ರಾಜಕೀಯ

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ದೆಹಲಿ : ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಲೋಕಸಭಾ ಕಲಾಪವನ್ನು ಸಂಜೆ 4 ಗಂಟೆವರೆಗೆ ಮುಂದೂಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ್ದರು. ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿತ್ತು. ಜತೆಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದೀಗ ಅವರು […]

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ Read More »

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ

ಡಿ.ಕೆ.ಬ್ರದರ್ಸ್‌ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು,

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ Read More »

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ

ಮೈತ್ರಿಯಲ್ಲಿ ಬಿರುಕು ಉಂಟಾದೀತು ಎಂದು ತಾಕೀತು ಮುಂಬಯಿ : ಸಾವರ್ಕರ್‌ ಅವರನ್ನು ಅವಮಾನಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವರ ಮಿತ್ರ ಪಕ್ಷವೇ ತಿರುಗಿ ಬಿದ್ದಿದೆ. ಸಾವರ್ಕರ್ ನಮ್ಮ ದೇವರು ಅವರನ್ನು ಅವಮಾನಿಸಿದರೆ ನಾವು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರ್‌ನ ಮಿತ್ರ ಪಕ್ಷವಾಗಿರುವ ಶಿವಸೇನೆ (ಉದ್ಧವ್‌ ಬಣ) ಮುಖಂಡ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಅವರು, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಿದೆ, ಸಾವರ್ಕರ್ ಅವರು

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ Read More »

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ರ್ಯಾಲಿ Read More »

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ

ಬೆಂಗಳೂರು : ಬಹು ಸಮಯದಿಂದ ನಿರೀಕ್ಷಿಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬೆಳಗ್ಗೆ ದಿಢೀರ್‌ ಎಂದು ಬಿಡುಗಡೆ ಮಾಡಲಾಗಿದೆ. ಮೊದಲ ಪಟ್ಟಿಯಲ್ಲೇ ಸಿದ್ದರಾಮಯ್ಯ ಹೆಸರಿದ್ದು, ಅವರಿಗೆ ವರುಣಾ ಕ್ಷೇತ್ರವನ್ನು ನೀಡಲಾಗಿದೆ. ಇದರೊಂದಿಗೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಬಗೆಹರಿದಿದೆ. ವರುಣಾದಲ್ಲಿ ಪ್ರಸ್ತುತ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಶಾಸಕರಾಗಿದ್ದಾರೆ.ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರಿದ್ದು, ನಂಜನಗೂಡಿನಲ್ಲಿ ಧ್ರುವ ನಾರಾಯಣ್‌ ಅವರ ಪುತ್ರ ದರ್ಶನ್‌,ಕನಕಪುರದಿಂದ ಡಿ. ಕೆ. ಶಿವಕುಮಾರ್‌, ದೇವನಹಳ್ಳಿಯಿಂದ ಎಚ್‌. ಸಿ. ಮುನಿಯಪ್ಪ ಸ್ಪರ್ಧಿಸಲಿದ್ದಾರೆ.ಕಾಪುವಿನಿಮದ ವಿನಯ್‌ ಕುಮಾರ್‌

ಬಹು ನಿರೀಕ್ಷೆಯ ಕಾಂಗ್ರೆಸ್‌ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ Read More »

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು

ದೆಹಲಿ : ಮೋದಿ ಕುಲನಾಮ ಹೊಂದಿರುವವರೆಲ್ಲ ಕಳ್ಳರು ಎಂಬರ್ಥ ಬರುವಂತೆ ಮಾಡಿದ ಭಾಷಣ ಕೊನೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತನಕ್ಕೆ ಕುತ್ತು ತಂದಿದೆ. ವಿಶೇಷ ಎಂದರೆ ಕ್ರಿಮಿನಲ್‌ ಪ್ರಕರಣದಲ್ಲಿ ಶಿಕ್ಷೆಯಾದ ಸಂಸದರ ಸದಸ್ಯತ್ವ ತಕ್ಷಣ ರದ್ದುಗೊಳಿಸಬೇಕೆಂಬ ಕೇಂದ್ರ ಸರಕಾರದ ಒಂದು ಸುಗ್ರೀವಾಜ್ಞೆಯನ್ನು ಪ್ರತಿಭಟಿಸಿ ರಾಹುಲ್‌ ಗಾಂಧಿ ಅದರ ಪ್ರತಿಯನ್ನು ಪತ್ರಿಕಾಗೋಷ್ಠಿಯಲ್ಲಿ ಹರಿದೆಸೆದು ವೀರಾವೇಶ ಪ್ರದರ್ಶಿಸಿದ್ದರು. ಆಗ ಕಾಂಗ್ರೆಸಿನ ಯುವರಾಜನಾಗಿ ಕಂಗೊಳಿಸುತ್ತಿದ್ದ ರಾಹುಲ್‌ ಗಾಂಧಿಯ ಪತ್ರಿಕಾಗೋಷ್ಠಿಯ ಈ ವೀರಾವೇಶ ಆ ದಿನಗಳಲ್ಲಿ ಭಾರಿ ಸುದ್ದಿಯಾಗಿತ್ತು. ದೇಶವಿಡೀ

ಅಂದು ವೀರಾವೇಶದಿಂದ ಹರಿದೆಸೆದ ಸುಗ್ರೀವಾಜ್ಞೆಯೇ ಇಂದು ಸಂಸತ್‌ ಸದಸ್ಯತ್ವಕ್ಕೆ ಕುತ್ತು ತಂದಿತು Read More »

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್​ ನೀಡಬೇಕೆಂದು ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತರು ಇಂದು (ಮಾರ್ಚ್ 24) ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಆಗ್ರಹಿಸಿದರು. ಈ ವೇಳೆ ತಳ್ಳಾಟ ನೂಕಾಟದಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ವಿಡಿಯೋ

ಸಿದ್ದರಾಮಯ್ಯನವರಿಂದ ಕಾಂಗ್ರೆಸ್​ ಕಾರ್ಯಕರ್ತನಿಗೆ ಕಪಾಳಮೋಕ್ಷ Read More »

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. ಮೇ ತಿಂಗಳ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ : ಮುಖ್ಯ ಚುನಾವಣಾಧಿಕಾರಿ Read More »

error: Content is protected !!
Scroll to Top