ರಾಜಕೀಯ

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ

ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್‌ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್‌ ಮತ್ತು ಆಪ್‌ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲ ಆಪ್‌ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆಪ್‌ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ […]

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ Read More »

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟರವರು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಚುಣಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಹೇಶ್‍ ನಡುತೋಟ ಅವರು ಸುಬ್ರಹ್ಮಣ್ಯದ ಬಿಳಿನೆಲೆ ಗ್ರಾಮದ ಕೈಕಂಬದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿ ಯಾಗಿ ಕಳೆದ 15 ವರುಷದಿಂದ ನೆಲೆಸಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ. ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್‍ ನಡುತೋಟ ಆಯ್ಕೆ Read More »

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ Read More »

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಆಡಳಿತ ಮಂಡಳಿಯ ನಿರ್ದೇಶಕರುಗಳ ಚುನಾವಣೆ ಫೆ. 9ರಂದು ನಡೆಯಲಿದೆ. ಸಹಕಾರ ಭಾರತಿಯ ಬೆಂಬಲಿತ ಅಭ್ಯರ್ಥಿಯಾಗಿ ಒಟ್ಟು 17 ಅಭ್ಯರ್ಥಿಗಳು ಕಣಕಿಳಿಯಲಿದ್ದಾರೆ. ಈ ಪೈಕಿ ಸಾಮಾನ್ಯ ಕ್ಷೇತ್ರದಿಂದ 11 ಅಭ್ಯರ್ಥಿಗಳು, ಮಹಿಳಾ ಮೀಸಲಾತಿಯಿಂದ 2 ಅಭ್ಯರ್ಥಿಗಳು, ಹಿಂದುಳಿದ  ‘ ಎ ‘ ವರ್ಗದಿಂದ 1 ಅಭ್ಯರ್ಥಿ, ಹಿಂದುಳಿದ ‘ ಬಿ ‘ ವರ್ಗದಿಂದ 1 ಅಭ್ಯರ್ಥಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡ ದಿಂದ 1

ಫೆ. 9: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ಚುನಾವಣೆ Read More »

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ

ಮುಡಾ ಹಗರಣ, ಪೋಕ್ಸೊ ಕೇಸ್‌ ತೀರ್ಪಿಗೆ ಕ್ಷಣಗಣನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪಾಲಿಗೆ ಇಂದು ನ್ಯಾಯಾಲಯದ ವಿಚಾರಣೆ ನಿರ್ಣಾಯಕವಾಗಲಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಮತ್ತು ಪೋಕ್ಸೊ ಕೇಸಿನಲ್ಲಿ ಯಡಿಯೂರಪ್ಪ ಕುರಿತಾದ ತೀರ್ಪು ಇಂದು ಪ್ರಕಟವಾಗಲಿದೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಶುಕ್ರವಾರ ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ

ಇಂದು ಹೈಕೋರ್ಟಿನಲ್ಲಿ ಸಿದ್ದರಾಮಯ್ಯ, ಯಡಿಯೂರಪ್ಪ ಭವಿಷ್ಯ ನಿರ್ಧಾರ Read More »

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ

ಅಂತ್ಯ ಕಾಣದ ಕಚ್ಚಾಟದಿಂದ ಕಾರ್ಯಕರ್ತರಿಗೆ ಹತಾಶೆ ಬೆಂಗಳೂರು: ಬಿಜೆಪಿಯ ಒಳಜಗಳ ಪರಾಕಾಷ್ಠೆಗೆ ತಲುಪಿದ್ದು, ಸದ್ಯ ಪಕ್ಷ ಗಟ್ಟಿ ನಾಯಕತ್ವವಿಲ್ಲದೆ ಸೂತ್ರ ಕಡಿದ ಗಾಳಿಪಟದಂತೆ ಸಿಕ್ಕದಲ್ಲೆಡೆಗೆ ಹಾರಾಡುತ್ತಿದೆ. ಕಳೆದ ಕೆಲವು ತಿಂಗಳಿಂದೀಚೆಗೆ ನಡೆಯುತ್ತಿರುವ ಬಣ ಜಗಳಕ್ಕೆ ಮದ್ದರೆಯಲು ಬಿಜೆಪಿ ಹೈಕಮಾಂಡ್‌ಗೆ ಸಾಧ್ಯವಾಗದಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಚಿಂತೆಗೀಡು ಮಾಡಿದೆ.ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಡಲು ಸಾಕಷ್ಟು ವಿಷಯಗಳಿದ್ದರೂ ಪ್ರಮುಖ ವಿಪಕ್ಷವಾಗಿರುವ ಬಿಜೆಪಿ ನಾಯಕರು ತಮ್ಮಲ್ಲೇ ಕಚ್ಚಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಸಾಮಾನ್ಯ ಕಾರ್ಯಕರ್ತರು ಮುಂದೇನು ಎಂದು ಭವಿಷ್ಯದ ಬಗ್ಗೆ

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ Read More »

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ

ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಗ್ರಾಪಂ ಕಚೇರಿಯಲ್ಲಿ ಗ್ರಾಪಂ ನಿಧಿಯಿಂದ ಗ್ರಾಮದ 8 ಮಂದಿ ವಿಶೇಷ ಚೇತನ ವ್ಯಕ್ತಿಗಳಿಗೆ ನೀರಿನ ಟ್ಯಾಂಕ್ ವಿತರಿಸಿ ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರಕರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬಕ್ಕೂ ದೊರೆಯುತ್ತಿದೆ. ಇಂದು ಬಡವರ ಮೂರು ಹೊತ್ತಿನ ಊಟಕ್ಕೂ ಈ ಯೋಜನೆ ಸಹಕಾರಿಯಾಗಿದೆ.

ಕೋಡಿಂಬಾಡಿ ಗ್ರಾಪಂ ವ್ಯಾಪ್ತಿಯ ವಿಶೇಷ ಚೇತನರಿಗೆ ನೀರಿನ ಟ್ಯಾಂಕ್ ವಿತರಣೆ Read More »

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ?

ಸಮೀಕ್ಷೆಗಳೆಲ್ಲ ಬಿಜೆಪಿ ಪರ; ಮತದಾರರ ಮನದಾಳ ನಿಗೂಢ ಹೊಸದಿಲ್ಲಿ : ದಿಲ್ಲಿಯಲ್ಲಿ ಕೊನೆಗೂ ಅರವಿಂದ ಕೇಂಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ (ಆಪ್‌) ನಾಗಾಲೋಟಕ್ಕೆ ಬ್ರೇಕ್‌ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಮೂರು ದಶಕಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯಲಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಆಪ್‌ ಕನಸು ಭಗ್ನಗೊಳ್ಳಲಿದೆ. ಆದರೆ ಕಳೆದ ಲೋಕಸಭಾ ಚುನಾವಣೆ ಮತ್ತು ನಂತರ ನಡೆದ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಬುಡಮೇಲಾಗಿರುವುದರಿಂದ

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ? Read More »

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ.

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು Read More »

error: Content is protected !!
Scroll to Top