ಟ್ಯಾಂಕರ್ ನೀರು ಚುನಾವಣಾ ಗಿಮಿಕ್: ಕಲ್ಲಂದಡ್ಕದಲ್ಲಿ ನೀರಿನ ವ್ಯತ್ಯಯ ಉಂಟಾಗಿಲ್ಲವೆಂದ ಕುಡಿಪ್ಪಾಡಿ ಗ್ರಾ.ಪಂ. ಅಧ್ಯಕ್ಷೆ
ಪುತ್ತೂರು: ಕುಡಿಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕಲ್ಲಂದಡ್ಕದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿಲ್ಲ. ನಿನ್ನೆ(ಬುಧವಾರ)ಯಷ್ಟೇ ಬೋರ್ ವೆಲ್ ಪಂಪ್ ಹಾಳಾಗಿದ್ದು, ನಾಳೆ(ಶುಕ್ರವಾರ) ಪಂಪ್ ಅಳವಡಿಕೆ ಮಾಡಲಾಗುವುದು. ತಕ್ಷಣವೇ ನೀರು ಸರಬರಾಜು ಆಗಲಿದೆ ಎಂದು ಕುಡಿಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಬಟ್ರುಪ್ಪಾಡಿ ತಿಳಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಗಿಮಿಕ್ ಗಳನ್ನು ಮಾಡಲು ಕೆಲವರು ಮುಂದಾಗುತ್ತಾರೆ. ಅಲ್ಲಿ ನೀರಿನ ಕೊರತೆ ಇಲ್ಲದೇ ಇದ್ದರೂ, ಅನಾವಶ್ಯಕವಾಗಿ ಪ್ರಚಾರ ಗಿಟ್ಟಿಸುವ ಉದ್ದೇಶದಿಂದ ನೀರು ನೀಡಲಾಗುತ್ತಿದೆ. ಬಳಿಕ ಅದನ್ನು ಫೊಟೋ ತೆಗೆದು, ಪ್ರಚಾರ ತೆಗೆದುಕೊಳ್ಳುವ ಪ್ರಯತ್ನವಷ್ಟೇ ಇದು. […]