ರಾಜಕೀಯ

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ

ಕಾಣಿಯೂರು: ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಕೆಪಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿರವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಗೂಡೂರಾವ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ದ. ಕ ಜಿಲ್ಲಾ ಉಸ್ತುವಾರಿ ಸಚಿವ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಅವರು ಮೊದಲ ಬಾರಿಗೆ ಭಾನುವಾರ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಭೇಟಿ ಮಾಡಿದ ಸತೀಶ್ ಕುಮಾರ್ […]

ಪುತ್ತೂರು: ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ Read More »

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ | 31 ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲಾಗಿದೆ. 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿ.ಕೆ. ಶಿವಕುಮಾರ್, ತುಮಕೂರಿಗೆ ಡಾ. ಜಿ. ಪರಮೇಶ್ವರ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರಗಿಗೆ ಪ್ರಿಯಾಂಕ್ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ | 31 ಜಿಲ್ಲೆಗಳ ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆ Read More »

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ? Read More »

ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ | 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಡಿಸಿದ್ದಾರೆ, ಈ ಮೂಲಕ ಕಳೆದ 7 ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ. ಕೋಡಿಂಬಡಿ ಗ್ರಾಮದ ಅರ್ಬಿ-ಕೂರ್ನಡ್ಕದಲ್ಲಿ ಕೋಡಿಂಬಡಿ ಗ್ರಾಪಂ ಗ್ರಾಮದ ಮನೆ ರಹಿತರಿಗೆ ನಿವೇಶನವನ್ನು ಕಾಯ್ದಿರಿಸಿತ್ತು. 2014-15 ನೇ ಸಾಲಿನಲ್ಲಿ ಕೋಡಿಂಬಾಡಿ ಗ್ರಾಮಪಂಚಾಯತ್ ಅರ್ಬಿಯಲ್ಲಿದ್ದ 1.34 ಎಕ್ರೆ ಸ್ಥಳದಲ್ಲಿ 29 ಮಂದಿ ಫಲಾನುಭವಿಗಳಿಗೆ

ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ | 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ Read More »

ಸಿ.ಎ.ಬ್ಯಾಂಕ್ ಗೋದಾಮು ಕಟ್ಟಡ ಉದ್ಘಾಟನೆ|ಸಹಕಾರಿ ಸಂಘಗಳು ಗ್ರಾಮೀಣ ರೈತರ ಬದುಕಿನ ಜೀವನಾಡಿ: ಭಾಗೀರಥಿ ಮುರುಳ್ಯ

ಕಡಬ: ರೈತರ ದೈನಂದಿನ ಅಗತ್ಯಗಳಿಗೆ ಪೂರಕವಾಗಿ ಸ್ಪಂದಿಸುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ರೈತರ ಬದುಕಿನ ಜೀವನಾಡಿಯಾಗಿದೆ ಎಂದು ಸುಳ್ಯ ವಿಧಾನಸಭಾ  ಕ್ಷೇತ್ರದ ಶಾಸಕಿ  ಭಾಗೀರಥಿ ಮುರುಳ್ಯ ಹೇಳಿದರು. ಅವರು ಶನಿವಾರ  ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮರ್ದಾಳ ಶಾಖಾ ಕಚೇರಿಯ ಆವರಣದಲ್ಲಿ  ನಬಾರ್ಡ್ ನೆರವಿನೊಂದಿಗೆ 60 ಲಕ್ಷ ರೂ. ವೆಚ್ಚದಲ್ಲಿ  ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.  ರೈತರಿಗೆ ಸಹಕಾರಿ ಸಂಘಗಳ ಸವಲತ್ತುಗಳು  ಸರಕಾರದ ಯೋಜನೆಗಳಿಗಿಂತಲೂ ಹೆಚ್ಚು  ಪ್ರಯೋಜನಕಾರಿಯಾಗಿವೆ.

