ರಾಜಕೀಯ

ಪುತ್ತೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ನಳಿನ್

ಪುತ್ತೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನೀವಾಸ್ ರಾವ್, ಪ್ರಮುಖರಾದ ಜೀವಂಧರ್ ಜೈನ್, ಚನಿಲ ತಿಮ್ಮಪ್ಪ ಶೆಟ್ಟಿ, ಎಸ್. ಅಪ್ಪಯ್ಯ ಮಣಿಯಾಣಿ, ಆರ್.ಸಿ. ನಾರಾಯಣ್, ಚಂದ್ರಶೇಖರ್ ರಾವ್, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ ಮೊದಲಾದವರು ಉಪಸ್ಥಿತರಿದ್ದರು.

ಪುತ್ತೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ನಳಿನ್ Read More »

ಪುತ್ತೂರಿನ ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮಾನಾಥ ರೈ

ಪುತ್ತೂರು: ಮಾಜಿ ಸಚಿವ ಬಿ. ರಮಾನಾಥ ರೈ ಅವರು ತಮ್ಮ 72ನೇ ಹುಟ್ಟು ಹಬ್ಬವನ್ನು ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟುಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದೇನೆ. ಅವೆಲ್ಲವನ್ನು ಸಮಾನವಾಗಿ ಸ್ವೀಕರಿಸುತ್ತಾ ಬಂದಿದ್ದೇನೆ. ಇಲ್ಲಿನ ಜನರು ನನಗೆ ನೀಡಿರುವ ಪ್ರೀತಿಗೆ ಬೆಲೆ ಕಟ್ಟಲಾಗದು ಎಂದರು. ಸಾರ್ವಜನಿಕ ಬದುಕಿನಲ್ಲಿ ಪ್ರೀತಿ ವಿಶ್ವಾಸ ಹಂಚಿಕೊಳ್ಳುವುದು ಸಹಜ. ಪ್ರೀತಿಯ ಸಂಬಂಧಗಳು

ಪುತ್ತೂರಿನ ಪ್ರಜ್ಞಾ ಆಶ್ರಮದ ವಿಶೇಷ ಚೇತನರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ರಮಾನಾಥ ರೈ Read More »

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ

ಬೆಂಗಳೂರು: ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಸಂಪುಟ ಉಪಸಮಿತಿಯ ಸಭೆಯ ಬಳಿಕ ಕೃಷ್ಣ ಭೈರೇಗೌಡ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು. ಬರಪೀಡಿತ ತಾಲೂಕುಗಳಿಗೆ ಪರಿಹಾರದ ಅಗತ್ಯವಿದೆ. ಆದರೆ ಅದಕ್ಕೂ ಮೊದಲು ಬರಪೀಡಿತ ತಾಲೂಕುಗಳ ಘೋಷಣೆ ಆಗಬೇಕಿದೆ. ಆದ್ದರಿಂದ ಘೋಷಣೆಗಾಗಿ ಸಿಎಂಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು. ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತು. ಆದರೆ ಈ ಬಾರಿಯ ಮಳೆ ಕೊರತೆಯಿಂದಾಗಿ ಬರದ ಸಮಸ್ಯೆ

ರಾಜ್ಯದ 195 ತಾಲೂಕುಗಳು ಬರ ಪೀಡಿತ! | ಸಿಎಂಗೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ | ಈ ಹಿಂದೆ 62 ತಾಲೂಕುಗಳು ಬರಪೀಡಿತವಾಗಿತ್ತೆಂದು ಮಾಹಿತಿ ನೀಡಿದ ಸಚಿವ Read More »

ಹಿಂದೂ ವಿರೋಧಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ | ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 170 ರೈತರ ಆತ್ಮಹತ್ಯೆ: ಸಂಜೀವ ಮಠಂದೂರು

ಪುತ್ತೂರು: ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ಬುಧವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50 ಲಕ್ಷ ಕೋಟಿ ರೂಪಾಯಿಯನ್ನು ಬಿಜೆಪಿ ಸರ್ಕಾರ

ಹಿಂದೂ ವಿರೋಧಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ | ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ 170 ರೈತರ ಆತ್ಮಹತ್ಯೆ: ಸಂಜೀವ ಮಠಂದೂರು Read More »

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್‌ ಅವರ ವಿರುದ್ಧ ಎಫ್‌.ಐ.ಆರ್‌ ದಾಖಲಾದ ಹಿನ್ನೆಲೆಯಲ್ಲಿ ಸಂಪುಟದಿಂದ ಅವರನ್ನು ಕೈ ಬಿಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಸುಧಾಕರ್‌ ಅವರನ್ನು ಸಂಪುಟದಿಂದ ಕೈ ಬಿಟ್ಟು ಮುಖ್ಯಮಂತ್ರಿ ಮೇಲ್ಪಂಕ್ತಿ ಹಾಕಲಿ. ಪ್ರಭಾವವನ್ನು ಬಳಸಿ ಪ್ರಕರಣದ ತಿರುಚುವ ಮೊದಲು ಸುಧಾಕರ್‌ ಅವರನ್ನು ವಜಾ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಗ್ಯಾರಂಟಿ ಮೂಲಕ ಎಸ್‌ಸಿ ಎಸ್‌ಪಿ ಹಣ ನುಂಗಿದ್ರು. ಈಗ ಸುಧಾಕರ್‌ ದಲಿತರ

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ Read More »

