ರಾಜಕೀಯ

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು, ಇವತ್ತಿನ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಅವರೊಂದಿಗಿದ್ದರು. ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸರಾದ […]

ದ,ಕ,ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೆಳ್ತಂಗಡಿ ಭೇಟಿ | ಹಿರಿಯ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದ ಚೌಟ Read More »

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಹೊಸದಿಲ್ಲಿ: ಕಾಂಗ್ರೆಸ್ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.  46 ಅಭ್ಯರ್ಥಿಗಳ ಹೆಸರುಗಳನ್ನೊಳಗೊಂಡ ಈ ಪಟ್ಟಿ ಶನಿವಾರ ರಾತ್ರಿ ಬಿಡುಗಡೆಗೊಂಡಿದ್ದು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಿರುವಳ್ಳೂರಿನಿಂದ ಸ್ಪರ್ಧಿಸಲಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ರಾಯ್ ಮತ್ತೆ ಸ್ಪರ್ಧಿಸಲಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ

46 ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆ | ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ Read More »

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ

ನವದೆಹಲಿ: ಬಿಜೆಪಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್‌ ಅವರ ಪತ್ನಿ ರಾಧಿಕಾ ಶರತ್‌ ಕುಮಾರ್‌ ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ರಾಧಿಕಾ ಶರತ್‌ ಕುಮಾರ್‌ ಅವರು ತಮಿಳುನಾಡಿನ ವಿರುಧುನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುದುಚೇರಿಯ ಹಾಗೂ ತಮಿಳುನಾಡಿನ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಬಿಡುಗಡೆ ಮಾಡುತ್ತಿರುವ ಎರಡನೇ ಪಟ್ಟಿ ಇದಾಗಿದೆ.

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ Read More »

ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ : ಕ್ಯಾ.ಬ್ರಿಜೇಶ್ ಚೌಟ | ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ದ.ಕ.ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‍ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಹೊಂದಿದ್ದು, ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು

ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ : ಕ್ಯಾ.ಬ್ರಿಜೇಶ್ ಚೌಟ | ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ Read More »

ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರದ ಸಭೆ

ಪುತ್ತೂರು: ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರ ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಯ ಮಹಾಶಕ್ತಿ ಕೇಂದ್ರ ಭೇಟಿಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಬೂತ್ ಸಮಿತಿ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ಚುನಾವಣಾ ಬೂತ್ ಕಾರ್ಯ ಹಾಗೂ ಅಭ್ಯರ್ಥಿ ಭೇಟಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಹರೀಶ್

ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರದ ಸಭೆ Read More »

ಲೋಕಸಭೆ ಚುನಾವಣೆ : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ | ದ.ಕ. ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್

ಹೊಸದಿಲ್ಲಿ: ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಪಟ್ಟಿ ಈ ರೀತಿ ಇದೆ : ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್, ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್, ಕಲಬುರಗಿ – ರಾಧಾಕೃಷ್ಣ, ರಾಯಚೂರು-ಜಿ.ಕುಮಾರನಾಯಕ್, ಬೀದರ್-ಸಾಗರ್ ಖಂಡ್ರೆ, ಕೊಪ್ಪಳ-ರಾಜಶೇಖರ್ ಹಿಟ್ನಾಳ, ಧಾರವಾಡ-ವಿನೋದ್ ಅಸೂಟಿ, ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್, ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್, ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ, ದಕ್ಷಿಣಕನ್ನಡ-ಪದ್ಮರಾಜ್, ಚಿತ್ರದುರ್ಗ-ಬಿ.ಎನ್ ಚಂದ್ರಪ್ಪಮೈಸೂರು ಕೊಡಗು -ಎಂ. ಲಕ್ಷ್ಮಣ್,

ಲೋಕಸಭೆ ಚುನಾವಣೆ : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ | ದ.ಕ. ಲೋಕಸಭಾ ಕ್ಷೇತ್ರಕ್ಕೆ ಪದ್ಮರಾಜ್ Read More »

ನಾಳೆ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ

ಪುತ್ತೂರು: ದ.ಕ.ಜಿಲ್ಲಾ ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ,ಬ್ರಿಜೇಶ್ ಮಾ.22 ರಂದು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 8.30 ಕ್ಕೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ, ಬಳಿಕ ವಿಟ್ಲ ಅರಮನೆ, ವಿವಿಧ ದೇವಸ್ಥಾನಳಿಗೆ ಭೇಟಿ ನೀಡಲಿದ್ದು.10 ಗಂಟೆಗೆ ಕಂಬಳಬೆಟ್ಟು ಭಜನಾ ಮಂದಿರದ ಬಳಿ ಧರ್ಮನಗರದಲ್ಲಿ ನಡೆಯುವ ವಿಟ್ಲ-ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.  11 ಗಂಟೆಗೆ ಪುತ್ತೂರು ನಗರ ಮಂಡಲ ಹಾಗೂ ಬಲ್ನಾಡು, ಕೊಡಿಪಾಡಿ, ಕಬಕ, ಬನ್ನೂರು ಪಂಚಾಯಿತಿ ಕಾರ್ಯಕರ್ತರ ಸಭೆ ಜೈನಭವನದಲ್ಲಿ ನಡೆಯಲಿದ್ದು, ಪಾಲ್ಗೊಳ್ಳಲಿದ್ದಾರೆ.

