ರಾಜಕೀಯ

ದಲಿತ ಕುಟುಂಬವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಆಗಿದೆ | ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಮಾಹಿತಿ ಕೊರತೆಯ ಕಾರಣಕ್ಕೆ ಹಲವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು. ದಲಿತ ಕುಟುಂಬಗಳನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರುವ ಕೆಲಸವನ್ನು ಮಾಡಿದೆ. ಪ್ರತೀಯೊಂದು […]

ದಲಿತ ಕುಟುಂಬವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಆಗಿದೆ | ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

ಶೀಘ್ರ ರಾಜ್ಯದಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಸಿ.ಎಂ. ಸಿದ್ಧರಾಮಯ್ಯ

ಮಂಗಳೂರು: ರಾಜ್ಯದಲ್ಲಿ ನಿಗಮ ಮಂಡಳಿಗೆ ರಾಜ್ಯದಲ್ಲಿ ಅಧ್ಯಕ್ಷರ ನೇಮಕ ಶೀಘ್ರ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲು ಬಂದಿರುವ ಮುಖ್ಯಮಂತ್ರಿಗಳು, ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು

ಶೀಘ್ರ ರಾಜ್ಯದಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಸಿ.ಎಂ. ಸಿದ್ಧರಾಮಯ್ಯ Read More »

ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ: ಪೂರ್ವಭಾವಿ ಸಭೆ

ಪುತ್ತೂರು: ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನ. 6 ಕೊನೆ ದಿನವಾಗಿರುತ್ತದೆ. ಪ್ರತಿ ಚುನಾವಣೆ ಸಂದರ್ಭದಲ್ಲಿಯೂ ಅರ್ಹರು ಹೊಸದಾಗಿ ನೋಂದಣಿ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಪದವೀಧರರು ನೋಂದಣಿಗೆ ಹೆಚ್ಚಿನ ಆಸಕ್ತಿಯನ್ನು ತೋರಿಸುವ ಕಾರ್ಯವಾಗಬೇಕಾಗಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ಅವರು ಶನಿವಾರ ಸಂಜೆ ಮತದಾರರ ಪಟ್ಟಿ ತಯಾರಿಕೆಯ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು. 2017ರ ಚುನಾವಣೆ ಸಂದರ್ಭ 506 ಶಿಕ್ಷಕರು ಹಾಗೂ 1138 ಮಂದಿ ಪದವೀದರರಿದ್ದರು.

ನೈಋತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ: ಪೂರ್ವಭಾವಿ ಸಭೆ Read More »

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ 42 ಕೋಟಿ ರೂ. ಹಣದ ಪರದೇ ಕೆ ಪೀಛೇ ಇರುವ ಕೈಗಳನ್ನು ಪತ್ತೆ ಹಚ್ಚಲು ಸಿಬಿಐ ತನಿಖೆ ಅಗತ್ಯ. ಈ ನಿಟ್ಟಿನಲ್ಲಿ ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಆಗ್ರಹಿಸಿದರು. ಬಿಜೆಪಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ, ಲೂಟಿ ಕಾಂಗ್ರೆಸಿನ ರಕ್ತದಲ್ಲಿದೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42

42 ಕೋಟಿ ರೂ. ಹಿಂದಿನ ‘ಕೈ’ ಪತ್ತೆಗೆ ಸಿಬಿಐ ತನಿಖೆ ಅಗತ್ಯ: ಡಿ.ವಿ.ಎಸ್. ಆಗ್ರಹ Read More »

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ ದೇವೇಗೌಡ!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಈ ಘೋಷಣೆ ಹೊರಡಿಸಿದ್ದು, ಎಚ್.ಡಿ. ಕುಮಾರಸ್ವಾಮಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿ ಘೋಷಣೆ ಹೊರಡಿಸಿದ್ದಾರೆ. ಪಕ್ಷದ ಸಂವಿಧಾನದಂತೆ ಈ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ರಾಜ್ಯದ ಎಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದೆ ಎಂದು ಹೇಳಿದ್ದಾರೆ. ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಅಡ್ಡಾಡುತ್ತಿದೆ. ಆದರೆ ಸಿ.ಎಂ. ಇಬ್ರಾಹಿಂ ಅವರ ಬಗ್ಗೆ ಯಾವುದೇ ನಿರ್ಧಾರವನ್ನು

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ ದೇವೇಗೌಡ! Read More »

ಶಾಸಕರಿಂದ ಗ್ರಾಮಸ್ಥರ ಅಹವಾಲು ಸ್ವೀಕಾರ, ಶಾಸಕರಿಗೆ ಅಭಿನಂದನೆ

ಪುತ್ತೂರು: ಚುನಾವಣೆ ಬಂದರೆ ಸಾಕು ಹಿಂದುತ್ವದ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಜನರನ್ನು ಮೋಸ ಮಾಡಿ ಗೆಲ್ಲುವ ಬಿಜೆಪಿ, ಗೆದ್ದ ಬಳಿಕ ಜನರನ್ನು ಸಂಪೂರ್ಣವಾಗಿ ಮರೆತು ಬಿಡುತ್ತಾರೆ. ಇಷ್ಟು ವರ್ಷ ಆಡಳಿತ ನಡೆಸಿದ ಬಿಜೆಪಿಯವರು ಬಡವರಿಗೆ ಪ್ರಯೋಜನವಾಗುವ ಯಾವುದೇ ಕೆಲಸವನ್ನು ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಬಲ್ನಾಡು ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ಗ್ರಾಮಸ್ಥರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ನಾನು ಕೂಡ ಹಿಂದೆ ಬಿಜೆಪಿಯಲ್ಲೇ ಇದ್ದೆ. ಬಿಜೆಪಿಯರಿಗೆ ಬಡವರ ಕಷ್ಟ

