ರಾಜಕೀಯ

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು

ಬೆಂಗಳೂರು: ಯತೀಂದ್ರ ಅವರ ಸಂಭಾಷಣೆಯ ವೀಡಿಯೋ ವೈರಲ್ ಆದ ಘಟನೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಫೋನ್ ಸಂಭಾಷಣೆಯಲ್ಲಿ ವರ್ಗಾವಣೆಯ ವಿಷಯ ಮಾತನಾಡಲಾಗಿದೆಯೇ? ಇಲ್ಲ. ಹಾಗಿದ್ದು ವರ್ಗಾವಣೆಗೆ ಲಿಂಕ್ ಮಾಡುವುದು ಯಾಕೆ ಎಂದು ಪ್ರಶ್ನಿಸಿದರು. ಒಂದು ವೇಳೆ ಈ ಬಗ್ಗೆ ಒಂದೇ ಒಂದು ಸಾಕ್ಷ್ಯ ತೋರಿಸಿದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಸವಾಲೆಸೆದರು. ಮೈಸೂರಿನ ಜನಸಂಪರ್ಕ ಸಭೆಯೊಂದರಲ್ಲಿ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ […]

ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ವೀಡಿಯೋ ವೈರಲ್ ಹಿನ್ನೆಲೆಯಲ್ಲಿ ಸಿಎಂ ಖಡಕ್ ಮಾತು Read More »

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು ಮೊಬೈಲ್’ನಲ್ಲಿ ಮಾತನಾಡಿರುವ ವೀಡಿಯೋ ಒಂದು ಇದೀಗ ಮಾಧ‍್ಯಮಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಸಭೆಯಲ್ಲಿದ್ದ ಯತೀಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡುತ್ತಾ, “ಅಪ್ಪ ಹೇಳಿ” ಎಂದು ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್​ ಬಗ್ಗೆ ಮಾತನಾಡಿದ್ದಾರೆ. ಆ ಕಡೆಯಿಂದ ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಪ್ರಶ್ನೆ ಮಾಡುತ್ತಾರೆ. ಅಲ್ಲದೆ, ಬೇರೊಂದು ಲಿಸ್ಟ್​ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು,

ಸಿಎಂ ಪುತ್ರನ ಆಡಳಿತ ದರ್ಬಾರ್!?  | “ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟನ್ನು ಮಾತ್ರ ಮಾಡಿ” – ಸಂಭಾಷಣೆಯ ವೀಡಿಯೋ ವೈರಲ್ Read More »

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಬುಧವಾರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌.ಎಂ. ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ. ‘ಡಿಕೆ ಸಹೋದರರನ್ನು ಕೊಲ್ಲು’ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿ ಪೋಸ್ಟ್ ಹಾಕಿದ್ದ ಎಂದು ಹೇಳಲಾಗಿದೆ.

‘ಡಿಕೆ ಸಹೋದರರನ್ನು ಕೊಲ್ಲು’ – ಪೋಸ್ಟ್: ಬಂಧನ Read More »

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಗಣಹೋಮ, ದುರ್ಗಾಹೋಮದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಾಧ್ಯಕ್ಷರಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರಗ ಜ್ಞಾನೇಂದ್ರ, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ, ಅಶೋಕ್, ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ಅವರು, ದೇಶದ ಅತಿದೊಡ್ಡ ಪಕ್ಷದ

ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಹಸ್ತಾಂತರಿಸಿದ ನಳಿನ್ ಕುಮಾರ್ ಕಟೀಲ್ Read More »

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿಯ 11 ನೇ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ದುರ್ಗಾ ಹೋಮ ಹಾಗೂ ಗಣಪತಿ ಹೋಮ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹೋಮ ಕಾರ್ಯದ ಸಂಕಲ್ಪದಲ್ಲಿ ಭಾಗಿಯಾಗಿದ್ದು, ಅವರಿಗೆ ಪೂಜಾ ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಾಗಿತ್ತು. ವಿಜಯೇಂದ್ರ ಪದಗ್ರಹಣದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯನ್ನು ವಿದ್ಯುತ್ ದೀಪಗಳು ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು.

