ರಾಜಕೀಯ

ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು

ಪುತ್ತೂರು: ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆಯಾಗಿದ್ದಾರೆ. ಒಟ್ಟು 11 ಮಂದಿ ಸದಸ್ಯರ ಪೈಕಿ 6 ಬಿಜೆಪಿ ಮತ್ತು 5 ಕಾಂಗ್ರೆಸ್ ಬೆಂಬಲಿತರಿದ್ದು, ಬುಧವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯೋರ್ವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾವಣೆ ಮಾಡುವ ಮೂಲಕ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್, ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು Read More »

ಬಲ್ನಾಡು ಗ್ರಾಪಂ ಅಧ್ಯಕ್ಷರಾಗಿ ಪರಮೇಶ್ವರಿ ಭಟ್, ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ

ಬಲ್ನಾಡು: ಬಲ್ನಾಡು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪರಮೇಶ್ವರಿ ಭಟ್ ಬಲ್ನಾಡು ಮತ್ತು ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ ಆಯ್ಕೆಯಾಗಿದ್ದಾರೆ. ಆ.16ರಂದು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪರಮೇಶ್ವರಿ ಭಟ್ ಬಲ್ನಾಡು ನೂತನ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ ಅವಿರೋಧವಾಗಿ ಆಯ್ಕೆ ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ರಾಧಾಕೃಷ್ಣ ಆಳ್ವ ಸಾಜ, ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮನಿಯಾಣಿ, ಜೀವಂದರ್ ಜೈನ್, ಗ್ರಾ ಪಂ ಸದಸ್ಯರು, ಮತ್ತಿರರು

ಬಲ್ನಾಡು ಗ್ರಾಪಂ ಅಧ್ಯಕ್ಷರಾಗಿ ಪರಮೇಶ್ವರಿ ಭಟ್, ಉಪಾಧ್ಯಕ್ಷರಾಗಿ ರವಿಚಂದ್ರ ಸಾಜ Read More »

ಕೌನ್ಸಿಲಿಂಗ್ ಮೂಲಕ ವೈದ್ಯರ ನೇಮಕ | ಪ್ಯಾರಾ ಮೆಡಿಕಲ್ ಸಿಬ್ಬಂದಿ ನೇಮಕಾತಿಯಲ್ಲಿ ಸಮಸ್ಯೆ: ಸಚಿವ ಗುಂಡೂರಾವ್

ಪುತ್ತೂರು: ಎಂಬಿಬಿಎಸ್ ಪದವೀಧರರ ಕೌನ್ಸಿಲಿಂಗ್‍ ಮೂಲಕ ಅಗತ್ಯ ಸಂಖ್ಯೆಯ ವೈದ್ಯರ ನೇಮಕ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಶುಕ್ರವಾರ ಪುತ್ತೂರು ತಾಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಕೌನ್ಸಿಲಿಂಗ್ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಶೀಘ್ರ ನೇಮಕಾತಿ ಪೂರ್ಣಗೊಳ್ಳಳಲಿದೆ ಎಂದ

ಕೌನ್ಸಿಲಿಂಗ್ ಮೂಲಕ ವೈದ್ಯರ ನೇಮಕ | ಪ್ಯಾರಾ ಮೆಡಿಕಲ್ ಸಿಬ್ಬಂದಿ ನೇಮಕಾತಿಯಲ್ಲಿ ಸಮಸ್ಯೆ: ಸಚಿವ ಗುಂಡೂರಾವ್ Read More »

