ರಾಜಕೀಯ

ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಯಿಸಿದ ತಾಲೂಕು ಕಛೇರಿ ಸಿಬ್ಬಂದಿ

ಕಡಬ: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಅರೋಪ ವ್ಯಕ್ತವಾಗಿದೆ.  ಕಳೆದ 5 ತಿಂಗಳ ಹಿಂದೆ ಸುಬ್ರಹ್ಮಣ್ಯದ ಮಹಿಳೆಯೋರ್ವರು 94 ಸಿ ಅರ್ಜಿ ಸಲ್ಲಿಸಿದ್ದರು.  ಬಳಿಕ ಕುಂಟುತ್ತಾ ಸಾಗುತ್ತಾ ವಿಲೇವಾರಿಯಾಗಲಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯ ಗ್ರಾಮದ ಕಡತ ವಿಲೇವಾರಿ ಮಾಡುವ ಸಿಬ್ಬಂದಿ ಬಳಿ ತೆರಳಿ  ಕಡಬದ ಪತ್ರಕರ್ತರೋರ್ವರು  ವಿಚಾರಿಸುವ  ವೇಳೆ  ಪತ್ರಕರ್ತ ಎಂದು ಪರಿಚಯಿಸಿಕೊಂಡಿದ್ದಾರೆ. ಪತ್ರಕರ್ತರು ಎಂದು ಪರಿಚಯಿಸಿಕೊಂಡು ಇಲ್ಲಿಗೆ […]

ಕಡಬ ತಾಲೂಕು ಕಛೇರಿಯಲ್ಲಿ 5 ತಿಂಗಳಾದರೂ ವಿಲೇವಾರಿವಾಗದ 94ಸಿ ಕಡತ! ಪ್ರಶ್ನಿಸಿದ ಪತ್ರಕರ್ತನಿಗೆ ದಬಾಯಿಸಿದ ತಾಲೂಕು ಕಛೇರಿ ಸಿಬ್ಬಂದಿ Read More »

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ!

ಬೆಂಗಳೂರು: ಕಾಂಗ್ರೆಸ್ ನೀಡಿದ ಭರವಸೆಯಂತೆ ಕರ್ನಾಟಕ ರಾಜ್ಯದ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಬಗ್ಗೆ ವರದಿ ಸಿದ್ಧವಾಗಿದೆ. ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಕೆಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಗ್ಯಾರಂಟಿಗಳು ಖಂಡಿತ ಈಡೇರುತ್ತವೆ. ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವೆಂದು ಹೇಳಿದ್ದೇವೆ. ಅದನ್ನು ಈಡೇರಿಸುತ್ತೇವೆ’ ಎಂದರು. ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ಬಸ್ಸಿನಲ್ಲಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗೆ ಸಿದ್ಧತೆ! Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪುತ್ತೂರು: ಬ್ಯಾನರ್ ವಿಚಾರದಲ್ಲಿ‌ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಯುವಕರು ಸೋಮವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಇದೇ ಸಂದರ್ಭ ಹರ್ಷ ವ್ಯಕ್ತಪಡಿಸಿದ ಪುರುಷರಕಟ್ಟೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು, ಹಲವು ಮುಖಂಡರು ಬಂದು ಆರೋಗ್ಉ ವಿಚಾರಿಸಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರು‌ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಫೇಸ್ ಬುಕ್ ಬರವಣಿಗೆಯನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಹೆಂಗಸು – ಮಕ್ಕಳಿರುವ ಮನೆಗೆ ಭೇಟಿ ನೀಡಿ ಜಗಳ ಮಾಡಿದ್ದು, ಇದು ಸರಿಯಾದ ಕ್ರಮವಲ್ಲ. ಆ ಅಭಿಮಾನಿಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಬುದ್ಧಿವಾದ ಹೇಳಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಸುಳ್ಯದ ಜಯನಗರ ನಿವಾಸಿ ಪ್ರಮೀತ್ ರಾವ್ ಅವರು ಫೇಸ್ ಬುಕಿನಲ್ಲಿ ಬರಹ ಬರೆದಿದ್ದು, ಇದನ್ನು ಆಕ್ಷೇಪಿಸಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮೇ 24ರಂದು ತಡರಾತ್ರಿ