ನಾಳೆ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಭೇಟಿ Read More »

ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ವಾಗ್ವಾದ್ ನಡೆದಿದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು: ಇತ್ತೀಚಗೆ ದ.ಕ. ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಯ್ಕೆಯಾದ ನಂತರ ಮತ್ತು ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯ ವಿಚಾರವಾಗಿ ಪುತ್ತೂರಿನ ಹಿರಿಯ ಕಿರಿಯ ಕಾರ್ಯಕರ್ತರಲ್ಲಿ ಚರ್ಚಿಸಲು ದ.ಕ. ಜಿಲ್ಲಾಧ್ಯಕ್ಷರು ಪಾರ್ಟಿ ಕಛೇರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಕಛೇರಿಗೆ ಬೀಗ ಹಾಕಿದ್ದರೂ ಮತ್ತು ಸಭೆಯಲ್ಲಿ ವಾಗ್ವಾದಗಳೂ ಜಿಲ್ಲಾಧ್ಯಕ್ಷರ ಎದುರಿಗೆ ಆಗಿವೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,

ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ವಾಗ್ವಾದ್ ನಡೆದಿದೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ : ಸಾಜ ರಾಧಾಕೃಷ್ಣ ಆಳ್ವ Read More »

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍.

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರುವಂತೆ ಕಾಂಗ್ರೆಸ್ ಪ್ರಮುಖರಿಂದ ಆಹ್ವಾನ ಬಂದದ್ದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬೆಂಗಳೂರಿನ ತನ್ನ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ನನಗೆ ಟಿಕೇಟ್ ತಪ್ಪಿದ್ದರಿಂದ ಬಹಳ ನೋವಾಗಿರುವುದು ಸತ್ಯ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಮುಂದೆ ಪ್ರಶ್ಚಾತ್ತಾಪ ಅನುಭವಿಸುತ್ತಾರೆ ಎಂದು ತಿಳಿಸಿದ ಅವರು, ಮುಂದೆ ನಾನು ಪಕ್ಷ ಶುದ್ಧೀಕರಣ ಮಾಡುವತ್ತ ಗಮನ ಹರಿಸುತ್ತೇನೆ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ | ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿ.ವಿ.ಎಸ್‍. Read More »

ಪುತ್ತೂರು ಶಾಸಕರು ಕೋಟಿ-ಕೋಟಿ ಅನುದಾನದ ಮಂತ್ರ ಜಪಿಸುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ | ಅಂಕಿ-ಅಂಶಗಳ ಸಹಿತ ಜನತೆಗೆ ತಿಳಿಸುವ ಕೆಲಸ ಮಾಡಲಿ

ಪುತ್ತೂರು: ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ನಡೆದು 300 ದಿನಗಳು ಕಳೆದಿದ್ದು, ಒಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗ್ಯಾರಂಟಿ ಯೋಜನೆಯಿಂದ ಮುಂದಿನ ಒಂದು ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುವುದಿಲ್ಲ ಎಂದು ಹೇಳಿಕೆ ನೀಡಿದ್ದು, ಇನ್ನೊಂದೆಡೆ ಪುತ್ತೂರು ಶಾಸಕರು ಕೋಟಿ ಕೋಟಿ ಅನುದಾನಕ್ಕೆ ಶಿಲಾನ್ಯಾಸ ನೆರವೇರಿಸು ಮೂಲಕ ಅಭಿವೃದ್ಧಿಯ ಮಂತ್ರ ಜಪಿಸುತ್ತಿದ್ದು, ಈ ಮೂಲಕ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ವಿಧಾನಸಭಾ

ಪುತ್ತೂರು ಶಾಸಕರು ಕೋಟಿ-ಕೋಟಿ ಅನುದಾನದ ಮಂತ್ರ ಜಪಿಸುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ | ಅಂಕಿ-ಅಂಶಗಳ ಸಹಿತ ಜನತೆಗೆ ತಿಳಿಸುವ ಕೆಲಸ ಮಾಡಲಿ Read More »

error: Content is protected !!
Scroll to Top