ರಾಜಕೀಯ

`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ

ಪುತ್ತೂರು: ನಿರೀಕ್ಷೆಯಂತೆಯೇ ಪುತ್ತಿಲ ಪರಿವಾರ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಸೇವಾ ಸಮರ್ಪಣೆ ಸಮಾರಂಭ ಹಲವು ಕುತೂಹಲಗಳಿಗೆ ನಾಂದಿ ಹಾಡಿತ್ತು. ಆ ಎಲ್ಲಾ ಕುತೂಹಲಗಳಿಗೆ ಸಮಾರಂಭ ಉತ್ತರ ನೀಡಿದೆ. ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಾಗಿ ಸಾಗಿ ಬಂದ ಕಾಲ್ನಡಿಗೆ ಜಾಥಾ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಒಂದು ಪ್ರದಕ್ಷಿಣೆ ಬಂದು, ರಥಬೀದಿಯಲ್ಲಿ ಹಾಕಿದ್ದ ವೇದಿಕೆಗೆ ಆಗಮಿಸಿತು. ವೇದಿಕೆಗೆ ಹತ್ತಿದ ಅರುಣ್ ಕುಮಾರ್ ಪುತ್ತಿಲ ಅವರು ಸಭೆಗೆ ಸಾಷ್ಟಾಂಗ ನಮಸ್ಕರಿಸಿದರು. ನಂತರ ನಡೆದ ಸಭೆಯಲ್ಲಿ ಪುತ್ತಿಲ ಪರಿವಾರ ಲೋಗೊ ಅನಾವರಣ […]

`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ Read More »

ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ | ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ

ಪುತ್ತೂರು: ಪುತ್ತಿಲ ಅಭಿಮಾನಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು. ದರ್ಬೆಯಲ್ಲಿ ಚಾಲನೆ ಪಡೆದ ಜಾಥ ಮುಖ್ಯರಸ್ತೆಯಾಗಿ ಸಂಚರಿಸಿತು. ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಹಲವು ಮಂದಿ ಜಾಥಾದಲ್ಲಿ ಬರಿಗಾಲಲ್ಲಿ ನಡೆದುಕೊಂಡು ಬಂದರು. ಜಾಥಾ ಶಿಸ್ತುಬದ್ಧವಾಗಿ ಸಾಗಿಬಂದಿತು.

ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ | ಕಾಲ್ನಡಿಗೆ ಜಾಥಕ್ಕೆ ದರ್ಬೆಯಲ್ಲಿ ಚಾಲನೆ Read More »

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಶಾಸಕ ಅಶೋಕ್ ರೈ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆ ಸೇರಿರುವ ಹಿಂದೂ ಕಾರ್ಯಕರ್ತರನ್ನು ಶಾಸಕ ಅಶೋಕ್ ಕುಮೃ್ ರೈ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಪೊಲೀಸ್ ದೌರ್ಜನ್ಯದಲ್ಲಿ ಕಾಂಗ್ರೆಸಿನ ಕೈವಾಡ ಇಲ್ಲ ಎನ್ನುವುದು ನಿಮಗೂ ತಿಳಿದಿದೆ. ಪೊಲೀಸರು ಪ್ರಕರಣವನ್ನು ಅಲ್ಲಿಂದಲ್ಲಿಗೆ ಮುಗಿಸುವ ಪ್ರಯತ್ನದಲ್ಲಿದ್ದರು. ಈ ಪ್ರಕರಣದ ವಿಷಯ ತಿಳಿಯುತ್ತಿದ್ದಂತೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆಯನ್ನು ನೀಡಿದ್ದೇನೆ ಎಂದ ಅವರು, ಅಗತ್ಯ ಸಹಕಾರ ಕೇಳಿ. ನನ್ನಿಂದಾಗುವ ಸಹಕಾರ ಖಂಡಿತಾ ನೀಡುತ್ತೇನೆ ಎಂದು ಭರವಸೆ ನೀಡಿದರು. ಮಾಜಿ ಶಾಸಕಿ ಶಕುಂತಳಾ

ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಭೇಟಿಯಾದ ಶಾಸಕ ಅಶೋಕ್ ರೈ Read More »

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ

ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರನ್ನು ಭಾನುವಾರ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕುಂಟಾರು ರವೀಶ ತಂತ್ರಿ ಭೇಟಿಯಾಗಿ ಧೈರ್ಯ ತುಂಬಿದರು. ಬ್ಯಾನರ್ ಪ್ರಕರಣದಲ್ಲಿ ಪೊಲೀಸರ ಬಂಧಿಯಾಗಿ ಹಲ್ಲೆಗೊಳಗಾದ ಯುವಕರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಭೇಟಿಯಾದರು. ಪ್ರಮುಖರು ಉಪಸ್ಥಿತರಿದ್ದರು.

