ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಅಧಿಕಾರಿಗಳಿಗೆ ಶಾಸಕರ ಸೂಚನೆ | 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಡಿಸಿದ್ದಾರೆ, ಈ ಮೂಲಕ ಕಳೆದ 7 ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ. ಕೋಡಿಂಬಡಿ ಗ್ರಾಮದ ಅರ್ಬಿ-ಕೂರ್ನಡ್ಕದಲ್ಲಿ ಕೋಡಿಂಬಡಿ ಗ್ರಾಪಂ ಗ್ರಾಮದ ಮನೆ ರಹಿತರಿಗೆ ನಿವೇಶನವನ್ನು ಕಾಯ್ದಿರಿಸಿತ್ತು. 2014-15 ನೇ ಸಾಲಿನಲ್ಲಿ ಕೋಡಿಂಬಾಡಿ ಗ್ರಾಮಪಂಚಾಯತ್ ಅರ್ಬಿಯಲ್ಲಿದ್ದ 1.34 ಎಕ್ರೆ ಸ್ಥಳದಲ್ಲಿ 29 ಮಂದಿ ಫಲಾನುಭವಿಗಳಿಗೆ […]