ಜನರಿಗೆ ಪ್ರಯೋಜನವಾಗುವ ಯೋಜನೆ ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಕಾಂಗ್ರೆಸ್ ಸರಕಾರದಿಂದ ಆಗಿದೆ : ದಿನೇಶ್ ಗೂಂಡೂರಾವ್ | ಪುತ್ತೂರಿನಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಇಷ್ಟು ಪ್ರಮಾಣದ ಯೋಜನೆಯ ದೇಶದಲ್ಲಿ ಯಾರೂ ನೀಡಿಲ್ಲ. ಪ್ರತಿಯೊಂದು ಮನೆಗೆ, ಜನರಿಗೆ ಪ್ರಯೋಜನವಾಗುವ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ನಗರದ ಪುರಭವನದಲ್ಲಿ ರಾಜ್ಯ ಸರಕಾರದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ. ಆದ್ದರಿಂದ ಜನರು ಇದರ ಫಲಾನುಭವಿಗಳಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ ಬಾಕಿ ಇರುವ

ಜನರಿಗೆ ಪ್ರಯೋಜನವಾಗುವ ಯೋಜನೆ ಜಾರಿಗೆ ತರುವ ಮೂಲಕ ಜನರಿಗೆ ಶಕ್ತಿ ನೀಡುವ ಕೆಲಸ ಕಾಂಗ್ರೆಸ್ ಸರಕಾರದಿಂದ ಆಗಿದೆ : ದಿನೇಶ್ ಗೂಂಡೂರಾವ್ | ಪುತ್ತೂರಿನಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ Read More »

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಹರಿಣಿ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠದೂರು,ನರಿಮೊಗರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಿದ್ಯಾ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನರಿಮೊಗರು ಗ್ರಾಮ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಸುಧಾಕರ್ ಕುಲಾಲ್, ನವೀನ್ ರೈ ಶಿಬರ, ಹಾಗೂ ಪಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ Read More »

ಸಿದ್ಧರಾಮಯ್ಯ ಸರಕಾರ ನೂರು ದಿನ ತುಂಬುವಷ್ಟರಲ್ಲಿ ಶೇ.100 ಭ್ರಷ್ಟ ಸರಕಾರವಾಗಲಿದೆ | ಸುನಿಲ್ ಕುಮಾರ್ ಲೇವಡಿ

ಕಾರ್ಕಳ: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೂರು ದಿನ ತುಂಬುವಷ್ಟರಲ್ಲಿ ನೂರು ಶೇ. ಭ್ರಷ್ಟ ಸರಕಾರವಾಗಲಿದೆ ಎಂದು ಮಾಜಿ ಸಚಿವ ವಿ.ಸುನಿಲ್ ಕುಮಾರ್ ಲೇವಡಿ ಮಾಡಿದ್ದಾರೆ. ಗುತ್ತಿಗೆದಾರ ಗೌತಮ್ ಆತ್ಮಹತ್ಯೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಕ್ಕೆ ಬಂದ ಮರು ದಿನದಿಂದಲೇ ಅಧಿಕೃತವಾಗಿ ಭ್ರಷ್ಟಾಚಾರದ ಅಂಗಡಿ ಬಾಗಿಲು ತೆರೆದ ಕಾಂಗ್ರೆಸ್ಸಿಗರು ಆರೋಪಗಳನ್ನೆಲ್ಲಾ ನಕಲಿ ಎಂದು ಜಾರಿಕೊಳ್ಳುತ್ತಿದ್ದರು. ಇದೀಗ ಸರಕಾರದ ಧನದಾಹಕ್ಕೆ ಗುತ್ತಿಗೆದಾರ ಗೌತಮ್ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಆರೋಪಿಸಿದರು. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ

ಸಿದ್ಧರಾಮಯ್ಯ ಸರಕಾರ ನೂರು ದಿನ ತುಂಬುವಷ್ಟರಲ್ಲಿ ಶೇ.100 ಭ್ರಷ್ಟ ಸರಕಾರವಾಗಲಿದೆ | ಸುನಿಲ್ ಕುಮಾರ್ ಲೇವಡಿ Read More »

ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ : ಹರಿಪ್ರಸಾದ್ ಯಾದವ್

ಪುತ್ತೂರು: ಕೆದಿಲ ಗ್ರಾಮ ಪಂಚಾಯತಿಗೆ ನಡೆದ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದ್ದು, ಬಿಜೆಪಿ ಬೆಂಬಲಿತ ಮೂವರು ಸದಸ್ಯರಿಗೆ ಹಣ ಮತ್ತು ಅಧಿಕಾರದ ಅಮಿಷ ತೋರಿಸಿ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ ಹರಿಪ್ರಸಾದ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿ ಬೆಂಬಲದಿಂದ ಗೆದ್ದು ಬಂದು ಇದೀಗ ಕಾಂಗ್ರೇಸ್ ಸೇರಿರುವ ಸದಸ್ಯರು ಪಾರ್ಟಿಗೆ ಮತ್ತು ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಅವರು ಸದಸ್ಯತನಕ್ಕೆ

ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ : ಹರಿಪ್ರಸಾದ್ ಯಾದವ್ Read More »

ವಿಟ್ಲಮುಡ್ನೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ವಿಟ್ಲ: ವಿಟ್ಲಮೂಡ್ನೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪುನೀತ್ ಮಾಡತ್ತಾರು ಹಾಗೂ ಉಪಾಧ್ಯಕ್ಷರಾಗಿ ರೋಹಿಣಿ ಆಯ್ಕೆಯಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪ್ರಮುಖರಾದ ಹರಿಪ್ರಸಾದ್ ಯಾದವ್, ಹರೀಶ್ ಬಿಜತ್ರೆ, ನಿತೇಶ್ ಕುಮಾರ್ ಶಾಂತಿವನ, ವಿಶ್ವನಾಥ ಕುಲಾಲ್, ಶಕ್ತಿ ಕೇಂದ್ರದ ಅಧ್ಯಕ್ಷ ಗೋವಿಂದರಾಜ್ ಪಂಚಾಯತ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ನಾಯಕ್, ಸದಸ್ಯರಾದ ಮಹಾಬಲೇಶ್ವರ ಭಟ್ ಹೇಮಲತಾ, ಉಮೇಶ್ ಎರ್ಕಲ್ತೋಟ, ಲೋಕೇಶ್ ಮೊದಲಾದವರು

ವಿಟ್ಲಮುಡ್ನೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ Read More »

ಆ.11 : ಪುತ್ತೂರಿನಲ್ಲಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಅಧಿಕೃತ ಚಾಲನೆ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಗೃಹಜ್ಯೋತಿ ಯೋಜನೆಯ ಅಧಿಕೃತ ಚಾಲನಾ ಕಾರ್ಯಕ್ರಮ ಆ.11 ರಂದು ಪುತ್ತೂರಿನಲ್ಲಿ ನಡೆಯಲಿದೆ. ಈ ಕುರಿತ ಪೂರ್ವಭಾವಿ ಸಭೆ ಶಾಸಕರ ನೇತೃತ್ವದಲ್ಲಿ ಸೋಮವಾರ ನಡೆಯಿತು. ಪುತ್ತೂರಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ನಗರ ಸಹಾಯಕ ಇಂಜಿನಿಯರ್ ರಾಜೇಶ್ ಪುತ್ತೂರು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ, ಪುತ್ತೂರು ಬ್ಲಾಕ್

ಆ.11 : ಪುತ್ತೂರಿನಲ್ಲಿ ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಅಧಿಕೃತ ಚಾಲನೆ Read More »

ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನ ಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ | ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು. ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದಿಗೂ ಸ್ಥಾನಮಾನ ಇರುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕರ್ತರು ಕಳೆದ ಚುನಾವಣೆಯಲ್ಲಿ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ಹಗಲಿರುಳು ದುಡಿದ ಪರಿಣಾಮ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೇವಲ ನಾಯಕರಿಂದ ಮಾತ್ರ ಏನೂ ಮಾಡಲು

ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನ ಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ | ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

error: Content is protected !!
Scroll to Top