ರಾಜಕೀಯ

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಸುಳ್ಯ: ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ.17 ಶನಿವಾರ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಳ್ಯ ತಹಶೀಲ್ದಾರ್ ಮಂಜುನಾಥ್ ಜಿ., ಕಡಬ ತಹಶೀಲ್ದಾರ್ ರಮೇಶ್ ಬಾಬು, ಸುಳ್ಯ ತಾ.ಪಂ. ಇಒ ಭವಾನಿಶಂಕರ್ ಎನ್., ಕಡಬ ತಾ.ಪಂ. ಇಒ ನವೀನ್ ಕುಮಾರ್, ಜಿಲ್ಲಾಧಿಕಾರಿ ಕಛೇರಿಯ ಚುನಾವಣಾಧಿಕಾರಿಗಳು ಭಾಗವಹಿಸಿದ್ದರು. ಇಒ ಭವಾನಿಶಂಕರ್ ಸ್ವಾಗತಿಸಿದರು. ಮೀಸಲಾತಿ […]

ಸುಳ್ಯ ತಾಲೂಕಿನ 25 ಗ್ರಾಪಂಗಳಿಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ

ಪುತ್ತೂರು: ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಶುಕ್ರವಾರ ಪುತ್ತೂರು ಪುರಭವನದಲ್ಲಿ ನಡೆಯಿತು. ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್ ಅವರ ನೇತೃತ್ವದಲ್ಲಿ ಗ್ರಾಪಂ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು. ಕಳೆದ 2020 ರಿಂದ ಇದುವರೆಗೆ ಆಯ್ಕೆಯಾದ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದ್ದರು. ಚುನಾವಣಾ ಆಯೋಗ ಮೀಸಲಾತಿ ಆಯ್ಕೆ ಪ್ರಕ್ರಿಯೆಗೆ ವಿಶೇಷ ಸಾಫ್ಟ್ ವೇರ್‍ ನ್ನು ಅಭಿವೃದ್ಧಿ ಪಡಿಸಿತ್ತು.

ಪುತ್ತೂರು ತಾಲೂಕಿನ 22 ಗ್ರಾಪಂಗಳ ಮೀಸಲಾತಿ ನಿಗದಿ ಪ್ರಕ್ರಿಯೆ | ಚುನಾವಣಾ ಆಯೋಗದ ವಿಶೇಷ ಸಾಫ್ಟ್ ವೇರ್ ಮೂಲಕ ಮೀಸಲಾತಿ ನಿಗದಿ Read More »

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಮುಂಬಯಿಯ ಜಿಯೋ ಕನ್ವೆನ್ಸ್ಯನ್ ಸೆಂಟರ್ ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರದಲ್ಲಿ ಮಾಹಿತಿ ಕಾರ್ಯಾಗಾರವೂ ಇಲ್ಲಿ ನಡೆಯುತ್ತದೆ. ದೇಶಾಧ್ಯಂತ ಸುಮಾರು‌2000 ಮಂದಿ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಶನಿವಾರ ಸಮಾವೇಶ ಕೊನೆಗೊಳ್ಳಲಿದೆ.

ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಭಾಗಿಯಾದ ಪುತ್ತೂರು ಶಾಸಕ ಅಶೋಕ್ ರೈ Read More »

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ

ಪುತ್ತೂರು:  ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಇಂದು ನಡೆಯಲಿದೆ. ಪುತ್ತೂರು ತಾಲೂಕಿನ 22 ಹಾಗೂ ಕಡಬ ತಾಲೂಕಿನ 21 ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕ್ರಿಯೆ ಜೂ.16 ಶುಕ್ರವಾರ ಅಪರಾಹ್ನ 3.30 ರಿಂದ ದ.ಕ. ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ. ಕೋಡಿಂಬಾಡಿ, 34 ನೆಕ್ಕಿಲಾಡಿ, ಒಳಮೊಗ್ರು, ಬಜತ್ತೂರು, ಕೆಯ್ಯೂರು, ಮುಂಡೂರು, ಕಬಕ, ಬನ್ನೂರು, ಬಲ್ನಾಡು, ಕೊಳ್ತಿಗೆ,

ಇಂದು ಪುತ್ತೂರು ತಾಲೂಕಿನ 22 ಗ್ರಾಪಂಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ Read More »

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ ಬಿಜೆಪಿ ಸರಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈನಲ್ಲಿ ನಡೆಯಲಿರುವ ಅಧೀವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ. ಸಚಿವ ಸಂಪುಟ ಸಭೆ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ

ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪುಸ್ತಕ ಪರಿಷ್ಕರಣೆ | ಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧಾರ Read More »

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಮನೆಯ ಯಜಮಾನಿಗೆ 2 ಸಾವಿರ ರೂಪಾಯಿಗಳ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಜೂ.16 ರಿಂದ ಆನ್ ಲೈನ್, ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಇಂದು ಮಾತನಾಡಿ, ಬಿಪಿಎಲ್, ಅಂತ್ಯೋದಯ ಕಾರ್ಡ್‍ ದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ನಾಳೆಯಿಂದಲೇ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆಯರು ಆಧಾರ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ Read More »

