ರಾಜಕೀಯ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ […]

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಗಾಂಧೀನಗರ : ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಮತ ಚಲಾಯಿಸಿದರು. ಮತದಾನ ಮಾಡಿ ಬೆರಳು ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ

ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ Read More »

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ  ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ  ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ,

ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ Read More »

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ

ಆಯೋಧ್ಯೆ: ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ನಾನು ರಾಮಮಂದಿರಕ್ಕೆ ಭೇಟಿ ನೀಡಿದ ಬಳಿಕ ಪಕ್ಷದಲ್ಲೇ ಟೀಕೆ ಮಾಡಲಾಗುತ್ತಿದೆ. ಜತೆಗೆ ಪಕ್ಷದಲ್ಲಿ ಪುರುಷರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಣ್ಣುಮಕ್ಕಳಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂಬುದಾಗಿ ರಾಧಿಕಾ ಖೇರ ತಿಳಿಸಿದ್ದಾರೆ. ಪ್ರತಿಯೊಬ್ಬ ಹಿಂದೂವಿಗೂ ರಾಮಮಂದಿರವು ಪವಿತ್ರ ಹಾಗೂ ಶ್ರದ್ಧಾ ಕೇಂದ್ರವಾಗಿದೆ. ಹಾಗಾಗಿ ನಾನು ರಾಮಮಂದಿರಕ್ಕೆ ಭೇಟಿ ನೀಡಿದೆ. ನಾನು ಕಾಂಗ್ರೆಸ್‌ಗೆ 22

ಛತ್ತೀಸ್‌ಗಢ ಕಾಂಗ್ರೆಸ್ ನಾಯಕಿ ರಾಧಿಕಾ ಖೇರ ‘ಕೈ’ ಗೆ ರಾಜೀನಾಮೆ Read More »

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶ : ರಾಯಬರೇಲಿ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ ಬೆನ್ನಲ್ಲೇ ರಾಹುಲ್‌ ವಿರುದ್ಧ ಪ್ರತಿಭಟನೆ ಕೂಡ ನಡೆದಿದೆ. ಶುಕ್ರವಾರ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಹಾಗೂ ಪಕ್ಷದ ಮುಖಂಡರ ಜೊತೆ ತೆರಳಿ ರಾಯಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅಮೇಥಿ ಬಿಟ್ಟು ರಾಯಬರೇಲಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿ, ಅಮಿತ್‌ ಶಾ ಸೇರಿ ಅನೇಕ ಬಿಜೆಪಿ ನಾಯಕರು ಟೀಕಿಸಿದ್ದು, ಅಮೇಥಿಯಿಂದ ಓಡಿದ ರಾಹುಲ್‌ ಈಗ ರಾಯಬರೇಲಿ ತಲುಪಿದ್ದಾರೆ ಎಂದು ಅಣಕಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬೆನ್ನಲ್ಲೇ ರಾಹುಲ್ ವಿರುದ್ಧ ಪ್ರತಿಭಟನೆ Read More »

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ

ಗುವಾಹಟಿ: ಕರ್ನಾಟಕದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್

ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ: ಅಮಿತ್ ಶಾ | ಎನ್ ಡಿ ಎ ಸರಕಾರ ನಾರಿಶಕ್ತಿಗೆ ಉನ್ನತ ಗೌರವ ನೀಡುತ್ತದೆ Read More »

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ

ಸುಳ್ಯ : ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಸುಮಾರು ಶೇ.64.46 ಮತದಾನವಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 233 ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ.  ಒಟ್ಟು 2 ಲಕ್ಷದ 8 ಸಾವಿರದ 853 ಮಂದಿ ಮತದಾರರಿದ್ದಾರೆ.

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ Read More »

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ನಡೆದಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ. ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ Read More »

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಮೊದಲ 4 ಗಂಟೆಯಲ್ಲಿ ಶೇ.30.96 ಮತದಾನವಾಗಿದೆ. 7 ಗಂಟೆಗೆ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.30.96 ಮತದಾರರು ಮತ ಚಲಾಯಿಸಿದ್ದಾರೆ. ಸುಳ್ಯದಲ್ಲಿ ಅತೀ ಹೆಚ್ಚು ಅಂದರೆ ಶೇ. 35.05 ಮತದಾನ ಆಗಿದೆ. ಬೆಳ್ತಂಗಡಿ 32.39, ಮೂಡಬಿದ್ರೆ 27.46, ಮಂಗಳೂರು ಉತ್ತರ 30.39, ಮಂಗಳೂರು ದಕ್ಷಿಣ 26.54, ಮಂಗಳೂರು 31.63, ಬಂಟ್ವಾಳ 32.28, ಪುತ್ತೂರು 32.98 ಶೇಖಡಾ ಮತದಾನ ಆಗಿದೆ. ಸುಳ್ಯದಲ್ಲಿ 73,209 ಮಂದಿ ಮತ ಚಲಾಯಿಸಿ ಶೆ.35.05 ಮತದಾನ ಆಗಿದೆ.

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ Read More »

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಮತದಾನ ಮಾಡಿದರು. ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ Read More »

error: Content is protected !!
Scroll to Top