ರಾಜಕೀಯ

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ!

ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್ ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗಿಬಿದ್ದಿದೆ. ರಾಮ ಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿರುವುದಲ್ಲದೇ, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ, ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ “ಬಿಜೆಪಿಗೆ ಸನ್ಮತಿ ದೇ […]

ರಾಮ ಯುದ್ಧ: ಭಕ್ತಿ ಪ್ರದರ್ಶಿಸಿದ ಕೈಪಡೆ! Read More »

ಪ್ರತೀ ವಲಯಕ್ಕೆ ಹೆಚ್ಚುವರಿಯಾಗಿ  20 ಲಕ್ಷ ರೂ. ಅನುದಾನ | ಬ್ಲಾಕ್‍ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ರೂ. ಅನುದಾನ ಹೆಚ್ಚುವರಿಯಾಗಿ ನೀಡುವುದಾಗಿ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಾದ ಕಾಮಗಾರಿಯನ್ನು ಮಾಡಲು ಈ ಅನುದಾನವನ್ನು ಬಳಕೆ ಮಾಡಲಾಗುತ್ತದೆ. ಪ್ರತೀ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ವಿತರಣೆ ಮಾಡಲಾಗುತ್ತದೆ. ಕಾರ್ಯಕರ್ತರು ಯಾವುದೇ ಸಮಸ್ಯೆ

ಪ್ರತೀ ವಲಯಕ್ಕೆ ಹೆಚ್ಚುವರಿಯಾಗಿ  20 ಲಕ್ಷ ರೂ. ಅನುದಾನ | ಬ್ಲಾಕ್‍ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ

ಪುತ್ತೂರು: ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶಿಸಿದ್ದಾರೆ. ಸವಣೂರು ಗ್ರಾಮದ ಕೆಡೆಂಜಿ ಗಂಗಾಧರ ಗೌಡರ ಪುತ್ರರಾಗಿರುವ ಪ್ರಶಾಂತ್ ಕೆಡೆಂಜಿ ಡಿಪ್ಲೋಮಾ ಇನ್ ಸಿವಿಲ್ ಇಂಜಿನಿಯರಿಂಗ್ ಹಾಗೂ ಬಿ.ಇ. ಇನ್ ಜರ್ನಲಿಸಮ್ ಮಾಡಿರುತ್ತಾರೆ. ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಪೂರೈಸಿದ್ದು, ಪ್ರಸ್ತುತ ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾಗಿದ್ದಾರೆ. ಬಾಲ್ಯದಿಂದಲೇ ಸ್ವಯಂ ಸೇವಾ ಪ್ರಾಥಮಿಕ ಶಿಕ್ಷಣ ಪಡೆದಿರುವ ಅವರು, ಸರಹದ್ ಕೊ ಪ್ರಣಾಮ್ ಕುರಿತು

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸಹಸಂಚಾಲಕರಾಗಿ ಪ್ರಶಾಂತ್ ಕೆಡೆಂಜಿ ನೇಮಕ Read More »

ರಾಜಕೀಯ ಪ್ರವೇಶ ಮಾಡಿದ ಅಶ್ವಿನ್ ಎಲ್‍. ಶೆಟ್ಟಿ | ಜಿಲ್ಲಾ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ

ಮಂಗಳೂರು: ಸಹಕಾರಿ, ಧುರೀಣ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್. ಶೆಟ್ಟಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಸಮ್ಮುಖದಲ್ಲಿ ಅವರು ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮದಾಸ್‌ ಬಂಟ್ವಾಳ, ಸಂತೋಷ ಕುಮಾರ್ ಬೊಳಿಯಾರು, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ

ರಾಜಕೀಯ ಪ್ರವೇಶ ಮಾಡಿದ ಅಶ್ವಿನ್ ಎಲ್‍. ಶೆಟ್ಟಿ | ಜಿಲ್ಲಾ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ Read More »

ಬ್ಯಾನರ್ ಅಳವಡಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿರುವ ಹಾಲಿ ಶಾಸಕರು | ಪತ್ರಿಕಾಗೋಷ್ಠಿಯಲ್ಲಿ ಮುಕುಂದ ಬಜತ್ತೂರು ಆರೋಪ

