ರಾಜಕೀಯ

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ

ಹೈದರಾಬಾದ್: ತೆಲಂಗಾಣದ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವಿವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಶನಿವಾರ, ಶಿವಕುಮಾರ್ ಅವರನ್ನು ತೆಲಂಗಾಣ ರಾಜ್ಯ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಮತ ಎಣಿಕೆಗೆ ಮುಂಚಿತವಾಗಿ ತನ್ನ ಶಾಸಕರನ್ನು ಒಟ್ಟಾಗಿ ಇರಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿತ್ತು. ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ […]

ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ | 119ರಲ್ಲಿ 64 ಸ್ಥಾನ ಗೆದ್ದು, ಸರ್ಕಾರ ರಚನೆಗೆ ಹಕ್ಕು ಮಂಡನೆ Read More »

ಡಿ.21-24: ಪುತ್ತೂರಿನಲ್ಲಿ ಸಿಪಿಐ(ಎಂ) ರಾಜ್ಯ ಮಟ್ಟದ ಸೈದ್ದಾಂತಿಕ ಅಧ್ಯಯನ ಶಿಬಿರ

ಪುತ್ತೂರು: ಸಿಪಿಐ(ಎಂ) ಪಕ್ಷದ ರಾಜ್ಯ ಮಟ್ಟದ ಸೈದ್ದಾಂತಿಕ ಅದ್ಯಯನ ಶಿಬಿರವು ಡಿ.21 ರಿಂದ 24ರ ತನಕ ಪುತ್ತೂರಿನಲ್ಲಿ ನಡೆಯಲಿದೆ ಎಂದು ಸಿಪಿಐ(ಎಂ) ಪುತ್ತೂರು ತಾಲೂಕು ಕಾರ್ಯದರ್ಶಿ ಪಿ.ಕೆ.ಸತೀಶನ್ ತಿಳಿಸಿದ್ದಾರೆ. ಸ್ವಾಗತ ಸಮಿತಿ ರಚನಾ ಸಭೆಯಲ್ಲಿ ಅವರು ಈ ವಿಚಾರ ತಿಳಿಸಿದ್ದು, ರಾಜ್ಯ ಮಟ್ಟದ ರೈತ, ಕಾರ್ಮಿಕ, ದಲಿತ, ಯುವಜನ ನಾಯಕರುಗಳಿಗೆ ನೀಡುವ ಈ ಸೈದ್ದಾಂತಿಕ ಅದ್ಯಯನ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು. ಸ್ವಾಗತ ಸಮಿತಿ ಅದ್ಯಕ್ಷರಾಗಿ ಪುತ್ತೂರು ಪಿಕೆ ಸತೀಶನ್, ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಖಜಾಂಜಿಯಾಗಿ ಈಶ್ವರಿ ಮುಂಡೂರು

ಡಿ.21-24: ಪುತ್ತೂರಿನಲ್ಲಿ ಸಿಪಿಐ(ಎಂ) ರಾಜ್ಯ ಮಟ್ಟದ ಸೈದ್ದಾಂತಿಕ ಅಧ್ಯಯನ ಶಿಬಿರ Read More »

ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ

ಪುತ್ತೂರು: ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ; ಯಾವುದೇ ವ್ಯಕ್ತಿಯ ಆಸ್ತಿಯೂ ಅಲ್ಲ. ಹೀಗೆಂದು ಹೇಳಿದವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್. ಮಂಗಳವಾರ ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರದಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯಾಧ್ಯಕ್ಷನಾಗಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಗುಂಪುಗಾರಿಕೆಗೆ ಅವಕಾಶ ನೀಡದೆ ಸಂಘಟನೆಯನ್ನು ಬೆಳೆಸಿದ್ದೇನೆ. ಪಕ್ಷದ ಹೆಸರಿನಲ್ಲಿ ವೈಯಕ್ತಿಕ ಪ್ರಚಾರ ತೆಗೆದುಕೊಂಡಿಲ್ಲ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ. ಬದಲಾಗಿ

ನಳಿನ್ ಕುಮಾರ್ ಪಕ್ಷದ ಮುಂದೆ ಶೂನ್ಯ: ಬಿಜೆಪಿ ಕಾರ್ಯನಿರ್ವಹಣಾ ಸಮಿತಿ ಸಭೆಯಲ್ಲಿ ಸಂಸದ Read More »

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ

ಬೆಂಗಳೂರು: ಡಿ. 6ರ ತನಕ ಏನೂ ಮಾತನಾಡಬೇಡ ಎಂದು ಹೈಕಮಾಂಡ್ ಹೇಳಿದೆ. ಅಲ್ಲಿಯವರೆಗೆ ಕಾದು ನೋಡುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸಿಗೆ ಹೋಗುವ ವಿಚಾರ ನನ್ನ ತಲೆಯಲ್ಲಿ ಇಲ್ಲ. ಆ ಯೋಚನೆಯೂ ಇಲ್ಲ. ಮತ್ತೆ ಸೋಮನಹಳ್ಳಿ ಮುದುಕಿ ಕಥೆ ಹೇಳಿ, ನನ್ನ ಕೋಳಿಯಿಂದಲೆ ಬೆಳಕಾಗೋದು ಅಂತ ಕೆಲವರು ಎಂದು ಕೊಂಡಿದ್ದಾರೆ. ಆದರೆ ಅದೆಲ್ಲ ನಡೆಯುವುದಿಲ್ಲ. ಮುದುಕಿ ಯಾರು ಕೋಳಿ ಯಾರು ಎಂದು ನೀವೇ ತೀರ್ಮಾನಿಸಿ

ಯಾವ ಯಡಿಯೂರಪ್ಪ, ತಿಮ್ಮಪ್ಪ, ಬೊಮ್ಮಪ್ಪನೂ ಇಲ್ಲ: ಕುತೂಹಲ ಮೂಡಿಸಿದ ವಿ. ಸೋಮಣ್ಣ ನಡೆ Read More »

ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿರೆಂದ ಬಿಜೆಪಿ ರಾಜ್ಯಾಧ್ಯಕ್ಷ!