ಸಿ.ಎ.ಬ್ಯಾಂಕ್ ಗೋದಾಮು ಕಟ್ಟಡ ಉದ್ಘಾಟನೆ|ಸಹಕಾರಿ ಸಂಘಗಳು ಗ್ರಾಮೀಣ ರೈತರ ಬದುಕಿನ ಜೀವನಾಡಿ: ಭಾಗೀರಥಿ ಮುರುಳ್ಯ Read More »

ಗೃಹ ಸಚಿವ ಪರಮೇಶ್ವರವರಿಗೆ ಸತೀಶ್ ಕುಮಾರ್ ಕೆಡೆಂಜಿ ಗೌರವಾರ್ಪಣೆ

ಮಂಗಳೂರು: ರಾಜ್ಯದ ನೂತನ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಕುಮಾರ್ ಕೆಡೆಂಜಿ ಅವರು ಗೌರವಿಸಿದರು. ಮಂಗಳೂರಿಗೆ ಆಗಮಿಸಿದ್ದ ಗೃಹ ಸಚಿವರನ್ನು ಭೇಟಿಯಾದ ಸತೀಶ್ ಕೆಡೆಂಜಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಗೃಹ ಸಚಿವ ಪರಮೇಶ್ವರವರಿಗೆ ಸತೀಶ್ ಕುಮಾರ್ ಕೆಡೆಂಜಿ ಗೌರವಾರ್ಪಣೆ Read More »

ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಸುಳ್ಯ ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಸಂಕಲ್ಪಕ್ಕೆ ಸಹಕರಿಸಿ: ನೂತನ ಶಾಸಕಿ ಭಾಗೀರಥಿ ಮುರುಳ್ಯ

ಕಡಬ : ಅಧಿಕಾರಿಗಳು ಲಂಚ ಪ್ರಪಂಚದಿಂದ ಹೊರಬಂದು  ಭ್ರಷ್ಟಾಚಾರ ಮುಕ್ತವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನನ್ನ ಕನಸಿನ ಸುಳ್ಯ ಕ್ಷೇತ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು, ಆ ಮೂಲಕ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ಮಾಡಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಸೋಮವಾರ ಕಡಬ ತಾಲೂಕು ಪಂಚಾಯಿತಿಯ ನೂತನ ಕಟ್ಟಡದ  ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನನ್ನ ಕನಸಿನ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು ಏನು ಮಾಡಬೇಕು ಎಂದು ಚರ್ಚಿಸಿದರು.

ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ಸುಳ್ಯ ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಸಂಕಲ್ಪಕ್ಕೆ ಸಹಕರಿಸಿ: ನೂತನ ಶಾಸಕಿ ಭಾಗೀರಥಿ ಮುರುಳ್ಯ Read More »

ಕಾಂಗ್ರೇಸ್ ಮುಖಂಡ ಜಿ.ಕೃಷ್ಣಪ್ಪ ರಿಂದ ಕಡಬ ಮಿನಿವಿಧಾನ ಸೌಧ ಪರಿಶೀಲನೆ | ಪರಾಜಿತ ಅಭ್ಯರ್ಥಿಯಿಂದ ಭರಪೂರ ಭರವಸೆ

ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ಕಾಂಗ್ರೇಸ್ ಉಸ್ತುವಾರಿ ಕಾಂಗ್ರೇಸ್ ಮುಖಂಡ ಪರಾಜಿತ ಎಂಎಲ್‌ಎ  ಅಭ್ಯರ್ಥಿ ಕೃಷ್ಣಪ್ಪ ಜಿ ಅವರು ಸೋಮವಾರ ಕಡಬ ಮಿನಿ ವಿಧಾನ ಸೌಧ ಹಾಗೂ ಇತರ ಕಛೇರಿಗಳಿಗೆ ಭೇಟಿ ನೀಡಿ ಕಡಬ ಅಭಿವೃದ್ಧಿಯ ಬಗ್ಗೆ ಭರವಸೆ ನೀಡಿದರು. ಮಿನಿ ವಿಧಾನ ಸೌಧಕ್ಕೆ ಭೇಟಿ ನಮ್ಮ ಕಾಂಗ್ರೇಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಂಜೂರು ಮಾಡಿತ್ತು,  ಕಾಂಗ್ರೇಸ್ ಕಟ್ಟಿದ ಕಡಬದ ಆಡಳಿತ ಸೌಧ ಮಿನಿ ವಿಧಾನಸೌಧವನ್ನು ಈಗಾಗಲೇ ಮಾಜಿಮುಖ್ಯಮುಖ್ಯಂತ್ರಿಗಳು ಉದ್ಘಾಟಿಸಿದ್ದಾರೆ. ಆದರೆ ಅಲ್ಲಿ ಯಾವುದೇ ಕೆಲಸಗಳು

