ದೇಶ

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ

ಕಾಂಗ್ರೆಸ್‌ ಪಾಲಿಗೆ ವರವಾದ ನಿರ್ಧಾರ ಮಂಗಳೂರು : ಬೆಲೆ ಏರಿಕೆಯನ್ನು ಪ್ರಧಾನ ವಿಷಯವಾಗಿಟ್ಟುಕೊಂಡು ಜನಾಕ್ರೋಶ ಯಾತ್ರೆ ಪ್ರಾರಂಭಿಸಿರುವ ರಾಜ್ಯ ಬಿಜೆಪಿಗೆ ಕೇಂದ್ರ ಸರಕಾರ ನಿನ್ನೆ ಕೈಗೊಂಡ ನಿರ್ಧಾರವೊಂದು ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ನಿನ್ನೆ ದಿಢೀರ್‌ ಎಂದು ಕೇಂದ್ರ ಸರಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಇದರ ಜೊತೆಗೆ ಪೆಟ್ರೋಲು ಮತ್ತು ಡೀಸೆಲ್‌ ಮೇಲಿನ ಸುಂಕವನ್ನು ತಲಾ 2 ರೂ.ಯಂತೆ ಹೆಚ್ಚಿಸಿದೆ. ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರದ ವತಿಯಿಂದ ಆಗಿರುವ […]

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ Read More »

ಷೇರು ಮಾರುಕಟ್ಟೆ ಭಾರಿ ಕುಸಿತ : 19 ಲಕ್ಷ ಕೋಟಿ ರೂಪಾಯಿ ನಷ್ಟ

ಹೂಡಿಕೆದಾರ ಪಾಲಿಗೆ ಇಂದು ಬ್ಲ್ಯಾಕ್‌ ಮಂಡೆ ನವದೆಹಲಿ: ಜಾಗತಿಕ ಷೇರು ಮಾರುಕಟ್ಟೆಗಳ ಪಾಲಿಗೆ ಇಂದಿನ ದಿನ ಅಕ್ಷರಶಃ ಬ್ಲ್ಯಾಕ್‌ ಮಂಡೆಯಾಗಿ ಪರಿಣಮಸಿದೆ. ಮುಂಬಯಿ ಷೇರು ಮಾರುಕಟ್ಟೆಯೂ ಸೇರಿದಂತೆ ಎಲ್ಲ ಮಾರುಕಟ್ಟೆಗಳ ಸೂಚ್ಯಂಕ ಪಾತಾಳಕ್ಕಿಳಿದು ಷೇರು ಮಾರುಕಟ್ಟೆಯಲ್ಲಿ ಅಕ್ಷರಶಃ ರಕ್ತದೋಕುಳಿ ಆಗುತ್ತಿದೆ. ಯದ್ವಾತದ್ವಾ ಕರಡಿ ಕುಣಿತದಿಂದ ಹೂಡಿಕೆದಾರರು ಲಕ್ಷ ಕೋಟಿಗಳಲ್ಲಿ ಹಣ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕೂರುವ ಸ್ಥಿತಿ ನಿರ್ಮಾಣವಾಗಿದೆ.ಭಾರತದಲ್ಲಿ 23,000 ಗಡಿದಾಟಿ ಮುನ್ನುಗ್ಗುವ ಸೂಚನೆ ನೀಡಿದ್ದ ಷೇರು ಗೂಳಿ ಈಗ ಪ್ರಪಾತಕ್ಕೆ ಬೀಳುತ್ತಿದೆ. ಸೆನ್ಸೆಕ್ಸ್​ನಲ್ಲೂ ಕೂಡ

ಷೇರು ಮಾರುಕಟ್ಟೆ ಭಾರಿ ಕುಸಿತ : 19 ಲಕ್ಷ ಕೋಟಿ ರೂಪಾಯಿ ನಷ್ಟ Read More »

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ

ತಮಿಳುನಾಡಿನ ರಾಮೇಶ್ವರಂನಲ್ಲಿ ನಿರ್ಮಿಸಿದ ಪಂಬನ್‌ ಸೇತುವೆ ನವದೆಹಲಿ: ರಾಮನವಮಿ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ತಮಿಳುನಾಡಿನ ರಾಮೇಶ್ವರಂನಲ್ಲಿ ಉದ್ಘಾಟಿಸಲಿದ್ದಾರೆ. ಪಂಬನ್ ಎಂದು ಕರೆಯಲ್ಪಡುವ ಈ ರೈಲು ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.‌ಮಧ್ಯಾಹ್ನ 12 ಗಂಟೆಗೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸೇತುವೆ ಇಂದು ಮೋದಿಯಿಂದ ಉದ್ಘಾಟನೆ Read More »

