ನಗರಸಭೆ ಉಪಚುನಾವಣೆ | ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ | ಮಗ್ಗುಲ ಬದಲಾಯಿಸಿದ ಪುತ್ತಿಲ ಪರಿವಾರದ ಪ್ರಮುಖ ಡಾ.ಸುರೇಶ್ ಪುತ್ತೂರಾಯ
ಪುತ್ತೂರು: ಪುತ್ತಿಲ ಪರಿವಾರದಲ್ಲಿ ಕಾಣಿಸಿಕೊಂಡಿದ್ದ ಡಾ.ಸುರೇಶ್ ಪುತ್ತೂರಾಯ ಅವರು ನಗರಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಂದರ್ಭ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದು ಇದೀಗ ಅಚ್ಚರಿಗೆ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತಿಲ ಪರಿವಾರದಲ್ಲಿ ಪ್ರಮುಖ ನಾಯಕರಾಗಿ ಕಾಣಿಸಿಕೊಂಡಿದ್ದ ಡಾ.ಸುರೇಶ್ ಪುತ್ತೂರಾಯ ಇದೀಗ ದಿಢೀರ್ ಪಾಳಯ ಬದಲಾಯಿಸಿ ಬಿಜೆಪಿ ನಾಮಪತ್ರ ಸಂದರ್ಭ ಹಾಜರಾಗಿ ಅಭ್ಯರ್ಥಿಗಳಿಗೆ ಮಾಲಾರ್ಪಣೆ ಮಾಡಿರುವುದು ಕುತೂಹಲ ಮೂಡಿಸಿದೆ. ನಗರಸಭೆಯ ವಾರ್ಡ್ 1 ಹಾಗೂ 11 ರ ಸದಸ್ಯರ ಮರಣದಿಂದಾಗಿ ಉಪಚುನಾವಣೆ ಡಿ.27 ರಂದು ನಿಗದಿಯಾಗಿದ್ದು, […]










