ದೇಶ

ಮಹಾಕುಂಭಮೇಳದಲ್ಲಿ ಮತ್ತೆ ಅಗ್ನಿ ಅವಘಡ : ಎರಡು ಕಾರುಗಳು ಭಸ್ಮ

ಪ್ರಯಾಗ್‌ರಾಜ್‌ : ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಿದ್ದ ಎರಡು ಕಾರುಗಳು ಇದ್ದಕ್ಕಿದ್ದಂತೆ ಬೆಂಕಿಹತ್ತಿಕೊಡು ಉರಿದು ಕರಕಲಾಗಿವೆ. ಕಳೆದ ಭಾನುವಾರಷ್ಟೇ ಸಿಲಿಂಡರ್‌ ಸ್ಫೋಟಿಸಿದ ಪರಿಣಾಮ ಬೆಂಕಿಹತ್ತಿಕೊಂಡು ಸುಮಾರು 20 ಟೆಂಟ್‌ಗಳು ಸುಟ್ಟುಹೋಗಿದ್ದವು. ಮಹಾಕುಂಭಮೇಳದ ಸೆಕ್ಟರ್‌ 2ರ ಬಳಿ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿಹತ್ತಿಕೊಡಿದ್ದು, ಕೂಡಲೇ ಅಗ್ನಿಶಾಮಕ ಪಡೆ ಉಳಿದ ಕಾರುಗಳು ಮತ್ತಿತರ ವಾಹನಗಳನ್ನು ದೂರ ಸಾಗಿಸಿದ ಪರಿಣಾಮ ಹೆಚ್ಚಿನ ಅನಾಹುತವಾಗಿಲ್ಲ. ಆದರೆ ಬೆಂಕಿಹತ್ತಿಕೊಂಡ ಎರಡು ಕಾರುಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಘಟನೆಯಲ್ಲಿ […]

ಮಹಾಕುಂಭಮೇಳದಲ್ಲಿ ಮತ್ತೆ ಅಗ್ನಿ ಅವಘಡ : ಎರಡು ಕಾರುಗಳು ಭಸ್ಮ Read More »

ಸೈಫ್‌ ಅಲಿ ಖಾನ್‌ ಹಲ್ಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿ ನಕಲಿ

ಇಡೀ ಬಂಧನ ಪ್ರಕ್ರಿಯೆ ಮುಂಬಯಿ ಪೊಲೀಸರ ಕಟ್ಟುಕತೆ ಎಂದ ಆರೋಪಿಯ ತಂದೆ ಮುಂಬಯಿ: ಬಾಲಿವುಡ್ ನಟ ಸೈಫ್ ಆಲಿ ಖಾನ್ ಮೇಲಾಗಿರುವ ದಾಳಿಯ ಬಗ್ಗೆಯೇ ಹಲವು ಅನುಮಾನಗಳು ಸೃಷ್ಟಿಯಾಗಿರುವ ಬೆನ್ನಿಗೆ ಪೊಲೀಸರು ಬಂಧಿಸಿರುವುದು ನಕಲಿ ಆರೋಪಿ ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ವಶದಲ್ಲಿರುವ ಆರೋಪಿ ಮೊಹಮ್ಮದ್ ಶರೀಫುಲ್‌ ಇಸ್ಲಾಂನ ತಂದೆ ಶರೀಫುಲ್ ಫಕೀರ್, ತನ್ನ ಮಗನನ್ನು ವಿನಾಕಾರಣ ಬಂಧಿಸಲಾಗಿದೆ. ಆತ ಸೈಫ್ ಮೇಲೆ ದಾಳಿ ಮಾಡಿದ ವ್ಯಕ್ತಿಯಲ್ಲ. ಇದು ವ್ಯವಸ್ಥಿತಿ ಷಡ್ಯಂತ್ರ ಎಂದು ಹೇಳಿದ್ದಾರೆ. ಮುಂಬಯಿ ಪೊಲೀಸರು

ಸೈಫ್‌ ಅಲಿ ಖಾನ್‌ ಹಲ್ಲೆ ಪ್ರಕರಣದಲ್ಲಿ ಬಂಧಿಸಿರುವ ಆರೋಪಿ ನಕಲಿ Read More »

ಸೆಹವಾಗ್‌ ದಾಂಪತ್ಯದಲ್ಲಿ ಬಿರುಕು?

