ರಾಜಕೀಯ

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ

ಪುತ್ತೂರು :ಪುತ್ತೂರಿನಲ್ಲಿ ನಡೆಯಬೇಕಿದ್ದ ಸಿಎಂ ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಚುನಾವಣೆ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.16 ಮಂಗಳವಾರ ಚುನಾವಣಾ ಪ್ರಚಾರ ಸಭೆ ನಿಗದಿಪಡಿಸಲಾಗಿತ್ತು. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್ ಚುನಾವಣೆ ಪ್ರಚಾರ ಮುಂದೂಡಿಕೆ Read More »

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ.

ಪುತ್ತೂರು : ಚುನಾವಣಾ ಪ್ರಚಾರ ಸಭೆಗೆ ಭಾಗವಹಿಸಲು ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಏ. 16 ರಂದು ಪುತ್ತೂರಿಗೆ ಆಗಮಿಸಲಿದ್ದು, ಕಿಲ್ಲೆ ಮೈದಾನದಲ್ಲಿ ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು. ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು, ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ

ಏ. 16: ಪುತ್ತೂರಿಗೆ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಭೇಟಿ. Read More »

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್

ಮಂಗಳೂರು : ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು.ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್ ನಿರ್ದೇಶನ ನೀಡಿದರು. ಅವರು ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ  ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು.ಚುನಾವಣಾ ಅವಧಿಯಲ್ಲಿ

ಚುನಾವಣೆ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು : ಬಿ.ಮುರಳಿ ಕುಮಾರ್ Read More »

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ

ಬೆಳ್ತಂಗಡಿ : ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ. ಹಾಗಾಗಿ ಮುವತ್ತ್ಮೂರು ವರ್ಷಗಳ ಸರಪಳಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುರಿಯಲಿದೆ. ಕಾಂಗ್ರೆಸ್ ಜಿಲ್ಲೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ  ಎಂದು  ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಹಾಗೂ ಗ್ರಾಮೀಣ ಘಟಕದ ಮುಖಂಡರು, ಕಾರ್ಯಕರ್ತರ ಸಭೆ ಬೆಳ್ತಂಗಡಿ ಕಾಂಗ್ರೆಸ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಹಿಂದುಳಿದ ವರ್ಗದ ಸಮುದಾಯಗಳ ಸಭೆಯನ್ನು ಮಂಗಳೂರಿನಲ್ಲಿ ಕರೆದಿದ್ದೇವು. ಎಲ್ಲಾ

ನಾವು ಯಾರನ್ನೂ ದ್ವೇಷಿಸಿಲ್ಲ. ಪ್ರೀತಿಯಿಂದಲೇ ಜನರ ಬಳಿಗೆ ಹೋಗಿದ್ದೇವೆ : ಪದ್ಮರಾಜ್ ಆರ್. ಪೂಜಾರಿ Read More »

ಏ.14 ರ ಬಿಜೆಪಿ ಸಮಾವೇಶ ರದ್ದು | ಪ್ರಧಾನಿ ಮೋದಿಯಿಂದ ರೋಡ್ ಶೋ ಮಾತ್ರ

ಮಂಗಳೂರು: ಏ.14 ರಂದು ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಏ. 14ರಂದು ಸಂಜೆ 4 ಗಂಟೆಗೆ ಏರ್ಪಡಿಸಲಾದ ಸಮಾವೇಶ ದಿಢೀರ್ ರದ್ದಾಗಿದೆ. ಕೇವಲ ರೋಡ್ ಶೋ ಮಾತ್ರ ನಡೆಯಲಿದೆ. ಈ ಮೊದಲು ಏ.14 ರಂದು ಸಮಾವೇಶ ಏರ್ಪಡಿಸಲಾಗಿತ್ತು. ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ತಿಳಿಸಲಾಗಿತ್ತು. ಕೊನೆ ಕ್ಷಣದಲ್ಲಿ ಸಮಾವೇಶ ರದ್ದಾಗಿದೆ ಎಂಬ ಮಾಹಿತಿ ಜಿಲ್ಲಾ ಬಿಜೆಪಿಗೆ ಲಭ್ಯವಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಿಟಿಯಲ್ಲಿ ರೋಡ್ ಶೋ ಮಾತ್ರ ನಡೆಯಲಿದೆ ಎನ್ನಲಾಗಿದೆ.