ಅಭಿಮಾನಿಗಳಿಗೆ ಅಶೋಕ್ ರೈ ಬುದ್ಧಿವಾದ ಹೇಳಲಿ | ಸುಳ್ಯದ ಪ್ರಮಿತ್ ರಾವ್ ಮನೆಗೆ ಭೇಟಿ ನೀಡಿ ಶಾಸಕಿ ಭಾಗೀರಥಿ ಮುರುಳ್ಯ Read More »

ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ

ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ್ ಕುಮಾರ್ ರೈ ಯುವರ ಅಭಿನಂದನಾ ಸಭೆ ಮೇ 30 ಮಂಗಳವಾರ ವಿಟ್ಲ ಚರ್ಚ್ ಬಳಿಯ ಶತಮಾನೋತ್ಸವ ಸಮುದಾಯ ಭವನದಲ್ಲಿ ನಡೆಯಲಿದೆ, ಮಧ್ಯಾಹ್ನ 3.30 ಕ್ಕೆ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ನಡೆಯಲಿದೆ. ಆದರಿಂದ ಪಕ್ಷದ ಮುಖಂಡರು, ಮುಂಚೂಣಿ ಘಟಕದ ಪದಾದಿಕಾರಿಗಳು,ವಲಯ , ಬೂತ್ ಮಟ್ಟದ ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹೆಚ್ಚಿನ 

ಮೇ 30 : ವಿಟ್ಲದಲ್ಲಿ ನೂತನ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನಾ ಸಮಾರಂಭ Read More »

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ

ಪುತ್ತೂರು: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ  ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ  ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮದ ಪ್ರಕಾರ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 5948 ಗ್ರಾಪಂಗಳಿಗೆ ತಾಲೂಕುವಾರು, ವರ್ಗವಾರು ಚುನಾವಣೆ 2020 ರಲ್ಲಿ ನಡೆದಿತ್ತು. ಅದಾದ ಬಳಿಕ ಎರಡನೇ ಅವಧಿಗೆ  ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸಲಾಗಿದೆ. ಪರಿಶಿಷ್ಟ ಪಂಗಡ, ಜಾತಿ, ಹಿಂದುಳಿದ ವರ್ಗ ಹೀಗೆ

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಸಂಪೂರ್ಣ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿಗೆ ಚುನಾವಣಾ ಆಯೋಗ ಆದೇಶ Read More »

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ವಜಾ ಮಾಡಿದ್ದ ಒಂದು ದಿನದೊಳಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಹೊರಡಿಸಿದ್ದು, ಸಿ ಗ್ರೂಪ್ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೀಡಲಾದ ಹುದ್ದೆಯಿಂದ ವಜಾ ಮಾಡುತ್ತಿದ್ದಂತೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು

ಪ್ರವೀಣ್ ನೆಟ್ಟಾರು ಪತ್ನಿ ನೂತಾನಾ ಮರುನೇಮಕ : ಸಿಎಂ ಸಿದ್ದರಾಮಯ್ಯ ಘೋಷಣೆ | ವಜಾ ಮಾಡಿದ್ದರಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದು ಸಿಎಂ ಟ್ವೀಟ್ Read More »

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ

ಮಂಗಳೂರು: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಗೊಂಡ ಬಿಜೆಪಿಯ ಶಾಸಕರಿಗೆ ಅಭಿನಂದನಾ ಸಮಾರಂಭ ಮಂಗಳೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜನರಿಂದ ಆಯ್ಕೆಯಾದ ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೋಟಾ ಶ್ರೀನಿವಾಸ್ ಪೂಜಾರಿ, ಗೋಪಾಲಕೃಷ್ಣ ಹೇರಳೆ, ಸಂತೋಷ್ ಕುಮಾರ್ ರೈ ಮೊದಲಾದವರು

ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಭಿನಂದನೆ Read More »

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ 24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ  ನಡೆದ  ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

24 ಶಾಸಕರು ಸಂಪುಟದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ Read More »

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದಲ್ಲಿ ಭಾಗಿಯಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ನಾಗೇಶ್ ಅಮಾನತಾದ ಸಿಬ್ಬಂದಿ. ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದಲ್ಲಿ ನಾಗೇಶ್ ಭಾಗಿಯಾದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಉಜಿರೆ ಪಿಡಿಓ ಪ್ರಕಾಶ್ ಶೆಟ್ಟಿ ಈ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ವಿಜಯೋತ್ಸವದಲ್ಲಿ ಭಾಗಿ: ಗ್ರಾಪಂ ಸಿಬ್ಬಂದಿ ಅಮಾನತು Read More »

error: Content is protected !!
Scroll to Top