ಹಲವಾರು ತಿಂಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಗಂಡ-ಹೆಂಡತಿ ಹೊಸದಿಲ್ಲಿ: ಭಾರತದ ಮಾಜಿ ಡ್ಯಾಶಿಂಗ್‌ ಓಪನರ್‌ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ದಾಂಪತ್ಯದಲ್ಲೂ ಬಿರುಕು ಕಾಣಿಸಿಕೊಂಡಿದೆ ಎಂಬ ಸುದ್ದಿ ಸೆಹವಾಗ್‌ ಅಭಿಮಾನಿಗಳನ್ನು ವಿಚಲಿತಗೊಳಿಸಿದೆ. ಸೆಹವಾಗ್‌ ಮತ್ತು ಪತ್ನಿ ಆರತಿ ಅಹ್ಲಾವತ್ 20 ವರ್ಷಗಳ ದಾಂಪತ್ಯ ಜೀವನ ಮುಕ್ತಾಯ ಹಂತದಲ್ಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಸೆಹ್ವಾಗ್ ಮತ್ತು ಆರತಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದು, ಶೀಘ್ರವೇ ವಿಚ್ಛೇದನ ನೀಡಲಿದ್ದಾರೆ ಎಂದು ವರದಿಯಾಗಿದೆ. 2004ರಲ್ಲಿ ಮದುವೆಯಾದ ಸೆಹ್ವಾಗ್‌ ಮತ್ತು ಆರತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ಹಲವಾರು

ಸೆಹವಾಗ್‌ ದಾಂಪತ್ಯದಲ್ಲಿ ಬಿರುಕು? Read More »

ಕಾರ್ಕಳ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಪತ್ತೆ : ಕ್ವಾರಂಟೈನ್‌ನಲ್ಲಿಟ್ಟು ಚಿಕಿತ್ಸೆ

ಅಂತಾರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಲಾದ ಸೋಂಕು ಮಂಗಳೂರು: ದುಬೈಯಿಂದ ಬಂದಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾಗಿದೆ. ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ 40 ವರ್ಷದ ಈ ವ್ಯಕ್ತಿಯ ಮಾದರಿಯನ್ನು ಪರೀಕ್ಷೆ ಮಾಡಿ ಮಂಕಿಪಾಕ್ಸ್ (MPox) ಪ್ರಕರಣ ದೃಢಪಡಿಸಿದೆ. ಕಳೆದ 19 ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿರುವ ಈ ವ್ಯಕ್ತಿ ಜನವರಿ 17ರಂದು ಊರಿಗೆ ಆಗಮಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ದದ್ದುಗಳ ಲಕ್ಷಣಗಳು ಕಂಡುಬಂದವು ಮತ್ತು ಜ್ವರ ಕಾಣಿಸಿಕೊಂಡಿತ್ತು. ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಯಲ್ಲಿ

ಕಾರ್ಕಳ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ಪತ್ತೆ : ಕ್ವಾರಂಟೈನ್‌ನಲ್ಲಿಟ್ಟು ಚಿಕಿತ್ಸೆ Read More »