ಏ.14 ರ ಬಿಜೆಪಿ ಸಮಾವೇಶ ರದ್ದು | ಪ್ರಧಾನಿ ಮೋದಿಯಿಂದ ರೋಡ್ ಶೋ ಮಾತ್ರ Read More »

ಪ್ರಧಾನಿ ನರೇಂದ್ರ ಮೋದಿಯವರದ್ದು ಮಹಿಳೆಯರಿಗೆ ಗೌರವ ನೀಡುವ ಮನಸ್ಥಿತಿ | ನಾರಿಶಕ್ತಿ ಸಮಾವೇಶದಲ್ಲಿ ಮಾಳವಿಕ ಅವಿನಾಶ್

ಪುತ್ತೂರು: ಮಹಿಳೆಯರಿಗೆ ಗೌರವ, ಸ್ವಾವಲಂಬಿ ಬದುಕು ನೀಡಿದ ಪ್ರಧಾನಿ ಇದ್ದರೆ ಅದು ನರೇಂದ್ರ ಮೋದಿ. ತನ್ನ ಸ್ವಂತ ಆಚರಣೆಗಿಂತ ದೇಶದ ಆಚರಣೆ ಮುಖ್ಯ ಎಂದು ತಿಳಿದಿದ್ದರೆ ಅದು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರು. ಹೀಗೆಂದು ಹೇಳಿದರು ರಾಜ್ಯ ಬಿಜೆಪಿ ಉಪಾಧ್ಯಕ್ಷೆ, ಚಿತ್ರನಟಿ ಮಾಳವಿಕ ಅವಿನಾಶ್. ಪುತ್ತೂರಿನ ಜೈನ ಭವನದಲ್ಲಿ ಮಂಗಳವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ನಾರಿಶಕ್ತಿ ಸಮಾವೇಶವನ್ನು ಭಾರತದ ಮಾತೆ ಭಾವಚಿತ್ರದ ಬಳಿ ದೀಪ ಬೆಳಗಿಸಿ, ಬಳಿಕ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಹಿರಿಯರಿಗೆ,

ಪ್ರಧಾನಿ ನರೇಂದ್ರ ಮೋದಿಯವರದ್ದು ಮಹಿಳೆಯರಿಗೆ ಗೌರವ ನೀಡುವ ಮನಸ್ಥಿತಿ | ನಾರಿಶಕ್ತಿ ಸಮಾವೇಶದಲ್ಲಿ ಮಾಳವಿಕ ಅವಿನಾಶ್ Read More »

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿಗೆ ಹಾರ ಹಾಕಿದ ಘಟನೆಯಲ್ಲಿ ಪಿಸ್ತೂಲು ಹಿಡಿದುಕೊಂಡ ಸೆಕ್ಯೂರಿಟಿ ವೈಫಲ್ಯ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥನೆ ಮಾಡಿಕೊಂಡಿದ್ದಾರೆ. ನನ್ನ ಜೊತೆನೂ ಗನ್ ಮ್ಯಾನ್‌ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿದ್ದಾರೆ. ರಿಯಾಜ್ ಬಳಿ

ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿದ್ದಾರೆ: ಡಿ.ಕೆ ಶಿವಕುಮಾರ್ ಹೇಳಿಕೆ Read More »

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಮಂಗಳೂರು :ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ

ಏಪ್ರಿಲ್‍14: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ Read More »

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ನಿನ್ನೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ, ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಕಣದಲ್ಲಿ ಕಾಂಗ್ರೆಸ್‌ನ ಪದ್ಮರಾಜ್ ಆ‌ರ್., ಬಿಜೆಪಿಯ ಬ್ರಿಜೇಶ್ ಚೌಟ, ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಅಲಂಗಾರ್,

ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು ಕಣದಲ್ಲಿ Read More »

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ

ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್‍ ವಲಯದಲ್ಲಿ ಆತಂಕ ಮೂಡಿದೆ. ವೀರಪ್ಪ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯಿಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯರಿಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯಿಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್‍ ವಲಯದಲ್ಲಿ ಆತಂಕ Read More »

error: Content is protected !!
Scroll to Top