ಲಿ ಬೆಳಕಿಗೆ ಬಂದ ಆಘಾತಕಾರಿ ಲೈಂಗಿಕ ಶೋಷಣೆ ಪ್ರಕರಣ Read More »

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ

ಮೂರು ಮಕ್ಕಳ ಶವಗಳನ್ನು ಮಂಚದೊಳಗಿಟ್ಟಿದ್ದ ಹಂತಕರು ಲಖನೌ: ಉತ್ತರ ಪ್ರದೇಶದ ಮೇರಠ್‌ ಜಿಲ್ಲೆಯ ಲಿಸಡಿ ಗೇಟ್‌ ಎಂಬಲ್ಲಿ ಒಂದೇ ಕುಟುಂಬದ ಐದು ಮಂದಿ ಕೊಲೆಯಾದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆಯಾಗಿದ್ದಾರೆ. ತಂದೆ, ತಾಯಿ ಮತ್ತು ಮೂರು ಮಕ್ಕಳನ್ನು ಕೊಲೆಮಾಡಿದ್ದಾರೆ. ತಂದೆ, ತಾಯಿ ಶವ ನೆಲದಲ್ಲಿ ಬಿದ್ದಿದ್ದರೆ ಮಕ್ಕಳ ಶವಗಳು ಮಂಚದೊಳಗಿನ ಬಾಕ್ಸ್‌ನಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದವರನ್ನು ಮೊಯಿನ್‌, ಅವರ ಹೆಂಡತಿ ಅಸ್ಮಾ ಮಕ್ಕಳಾದ ಅಫ್ಸಾ (8), ಅಜೀಜ (4) ಮತ್ತು ಅದಿಬ(1) ಎಂದು ಗುರುತಿಸಲಾಗಿದೆ. ಕೆಲದಿನಗಳಿಂದ ಮನೆಯವರು

ಮೇರಠ್‌ : ಒಂದೇ ಕುಟುಂಬದ ಐವರ ಕೊಲೆ Read More »

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ

ನಿತ್ಯ 40 ಕೌಂಟರ್‌ಗಳಲ್ಲಿ 1 ಲಕ್ಷ ಜನರಿಗೆ ಊಟ ಪ್ರಯಾಗ್​ರಾಜ್: ಜನವರಿ 13ರಿಂದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಲಿರುವ ಮಹಾಕುಂಭಮೇಳದಲ್ಲಿ ಅದಾನಿ ಸಮೂಹ ಇಸ್ಕಾನ್‌ ಸಹಭಾಗಿತ್ವದಲ್ಲಿ ಬರೋಬ್ಬರಿ 50 ಲಕ್ಷ ಜನರಿಗೆ ಅನ್ನದಾನ ಸೇವೆ ನೀಡಲಿದೆ. ಮಹಾಕುಂಭಮೇಳದಲ್ಲಿ ಭಕ್ತರಿಗೆ ಅನ್ನದಾನ ಮಾಡಲು ಅದಾನಿ ಗ್ರೂಪ್ ಮತ್ತು ಇಂಟರ್​ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್‌ಶಿಯಸ್‌ನೆಸ್ (ಇಸ್ಕಾನ್) ಕೈಜೋಡಿಸಿವೆ. ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯುವ ಮಹಾಕುಂಭಮೇಳ ಪೂರ್ತಿ ಈ ಮಹಾಅನ್ನಪ್ರಸಾದ ಸೇವೆ ನೀಡಲಾಗುತ್ತದೆ.ನಿತ್ಯ 1 ಲಕ್ಷ ಭಕ್ತರಂತೆ 50 ದಿನಗಳಲ್ಲಿ 50

ಮಹಾಕುಂಭಮೇಳದಲ್ಲಿ 50 ಲಕ್ಷ ಜನರಿಗೆ ಅದಾನಿ ಸಮೂಹದಿಂದ ಅನ್ನದಾನ Read More »

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ ಮುಂಬಯಿ : ಮಹಾರಾಷ್ಟ್ರದ ಬುಲ್ಢಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್‌ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ. ಸುಮಾರು 50 ಜನ ಈಗಾಗಲೇ ಕೂದಲು ಉದುರಿ ಹೋಗಿ ಬೊಕ್ಕ ತಲೆಯವರಾಗಿದ್ದಾರೆ. ವಿಶೇಷ ಎಂದರೆ ಕೆಲವು ಮಕ್ಕಳ ತಲೆಕೂದಲು ಕೂಡ ಉದುರಿ ಹೋಗಿದೆ. ಕೆಲವು ಯುವಕರ ಗಡ್ಡ ಉದುರುತ್ತಿದೆ.