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ

ಬೆಂಕಿ ಹತ್ತಿಕೊಂಡ ವದಂತಿ ನಂಬಿ ಹಳಿಗೆ ಹಾರಿದವರ ಮೇಲೆ ಹರಿದ ಇನ್ನೊಂದು ರೈಲು ಮುಂಬಯಿ: ಬೆಂಗಳೂರಿನಿಂದ ದಿಲ್ಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ರೈಲ್ವೆ ವಿಭಾಗೀಯ ಆಯುಕ್ತ ಪ್ರವೀಣ್ ಗೆದಮ್ ತಿಳಿಸಿದ್ದಾರೆ.ಮಹಾರಾಷ್ಟ್ರದ ಜಲಗಾಂವ್ ದಾಟುತ್ತಿದ್ದ ಪುಷ್ಪಕ್‌ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಪ್ರಯಾಣಿಕರು ರೈಲಿನ ಚೈನ್‌ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ದುರಂತ : ಸಾವಿನ ಸಂಖ್ಯೆ 11ಕ್ಕೇರಿಕೆ Read More »

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ

ಹಿಂದು ಪಂಚಾಂಗ ಪ್ರಕಾರ ಜ.11ರಂದೇ ಅಯೋಧ್ಯೆಯಲ್ಲಿ ವಾರ್ಷಿಕೋತ್ಸವ ಆಚರಣೆ ಅಯೋಧ್ಯೆ : ಅಯೋಧ್ಯೆಯಲ್ಲಿ ಹೊಸ ಮಂದಿರ ನಿರ್ಮಾಣವಾಗಿ ಬಾಲರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರ್ತಿಯಾಯಿತು. 2024ರ ಪುಷ್ಯ ಮಾಸದ ಶುಕ್ಲ ಪಕ್ಷದ ಕೂರ್ಮ ದ್ವಾದಶಿ ದಿನದಂದು ಅಂದರೆ, 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಪೂರ್ಣಗೊಳಿಸಲಾಗಿತ್ತು. ಮೈಸೂರಿನ ಶಿಲ್ಪಿ ಅರುಣ್‌ ರಾಜ್‌ ಈ ಆಕರ್ಷಕ ಮೂರ್ತಿಯನ್ನು ಕೆತ್ತಿದ್ದಾರೆ. 2025ರಲ್ಲಿ ಅಯೋಧ್ಯೆ ರಾಮ ಪ್ರಾಣ

ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಭರ್ತಿ ಒಂದು ವರ್ಷ Read More »

ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ?

100ಕ್ಕೂ ಅಧಿಕ ಭವ್ಯ ಮಹಲುಗಳು, ಕಟ್ಟಡಗಳು ಕೇಂದ್ರದ ಪಾಲಾಗುವ ಸಾಧ್ಯತೆ ಮುಂಬಯಿ : ಕೆಲದಿನಗಳ ಹಿಂದಷ್ಟೇ ಮನೆಯಲ್ಲಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಈಗ ಚೇತರಿಸುತ್ತಿರುವ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ಈಗ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮನೆತನದ ಬರೋಬ್ಬರಿ 15,000 ಕೋ. ರೂ. ಮೌಲ್ಯದ ಆಸ್ತಿ ಈಗ ಕೇಂದ್ರ ಸರಕಾರದ ಪಾಲಾಗುವ ಭೀತಿ ತಲೆದೋರಿದೆ. ಸೈಫ್‌ ಅಲಿ ಖಾನ್‌ ತಂದೆ ಮಾಜಿ ಕ್ರಿಕೆಟಿಗ ದಿವಂಗತ ಮನ್ಸೂರ್‌ ಅಲಿ ಖಾನ್‌ ಪಟೌಡಿ ಮಧ್ಯಪ್ರದೇಶದ ಭೋಪಾಳದ

ಸೈಫ್‌ ಅಲಿ ಖಾನ್‌ ಪರಿವಾರದ 15 ಸಾವಿರ ಕೋ. ರೂ. ಆಸ್ತಿ ಸರಕಾರಕ್ಕೆ? Read More »