ಶಾಸಕರ ಕಚೇರಿ ನವೀಕರಣಕ್ಕೆ ತೆರಿಗೆ ಹಣ ದುರುಪಯೋಗ! | ಪ್ರತಿಭಟನೆ ಹಿನ್ನೆಲೆಯಲ್ಲಿ ಸಭೆ ಕರೆದ ಬಿಜೆಪಿ

ಪುತ್ತೂರು: ಶಾಸಕರ ನೂತನ ಕಚೇರಿ ನವೀಕರಣಕ್ಕೆ ತೆರಿಗೆ ಹಣವನ್ನು ಬಳಸಿಕೊಂಡು, ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನೀವಾಸ್ ರಾವ್ ಅಧ್ಯಕ್ಷತೆಯಲ್ಲಿ ನಗರಸಭೆ ಸದಸ್ಯರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ನೂತನ ಕಚೇರಿಗಾಗಿ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಶಾಸಕರ ಕ್ರಮ ಸರಿಯಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಇದರೊಂದಿಗೆ, ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಅನುಷ್ಠಾನ ವಿಳಂಬ, ನಗರಸಭಾ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವಿಳಂಬ ಮೊದಲಾದ

ಶಾಸಕರ ಕಚೇರಿ ನವೀಕರಣಕ್ಕೆ ತೆರಿಗೆ ಹಣ ದುರುಪಯೋಗ! | ಪ್ರತಿಭಟನೆ ಹಿನ್ನೆಲೆಯಲ್ಲಿ ಸಭೆ ಕರೆದ ಬಿಜೆಪಿ Read More »

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ

ಬೆಂಗಳೂರು: ಮಳೆ ಕೊರತೆಯಿಂದ ಎದುರಾಗಿರುವ ಬರ ಹಾಗೂ ಇನ್ನೂ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ‘ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ Read More »

ಜನಸಾಮಾನ್ಯರಿಗೆ ನೀಡುವ ಸೇವೆಗಳ ಜ್ಞಾನ ಪಡೆದುಕೊಳ್ಳಿ | ಪುತ್ತೂರಿನಲ್ಲಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ಅಭಿವೃದ್ಧಿ, ಸಂಘಟನೆ ಜೊತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಿ: ಸಂಜೀವ ಮಠಂದೂರು

ಪುತ್ತೂರು: ಗ್ರಾ.ಪಂ. ಅಧ್ಯಕ್ಷರು ಅಥವಾ ಸದಸ್ಯರಿಗೆ ತಮ್ಮ ಜವಾಬ್ದಾರಿಯ ಅರಿವಿರಬೇಕು. ಪಂಚಾಯತ್ ಕಾಯಿದೆಯ ತಿಳುವಳಿಕೆ, ಯೋಜನೆಗಳ ಮಾಹಿತಿಗಳನ್ನು ತಿಳಿದುಕೊಂಡು ಜನಸಾಮಾನ್ಯರಿಗೆ ನೀಡಬಹುದಾದ ಸೇವೆಗಳ ಜ್ಞಾನ ಹೊಂದಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಗ್ರಾಮಾಂತರ ಮಂಡಲದ ವತಿಯಿಂದ ಸೋಮವಾರ ನಗರದ ತೆಂಕಿಲ ಚುಂಚಶ್ರೀ ಸಭಾಭವನದಲ್ಲಿ ಗ್ರಾಮ ಪಂಚಾಯತ್ಗಳ ಮಾಜಿ ಮತ್ತು ಹಾಲಿ ಅಧ್ಯಕ್ಷ, ಉಪಾಧ್ಯಕ್ಷರಿಗೆ ಆಯೋಜಿಸಲಾದ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಷ್ಠೆ, ದೈಹಿಕ ಶಕ್ತಿ, ಆರ್ಥಿಕ

ಜನಸಾಮಾನ್ಯರಿಗೆ ನೀಡುವ ಸೇವೆಗಳ ಜ್ಞಾನ ಪಡೆದುಕೊಳ್ಳಿ | ಪುತ್ತೂರಿನಲ್ಲಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ಅಭಿವೃದ್ಧಿ, ಸಂಘಟನೆ ಜೊತೆಗೆ ವ್ಯಕ್ತಿತ್ವ ಬೆಳೆಸಿಕೊಳ್ಳಿ: ಸಂಜೀವ ಮಠಂದೂರು Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ

ಸುಳ್ಯ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ರೈತ ವಿರೋಧಿ ಮತ್ತು ಜನ ವಿರೋಧಿ ನಿಲುವುಗಳನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ರೈತ ಮೋರ್ಚಾ ವತಿಯಿಂದ ಸೆ. 11ರಂದು ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಜನಪ್ರತಿನಿಧಿಗಳು, ಸಹಕಾರಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಬಿಜೆಪಿಯ ಪ್ರಮುಖರು, ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ರೈತ ಮೋರ್ಚಾ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ | ರೈತ ವಿರೋಧಿ, ಜನ ವಿರೋಧಿ ನಿಲುವಿಗೆ ಖಂಡನೆ Read More »

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹಾಗೂ ಅಮಿತ್ ಶಾ ಅವರ ನಡುವೆ ಮಾತುಕತೆ ನಡೆದಿದೆ ಎನ್ನಲಾದ ಬೆನ್ನಿಗೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಸಚಿವ ಸಿ.ಟಿ. ರವಿ ಅವರು ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ Read More »

error: Content is protected !!
Scroll to Top