ಕಾಂಗ್ರೇಸ್ ಮುಖಂಡ ಜಿ.ಕೃಷ್ಣಪ್ಪ ರಿಂದ ಕಡಬ ಮಿನಿವಿಧಾನ ಸೌಧ ಪರಿಶೀಲನೆ | ಪರಾಜಿತ ಅಭ್ಯರ್ಥಿಯಿಂದ ಭರಪೂರ ಭರವಸೆ Read More »

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ | ಪುತ್ತೂರಿನಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ

ಪುತ್ತೂರು: ಭ್ರಷ್ಟಾಚಾರ ಇಟ್ಟುಕೊಂಡು ಪುತ್ತೂರಿಗೆ ಬರುವ ಯಾವುದೇ ಅಧಿಕಾರಿಗಳು ಜನಸಾಮಾನ್ಯರಲ್ಲಿ ಹಣಕ್ಕಾಗಿ ಕೈಯೊಡ್ಡಿದರೆ ಅವರನ್ನು ಒಂದೇ ವಾರದಲ್ಲಿ ಇಲ್ಲಿಂದ ಎತ್ತಂಗಡಿ ಮಾಡುವ ಕೆಲಸ ಮಾಡಲಿದ್ದೇನೆ. ಹೀಗೆಂದು ಹೇಳಿದರು ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈ ಪುತ್ತೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಗರದ ಪುರಭವನದಲ್ಲಿ ಶನಿವಾರ ನಡೆದ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪುತ್ತೂರು ಕ್ಷೇತ್ರದಲ್ಲಿ ಯಾವುದೇ ಅಧಿಕಾರಿಗಳಿಂದ ನಾವು ಅಪೇಕ್ಷೆ ಪಡುವುದು ಬಡವರಿಗೆ ಸೇವೆ ನೀಡುವುದನ್ನು. ಅದನ್ನು ಬಿಟ್ಟು ಬಡವರನ್ನು, ಜನಸಾಮಾನ್ಯರ ಕೆಲಸಕ್ಕಾಗಿ ಅಲೆದಾಡಿಸುವ

ಜನಸಾಮಾನ್ಯರಿಗೆ ತೊಂದರೆ ನೀಡಿದಲ್ಲಿ ಅಧಿಕಾರಿಗಳ ಎತ್ತಂಗಡಿ : ಶಾಸಕ ಅಶೋಕ್ ಕುಮಾರ್ ರೈ | ಪುತ್ತೂರಿನಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನಾ ಸಮಾರಂಭ Read More »

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷ ರಮೇಶ್ ರೈ ಡಿಂಬ್ರಿ ಅವರು ಜೂ. ೩ರಂದು ಪುರಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಘಟಕದ ಸಂಚಾಲಕರಾಗಿ, ಅಧ್ಯಕ್ಷರಾಗಿ ೧೨ ವರ್ಷ ಕಾರ್ಯ ನಿರ್ವಹಿಸಿದ್ದ ರಮೇಶ್ ರೈ ಅವರು ಬಳಿಕ ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದರು. ಕುರಿಯ ಉಳ್ಳಾಲ ಶ್ರೀ

ಬಿಜೆಪಿ ಬೆಂಬಲಿತ ಗ್ರಾ.ಪಂ. ಮಾಜಿ ಸದಸ್ಯ ಕಾಂಗ್ರೆಸ್ ಸೇರ್ಪಡೆ Read More »

error: Content is protected !!
Scroll to Top