ಕಾಂಗ್ರೆಸ್ ಸರಕಾರ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೇ ಜನರನ್ನು ವಂಚಿಸಲು ಪ್ರಯತ್ನಿಸುತ್ತಿದೆ : ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವುದಾಗಿ ಘೋಷಿಸಿದ್ದರೂ, ಬಜೆಟ್ ನಲ್ಲಿ ಇದರ ವೆಚ್ಚದ ಉಲ್ಲೇಖವಿಲ್ಲ […]