ಕಾಮಗಾರಿಯ ಪಟ್ಟಿ ಕಳುಹಿಸಿ | ಬೂತ್, ವಲಯ ಅಧ್ಯಕ್ಷರುಗಳಿಗೆ ಶಾಸಕರ ಸೂಚನೆ

ಪುತ್ತೂರು: ಅನುದಾನ ಹಂಚಿಕೆ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಅಗಬೇಕಾದ ವಿವಿಧ ಕಾಮಗಾರಿಗಳ ಪಟ್ಟಿ ಕಳುಹಿಸಿಕೊಡುವಂತೆ ಬೂತ್ ಮತ್ತು ವಲಯ ಅಧ್ಯಕ್ಷರುಗಳಿಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸೂಚನೆಯನ್ನು ನೀಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದ್ದು ಅನುದಾನವನ್ನು ಹಂಚಿಕೆ ಮಾಡುವ ಉದ್ದೇಶದಿಂದ ಈಗಾಗಲೇ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ವಲಯಾಧ್ಯಕ್ಷರುಗಳು ಮತ್ತು ಬೂತ್ ಅಧ್ಯಕ್ಷರುಗಳು ಕಾಮಗಾರಿಯ ಪಟ್ಟಿಯನ್ನು ಸಿದ್ದ ಮಾಡಿ ಶಾಅಸಕರ ಕಚೇರಿಗೆ ತಲುಪಿಸುವಂತೆ ಅಥವಾ ಶಾಸಕರ ಪಿ ಎ ಬಳಿ ನೀಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ.

ಕಾಮಗಾರಿಯ ಪಟ್ಟಿ ಕಳುಹಿಸಿ | ಬೂತ್, ವಲಯ ಅಧ್ಯಕ್ಷರುಗಳಿಗೆ ಶಾಸಕರ ಸೂಚನೆ Read More »

ಕಡಬ ಸಮುದಾಯ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸಲು ಕ್ರಮದ ಭರವಸೆ

ಕಡಬ : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಮಂಗಳವಾರ  ಭೇಟಿ ನೀಡಿ ಪರಿಶೀಲನೆ ನಡೆಸಿ ಆಸ್ಪತ್ರೆಯ ಸಿಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್  ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ  ಹೊಸ ಡಿಜಿಟಲ್ ಎಕ್ಸ್‌ರೇ ಯಂತ್ರ ನೀಡಲಾಗಿದ್ದರೂ ಎಕ್ಸ್‌ರೇ ತಂತ್ರಜ್ಞ  ಹುದ್ದೆ ಖಾಲಿ ಇರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕಿ

ಕಡಬ ಸಮುದಾಯ ಆಸ್ಪತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ | ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸಲು ಕ್ರಮದ ಭರವಸೆ Read More »

ಬೋಳೋಡಿ ಎಂಆರ್‌ಎಫ್ ಘಟಕಕ್ಕೆ ಶಾಸಕರ ಭೇಟಿ | ಕಾಮಗಾರಿ ವೀಕ್ಷಣೆ

ಪುತ್ತೂರು: ಕೆದಂಬಾಡಿ ಗ್ರಾಮದ ಬೋಳೋಡಿಯಲ್ಲಿರುವ ಎಂಆರ್‌ಎಫ್ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕಾಮಗಾರಿ ಪ್ರಗತಿಪರಿಶೀಲನೆ ಮಾಡಿದರು. ಕಾಮಗಾರಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದ್ದು ಇದರ ಉದ್ಘಾಟನಾ ಕಾರ್ಯವೂ ನಡೆಯಲಿದೆ. ಅಕ್ಕಪಕ್ಕದ  ಮೂರು ತಾಲೂಕುಗಳ ತ್ಯಾಜ್ಯಗಳನ್ನು ಇಲ್ಲಿ ವಿಲೇವಾರಿ ಮಾಡಿ ಅದನ್ನು ಮರುಬಳಕೆ ಮಾಡುವ ತ್ಯಾಜ್ಯ ನಿರ್ವಹಣಾ ಘಟಕ ಇದಾಗಿದ್ದು ಗ್ರಾಪಂ ಗಳ ಅನುದಾನದಿಂದ ಇಲ್ಲಿ ಘಟಕವನ್ನು ನಿರ್ಮಿಸಲಾಗಿದೆ. ಶಾಸಕರ ಜೊತೆ ಕೆದಂಬಾಡಿ ಗ್ರಾಮದ ಕಾಂಗ್ರೆಸ್ ಪ್ರಮುಖರಾದ ಬೋಳೋಡಿ ಚಂಧ್ರಹಾಸ ರೈ, ಪುರಂದರ್

ಬೋಳೋಡಿ ಎಂಆರ್‌ಎಫ್ ಘಟಕಕ್ಕೆ ಶಾಸಕರ ಭೇಟಿ | ಕಾಮಗಾರಿ ವೀಕ್ಷಣೆ Read More »

ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರಸಭೆ

ಪುತ್ತೂರು: ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ ನಮಗೊಂದು ಮೂರು ಸೆಂಟ್ಸ್ ಜಾಗ ಕೊಡಿ ಎಂದು ಅನೇಕ ಅರ್ಜಿಗಳು ಗ್ರಾಮೀಣ ಭಾಗದಿಂದ ಬಂದಿದ್ದು ಪ್ರತೀ ಗ್ರಾಮದಲ್ಲಿ ಎರಡರಿಂದ ಮೂರು ಎಕ್ರೆ ಜಾಗ ಗುರುತಿಸಿ ಅದನ್ನು ಮನೆ ಇಲ್ಲದ ಬಡವರಿಗೆ ಹಂಚಿಕೆ ಮಾಡುವಲ್ಲಿ ಕ್ರಮಕೈಗೊಳ್ಳಲಿದ್ದೇನೆ ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಈಗಾಗಲೇ ಜಾಗ ಹುಡಕುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಕೆಯ್ಯೂರಿನಲ್ಲಿ ಸೋಮವಾರ ನಡೆದ ಕೆಯ್ಯೂರು ವಲಯ ಕಾಂಗ್ರೆಸ್

ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರಸಭೆ Read More »

error: Content is protected !!
Scroll to Top