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ

ಅಂಕಿತ ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ : ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಬೀಳೂವುದರೊಂದಿಗೆ ಅದು ಈಗ ಕಾಯಿದೆಯಾಗಿ ಮಾರ್ಪಟ್ಟಿದೆ. ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲು ವಕ್ಫ್ ಮಸೂದೆಯನ್ನು ಎರಡೂ ಸದನಗಳು ಅಂಗೀಕರಿಸಿದ್ದವು. ಆಡಳಿತ ಮತ್ತು ವಿರೋಧ ಪಕ್ಷದ ನಡುವೆ ಬಿಸಿ ವಾಗ್ವಾದ ನಡೆದ ಸುದೀರ್ಘ ಚರ್ಚೆಯ ನಂತರ ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು. ರಾಜ್ಯಸಭೆಯಲ್ಲಿ ಸುಮಾರು 14 ಗಂಟೆಗಳ ಕಾಲ ಈ ಮಸೂದೆಯ ಬಗ್ಗೆ ಚರ್ಚೆ

ವಕ್ಫ್‌ ಮಸೂದೆಗಿನ್ನು ಸುಪ್ರೀಂ ಕೋರ್ಟ್‌ ಅಗ್ನಿಪರೀಕ್ಷೆ Read More »

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ

ಖಾಸಗಿ ಕಂಪನಿ ನೀಡಿದ ಶಿಕ್ಷೆಯ ವೀಡಿಯೊ ವೈರಲ್‌ ಕೊಚ್ಚಿ: ಟಾರ್ಗೆಟ್‌ ರೀಚ್‌ ಮಾಡಲು ಸಾಧ್ಯವಾಗದ ಉದ್ಯೋಗಿಗಳನ್ನು ಕತ್ತಿಗೆ ಸರಪಳಿ ಬಿಗಿದು ನಾಯಿಯಂತೆ ನಡೆಸಿಕೊಂಡು ಹೋದ ಘಟನೆಯೊಂದು ಕೇರಳದಲ್ಲಿ ಸಂಭವಿಸಿದ್ದು, ಕೃತ್ಯದ ವೀಡಿಯೊ ಭಾರಿ ವೈರಲ್‌ ಆಗಿ ಆಕ್ರೋಶಕ್ಕೆ ಗುರಿಯಾಗಿದೆ.ಕೊಚ್ಚಿಯಲ್ಲಿರುವ ಮಾರ್ಕೆಟಿಂಗ್‌ ಕಂಪನಿಯೊಂದು ತನ್ನ ನೌಕರರಿಗೆ ಈ ಶಿಕ್ಷೆ ನೀಡಿದೆ ಎನ್ನಲಾಗಿದೆ. ಕಂಪನಿಯ ಮಾಜಿ ಮ್ಯಾನೇಜರ್‌ ಈ ವೀಡಿಯೊವನ್ನು ಬಹಿರಂಗಪಡಿಸಿದ ಬಳಿಕ ಸರಕಾರದ ಗಮನಕ್ಕೂ ಬಂದಿದೆ. ಟಾರ್ಗೆಟ್‌ ರೀಚ್‌ ಮಾಡಲಾಗದ ನೌಕರರಿಗೆ ಈ ಕಂಪನಿಯ ಮಾಲೀಕ ಈ ರೀತಿಯ

ಟಾರ್ಗೆಟ್‌ ರೀಚ್‌ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ Read More »

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು

ಗುರು ಎಂದು ಭಾವಿಸಿದಾತನೇ ಎಸಗಿದ ಘೋರ ಕೃತ್ಯ ಅಹಮದಾಬಾದ್: ಎಂಟು ವರ್ಷದ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್‌ ಮಹಾರಾಜ್‌ ಎಂಬಾತನಿಗೆ ಸೂರತ್‌ನ ಸೆಶನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಎ.ಕೆ. ಶಾ ಅವರು ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ದಿಗಂಬರ ಜೈನಮುನಿ ತಪ್ಪಿತಸ್ಥರೆಂದು ತೀರ್ಪು

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು Read More »