ನೋಡು ನೋಡುತ್ತಿದ್ದಂತೆ ಉದುರಿ ಹೋಗುತ್ತಿದೆ ಕೂದಲು : ವಿಚಿತ್ರ ಸಮಸ್ಯೆಯಿಂದ ಕಂಗಾಲಾದ ಜನ Read More »

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ

ವೈಕುಂಠ ಏಕಾದಶಿ ಟೋಕನ್‌ ಪಡೆಯಲು ನೂಕುನುಗ್ಗಲು ಉಂಟಾಗಿ ದುರಂತ ತಿರುಮಲ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 25ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್‌ ಮಾಡಲು ಆಂಧ್ರ ಪ್ರದೇಶ ಸರಕಾರ ಆದೇಶಿಸಿದೆ.ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು

ತಿರುಪತಿಯಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 7ಕ್ಕೇರಿಕೆ Read More »

ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಹೋಗಿ  ಪಾಳು ಬಾವಿಗೆ ಬಿದ್ದು ಬಾಲಕ ಮೃತ್ಯು

ಕಣ್ಣೂರು: ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಓಡಿದ ಬಾಲಕ ಆವರಣವಿಲ್ಲದ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಣ್ಣೂರು ತೂವ್ವಕುನ್ನ್ ನಲ್ಲಿ ನಡೆದಿದೆ. ಚೇಲಕ್ಕೋಡ್ ಜುಮ್ಮಾ ಮಸೀದಿ ಬಳಿಯ ಉಸ್ಮಾನ್ ಎಂಬವರ ಪುತ್ರ, ತೂವ್ವಕುನ್ನ್ ಸರಕಾರಿ ಶಾಲೆಯ ನಾಲ್ಕನೆ ತರಗತಿ ವಿದ್ಯಾರ್ಥಿ ಮೊಹಮ್ಮದ್ ಫಸಲ್ (9)) ಮೃತಪಟ್ಟ ಬಾಲಕ. ಮೊಹಮ್ಮದ್ ಫಸಲ್ ಮನೆ ಸಮೀಪ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ‌ ಬೀದಿ ನಾಯಿ ಅವರತ್ತ ಓಡಿ ಬಂದಿದೆ. ಮಕ್ಕಳು ಹೆದರಿ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಬಳಿಕ ಫಸಲ್ ನಾಪತ್ತೆಯಾಗಿದ್ದ. ಮೊಹಮ್ಮದ್ ಫಸಲ್

ಬೀದಿ ನಾಯಿ ದಾಳಿಯಿಂದ ತಪ್ಪಿಸಲು ಹೋಗಿ  ಪಾಳು ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು

ಉತ್ತರ ಭಾರತ, ನೇಪಾಳ, ಚೀನದಲ್ಲೂ ಕಂಪನದ ಅನುಭವ ಹೊಸದಿಲ್ಲಿ : ಟಿಬೆಟ್‌ನಲ್ಲಿ ಇಂದು ಬೆಳಗ್ಗೆ ಒಂದು ತಾಸಿನೊಳಗೆ ಬೆನ್ನುಬಿನ್ನಿಗೆ 6 ಭೂಕಂಪಗಳು ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ಈ ಪೈಕಿ ಮೊದಲ ಭೂಕಂಪ 7.1 ತೀವ್ರತೆ ಹೊಂದಿತ್ತು. ನಂತರ ಐದು ಪಶ್ಚಾತ್‌ ಕಂಪನಗಳು ಸಂಭವಿಸಿವೆ. ಭಾರತ, ನೇಪಾಳ, ಭೂತಾನ್‌ ಮತ್ತು ಚೀನದಲ್ಲೂ ಬೆಳಗ್ಗೆ ಕಂಪನದ ಅನುಭವ ಆಗಿದೆ. ಭೂಕಂಪದಿಂದಾಗಿ ಟಿಬೆಟ್‌ನಲ್ಲಿ ಅನೇಕ ಕಟ್ಟಡಗಳು ಉರುಳಿದ್ದು, ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ. ಪರಿಹಾರ ಕಾರ್ಯಾಚರಣೆ ಶುರುವಾಗಿದ್ದು, ಅವಶೇಷಗಳನ್ನು ಎತ್ತಿದಾಗ

ಟಿಬೆಟ್‌ನಲ್ಲಿ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪ : ಕನಿಷ್ಠ 36 ಮಂದಿ ಸಾವು Read More »

error: Content is protected !!
Scroll to Top