ರಾಜಕೀಯ

ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಎರಡು ಎಫ್‌ಐಆರ್‌

ಬಿಜೆಪಿ-ಜೆಡಿಎಸ್‌ ಕೈಗೆ ಕಾಂಗ್ರೆಸ್‌ ಟೀಕಿಸಲು ಸಿಕ್ಕಿದ ಹೊಸ ಅಸ್ತ್ರ ಚಿಕ್ಕಬಳ್ಳಾಪುರ : ಶಿಡ್ಲಘಟ್ಟದ ಪೌರಾಯುಕ್ತೆ ಅಮೃತ ಗೌಡ ಹಾಗೂ ಜೆಡಿಎಸ್ ಶಾಸಕರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಈಗ ಎರಡೆರಡು ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದು, ಬಂಧನದ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ದಾರೆ. ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತದಲ್ಲಿ ಹಸ್ತಕ್ಷೇಪದ ಆರೋಪವೂ ಅವರ ವಿರುದ್ಧ ಕೇಳಿಬಂದಿದೆ. ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್‌ ಮೇಲೆ ದಾಳಿ ಮಾಡಲು ಬಿಜೆಪಿಗೆ ಮತ್ತೊಂದು […]

ಪೌರಾಯುಕ್ತೆಯನ್ನು ನಿಂದಿಸಿದ ಕಾಂಗ್ರೆಸ್‌ ಮುಖಂಡನ ವಿರುದ್ಧ ಎರಡು ಎಫ್‌ಐಆರ್‌ Read More »

ಕೊನೆಗೂ ಫಲಿಸುತ್ತಾ ಡಿಕೆಶಿ ಪ್ರಾರ್ಥನೆ?

ಟ್ವೀಟ್‌ನಲ್ಲಿ ಕೊಟ್ಟರು ಡಿ.ಕೆ.ಶಿವಕುಮಾರ್‌ ದೊಡ್ಡದೊಂದು ಸುಳಿವು ಬೆಂಗಳೂರು : ಸಂಕ್ರಾಂತಿ ದಿನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪಾಲಿಗೆ ಶುಭದಿನವಾಗುತ್ತಾ? ಹೀಗೊಂದು ಕುತೂಹಲ ರಾಜ್ಯದ ರಾಜಕೀಯ ವಲಯದಲ್ಲಿ ಹುಟ್ಟಿಕೊಂಡಿದೆ. ಇದಕ್ಕೆ ಕಾರಣವಾಗಿರುವುದು ಡಿಕೆಶಿ ಇಂದು ಮಾಡಿರುವ ಒಂದು ಟ್ವೀಟ್‌. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ಡಿ.ಕೆ ಶಿವಕುಮಾರ್ “ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿದ ಬಳಿಕ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮತ್ತೊಮ್ಮೆ ಊಹಾಪೋಹಗಳು ದಟ್ಟವಾಗಿದ್ದು,

ಕೊನೆಗೂ ಫಲಿಸುತ್ತಾ ಡಿಕೆಶಿ ಪ್ರಾರ್ಥನೆ? Read More »

ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ

ಸದ್ದಿಲ್ಲದೆ ಕ್ರೀಡಾಂಗಣದ ಹೆಸರು ಬದಲಾವಣೆ ; ಕಾಂಗ್ರೆಸ್‌ಗೆ ತೀವ್ರ ಮುಜುಗರ ಬೆಂಗಳೂರು: ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಕಾಂಗ್ರೆಸ್ ನಾಯಕ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೆಸಟ್ಟಿರುವುದು ವಿವಾದದ ಸ್ವರೂಪ ಪಡೆದುಕೊಂಡಿದೆ. ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿ ಹೆಸರು ಕೈ ಬಿಟ್ಟು ರಾಮನ ಹೆಸರಿಟ್ಟಿದ್ದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವಾಗಲೇ ಕರ್ನಾಟಕದಲ್ಲಿ ಸದ್ದಿಲ್ಲದೆ ಗಾಂಧೀಜಿ ಹೆಸರು ಬದಲಾಯಿಸುರುವುದು ಕಾಂಗ್ರೆಸ್‌ ಪಾಲಿಗೆ ತೀವ್ರ ಮುಜುಗರವುಂಟು ಮಾಡಿದೆ. ಈ ಮೂಲಕ ವಿರೋಧ ಪಕ್ಷ ಬಿಜೆಪಿ ಕೈಗೆ

ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿ.ಪರಮೇಶ್ವರ ಹೆಸರು : ಬಿಜೆಪಿ ವಿರೋಧ Read More »

ನಿತಿನ್‌ ನಬಿನ್‌ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ : ಜ.20ರಂದು ಅಧಿಕಾರ ಸ್ವೀಕಾರ

ಜೆ.ಪಿ.ನಡ್ಡಾ ಉತ್ತರಾಧಿಕಾರಿಯಾಗಿ ಪಕ್ಷವನ್ನು ಮುನ್ನಡೆಸಲಿರುವ ಯುವ ನಾಯಕ ನವದೆಹಲಿ: ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯಲ್ಲಿ ಬಿಜೆಪಿ ಎಂದಿನಂತೆ ಅಚ್ಚರಿಯೊಂದನ್ನು ನೀಡಿದೆ. ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 20ರಂದು ಪಕ್ಷದ ಪೂರ್ಣ ಪ್ರಮಾಣದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಿಬಿನ್‌ ನಿತಿನ್‌ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾದದ್ದೇ ಅಚ್ಚರಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳು, ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯಾಧ್ಯಕ್ಷರು ಮತ್ತು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ನಿತಿನ್‌ ನಬಿನ್‌ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ : ಜ.20ರಂದು ಅಧಿಕಾರ ಸ್ವೀಕಾರ Read More »

ಮಾಜಿ ಸಚಿವ ಈಶ್ವರಪ್ಪನವರಿಗೆ ವಿದೇಶದಿಂದ ಬೆದರಿಕೆ ಕರೆ

ಭದ್ರತೆ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಕಳವಳ ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಮತ್ತೊಮ್ಮೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಜ.7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಬಂದ ಬೆದರಿಕೆ ಕರೆ ಅವರ ಭದ್ರತೆ ಕುರಿತಾಗಿ ಮತ್ತೊಮ್ಮೆ ಆತಂಕ ಹುಟ್ಟುಹಾಕಿದೆ. ಈಶ್ವರಪ್ಪ ಅವರಿಗೆ ಈ ಹಿಂದೆಯೂ ಬೆದರಿಕೆ ಕರೆಗಳು ಬಂದ ಹಿನ್ನೆಲೆ ಪೊಲೀಸ್ ಭದ್ರತೆ ಹಾಗೂ

ಮಾಜಿ ಸಚಿವ ಈಶ್ವರಪ್ಪನವರಿಗೆ ವಿದೇಶದಿಂದ ಬೆದರಿಕೆ ಕರೆ Read More »

ಪ್ರಸಾರವೇ ಇಲ್ಲದ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಕೋಟಿ ಕೋಟಿ ಜಾಹೀರಾತು : ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದ ಆರ್‌.ಅಶೋಕ್‌ ಬೆಂಗಳೂರು: ಪ್ರಸಾರವೇ ಇಲ್ಲದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಜಾಹೀರಾತು ಕೊಟ್ಟಿರುವ ವಿಚಾರ ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್‌ ಮೇಲೆ ಮುಗಿಬಿದ್ದಿರುವ ಬಿಜೆಪಿ ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದೆ. ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಖಜಾನೆ ಮಾಡುವುದಕ್ಕೆ ಸರ್ಕಾರ ಹೊರಟಿದೆ ಎಂದು ವಿಪಕ್ಷ ‌ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸರ್ಕಾರದಿಂದ ಹೆಚ್ಚು

