ರಾಜಕೀಯ

ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೇವೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಮುಂದಿನ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆಗೆ ಕುರಿತು ಈಗಾಗಲೇ ಚರ್ಚಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ಎಸ್‍.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಕ್ಷೇತ್ರಗಳ ಕುರಿತು ಚರ್ಚೆಯಾಗಿದೆ. ಸಭೆಯಲ್ಲಿ ಚರ್ಚೆಯಾದ ಅಂಶಗಳನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಶೀಘ್ರ ಅಭ್ಯರ್ಥಿಗಳ ಘೋಷಣೆ ಮಾಡಲು ನಿರ್ಧರಿಸಲಾಗಿದೆ ಎಂದ ಅವರು, ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗುವ ಸಮಸ್ಯೆ ಇಲ್ಲ ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮುಂದಿನ […]

ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೇವೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Read More »

ತರಾತುರಿಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿಂದೂ ಸಮಾಜ, ನೈಜ ರಾಮಭಕ್ತರಿಗೆ ಮಾಡುವ  ಅವಮಾನ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಹಾಗೂ ಸಂಘ ಪರಿವಾರದವರು ಅಯೋಧ್ಯೆಯ ಅಪೂರ್ಣ ರಾಮ ಮಂದಿರದಲ್ಲಿ ತರಾತುರಿಯಲ್ಲಿ  ಶ್ರೀರಾಮನ ಪ್ರಾಣ ಪ್ರತಿಷ್ಠೆ ಮಾಡಲು ಹೊರಟಿರುವುದು ಹಿಂದೂ ಸಮಾಜಕ್ಕೆ, ನೈಜ ರಾಮಭಕ್ತರಿಗೆ ಮಾಡುವ ಅವಮಾನ ಎಂದು ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಆರೋಪಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಲೇ ಶ್ರೀರಾಮನ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ದೇಶದಲ್ಲಿ ಕಾಂಗ್ರೆಸ್ ನಾಯಕರು ಗೈರು ಹಾಜರಾಗುವ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದು, ಈ ನೆಪವನ್ನಿಟ್ಟುಕೊಂಡು

ತರಾತುರಿಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿಂದೂ ಸಮಾಜ, ನೈಜ ರಾಮಭಕ್ತರಿಗೆ ಮಾಡುವ  ಅವಮಾನ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ Read More »

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಭಾರತೀಯ ಜನತಾ ಪಾರ್ಟಿ ರಾಜ್ಯ ವಿವಿಧ ಮೋರ್ಚಾಗಳಿಗೆ ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿದೆ.

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಂಜಾ Read More »

ಪುತ್ತೂರು ಬಿಜೆಪಿಯ ಗೊಂದಲಕ್ಕೆ ತೆರೆ?? | ಅಂತಿಮ ಹಂತದ ಮಾತುಕತೆಯಲ್ಲಿ ಪುತ್ತಿಲ ಪರಿವಾರ!! | ಕುತೂಹಲ ಮೂಡಿಸಿರುವ ಪ್ರಮುಖರ ನಡೆ!!

ಪುತ್ತೂರು: ಬಿಜೆಪಿಯೊಳಗೆ ಎದ್ದಿದ್ದ ದೊಡ್ಡ ಗೊಂದಲಕ್ಕೆ ತೆರೆ ಬೀಳುವ ಲಕ್ಷಣಗಳು ಗೋಚರವಾಗುತ್ತಿವೆ. ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಹಾಗೂ ಬಿಜೆಪಿ ಮುಖಂಡರ ನಡುವೆ ಮಾತುಕತೆಗಳು ನಡೆಯುತ್ತಿವೆ ಎನ್ನುವ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆ ವೇಳೆಗೆ ರಾಜ್ಯದ ಗಮನ ಸೆಳೆದಿದ್ದ ಪುತ್ತಿಲ ಪರಿವಾರ, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಆಖಾಡಕ್ಕೆ ಧುಮುಕ್ಕಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಎಲ್ಲರೂ ಒಮ್ಮೆ ಹಿಂದಿರುಗಿ ನೋಡುವಂತೆ

ಪುತ್ತೂರು ಬಿಜೆಪಿಯ ಗೊಂದಲಕ್ಕೆ ತೆರೆ?? | ಅಂತಿಮ ಹಂತದ ಮಾತುಕತೆಯಲ್ಲಿ ಪುತ್ತಿಲ ಪರಿವಾರ!! | ಕುತೂಹಲ ಮೂಡಿಸಿರುವ ಪ್ರಮುಖರ ನಡೆ!! Read More »