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ

ನವದೆಹಲಿ : ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ನಿರ್ಧರಿಸಿದೆ. ವಕ್ಫ್‌ ಮಸೂದೆ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್‌ ನ್ಯಾಯಾಂಗ ಹೋರಾಟದ ನಿರ್ಧಾರಕ್ಕೆ ಬಂದಿದೆ. ಕೇಂದ್ರದ ಈ ನಿರ್ಧಾರದ ಶೀಘ್ರದಲ್ಲಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ. ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತದಿಂದ ಪಾಸ್‌ ಆಗಿದೆ.ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಕಾಯಿದೆಯಾಗಿ ಜಾರಿಗೆ ಬರಲಿದೆ. ವಕ್ಫ್ ಮಸೂದೆ ಬಗ್ಗೆ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ Read More »

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ

ನವದೆಹಲಿ: ಕೆಲ ದಿನಗಳಿಂದ ಭಾರಿ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ದರ ಇಂದು ದಿಢೀರ್‌ ಇಳಿಕೆಯಾಗಿದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆ 1,740 ರೂ. ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 1,600 ರೂ. ಕಡಿಮೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ 91,640 ರೂ. ಆಗಿದ್ದರೆ, 22 ಕ್ಯಾರಟ್ ಚಿನ್ನದ ಬೆಲೆ 84,000 ರೂ.ಗೆ ಇಳಿಕೆಯಾಗಿದೆ. ಗುರುವಾರ 10 ಗ್ರಾಂ 24 ಕ್ಯಾರೆಟ್ ಬೆಲೆ 93,380 ರೂ. ಆಗಿದ್ದರೆ,

ಚಿನ್ನದ ಬೆಲೆ ದಿಢೀರ್‌ ಇಳಿಕೆ : ಒಂದೇ ದಿನದಲ್ಲಿ 1,600 ರೂ. ಕಡಿಮೆ Read More »

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು

ಸ್ವಚ್ಛಗೊಳಿಸಲು ಇಳಿದವರು ವಿಷಾನಿಲ ಸೇವಿಸಿ ಮೃತ್ಯು ಹೊಸದಿಲ್ಲಿ: ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವಿಗೀಡಾದ ದಾರುಣ ಘಟನೆ ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಸಂಭವಿಸಿದೆ. ಛಾಯ್‌ಗಾಂವ್‌ ಮಖಾನ ಎಂಬಲ್ಲಿ ಊರಿನ ಉತ್ಸವದ ವಿಗ್ರಹ ವಿಸರ್ಜನೆಗೆ ಮುಂಚಿತವಾಗಿ ಬಾವಿಯ ನೀರನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದ್ದಾಗ ಬಾವಿಯಲ್ಲಿದ್ದವರು ವಿಷಾನಿಲದಿಂದಾಗಿ ಉಸಿರುಕಟ್ಟಿ ಸಾವಿಗೀಡಾಗಿದ್ದಾರೆ. ಮೊದಲು ಓರ್ವ ಕಾರ್ಮಿಕ ಬಾವಿಗಿಳಿದಿದ್ದು, ಅತ ಉಸಿರುಕಟ್ಟಿ ಒದ್ದಾಡುವುದನ್ನು ನೋಡಿ ಉಳಿದವರು ಅವನನ್ನು ರಕ್ಷಿಸಲು ಇಳಿದಿದ್ದರು. ಆದರೆ ಎಲ್ಲರೂ ಉಸಿರುಕಟ್ಟಿ ಮೇಲೆ ಬರಲಾಗದೆ ಸಾವಿಗೀಡಾಗಿದ್ದಾರೆ. ಈ ಬಾವಿ

ಬಾವಿಯೊಳಗೆ ಉಸಿರುಕಟ್ಟಿ 8 ಮಂದಿ ಸಾವು Read More »

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ

ರಾಷ್ಟ್ರಪ್ರೇಮದ ಚಿತ್ರಗಳಿಂದ ಪ್ರಸಿದ್ಧರಾಗಿದ್ದ ಮನೋಜ್‌ ಕುಮಾರ್‌ ಮುಂಬಯಿ: ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ ಇಂದು ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಾ ಇದ್ದರು. ಅವರು ರಾಷ್ಟ್ರಪ್ರೇಮದ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. ಈ ಕಾರಣಕ್ಕೆ ಅವರಿಗೆ ‘ಭಾರತ್ ಕುಮಾರ್’ ಎಂಬ ಹೆಸರು ಇತ್ತು.ಮನೋಜ್ ಕುಮಾರ್ ಅವರನ್ನು ಕೆಲ ವಾರಗಳ ಹಿಂದೆ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ

ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಮನೋಜ್‌ ಕುಮಾರ್‌ ನಿಧನ Read More »

error: Content is protected !!
Scroll to Top