ರಾಜಕೀಯ

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ

ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ.‌ ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ […]

“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ Read More »

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ

ತೆಲಂಗಾಣ: ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ, ಕೊಡಂಗಲ್ ಶಾಸಕ ರೇವಂತ್ ರೆಡ್ಡಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೈದರಾಬಾದ್‌ನ ಲಾಲ್‌ ಬಹದ್ದೂರ್ ಶಾಸ್ತ್ರಿ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು. ರೇವಂತ್ ರೆಡ್ಡಿ ಜೊತೆ ಉಪಮುಖ್ಯಮಂತ್ರಿಯಾಗಿ ಮಧಿರ ಶಾಸಕ ಹಾಗೂ ದಲಿತ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಪದಗ್ರಹಣ ಮಾಡಿದರು. ಟಿಪಿಸಿಸಿ ಮಾಜಿ ಅಧ್ಯಕ್ಷ, ಎನ್. ಉತ್ತಮ್ ಕುಮಾರ್ ರೆಡ್ಡಿ, ಶಾಸಕರಾದ ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ

ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ Read More »

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್‍ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿರುವ 4 ಲಕ್ಷ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಈ ನಡುವೆ ಶ್ರವಣ, ದೃಷ್ಟಿ ದೋಷ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳ ವಸತಿ ಶಾಲೆಗಳಿಗೆ ನಿಯಮದಂತೆ ತಮ್ಮ ಕ್ಷೇತ್ರಾಭಿವೃದ್ಧಿ ನಿಧಿಯ ಶೇ 15ರಷ್ಟು ವಿನಿಯೋಗಿಸಲು ವಿಧಾನ ಪರಿಷತ್‌ನ ಎಲ್ಲ ಸದಸ್ಯರು ಸಮ್ಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ

ಅಕ್ರಮ ಕೃಷಿ ಪಂಪ್‍ಸೆಟ್‍ ಸಕ್ರಮಕ್ಕೆ ಮುಂದಾದ ರಾಜ್ಯ ಸರಕಾರ Read More »

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸ್ಪೀಕರ್ ಯು. ಟಿ. ಖಾದರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಶಾಸಕ ಅಶೋಕ್ ರೈಯವರು ಕಳೆದ ಬಾರಿ ಚೊಚ್ಚಲ ಅದಿವೇಶನದಲ್ಲಿ ಭಾಗವಹಿಸಿದ್ದರು. ಸದನಕ್ಕೆ ಸಮಯಕ್ಕೆ ಸರಿಯಗಿ ಹಾಜರಾಗುವ ಸದಸ್ಯರಿಗೆ ಬಹುಮಾ ನೀಡಿ ಗೌರವಿಸಲಾಗುವುದು ಎಂದು ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಘೋಷಣೆ

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು | ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು.ಟಿ. ಖಾದರ್ Read More »

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್!

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು. ಆದರೆ ಮಿಚಾಂಗ್‌ ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ

INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್! Read More »

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ

ಪುತ್ತೂರು : ನಗರಸಭಾ ಸದಸ್ಯರ ಅಕಾಲಿಕ ಮರಣದಿಂದಾಗಿ ಸ್ಥಳೀಯ ಸಂಸ್ಥೆಗಳ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಎರಡು ಸ್ಥಾನಗಳಿಗೆ ಡಿ.27 ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿ.8 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು, , ಅದೇ ದಿನ

ಡಿ.27: ನಗರಸಭೆಯ ತೆರವಾದ ಎರಡು ವಾರ್ಡ್‍ಗಳಿಗೆ ಉಪಚುನಾವಣೆ Read More »

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ.

ಮಿಝೋರಾಂ: ಮಿಝೋರಾಂನಲ್ಲಿ ZPM ಪಕ್ಷ ನೂತನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ZPM ಪಕ್ಷವು 40 ಸ್ಥಾನಗಳಲ್ಲಿ 22 ಸ್ಥಾನಗಳನ್ನು ಗೆದ್ದಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ. ಇನ್ನೂ ಐದು ಸ್ಥಾನಗಳಲ್ಲಿ ZPM ಮುನ್ನಡೆಯನ್ನು ಸಾಧಿಸಿದೆ. ಅಲ್ಲದೆ, ಪೂರ್ವ ಐಜ್ವಾಲ್ ನಲ್ಲಿ ಪ್ರತಿಸ್ಪರ್ಧಿ ZPM ಅಭ್ಯರ್ಥಿ ಎದುರು ಮಿಝೋರಾಂ ಮುಖ್ಯಮಂತ್ರಿ ಸೋತಿದ್ದು, ZPM ಗೆ ಭಾರೀ ಮೈಲಿಗಲ್ಲನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಝೊರಾಂಥಾಂಗ ವಿರುದ್ಧ ZPM ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ZPMನ ಮುಖ್ಯಮಂತ್ರಿ

ಮಿಝೋರಾಂ: ಸೋಲು ಕಂಡ ಮುಖ್ಯಮಂತ್ರಿ, ಬಹುಮತ ಗೆದ್ದ ಝಡ್.ಪಿ.ಎಂ. Read More »

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ!

