ರಾಜಕೀಯ

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ

ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಗನ್ ಸಹಿತ ವ್ಯಕ್ತಿಯೊಬ್ಬ ಬಂದು ಸಿಎಂಗೆ ಹಾರ ಹಾಕಿದ ಘಟನೆ ನಡೆದಿದೆ. ರಿಯಾಜ್ ಎಂಬಾತ ಸೊಂಟದಲ್ಲಿ ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡುತ್ತಿದ್ದರು. ಈ ವೇಳೆ […]

ಗನ್ ಸಹಿತ ವ್ಯಕ್ತಿಯಿಂದ ಸಿಎಂ ಸಿದ್ಧರಾಮಯ್ಯಗೆ ಹಾರ | ಪರಿಶೀಲನೆ ಮಾಡದ ಪೊಲೀಸರು | ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸ Read More »

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹೇಳಿದರು. ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ

ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಸವಣೂರು : ಪಾಲ್ತಾಡಿ ಬಿಜೆಪಿ ವತಿಯಿಂದ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಪಾಲ್ತಾಡಿ ಬೂತ್ ಸಂಖ್ಯೆ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಅವರ ಮನೆಯಲ್ಲಿ ನಡೆಯಿತು. ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಅವರು ಮುಂಬರುವ ಲೋಕಸಭಾ ಚುನಾವಣೆ ಹಾಗೂ ನಾರಿ ಶಕ್ತಿ ಸಂಗಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬಾಳಪ್ಪ ಪೂಜಾರಿ ಬಂಬಿಲದೋಳ, ವಿಠಲ ಶೆಟ್ಟಿ ಬಂಬಿಲ, ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.ಬಂಬಿಲ,

ಮಂಜುನಾಥನಗರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಏ.14ರಂದು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಒಂದು ದಿನದಲ್ಲಿ ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಮಧ್ಯಾಹ್ನ 3 ಗಂಟೆಗೆ ಡಾ ಕೆ ಸುಧಾಕರ್ ಪರ ಕ್ಷೇತ್ರ ಚಿಕ್ಕಬಳ್ಳಾಪುರ ಆಯೋಜಿಸಲಾದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶ ಮುಗಿದ ನಂತರ ಮೋದಿ

ಏ.14 : ಪ್ರಧಾನಿ ಮೋದಿ ಕರ್ನಾಟಕಕ್ಕೆ | ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿರುವ ಮೋದಿ Read More »

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್

ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್‍ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್,

ಏ.9 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಹಿಳಾ ಸಮಾವೇಶ : ಸುಲೋಚನಾ ಜಿ.ಕೆ.ಭಟ್ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ದ. ಕನ್ನಡ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಬಿಜೆಪಿ ಪ್ರಭಾರಿ ಸುನೀಲ್ ಆಳ್ವಾ ಈ ಸಂದರ್ಭದಲ್ಲಿ ಮಾತಾನಾಡಿ, ಜನಸಂಘದ ಹಿರಿಯರ ತ್ಯಾಗ ಬಲಿದಾನ ಮತ್ತು 1980ರ ನಂತರ ಬಿಜೆಪಿಯ ಏಳುಬೀಳುಗಳ ಬಗ್ಗೆ ಮಾಹಿತಿ ನೀಡಿದರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಪ್ರಭಾರಿ ಸುಲೋಚನಾ ಜಿ. ಕೆ ಭಟ್, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಬಿಜೆಪಿ ಪ್ರಮುಖ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ

ಪುತ್ತೂರು: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಸಭೆ ಶುಕ್ರವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಪ್ರಾಮಾಣಿಕವಾಗಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಅಲ್ಲದೆ ಅಲ್ಪಸಂಖ್ಯಾತ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರರ ಮತವನ್ನು ಪಡೆದು ನಮ್ಮ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ಲಕ್ಷಾಂತರ ಮತಗಳ ಅಂತರದಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು ಸಭೆಯಲ್ಲಿ ಪುತ್ತೂರು ಮಾಜಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಭೆ Read More »

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್‍.ಯಡಿಯೂರಪ್ಪ ಅವರು ಕೇಸರಿ ಶಾಲು ಹಾಕಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಲತಾ ಅವರ ಜತೆಗೆ ಹಲವಾರು ಮುಖಂಡರು, ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿರೋಧ ಪಕ್ಷದ ನಾಯಕ ಆರ್‍.ಅಶೋಕ್‍, ರಾಜ್ಯ ಬಿಜೆಪಿ ಘಟಕದ

ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್ Read More »

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ

ಮಂಗಳೂರು: ಏ.26ರಂದು ನಡೆಯಲಿರುವ ದ.ಕ. ಲೋಕಸಭಾ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯಿಂದ ಒಟ್ಟು 11 ಅಭ್ಯರ್ಥಿಗಳಿಂದ 21 ನಾಮಪತ್ರ ಸಲ್ಲಿಕೆಯಾಗಿದೆ. ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ.ಬ್ರಿಜೇಶ್ ಚೌಟ(42), ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. (53),ಜನತಾ ಪಕ್ಷ ಹಾಗೂ ಜನತಾದಳ (ಯು) ಎರಡಕ್ಕೂ ಸುಪ್ರೀತ್ ಕುಮಾ‌ರ್ ಪೂಜಾರಿ (47), ಬಹುಜನ್ ಸಮಾಜ್ ಪಾರ್ಟಿ (ಬಿಎಸ್ಪಿ)ಯಿಂದ ಕಾಂತಪ್ಪ (63), ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಕೆ.ಇ.ಮನೋಹರ (47), ಕರ್ನಾಟಕ ರಾಷ್ಟ್ರ ಸಮಿತಿಯಿಂದ ರಂಜಿನಿ ಎಂ.(39) ಮತ್ತು ಕರುನಾಡ ಸೇವಕರ ಪಾರ್ಟಿಯಿಂದ ದುರ್ಗಾಪ್ರಸಾದ್ (33) ಹಾಗೂ ಪಕ್ಷೇತರ

ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ 21 ನಾಮಪತ್ರ ಸಲ್ಲಿಕೆ | ಒಟ್ಟು 11 ಅಭ್ಯರ್ಥಿಗಳಿಂದ ನಾಮಪತ್ರ Read More »

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡದ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶೋಭಾ ಕರಂದ್ಲಾಜೆ ಇಂದು  ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top