“ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ?” | ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಯು.ಟಿ. ಖಾದರ್ ಪ್ರತಿಕ್ರಿಯೆ
ಬೆಳಗಾವಿ: ವಿಧಾನಸಭೆಯ ಸಭಾಂಗಣದಲ್ಲಿನ ಸಾವರ್ಕರ್ ಭಾವಚಿತ್ರ ತೆರವು ಮಾಡುವ ಸಂಬಂಧ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಪ್ರಸ್ತಾವ ಬಂದರೆ ಆಗ ಪರಿಶೀಲನೆ ನಡೆಸಬಹುದು. ಆದರೆ, ಎಲ್ಲೋ ಬಾಲ್ ಬರುತ್ತೇ ಎಂದು ಈಗಲೇ ಬ್ಯಾಟ್ ಬೀಸಿದರೆ ಆಗುತ್ತಾ? ಸಂವಿಧಾನ ಬದ್ಧವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ” ಎಂದು ಹೇಳಿದರು. “ನನಗೆ ಸಚಿವರೂ, ಪ್ರತಿಪಕ್ಷದವರೂ ಎಂಬ ಬೇಧವಿಲ್ಲ. ಎಲ್ಲರೂ ಒಂದೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ […]