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ

ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಗತ ವೈಭವ ಮತ್ತೆ ಮರಳಿ ಪಡೆಯಲಿದ್ದು, ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಮತ್ತೆ ಇದು ಸಾಧ್ಯವಾಗಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು. ಜ.21 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನುದ್ದೆಶಿಸಿ ಅವರು ಮಾತನಾಡಿದರು. ದೇಶದ ಯಾವ ರಾಜ್ಯದಲ್ಲೂ ಇಲ್ಲದ ಗ್ಯಾರಂಟಿ ಯೋಜನೆಯನ್ನು ನಾವು ಜನತೆಗೆ ನೀಡಿದ್ದೇವೆ, ಇದು ಪ್ರತೀ ಕುಟುಂಬಕ್ಕೂ ತಲುಪಿದೆ.

ಜ.21: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ | ಕಾಂಗ್ರೆಸ್‍ ನಿಂದ ಪೂರ್ವಭಾವಿ ಸಭೆ Read More »

ರಾಜ್ಯದ ಜಿಲ್ಲೆಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿದ ಬಿಜೆಪಿ | ದಕ್ಷಿಣ ಕನ್ನಡ ಸೇರಿದಂತೆ ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು?

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಜಿಲ್ಲಾ ಘಟಕಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಹಾಗೂ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ನೇಮಿಸಲಾಗಿದೆ. ಹೀಗೆ ಪ್ರತಿ ಜಿಲ್ಲೆಗಳಿಗೂ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಎಸ್. ದತ್ತಾತ್ರಿ ಶಿವಮೊಗ್ಗ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೊಕೇಶ್ ಅಂಬೆಕಲ್ಲು ಬೆಂಗಳೂರು ಉತ್ತ,ರ, ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿಯಾಗಿ ಬಿ.ಎಚ್. ವಿಶ್ವನಾಥ್ ದಾವಣಗೆರೆ

ರಾಜ್ಯದ ಜಿಲ್ಲೆಗಳಿಗೆ ಅಧ್ಯಕ್ಷರುಗಳನ್ನು ನೇಮಿಸಿದ ಬಿಜೆಪಿ | ದಕ್ಷಿಣ ಕನ್ನಡ ಸೇರಿದಂತೆ ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು? Read More »

ಪುತ್ತೂರು ಮಿನಿವಿಧಾನಸೌಧಕ್ಕೆ ಎರಡೆರಡು ಬಾರಿ ಶಂಕುಸ್ಥಾಪನೆ ನೆರವೇರಿಸಿರುವವರಿಂದ ಈಗ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ!! | ಎರಡೆರಡು ಬಾರಿ ಶಿಲಾನ್ಯಾಸ ಎಂದು ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು!!

ಪುತ್ತೂರು: ಇಲ್ಲಿನ ಮಿನಿವಿಧಾನಸೌಧಕ್ಕೆ ಬಿಜೆಪಿ ಆಡಳಿತದ ಸಂದರ್ಭ ಎರಡೆರಡು ಬಾರಿ ಶಂಕುಸ್ಥಾಪನೆ ನೆರವೇರಿಸಿರುವವರಿಂದ ಈಗ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಯುತ್ತಿದೆ. ಕಾಮಗಾರಿ ಆರಂಭವಾಗದ ಯೋಜನೆಗಳಿಗೆ ಮರುಜೀವ ನೀಡುವ ಪ್ರಯತ್ನದಲ್ಲಿರುವ ಹಾಲಿ ಶಾಸಕರು ಶಿಲಾನ್ಯಾಸ ನೆರವೇರಿಸಿರುವುದರಲ್ಲಿ ಏನು ತಪ್ಪಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಪ್ರಶ್ನಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು ಶಿಲಾನ್ಯಾಸ ನೆರವೇರಿಸುವುದು ಸಹಜವಾದ ಪ್ರಕ್ರಿಯೆ. ಕಣಿಯೂರಿನಲ್ಲಿ, ಬನ್ನೂರಿನ ಎಸ್.ಸಿ. ಕಾಲನಿಗೆ 10 ಲಕ್ಷ ರೂ.ನಂತೆ ಕಾಮಗಾರಿ ನಡೆಸುವುದಾಗಿ ಹೇಳಿ ಶಿಲಾನ್ಯಾಸ ನೆರವೇರಿಸಿದ್ದರು.