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ

1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನೂ ಬಲಿ ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ. ಸೋಮವಾರ ಮತ್ತು ಮಂಗಳವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇಬ್ಬರು ಮಹಿಳಾ ನಕ್ಸಲರನ್ನು ಕೂಡ ಹತ್ಯೆ ಮಾಡಲಾಗಿದೆ. ಓರ್ವ ಕೋಬ್ರಾ ಯೋಧ ಗಾಯಗೊಂಡಿದ್ದಾರೆ.ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲಾ

ಎನ್‌ಕೌಂಟರ್‌ನಲ್ಲಿ 12 ನಕ್ಸಲರ ಹತ್ಯೆ Read More »

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು

ಜನರ ಕಾಟ ತಡೆಯಲಾಗದೆ ಕುಂಭಮೇಳದಿಂದಲೇ ದೂರ ಹೋದ ಅದ್ಭುತ ಸುಂದರಿ ಪ್ರಯಾಗರಾಜ್: ರಾತ್ರಿ ಬೆಳಗಾಗುವುದರೊಳಗೆ ಸಿಗುವ ಜನಪ್ರಿಯತೆ ಹೇಗೆ ಕೆಲವೊಮ್ಮೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ಮಹಾಕುಂಭಮೇಳದ ಈ ಮೊನಾಲಿಸಾ ಸಾಕ್ಷಿ. ಕಳೆದ 2-3 ದಿನಗಳಿಂದ ಈ ಹದಿಹರೆಯದ ಯುವತಿ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದಾಳೆ. ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಫೇಸ್‌ಬುಕ್‌, ಟ್ವಿಟ್ಟರ್‌ ಸೇರಿದಂತೆ ಯಾವ ಸೋಷಿಯಲ್‌ ಮೀಡಿಯಾ ತೆರೆದರೂ ಈ ಯುವತಿಯ ವೀಡಿಯೊಗಳು, ಮತ್ತು ಫೋಟೊಗಳು ಕಾಣಿಸಿಕೊಳ್ಳುತ್ತವೆ. ಯಾವ ದೊಟ್ಟ ನಟಿಗೂ ಸಿಗದ ಪ್ರಚಾರ ಎರಡು ದಿನದಲ್ಲಿ

ಭಾರಿ ಪ್ರಚಾರವೇ ಮೊನಾಲಿಸಾಗೆ ಮುಳುವಾಯಿತು Read More »

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ

ಸಂಶಯದ ಮೇಲೆ ಬಂಧಿಸಿದ್ದ ವ್ಯಕ್ತಿ ಸ್ಥಳೀಯ ಕಾರ್ಪೆಂಟರ್‌ ; ನಿಜವಾದ ಆರೋಪಿ ಪಲಾಯನ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶುಕ್ರವಾರ ಬಂಧಿಸಿದ್ದ ವ್ಯಕ್ತಿ ನಿಜವಾದ ಆರೋಪಿಯಲ್ಲ. ವಿಚಾರಣೆ ಬಳಿಕ ತಾವು ಬೇಸ್ತುಬಿದ್ದ ಸಂಗತಿ ಪೊಲೀಸರಿಗೆ ತಿಳಿದುಬಂದಿದ್ದು, ಅವನನ್ನು ಬಿಟ್ಟು ಕಳಿಸಿದ್ದಾರೆ. ಆತ ಸ್ಥಳೀಯವಾಗಿ ಬಡಗಿ ಕೆಲಸ ಮಾಡಿಕೊಂಡಿರುವ ವ್ಯಕ್ತಿ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಆತ ಸಿಸಿಟಿವಿಯಲ್ಲಿ ಕಂಡ ವ್ಯಕ್ತಿಯ ಚಹರೆ ಹೋಲುತ್ತಿದ್ದ ಕಾರಣ ಪೊಲೀಸರು

ನಟ ಸೈಫ್‌ ಹಲ್ಲೆ ಪ್ರಕರಣ : ಬಂಧಿಸಿದ ವ್ಯಕ್ತಿ ಆರೋಪಿಯಲ್ಲ Read More »

error: Content is protected !!
Scroll to Top