ಶಾಸಕರಿಂದ ಗ್ರಾಮಸ್ಥರ ಅಹವಾಲು ಸ್ವೀಕಾರ, ಶಾಸಕರಿಗೆ ಅಭಿನಂದನೆ Read More »

ಶೇ. 80 ಕಮಿಷನ್ ಮೂಲಕ ರಾಜ್ಯ ಸರಕಾರದ ಸೂಟ್ ಕೇಸ್ ಭರಪೂರ ಭರ್ತಿ: ಸಂಜೀವ ಮಠಂದೂರು

ಪುತ್ತೂರು: ಪ್ರಸ್ತುತ ರಾಜ್ಯ ಸರಕಾರ ಸುಲಿಗೆಕೋರ ಸರಕಾರವಾಗಿದ್ದು, ಬಿಜೆಪಿ ನಿರಂತರ ಹೋರಾಟ, ಜನಾಂದೋಲನದ ಮೂಲಕ ಜನರನ್ನು ಎಬ್ಬಿಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ರಾಜ್ಯ ಸರಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಸ್ಮಾರಕದ ಬಳಿ ಮಂಗಳವಾರ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಒಂದೆಡೆ ಮಳೆ ಇಲ್ಲದೆ ಬರ ಪರಿಸ್ಥಿತಿ ಉಂಟಾಗಿದೆ. ಇನ್ನೊಂದೆಡೆ ಕರ್ನಾಟಕ ಸರಕಾರದ ಸೂಟ್ ಕೇಸ್ ಭರಪೂರ

ಶೇ. 80 ಕಮಿಷನ್ ಮೂಲಕ ರಾಜ್ಯ ಸರಕಾರದ ಸೂಟ್ ಕೇಸ್ ಭರಪೂರ ಭರ್ತಿ: ಸಂಜೀವ ಮಠಂದೂರು Read More »

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು?

ನವದೆಹಲಿ: 2024ರ ಲೋಕಸಭೆ ಚುನಾವಣೆ ಎದರಿಸಲು ಪ್ರತಿಪಕ್ಷಗಳು ಇಂಡಿಯಾ ಹೆಸರಿನಡಿ ಕೂಟವನ್ನು ರಚಿಸಿಕೊಂಡಿವೆ. ಆದರೆ, ಈ ಕೂಟದ ಪ್ರಮುಖ ಪಕ್ಷವಾಗಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ಮಧ್ಯ ಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದೆ. ಅಲ್ಲದೇ, ಶೀಘ್ರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಆಪ್‌ನ ರಾಷ್ಟ್ರೀಯ ಸಂಚಾಲಕ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದರೊಂದಿಗೆ ಇಂಡಿಯಾ ಕೂಟದ ಒಗ್ಗಟ್ಟಿಲ್ಲ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ. ಭಾರತೀಯ ಕೇಂದ್ರ ಚುನಾವಣಾ ಆಯೋಗ ಮಿಜೋರಾಂ,

ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು? Read More »

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ

ನವದೆಹಲಿ: ಪಂಚರಾಜ್ಯ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಜಸ್ಥಾನ್, ಛತ್ತೀಸ್’ಗಡ, ಮದ್ಯಪ್ರದೇಶ, ತೆಲಂಗಾಣ, ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಮಿಜೋರಾಂನಲ್ಲಿ ನವಂಬರ್ 7, ಮಧ್ಯಪ್ರದೇಶದಲ್ಲಿ ನವಂಬರ್ 17, ರಾಜಸ್ಥಾನದಲ್ಲಿ ನವಂಬರ್ 23, ತೆಲಂಗಾಣದಲ್ಲಿ ನವಂಬರ್ 30ರಂದು ಚುನಾವಣೆ ನಡೆಯಲಿದೆ. ಡಿ. 3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಪಂಚರಾಜ್ಯ ಚುನಾವಣೆ ಘೋಷಿಸಿದ ಕೇಂದ್ರ ಚುನಾವಣಾ ಆಯೋಗ | ನವಂಬರ್’ನಲ್ಲಿ ಚುನಾವಣೆ, ಡಿಸೆಂಬರ್ 3ರಂದು ಫಲಿತಾಂಶ Read More »

ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ!

ಸುಬ್ರಹ್ಮಣ್ಯ: ಕುಮಾರಸ್ವಾಮಿಯವರು ಈಗಾಗಲೇ ಗೃಹಮಂತ್ರಿ ಜೊತೆ ಚರ್ಚೆ ನಡೆಸಿದ್ದಾರೆ. ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೇ. ದಸರಾ ಕಳೆದು ಸೀಟು ಹಂಚಿಕೆ ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು. ದಕ್ಷಿಣ ಭಾರತದ ಹೆಸರಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮೈತ್ರಿಗೆ ಮೊದಲು ಜೆಡಿಎಸ್’ನ 19 ಶಾಸಕರು, 8 ಸಂಸದರು ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಜೊತೆ ಎರಡು

ಯಾಕಾಗಿ ನಡೆಯಿತು ಬಿಜೆಪಿ – ಜೆಡಿಎಸ್ ಮೈತ್ರಿ? ಒಳಗುಟ್ಟು ಬಿಚ್ಚಿಟ್ಟ ದೇವೇಗೌಡ! Read More »

error: Content is protected !!
Scroll to Top