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ರಸ್ತೆ ಹಿಂದೊಮ್ಮೆ ಮಾಜಿ ಶಾಸಕರಿಂದ ಗುದ್ದಲಿ ಪೂಜೆ ನಡೆದು ಕಾಮಗಾರಿ ಆರಂಭಗೊಂಡಿದ್ದು, ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಹಾಲಿ ಶಾಸಕರು ಬೇರಿಕೆ-34ನೇ ನೆಕ್ಕಿಲಾಡಿ 10 ಕೋಟಿ ಬಿಡುಗಡೆ ಮಾಡಿದ್ದೇನೆ ಎಂದು ಬ್ಯಾನರ್ ಅಳವಡಿಸುವುದರೊಂದಿಗೆ ಮತ್ತೊಮ್ಮೆ ಗುದ್ದಲಿ ಪೂಜೆ ನಡೆಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮುಕುಂದ ಬಜತ್ತೂರು ಆರೋಪಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುತ್ತೂರು-ಉಪ್ಪಿನಂಗಡಿ-ಗುರುವಾಯನಕೆರೆ ಚತುಷ್ಪಥ ರಸ್ತೆಗೆ 2022 ರಲ್ಲಿ

ಬ್ಯಾನರ್ ಅಳವಡಿಸುವ ಮೂಲಕ ಜನರ ದಾರಿ ತಪ್ಪಿಸುತ್ತಿರುವ ಹಾಲಿ ಶಾಸಕರು | ಪತ್ರಿಕಾಗೋಷ್ಠಿಯಲ್ಲಿ ಮುಕುಂದ ಬಜತ್ತೂರು ಆರೋಪ Read More »

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

ಪುತ್ತೂರು: ಉದ್ಯಮಿ, ಸಹಕಾರಿ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್‍. ಶೆಟ್ಟಿ ಜ.4 ರಂದು ಮಂಗಳೂರಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಸಂಸದ ನಳಿನ್ ಕುಮಾರ್ ಕಟೀಲ್‍ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಅಶ್ವಿನ್ ಎಲ್‍. ಶೆಟ್ಟಿಯವರು ಜ.13 ರಂದು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಯಾಗಿ

ರಾಜಕೀಯ ಪ್ರವೇಶ ಮಾಡಲಿದ್ದಾರೆ ಅಶ್ವಿನ್ ಎಲ್. ಶೆಟ್ಟಿ | ನಾಳೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ Read More »

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ

ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯನ್ನು ಬಿಜೆಪಿ ಟೀಕಿಸಿದೆ. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ್ದಾರೆ ಎಂದು ಬಿಜೆಪಿ ಟೀಕಿಸಿರುವ ರಾಜ್ಯ ಬಿಜೆಪಿ ಘಟಕ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ. 39 ಸೆಕೆಂಡುಗಳ ಈ ವಿಡಿಯೋದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಪ್ರವೇಶ ದ್ವಾರದ ಬಳಿ ನಿಂತಿರುವುದನ್ನು ಕಾಣಬಹುದು. ಅಲ್ಲಿಂದ ಅವರನ್ನು ಗರ್ಭಗುಡಿಗೆ ಬರುವಂತೆ ಮನವಿ ಮಾಡಿದರೂ, ಅವರು ಪ್ರವೇಶಿಸಲು ನಿರಾಕರಿಸುತ್ತಾರೆ. ಅವರ

ಗರ್ಭಗುಡಿ ಪ್ರವೇಶ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿ ಕಿಡಿ Read More »

ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು

ಸೋಮೇಶ್ವರ : ಸೋಮೇಶ್ವರ ಗ್ರಾಮ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಪ್ರಥಮ ಚುನಾವಣೆಯಲ್ಲಿ ಬಿಜೆಪಿಯ16 ಅಭ್ಯರ್ಥಿಗಳು ಜಯಗಳಿಸುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿದೆ. ಪುರಸಭೆಯ ಎಲ್ಲಾ 23 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿಯ 16 ಅಭ್ಯರ್ಥಿಗಳು ಜಯಗಳಿಸಿದ್ದು, 22 ಸ್ಥಾನಗಳಲ್ಲಿ ಸ್ಪರ್ಧೆ ನಡೆದಿದ್ದು,, ಕಾಂಗ್ರೆಸ್ 7 ಸ್ಥಾನವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಬೆಂಬಲದಿಂದ ಸ್ಪರ್ಧಿಸಿದ್ದ 3ನೇ ಪ್ರಕಾಶ್ ನಗರ ವಾರ್ಡ್ ನಲ್ಲಿ ಸಿಪಿಐಎಂ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯ ಎದುರು ಸೋಲನ್ನನುಭವಿಸಿದ್ದಾರೆ. ಸೋಮೇಶ್ವರ ಪುರಸಭೆಗೆ ಡಿ.27ರಂದು

ಸೋಮೇಶ್ವರ ಪುರಸಭೆ ಬಿಜೆಪಿ ತೆಕ್ಕೆಗೆ | ಬಿಜೆಪಿಯ 16 ಅಭ್ಯರ್ಥಿಗಳಿಗೆ ಗೆಲುವು Read More »

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್‍ ಮಾಡುವವರನ್ನು ಒದ್ದು ಹೊರಗೆ ಹಾಕಬೇಕು | ನಗರಸಭೆ ಉಪಚುನಾವಣೆ ಕುರಿತು ರಾಜೇಶ್‍ ಬನ್ನೂರು ಪ್ರತಿಕ್ರಿಯೆ

ಪುತ್ತೂರು: ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡಿನಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ರಕ್ತೇಶ್ವರಿ ವಾರ್ಡಿನಲ್ಲಿ ಕೆಲವು ಮತಗಳ ಅಂತರದಿಂದ ಸೋಲು ಕಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಎರಡು ವಾರ್ಡುಗಳಲ್ಲಿ ಮತ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸಿ, ಬಿಜೆಪಿ ಯಾವುದೇ ವ್ಯಕ್ತಿಯ ಆಸ್ತಿ ಅಲ್ಲ. ಹಿರಿಯ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪಾರ್ಟಿ, ಪಕ್ಷಕ್ಕೆ ಡ್ಯಾಮೇಜ್‍ ಆಗುವಂತೆ ಕೆಲವು ವ್ಯಕ್ತಿಗಳು ನಾವು ಮಾಡಿದ್ದು, ಅವರು ಮಾಡಿದ್ದು ಎಂದು ಹೇಳುತ್ತಿದ್ದಾರೆ. ಪಕ್ಷಕ್ಕೆ ಯಾರು

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್‍ ಮಾಡುವವರನ್ನು ಒದ್ದು ಹೊರಗೆ ಹಾಕಬೇಕು | ನಗರಸಭೆ ಉಪಚುನಾವಣೆ ಕುರಿತು ರಾಜೇಶ್‍ ಬನ್ನೂರು ಪ್ರತಿಕ್ರಿಯೆ Read More »

ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ

ಪುತ್ತೂರು : ನಗರಸಭೆಯ ಎರಡು ವಾರ್ಡುಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾರ್ಡ್ 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ  ದಿನೇಶ್ ಶೇವಿರೆ ಹಾಗೂ ವಾರ್ಡು 11 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯ ಗಳಿಸಿದ್ದಾರೆ. ಈ ಎರಡೂ ವಾರ್ಡುಗಳ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ಅಭ್ಯರ್ಥಿಗಳ ನಡುವೆಯೂ ತೀವ್ರ ಪೈಪೋಟಿ ಇದ್ದು, ರಮೇಶ್ ರೈ ಹಾಗೂ ದಿನೇಶ್ ಶೇವಿರೆ ಅವರು ಜಯಗಳಿಸಿದ್ದಾರೆ. ನಗರ ಸಭೆಯ

ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ Read More »

error: Content is protected !!
Scroll to Top