ಪ್ರಸಾರವೇ ಇಲ್ಲದ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಗೆ ಕೋಟಿ ಕೋಟಿ ಜಾಹೀರಾತು : ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ Read More »

ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆಗೆ ಸಿದ್ದರಾಮಯ್ಯ ವಿರೋಧ

ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಹಿಂದೆಗೆದುಕೊಳ್ಳಲು ಒತ್ತಾಯ ಬೆಂಗಳೂರು: ಕೇರಳ ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳಂ ಭಾಷಾ ಮಸೂದೆ 2025’ರಿಂದ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಭಾಷೆಯನ್ನು ಹೇರಿದ್ದೇ ಆದಲ್ಲಿ ನಮ್ಮ ಸರ್ಕಾರ ಅವರ ಜತೆಯಲ್ಲಿ ನಿಂತು ಸರ್ವ ರೀತಿಯ ಬೆಂಬಲ ನೀಡಲಿದೆ ಎಂದಿದ್ದಾರೆ.

ಕನ್ನಡಿಗರ ಮೇಲೆ ಮಲಯಾಳಂ ಹೇರಿಕೆಗೆ ಸಿದ್ದರಾಮಯ್ಯ ವಿರೋಧ Read More »

ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್‌

ಎಸ್‌ಐಆರ್‌ ವೇಳೆ 2.89 ಕೋಟಿ ಹೆಚ್ಚುವರಿ ಮತದಾರರು ಪತ್ತೆ ಲಖನೌ: ಚುನಾವಣಾ ಆಯೋಗ ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 2.89 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್‌ ಮಾಡಿದೆ. ರಾಜ್ಯದಲ್ಲಿ ಒಟ್ಟು 2.89 ಕೋಟಿ ಮತದಾರರ ಹೆಸರಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಅವರ ಪೈಕಿ 46 ಲಕ್ಷ ಮತದಾರರು ಮೃತಪಟ್ಟಿದ್ದಾರೆ. ದೇಶದ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ಪಟ್ಟಿ ಪರಿಷ್ಕರಣೆಯು ಮೂರು ಬಾರಿ

ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರ ಹೆಸರು ಡಿಲೀಟ್‌ Read More »

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ

ಶವ ಹೂಳುವ ಸಂಪ್ರದಾಯದವರು ದಹನ ಮಾಡಿದ್ದು ಏಕೆ ಎಂದು ಶ್ರೀರಾಮುಲು ಪ್ರಶ್ನೆ ಬಳ್ಳಾರಿ: ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯ ಸಂಸ್ಕಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ರಾಜಶೇಖರ ಮೃತದೇಹ ಸುಟ್ಟು ಹಾಕಿದ್ದಾರೆ ಎಂದಿರುವ ಶ್ರೀರಾಮುಲು ಹೆಚ್ಚುವರಿ ಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ರೆಡ್ಡಿ ಸಮುದಾಯದಲ್ಲಿ ಮೃತದೇಹ ಸುಡುವುದಿಲ್ಲ ಬದಲಾಗಿ ಹೂಳುವ ಸಂಪ್ರದಾಯವಿದೆ. ಆದರೆ ರಾಜಶೇಖರ್‌ ರೆಡ್ಡಿ ಶವವನ್ನು ಸುಟ್ಟಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ಹೇಳಿದ್ದಾರೆ.

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ Read More »

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ

ಉಳಿದವರೆಲ್ಲ ಹೊರಗಿನವರು ಎಂದು ವರದಿ ಸಲ್ಲಿಸಿದ ಅಧಿಕಾರಿಗಳು ಬೆಂಗಳೂರು: ನೆಲಸಮ ಕಾರ್ಯಾಚರಣೆಯಿಂದ ದೇಶಾದ್ಯಂತ ಸುದ್ದಿಯಾಗಿರುವ ವಿವಾದಗ್ರಸ್ತ ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಹೊರಗಿನಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ Read More »

error: Content is protected !!
Scroll to Top