ಬಿಜೆಪಿ 11ನೇ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಪದಗ್ರಹಣ | ಹೋಮ ಸಂಕಲ್ಪದ ಉಸ್ತುವಾರಿ ವಹಿಸಿಕೊಂಡ ಕರಾವಳಿ ಶಾಸಕ Read More »

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿಯಲಿದ್ದಾರೆ. ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ! Read More »

ಅಡಿಕೆ ಕೃಷಿಗೆ ರೋಗಗಳ ಕಾಟ: ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಿದ ಆಮ್ ಆದ್ಮಿ ಪಕ್ಷ

ಪುತ್ತೂರು: ಜಿಲ್ಲೆಯ ಅಡಿಕೆ ಬೆಳೆಯುವ ರೈತರನ್ನು ಕಾಡುತ್ತಿರುವ ಎಲೆ ಚುಕ್ಕಿ ರೋಗ, ಹಳದಿ ರೋಗ ನಿವಾರಣೆಗೆ ಸರಿಯಾದ ಸಂಶೋಧನಾ ಕ್ರಮ ಹಾಗೂ ಪರಿಹಾರ, ಅಡಿಕೆ ಬೆಳೆಯುವ ರೈತನಿಗೆ ಸಿಗಬೇಕಾದ ಬೆಳೆ ವಿಮೆ ಕುರಿತು ಸರ್ಕಾರ ಒಂದು ತಿಂಗಳ ಒಳಗಾಗಿ ಸಮರ್ಪಕವಾದ ಮಾಹಿತಿಯನ್ನು ನೀಡದೇ ಹೋದರೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರೈತರನ್ನು ಸೇರಿಸಿಕೊಂಡು ಆಮ್ ಆದ್ಮಿ ಪಕ್ಷ ಹೋರಾಟ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ವಿಶು ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,

ಅಡಿಕೆ ಕೃಷಿಗೆ ರೋಗಗಳ ಕಾಟ: ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಿದ ಆಮ್ ಆದ್ಮಿ ಪಕ್ಷ Read More »

ರಾಜ್ಯ ಸರಕಾರಕ್ಕೆ ರೈತ ಹೋರಾಟದ ಎಚ್ಚರಿಕೆ ನೀಡಿದ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ರಾಜ್ಯದಲ್ಲಿ ಎಂದೂ ಕಂಡು ಕೇಳರಿಯದ ಬರಗಾಲ ಆವರಿಸಿದ್ದು, ರಾಜ್ಯ ಸರಕಾರ ಈ ಕುರಿತು ಗಮನ ಹರಿಸದೇ ರೈತರನ್ನು ನಿಕೃಷ್ಟವಾಗಿ ಕಾಣುತ್ತಿದೆ. ಸಿದ್ಧರಾಮಯ್ಯ ನೇತೃತ್ವದ ಸರಕಾರ ಬರ ಪರಿಹರಿಸುವ ನಿಟ್ಟಿನಲ್ಲಿ ಹಣ ಬಿಡುಗಡೆ ಮಾಡದಿದ್ದಲ್ಲಿ ಬಿಜೆಪಿ ಪಕ್ಷ ರೈತರನ್ನು ಸೇರಿಸಿಕೊಂಡು ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಜ್ಯದ 216 ತಾಲೂಕುಗಳಲ್ಲಿ ಬರ ಆವರಿಸಿರುವ

ರಾಜ್ಯ ಸರಕಾರಕ್ಕೆ ರೈತ ಹೋರಾಟದ ಎಚ್ಚರಿಕೆ ನೀಡಿದ ಕೋಟ ಶ್ರೀನಿವಾಸ ಪೂಜಾರಿ Read More »

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿ.ಎಂ. ಡಿ.ವಿ.ಸದಾನಂದ ಗೌಡ Read More »

ಸೆಲ್ಫಿ ತೆಗೆದದ್ದೇ ಬಿಜೆಪಿಯ ಐದು ವರ್ಷಗಳ ಹಿಂದಿನ ದೊಡ್ಡ ಸಾಧನೆ | ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಕಳೆದ ಐದು ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಯಾವುದೇ ಅಭಿವೃದ್ದಿ ಕೆಲಸ ಆಗಿಲ್ಲ. ಸೆಲ್ಫಿ ತೆಗೆದದ್ದೇ ಜನರು ಹೇಳಿಕೊಳ್ಳುತ್ತಿರುವ ದೊಡ್ಡ ಸಾಧನೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾಜಿ ಶಾಸಕರನ್ನು ಮಾತಿನ ಮೂಲಕ ಕುಟುಕಿದ್ದಾರೆ. ಅವರು ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಶಾಸಕನಾಗಿ ನಾಲ್ಕೇ ತಿಂಗಳಲ್ಲಿ ಕುಡಿಯುವ ನೀರಿಗಾಗಿ 1010 ಕೋಟಿ ರೂ. ಅನುದಾನ ತಂದಿದ್ದೇನೆ. ಕೆಎಂಎಫ್‌ನ್ನು ಪುತ್ತೂರಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ, ಪುತ್ತೂರು ನಗರದ

ಸೆಲ್ಫಿ ತೆಗೆದದ್ದೇ ಬಿಜೆಪಿಯ ಐದು ವರ್ಷಗಳ ಹಿಂದಿನ ದೊಡ್ಡ ಸಾಧನೆ | ವಿಟ್ಲ ಮುಡ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

error: Content is protected !!
Scroll to Top