ರಾಜಕೀಯ

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿದ್ದರಾಮಯ್ಯ ಸಂಪುಟದ ಕೆಲ ಸಚಿವರು RSS ಬ್ಯಾನ್ ಮಾಡುತ್ತೇವೆ. ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ನೇರವಾಗಿ ಹೇಳಿಕೆಗಳನ್ನು ಕೊಡುತ್ತಿದ್ದರೆ, ಇತ್ತ ಸಚಿವ ಜಿ. ಪರಮೇಶ್ವರ್ ಮಾತ್ರ ಈ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್‌ಐಗೆ ಸಂಬಂಧಿಸಿದಂತೆ ಹೇಳಿದ್ದೆವು. ಒಂದು ವೇಳೆ ಅವರು ಶಾಂತಿಗೆ ಭಂಗ ತಂದರೆ, ನಾವು ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ, […]

ಬಜರಂಗದಳ ಬ್ಯಾನ್ ಬಗ್ಗೆ ಚರ್ಚೆಯೇ ನಡೆದಿಲ್ಲ: ಸಚಿವ ಪರಮೇಶ್ವರ್ Read More »

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!?

ಬೆಂಗಳೂರು: ಶಾಸಕ ಯು.ಟಿ. ಖಾದರ್ ಅವರು ಕಾಂಗ್ರೆಸಿನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಸ್ವತಃ ಯು.ಟಿ. ಖಾದರ್ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾಗಿರುವ ಬೆನ್ನಿಗೇ ಯು.ಟಿ. ಖಾದರ್ ಅವರು ಈ ಹೇಳಿಕೆ ನೀಡಿದ್ದಾರೆ. ಸ್ಪೀಕರ್ ತಟಸ್ಥರಾಗಿರಬೇಕು ಎಂಬ ಕಾರಣಕ್ಕೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ. ಕರಾವಳಿ ಭಾಗದಿಂದ ಅತೀ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.

ಸ್ಪೀಕರ್ ಯು.ಟಿ. ಖಾದರ್ ರಾಜೀನಾಮೆ!? Read More »

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ  ಅವರು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಸೋಲೇ ಅಂತಿಮವಲ್ಲ. ಸೋಲಿನಿಂದ ಕಂಗೆಡದೆ ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ನಾವೆಲ್ಲರೂ ಅರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಬೇಕಿದೆ.

ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ Read More »

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್?

ಬೆಂಗಳೂರು : ಸರ್ಕಾರವು ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ನಿಷೇಧಿಸುತ್ತದೆ ಮತ್ತು ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದ್ದು, ಈ ಮೊದಲು ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಕೃತ್ಯಗಳು ಮುಕ್ತವಾಗಿ ನಡೆಯುತ್ತಿದೆ

ಶಾಂತಿ ಕದಡಿದರೆ ಭಜರಂಗದಳ, ಆರ್‌ಎಸ್‌ಎಸ್‌ ನಿಷೇಧ: ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ | ಹಿಜಾಬ್, ಹಲಾಲ್ ಕಟ್, ಗೋ ಹತ್ಯೆ ಕಾನೂನು‌ ವಾಪಾಸ್? Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕರನ್ನು ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಕಾರ್ಯಕರ್ತರ ಜೊತೆ ಮಾತನಾಡಿದ ಅವರು ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಈ ಸಂದರ್ಭ ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಜಗದೀಶ್ ಕಾರಂತ್ Read More »

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ

ಪುತ್ತೂರು: ಬಳ್ಳಾರಿಯಿಂದ ಆಗಮಿಸಿದ ಹಿಂದೂ ಕಾರ್ಯಕರ್ತನೋರ್ವ ಅರುಣ್ ಕುಮಾರ್ ಪುತ್ತಿಲ ಅವರಿಗೆ ಶಾಲು ಹಾಕಿ, ಭಗವದ್ಗೀತೆಯ ಪುಸ್ತಕ ನೀಡಿ ಗೌರವಿಸಿದರು. ಅರುಣ್ ಪುತ್ತಿಲ ಅವರ ಕಚೇರಿಗೆ ಆಗಮಿಸಿದ ಬಳ್ಳಾರಿಯ ತೇಜ ಎನ್ನುವ ಯುವಕ, ಅಭಿಮಾನ ಮೆರೆದದ್ದು ಹೀಗೆ. ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತ‌ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರಸಿದ್ಧಿ ಪಡೆದುಕೊಳ್ಳುತ್ತಿದ್ದಾರೆ‌.

ಬಳ್ಳಾರಿಯ ಕಾರ್ಯಕರ್ತನಿಂದ ಪುತ್ತಿಲಗೆ ಗೌರವ Read More »

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಯು.ಟಿ ಖಾದರ್ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿಗೆ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಖಾದರ್ ಅವರನ್ನು ಹೊರತುಪಡಿಸಿ ಮತ್ತ್ಯಾರೂ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೊದಲಿಗೆ ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು. ಬಳಿಕ ಖಾದರ್

ವಿಧಾನಸಭೆ ಸ್ಪೀಕರ್‌ ಆಗಿ ಯು.ಟಿ ಖಾದರ್ ಅವಿರೋಧ ಆಯ್ಕೆ Read More »

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಮಂಗಳವಾರ ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸ್ಪೀಕರ್ ಸ್ಥಾನಕ್ಕೆ ನಾಳೆ (ಮೇ 24) ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು  ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಝಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಬೆಂಗಳೂರು: ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು. ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿರುವುದನ್ನು ಇಲ್ಲಿ ಗಮನಿಸಬಹುದು.

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ

ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ, ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆರ್​.ವಿ. ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಸದಸ್ಯರ ಪ್ರಮಾಣ ವಚನ ಸ್ವೀಕಾರದ ಜತೆಗೆ

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ Read More »

error: Content is protected !!
Scroll to Top