ಕಡಬ ಸಮುದಾಯ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸಲು ಕ್ರಮದ ಭರವಸೆ
ಕಡಬ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಸಿಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್ರೇ ಯಂತ್ರ ನೀಡಲಾಗಿದ್ದರೂ ಎಕ್ಸ್ರೇ ತಂತ್ರಜ್ಞ ಹುದ್ದೆ ಖಾಲಿ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕಿ […]