ಭೋಪಾಲ್: ಮಧ್ಯಪ್ರದೇಶದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಪ್ರಹ್ಲಾದ್ ಪಟೇಲ್ ಮತ್ತು ಮಧ್ಯಪ್ರದೇಶದಿಂದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ ವರ್ಗಿಯಾ ಸೇರಿದಂತೆ ಏಳು ಲೋಕಸಭಾ ಸದಸ್ಯರನ್ನು ಕಣಕ್ಕಿಳಿಸಿತ್ತು. ಇದರಿಂದಾಗಿ ಸಿಎಂ ಹುದ್ದೆಗೆ ಆಯ್ಕೆಗಳನ್ನು ತೆರೆದಿಟ್ಟಿದ್ದು, ಅಧಿಕಾರವನ್ನು ಮತ್ತೆ ಉಳಿಸಿಕೊಂಡರೆ ಚೌಹಾಣ್ ಸ್ವಯಂಚಾಲಿತ ಆಯ್ಕೆಯಾಗದಿರಬಹುದು ಎಂಬ ಸಂದೇಶವನ್ನು ಬಿಜೆಪಿ ಕಳುಹಿಸಿದೆ. ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮಧ್ಯಪ್ರದೇಶ: ಸಂದೇಶ ರವಾನಿಸಿರುವ ಬಿಜೆಪಿ! Read More »

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿಯ ವಿಜಯದ ಬೆನ್ನಲ್ಲೇ ಅಲ್ಲಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಆರಂಭಗೊಂಡಿದೆ. ಬಿಜೆಪಿ ರಾಷ್ಟ್ರೀಯ ನಾಯಕತ್ವ ಹೊಸ ಮುಖ್ಯಮಂತ್ರಿ ಹೆಸರನ್ನು ಶೀಘ್ರ ಘೋಷಿಸುವ ಸಾಧ್ಯತೆಯಿದೆ. ಸಿಎಂ ಹುದ್ದೆಗೆ ಪ್ರಸಕ್ತ ಐದು ಪ್ರಮುಖ ಹೆಸರುಗಳು ಕೇಳಿ ಬಂದಿವೆ. ಒಟ್ಟು 199 ಸ್ಥಾನಗಳ ಪೈಕಿ 101 ಮ್ಯಾಜಿಕ್ ನಂಬರ್ ಆಗಿತ್ತು. ಇದರಲ್ಲಿ ಬಿಜೆಪಿ 115 ಸ್ಥಾನ, ಕಾಂಗ್ರೆಸ್ 68 ಸ್ಥಾನ, ಬಹುಜನ್ ಸಮಾಜ ಪಾರ್ಟಿ 2 ಸ್ಥಾನ, ಇತರೆ 13 ಸ್ಥಾನಗಳನ್ನು ಪಡೆದುಕೊಂಡಿದೆ. 2018ರ ಚುನಾವಣೆಯಲ್ಲಿ ಬಿಜೆಪಿ 73

ರಾಜಸ್ಥಾನ: ಮುಖ್ಯಮಂತ್ರಿ ಹುದ್ದೆ ರೇಸಿನಲ್ಲಿ ವಸುಂಧರಾ ರಾಜೇ ಸಹಿತ 6 ಆಕಾಂಕ್ಷಿಗಳು Read More »

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು!

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. ನಾವು ಮೂರು ಸ್ಥಾನ ಗೆಲ್ಲುವುದು ಖಚಿತ, ಐದಕ್ಕಿಂತ ಹೆಚ್ಚು ಸ್ಥಾನಗಳ ನಿರೀಕ್ಷೆಯಲ್ಲಿದ್ದೇವೆ. ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಸದ್ಯದಲ್ಲೇ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಬಿಜೆಪಿ ಭಾಗವಹಿಸಲಿದೆ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಕಳೆದ 2018ರಲ್ಲಿ ನಡೆದ ವಿಧಾನಸಭಾ

ಅತಂತ್ರ ಮುನ್ಸೂಚನೆಯಲ್ಲೂ ಮಿಜೋರಾಂ ಬಿಜೆಪಿ ಮುಖ್ಯಸ್ಥನ ವಿಶ್ವಾಸದ ಮಾತು! Read More »

error: Content is protected !!
Scroll to Top