ರಾಜಕೀಯ

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಭದ್ರಕೋಟೆಯಾದ ಹಳೆ ಮೈಸೂರು ಭಾಗದಲ್ಲೆ ಅಮಿತ್‍ ಶಾ ಇಂದು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಅಮಿತ್ ಶಾ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ದಿಲ್ಲಿಯಿಂದ ಸೋಮವಾರ ರಾತ್ರಿ ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದ್ದು, ಮಧ್ಯರಾತ್ರಿ 2.30 ಕ್ಕೆ ಎಚ್‍ ಎ ಎಲ್‍ ಏರ್‍ […]

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ Read More »

ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ?

ಬೆಂಗಳೂರು: ತಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಮಾತುಗಳು ನಾನಾ ರೀತಿಯ ಊಹಾಪೋಹಗಳಿಗೆ ಕಾರಣವಾಗಿ ಸಂಚಲನ ಸೃಷ್ಟಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಬೇಕು. ಅಷ್ಟು ಲೀಡ್ ಬಂದದ್ದೇ ಆದರೆ ಯಾರೂ ನನ್ನನ್ನು ಮುಟ್ಟಲು ಸಾಧ್ಯವಿಲ್ಲ. ನಾನು ಇರಬೇಕೋ, ಬೇಡೋ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ವರುಣ ಕ್ಷೇತ್ರದಲ್ಲಿ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿ ಮತಯಾಚಿಸಿದ್ದಾರೆ. ಆದರೆ ಅದು ಅವರಿಗೇ

ವರುಣಾ ಕ್ಷೇತ್ರದ ಕುರಿತು ಸಿದ್ದರಾಮಯ್ಯ ಹೇಳಿಕೆ ತಿರುಗುಬಾಣವಾಯಿತೇ? Read More »

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿ ದರ್ಬೆ ಬೈಪಾಸ್ ಜಂಕ್ಷನಿನ ಆರ್.ಸಿ.ಬಿ. ಎನ್’ಕ್ಲೇವ್’ನಲ್ಲಿ ಉದ್ಘಾಟನೆಗೊಂಡಿತು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಅಭ್ಯರ್ಥಿ ಪದ್ಮರಾಜ್ ಆರ್. ಕಚೇರಿಯನ್ನು ಉದ್ಘಾಟಿಸಿದರು. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ನೈಋತ್ಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್,  ಎಂ.ಎಸ್. ಮಹಮ್ಮದ್, ಮಹಮ್ಮದ್ ಆಲಿ, ಮಹಮ್ಮದ್ ಬಡಗನ್ನೂರು, ಸೇವಾದಳದ ಜಿಲ್ಲಾಧ್ಯಕ್ಷ

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ Read More »

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪುತ್ತೂರು ಚುನಾವಣಾ ಕಚೇರಿ ಪಕ್ಷದ ಕಚೇರಿ ಬಳಿ ಸೋಮವಾರ ಉದ್ಘಾಟನೆಗೊಂಡಿತು. ಸಂಸದ ಹಾಗೂ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ `ನನ್ನ ಮತಗಟ್ಟೆಯಲ್ಲಿ ಅತಿ ಹೆಚ್ಚು ಮತ ಗಳಿಸಿಕೊಡುತ್ತೇನೆ ಎಂಬ ಸಂಕಲ್ಪ ಮಾಡಬೇಕು. ದೇಶದ ದಿಕ್ಕಿನ ಬದಲಾವಣೆ, ಜಗದ್ವಂದ್ಯ ಭಾರತ ನಿರ್ಮಾಣಕ್ಕಾಗಿ ಈ ಚುನಾವಣೆ ನಡೆಯುತ್ತಿದೆ. ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದ ಯುವ ನಾಯಕನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. 34

ಈ ಬಾರಿ ದ.ಕ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3.50 ಲಕ್ಷ ಮತಗಳ ಅಂತರದಿಂದ ಗೆಲುವು | ಪುತ್ತೂರು ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ Read More »

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್‍ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್ Read More »

ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಬೊಳುವಾರು ಶಕ್ತಿಕೇಂದ್ರದ ಬೂತ್ ಸಂ.123,124,129 ರ ಸಭೆ ಕೊಂಬೆಟ್ಟು ಗಣೇಶ್ ಬಾಳಿಗರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್‍ ಚೌಟರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ರಂಗನಾಥ ರಾವ್, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನಗರ ಸಭಾ ಸದಸ್ಯ ಸಂತೋಷ್ ಕುಮಾರ್ ಬೊಳುವಾರು, ಶಕ್ತಿ ಕೇಂದ್ರ ಪ್ರಮುಖ್ ನೀಲಂತ್

ಬಿಜೆಪಿ ವತಿಯಿಂದ ಬೊಳುವಾರು ಶಕ್ತಿ ಕೇಂದ್ರದ ಬೂತ್ ಸಭೆ Read More »

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಸಂಪರ್ಕ ಅಭಿಯಾನಕ್ಕೆ ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಎ.2 ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಕುರಿತು ಮಾಹಿತಿ ನೀಡಲಾಯಿತು. ಅಭಿಯಾನದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಮಂಗಳೂರು ವಿಭಾಗದ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂದರ್ ಜೈನ್, ಬೂತ್ ಅಧ್ಯಕ್ಷ

ಬಿಜೆಪಿಯಿಂದ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್

ಕಡಬ : ಕಡಬ ಕಾಂಗ್ರೆಸ್‌ ಪಾಳಯದಲ್ಲಿ ಶನಿವಾರ ನಾಯಕರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ನೂಕಾಟ – ತಳ್ಳಾಟ ನಡೆಯುವ ಮೂಲಕ ಭಿನ್ನಮತ ಸ್ಪೋಟಗೊಂಡ ಘಟನೆ ನಡೆದಿದೆ. ಸಭೆಯಿಂದ ಮುಸ್ಲಿಂ ಮುಖಂಡರು ಹೊರನಡೆದ ಘಟನೆಯೂ ನಡೆದಿದ್ದು, ಅಲ್ಪ ಸಂಖ್ಯಾತ ಸಮುದಾಯದ ಕಡೆಗಣನೆ ವಿಚಾರವಾಗಿ ಈ ಗದ್ದಲ ನಡೆದಿದೆ ಎನ್ನಲಾಗಿದೆ. ಈ ಕುರಿತು ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಡಬ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಪೋಟ | ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಲೋಕಸಭಾ ಚುನಾವಣೆ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಏ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್

ಏ.2 : ಬಿಜೆಪಿ ಕಾರ್ಯಕರ್ತರ ಸಮಾವೇಶ | ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನೆ ತಲುಪಿಸುವ ಕಾರ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಡೆಯಲಿದೆ : ಪತ್ರಿಕಾಗೋಷ್ಠಿಯಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ Read More »

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಏ.2 ಮಂಗಳವಾರ ಬೈಪಾಸ್ ರಸ್ತೆಯ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ನಿಕಟಪೂರ್ವ ಸಂಸದ ನಳೀನ್‍ ಕುಮಾರ್ ಕಟೀಲ್‍ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಪ್ರಕಟಣೆ ತಿಳಿಸಿದೆ.

ಏ.2 : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ Read More »

error: Content is protected !!
Scroll to Top