ರಾಜಕೀಯ

ಬುಧವಾರ ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಎಂಟರಷ್ಟು ಸಚಿವರು ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು : ಡಿ.ಕೆ.ಶಿವಕುಮಾರ್‌ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆಗೆ ಸುಮಾರು ಎಂಟರಷ್ಟು ಸಚಿವರು ಪ್ರಮಾಣವಚನ ಸ್ವೀಕಾರಿಸಲಿದ್ದಾರೆ. ಜೋತಿಷಿ ದ್ವಾರಕನಾಥ್‌ ಅವರು ಡಿಕೆಶಿಗೆ ಅಧಿಕಾರ ಗ್ರಹಣದ ಮೂಹೂರ್ತ ನೀಡಿದ್ದಾರೆ ಎನ್ನಲಾಗಿದೆ. ಅವರ ಸಲಹೆಯಂತೆ ಡಿಕೆಶಿ ಬುಧವಾರ ಗೋಧೂಳಿ ಮುಹೂರ್ತವನ್ನು ಆರಿಸಿಕೊಂಡಿದ್ದಾರೆ. […]

ಬುಧವಾರ ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ Read More »

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? : ಸಿದ್ದರಾಮಯ್ಯಗೆ ಸುರೇಶ್‌ ಕುಮಾರ್‌ ಪ್ರಶ್ನೆ

ಎರಡು ತಿಂಗಳ ಗೃಹಲಕ್ಷ್ಮಿ ಹಣ ಪಾವತಿಯಾಗದಿರುವ ಬಗ್ಗೆ ಸ್ಪಷ್ಟನೆ ಕೊಡಲು ಆಗ್ರಹ ಬೆಂಗಳೂರು: 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಬಾಕಿ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಬಹಿರಂಗ ಪತ್ರ ಬರೆದಿದ್ದಾರೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿಬಾಕಿಗೆ ಸ್ಪಷ್ಟನೆ ಹಾಗೂ ಬಾಕಿ ಪಾವತಿ ಮಾಡುವಂತೆ ಒತ್ತಾಯಿಸಿ ಸಿದ್ದಾರೆ. ತಮ್ಮ ಪಕ್ಷದ ಸೂಚನೆಯಂತೆ ತಾವು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೀರಿ. ಇಂದಿನ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? : ಸಿದ್ದರಾಮಯ್ಯಗೆ ಸುರೇಶ್‌ ಕುಮಾರ್‌ ಪ್ರಶ್ನೆ Read More »

ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್‌ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ

ವಿಧಾನಸೌಧದ ಮೆಟ್ಟಿಲುಗಳ ಪ್ರಮಾಣವಚನ ಸ್ವೀಕರ ಸಾಧ್ಯತೆ ಬೆಂಗಳೂರು : ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರೇ ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ ತೀರ್ಮಾನವನ್ನು ಪ್ರಕಟಿಸಲಿದೆ. ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ನೂತನ

ಇಂದು ಸಂಜೆ ಕಾಂಗ್ರೆಸಿನ ಮಹತ್ವದ ಸಿಎಲ್‌ಪಿ ಸಭೆ : ಮುಖ್ಯಮಂತ್ರಿಯ ಅಧಿಕೃತ ಘೋಷಣೆ Read More »

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಕೆಲವೇ ಕ್ಷಣಗಳಲ್ಲಿ ಲೋಕಭವನದಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅಧಿಕಾರ ಹಂಚಿಕೆ ಸೂತ್ರದನ್ವಯ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಗುರುವಾರ ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಅವರ ಕಾರ್ಯದರ್ಶಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ನೀಡಿದ್ದರು. ಬುಧವಾರ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು Read More »

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪಟ್ಟವೇರಲು ಸಿದ್ಧತೆ ಬೆಂಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ, ಡಿಸಿಎಂ ಡಿ.ಕೆ ಶಿವಕುಮಾರ್ ಪಾಳಯದಲ್ಲಿ ಚಟುವಟಿಕೆ ಗರಿಗೆದರಿದ್ದು, ಬಹುತೇಕ ಸೋಮವಾರ ಅವರಿಗೆ ಪಟ್ಟಾಭಿಷೇಕಬಾಗಲಿದೆ ಎಂದು ಮೂಲವೊಂದು ತಿಳಿಸಿದೆ. ರಾಜ್ಯಪಾಲರು ರಾಜೀನಾಮೆ ಅಂಗೀಕರಿಸುತ್ತಿದ್ದಂತೆ, ಹೊಸ ಸರ್ಕಾರ ರಚನೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಶುಕ್ರವಾರ ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿದ್ದು, ರಾಜ್ಯಪಾಲರು ಕಾರ್ಯದ ಒತ್ತಡದಲ್ಲಿರುತ್ತಾರೆ. ಶುಕ್ರವಾರ ಸಂಜೆಯೊಳಗೆ ರಾಜೀನಾಮೆ ಅಂಗೀಕಾರವಾಗಬೇಕಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಬಹುತೇಕ

ಸೋಮವಾರ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸಾಧ್ಯತೆ? Read More »

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ

ಸಂಪುಟ ಸಹೋದ್ಯೋಗಿಗಳ ಜೊತೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಭಾವುಕರಾಗಿ ನಿರ್ಧಾರ ಪ್ರಕಟಿಸಿದ ಸಿಎಂ ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ. ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು

ಇಂದು ಮದ್ಯಾಹ್ನ 3 ಗಂಟೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ Read More »

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಸಚಿವ ಸಂಪುಟಕ್ಕೆ ಡಾ.ಯತೀಂದ್ರ ಸೇರ್ಪಡೆಗೆ ಒಪ್ಪದ ಸಿಎಂ ನವದೆಹಲಿ: ಸಿದ್ದರಾಮಯ್ಯನವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದು ಇದಕ್ಕೆ ಪ್ರಾಯಶ್ಚಿತ್ತವಾಗಿ ಅವರ ಪುತ್ರ ಎಂಎಲ್‌ಸಿ ಡಾ.ಯತೀಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ತೀರಾ ಒತ್ತಡ ಬಿದ್ದರೆ ಅವರನ್ನು ಉಪಮುಖ್ಯಮಂತ್ರಿಯೂ ಮಾಡಿಬಿಡುವುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ಹಾಕಿತ್ತು. ಆದರೆ ಸಿದ್ದರಾಮಯ್ಯ ಹೈಕಮಾಂಡ್‌ನ ಈ ಪ್ರಸ್ತಾಪವನ್ನು ಸಾರಾಸಗಟು ತಿರಸ್ಕರಿಸಿದ್ದಾರೆ. ಹೀಗಾಗಿ ಹೈಕಮಾಂಡ್‌ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದೆ ಎಂದು ಮೂಲವೊಂದು ತಿಳಿಸಿದೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ Read More »

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ ಗವರ್ನರ್‌ ನಡೆ ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ತಡರಾತ್ರಿ 11.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ Read More »

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ

ಕ್ಷಣಕ್ಷಣಕ್ಕೆ ಕುತೂಹಲ ಕೆರಳಿಸುತ್ತಿರುವ ರಾಜಕೀಯ ವಿದ್ಯಮಾನ ಬೆಂಗಳೂರು: ದೆಹಲಿಯಿಂದ ವಿಶೇಷ ವಿಮಾನದಲ್ಲಿ ನಿನ್ನೆ ರಾತ್ರಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಶಾಸಕ ಪೊನ್ನಣ್ಣ ಅವರು ಸಿಎಂ ನಿವಾಸಕ್ಕೆ ಆಗಮಿಸಿದರು. ಸಿಎಂ ಮನೆಗೆ ಬಂದ ನಂತರ ಗೃಹ

ಮಧ್ಯರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರ ಸಭೆ Read More »

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು

ಡಿಟೆಕ್ಟ್‌-ಡಿಲೀಟ್‌-ಡಿಪೊರ್ಟ್‌ ನೀತಿ ಘೋಷಣೆಯಾದ ಬಳಿಕ ತಾಯ್ನಾಡಿಗೆ ಧಾವಿಸುತ್ತಿರುವ ಅಕ್ರಮ ವಲಸಿಗರು ಕೋಲ್ಕತ್ತಾ: ಬಿಜೆಪಿ ಸರ್ಕಾರದ ನೂತನ “ಪತ್ತೆ ಹಚ್ಚಿ, ಪಟ್ಟಿಯಿಂದ ಹೆಸರು ಅಳಿಸಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಹಲವು ಗಡಿ ಪ್ರದೇಶಗಳಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಎನ್ನಲಾದ ಅಪಾರ ಸಂಖ್ಯೆಯ ಜನರು ಲಗ್ಗೆ ಇಡುತ್ತಿದ್ದಾರೆ. ಉತ್ತರ 24 ಪರಗಣ ಮತ್ತು ಮಾಲ್ಡಾ ಜಿಲ್ಲೆಗಲ್ಲಿ ಕಂಡುಬರುತ್ತಿರುವ ದೃಶ್ಯಗಳು, ನುಸುಳುಕೋರ ವಿರೋಧಿ ಅಭಿಯಾನ ಕೇವಲ ರಾಜಕೀಯ ಭಾಷಣಕ್ಕೆ ಸೀಮಿತವಾಗದೆ

ಪಶ್ಚಿಮ ಬಂಗಾಳದ ಗಡಿಭಾಗಗಳಲ್ಲಿ ಸಾಲುಗಟ್ಟಿ ನಿಂತ ಬಾಂಗ್ಲಾದೇಶಿ ಅಕ್ರಮ ವಲಸಿಗರು Read More »

error: Content is protected !!
Scroll to Top