ಪುತ್ತೂರು ಮಿನಿವಿಧಾನಸೌಧಕ್ಕೆ ಎರಡೆರಡು ಬಾರಿ ಶಂಕುಸ್ಥಾಪನೆ ನೆರವೇರಿಸಿರುವವರಿಂದ ಈಗ ಮೊಸರಿನಲ್ಲಿ ಕಲ್ಲು ಹುಡುಕುವ ಪ್ರಯತ್ನ!! | ಎರಡೆರಡು ಬಾರಿ ಶಿಲಾನ್ಯಾಸ ಎಂದು ಆರೋಪಿಸಿದ್ದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು!! Read More »

ಬಿಜೆಪಿ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಸಭೆ ಇಂದು ನಡೆಯಿತು. ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಮುಂದಿನ ಅಯೋಧ್ಯ ರಾಮ ಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮ, ದೇವಸ್ಥಾನ ದೈವಸ್ಥಾನ ಮಂದಿರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ, ವಿಕಸಿತಾ ಭಾರತ ಸಂಕಲ್ಪ ಯಾತ್ರೆ ಹಾಗೂ ವಿಶ್ವ ಕರ್ಮ ಯೋಜನೆಯನ್ನು ಯಶಸ್ವಿಗೊಳಿಸುವಂತೆ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಿದರು. ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ವಿಕಸಿತಾ ಭಾರತ ಸಂಕಲ್ಪ ಯಾತ್ರೆ ಬಗ್ಗೆ ಮಾಹಿತಿ ನೀಡಿದರು. ಪುರುಷೋತ್ತಮ ಮುಂಗ್ಲಿಮನೆ ಪದವಿಧರ ಕ್ಷೇತ್ರ

ಬಿಜೆಪಿ ಗ್ರಾಮಾಂತರ ಮಂಡಲ ಪದಾಧಿಕಾರಿಗಳ ಸಭೆ Read More »

ಅಂದ್ರಟ್ಟ ಸೇತುವೆಗೆ ಎರಡನೇ ಬಾರಿಗೆ ಶಿಲಾನ್ಯಾಸ ನೆರವೇರಿಸಿರುವುದು ಎಷ್ಟು ಸರಿ: ಶಾಸಕರಿಗೆ ಶಕ್ತಿ ಕೇಂದ್ರ ಅಧ್ಯಕ್ಷರ ಪ್ರಶ್ನೆ | ಶಿಷ್ಟಾಚಾರ ಉಲ್ಲಂಘನೆಯ ಹಿಂದಿನ ಕಾರಣ ತಿಳಿಸಲು ಪತ್ರಿಕಾಗೋಷ್ಠಿಯಲ್ಲಿ ಆಗ್ರಹ

ಪುತ್ತೂರು:  ಚಿಕ್ಕಮುಡ್ನೂರು, ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಅದೂ ಶಿಷ್ಟಾಚಾರವನ್ನು ಉಲ್ಲಂಘಿಸಿ. ಆದ್ದರಿಂದ ಈ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವಂತೆ ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಆಗ್ರಹಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

ಅಂದ್ರಟ್ಟ ಸೇತುವೆಗೆ ಎರಡನೇ ಬಾರಿಗೆ ಶಿಲಾನ್ಯಾಸ ನೆರವೇರಿಸಿರುವುದು ಎಷ್ಟು ಸರಿ: ಶಾಸಕರಿಗೆ ಶಕ್ತಿ ಕೇಂದ್ರ ಅಧ್ಯಕ್ಷರ ಪ್ರಶ್ನೆ | ಶಿಷ್ಟಾಚಾರ ಉಲ್ಲಂಘನೆಯ ಹಿಂದಿನ ಕಾರಣ ತಿಳಿಸಲು ಪತ್ರಿಕಾಗೋಷ್ಠಿಯಲ್ಲಿ ಆಗ್ರಹ Read More »

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ!

2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ. ಇದರ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ವಾರ್ ರೂಮ್ ಪಾತ್ರ ಪ್ರಮುಖವಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಮುಂದಿನ ಚುನಾವಣೆಗೆ ವಾರ್ ರೂಂ ತೆರೆಯಲಾಗಿದೆ. ಅಂದ ಹಾಗೇ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಬಳಿಕ ರಾಜೀನಾಮೆ ನೀಡಿದ್ದ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರೇ ಸೆಂಟ್ರಲ್ ವಾರ್

ಚುನಾವಣೆ ಹಿನ್ನೆಲೆಯಲ್ಲಿ ಸೆಂಟ್ರಲ್ ವಾರ್ ರೂಂ ರಚಿಸಿದ ಕಾಂಗ್ರೆಸ್! | ದ.ಕ. ಡಿಸಿಯಾಗಿದ್ದ ಶಶಿಕಾಂತ್ ಸೆಂಥಿಲ್ ಹೆಗಲಿಗೆ ಮತ್ತೆ ವಾರ್ ರೂಂ ನೇತೃತ್ವದ ಹೊಣೆ! Read More »

error: Content is protected !!
Scroll to Top