ಎಸ್ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ
ಪುತ್ತೂರು: ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು. – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು. […]