ಮಂಗಳೂರಿಗೆ ಆಗಮಿಸಿದ್ದ  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಪರ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ನಳಿನ್ ಕುಮಾರ್ ಕಟೀಲ್ ಅವರೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥೀ ಎನ್ನುವುದನ್ನು ಸಾರಿದಂತಾಗಿದೆ. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ

ನಳಿನ್ ಕುಮಾರ್ ಕಟೀಲ್ ಗೆಲ್ಲಿಸಿ ಕೊಡಿರೆಂದ ಬಿಜೆಪಿ ರಾಜ್ಯಾಧ್ಯಕ್ಷ! Read More »

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ

ಮಂಗಳೂರು: ಅಧಿಕಾರಕ್ಕೆ ಬಂದು ಆರೇ ತಿಂಗಳಿಗೆ ಜನಪ್ರಿಯತೆಯನ್ನು ಕಳೆದುಕೊಂಡ ಸರ್ಕಾರ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ನೂತನ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಮಾಡಲಾಯಿತು. ಈ ವೇಳೆ ಬ್ಯಾಂಡ್‌ನವರು ನುಡಿಸಿದ ಮುದುಡಿದ ತಾವರೆ ಅರಳಿದೆ… ಹಾಡು ಕಾರ್ಯಕರ್ತರಲ್ಲಿ ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ. ಈ ವೇಳೆ

ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವ್ಯಂಗ್ಯ Read More »

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು

ಪುತ್ತೂರು: ಬಿಜೆಪಿ ಸರಕಾರವಿದ್ದಾಗ ಹಿಂದೂ ಕಾರ್ಯಕರ್ತರ ಮೇಲೆ ಹಾಕಿದ್ದ ಪ್ರಕರಣಗಳ ಆಧಾರದಲ್ಲಿ ಗಡಿಪಾರು ಆದೇಶ ಮಾಡಲಾಗಿದೆ ಎಂಬ ಶಾಸಕ ಅಶೋಕ್ ಕುಮಾರ್ ರೈ ಅವರ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು ನೀಡಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿರುವ ವ್ಯಕ್ತಿಗಳು ಇಂದು ಬಿಜೆಪಿಗೆ ಬುದ್ಧಿವಾದ ಹೇಳುತ್ತಿದ್ದಾರೆ. ಅಂತಹವರಿಂದ ಬಿಜೆಪಿಗೆ ಬುದ್ಧಿವಾದ ಬೇಕಿಲ್ಲ. ಮೊದಲು ಅಂತಹ ವ್ಯಕ್ತಿಗಳನ್ನೇ ಗಡಿಪಾರು ಮಾಡಬೇಕು ಎಂದು ಸಾಜ ರಾಧಾಕೃಷ್ಣ ಆಳ್ವ ಆಗ್ರಹಿಸಿದರು.

ಪಿಸ್ತೂಲ್ ತೋರಿಸಿ ಬೆದರಿಸಿದವರಿಂದ ಬುದ್ಧಿವಾದ ಬೇಕಿಲ್ಲ!! | ಶಾಸಕ ಅಶೋಕ್ ರೈ ಹೇಳಿಕೆಗೆ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿರುಗೇಟು Read More »

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ

ಪುತ್ತೂರು: ಮತೀಯ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಮಾಡಿಸಿದ್ದು, ಈಗ ಬಿಜೆಪಿಯವರು ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು

ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿದ್ದೇ ಬಿಜೆಪಿ ಸರಕಾರ: ಅಶೋಕ್ ರೈ Read More »

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಮಾಡಿದೆ. ಶಾಸಕನಾಗಿ, ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಆರ್. ಅಶೋಕ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ‌ ಪಕ್ಷದ ನಾಯಕರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು. ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ Read More »

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!!

ಬೆಂಗಳೂರು: ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವುದೋ ಒಂದು ಕುಟುಂಬದ ಪಕ್ಷವಲ್ಲ. ಇದನ್ನು ನಾವು ಕೂಡ ಒಪ್ಪುವುದಿಲ್ಲ. ಬಿಜೆಪಿಗಾಗಿ, ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ನಾನು ಪ್ರಾಣ ಕೊಡಲೂ ಸಿದ್ಧ. ಆದರೆ ಕೆಲ ಚೇಲಾಗಳ ಮಾತು ಕೇಳಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು. ಯಡಿಯೂರಪ್ಪ, ವಿಜಯೇಂದ್ರರಿಂದ ಯತ್ನಾಳ್ ಸಂಪರ್ಕ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ

ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಯತ್ನಾಳ್ ಅಸಮಾಧಾನ ಸ್ಫೋಟ!! Read More »

error: Content is protected !!
Scroll to Top