ಪೊಲೀಸ್ ದೌರ್ಜನ್ಯ: ಯುವಕರಿಗೆ ಧೈರ್ಯ ತುಂಬಿದ ಕುಂಟಾರು ರವೀಶ ತಂತ್ರಿ Read More »

ಇಂದು : ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಕಾಲ್ನಡಿಗೆ ಜಾಥಾ | ಬೃಹತ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಧ್ಯೇಯ ವಾಕ್ಯದೊಂದಿಗೆ ಕಾಲ್ನಡಿಗೆ ಜಾಥಾ –ಸೇವಾ ಸಮರ್ಪಣಾ ಕಾರ್ಯಕ್ರಮ ಇಂದು ನಡೆಯಲಿದೆ. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಸಂಜೆ 4 ಗಂಟೆಯಿಂದ ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ತನಕ ಕಾಲ್ನಡಿಗೆ ಜಾಥಾ ನಡೆಯಲಿದೆ. ಬಳಿಕ 6 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಯಲಿದೆ. ಸಮಸ್ತ ಹಿಂದೂ  ಬಾಂಧವರು ಸಹಸ್ರ ಸಂಖ್ಯೆಯಲ್ಲಿ ಬಂದು ಪಾಲ್ಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

ಇಂದು : ನಮ್ಮ ನಡಿಗೆ ಮಹಾಲಿಂಗೇಶ್ವರನ ಕಡೆಗೆ ಕಾಲ್ನಡಿಗೆ ಜಾಥಾ | ಬೃಹತ್ ಕಾರ್ಯಕರ್ತರ ಸಭೆ Read More »

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದವರನ್ನು ರೌಡಿ ಅಂದ್ರು: ಮಾಜಿ ಶಾಸಕಿ ಹೇಳಿಕೆ | ಶಾಸಕರು ನೀಡಿರುವ ಸೂಚನೆಯಂತೆ ಸಮಾಜದ ಶಾಂತಿಯೇ ನಮ್ಮ ಉದ್ದೇಶ: ಶಕುಂತಳಾ ಶೆಟ್ಟಿ

ಪುತ್ತೂರು: ಹಲ್ಲೆ ನಡೆಸಲು ಕಾಂಗ್ರೆಸ್ ಒತ್ತಡ ಹಾಕಿಯೇ ಇಲ್ಲ. ಆ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ಬೆಂಗಳೂರಿಗೆ ತೆರಳಿದ್ದರು. ನಾನಾಗಿ ಆ ವಿಷಯಕ್ಕೆ ಹೋಗಿಲ್ಲ. ಹೀಗಿರುವಾಗ ಒತ್ತಡ ಹಾಕುವುದಾದರೂ ಯಾರು? ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಳಿಕ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿದರು. (ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿರುವ ವೀಡಿಯೋ ಇಲ್ಲಿ ನೋಡಿ.) ಪೊಲೀಸ್ ದೌರ್ಜನ್ಯ ನಡೆದ ಬಳಿಕ ಪೊಲೀಸರ ಜೊತೆ ಮಾತನಾಡಿದ್ದೆ. ಆ ಸಂದರ್ಭ ಬ್ಯಾನರ್ ಹಾಕಿ

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದವರನ್ನು ರೌಡಿ ಅಂದ್ರು: ಮಾಜಿ ಶಾಸಕಿ ಹೇಳಿಕೆ | ಶಾಸಕರು ನೀಡಿರುವ ಸೂಚನೆಯಂತೆ ಸಮಾಜದ ಶಾಂತಿಯೇ ನಮ್ಮ ಉದ್ದೇಶ: ಶಕುಂತಳಾ ಶೆಟ್ಟಿ Read More »

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ Read More »

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದಾರೆ ಎಂಬ ಒಂದೇ ಕಾರಣಕ್ಕೆ ಬ್ರಿಟಿಷ್ ಮಾದರಿಯ ಕ್ರೌರ್ಯ ನಡೆಸಿರುವುದು ಖಂಡನೀಯ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾಗಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುತಾಲಿಕ್ ಮಾತಿನ ಪೂರ್ಣ ವಿವರ ಈ ವೀಡಿಯೋದಲ್ಲಿದೆ. ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್, ಸುಬ್ರಹ್ಮಣ್ಯ ಎಸ್. ನಟ್ಟೋಜ ಉಪಸ್ಥಿತರಿದ್ದರು.

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ Read More »

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು… ಎಂದು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಕೈಗೊಂಡರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಿದರು. ಇತ್ತ ಕಡೆ ಪ್ರಮಾಣವಚನ ಬೋಧಿಸುತ್ತಿದ್ದಂತೆ, ಇನ್ನೊಂದೆಡೆ ಮುಖ್ಯಮಂತ್ರಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಇನ ನಾಮಫಲಕವನ್ನು ಅಳವಡಿಸಲಾಯಿತು. ಬಳಿಕ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್,

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ Read More »

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ

ಪುತ್ತೂರು: ಚುನಾವಣೆ ಸಂದರ್ಭ ಸಂಗ್ರಹವಾದ ಮೊತ್ತದಲ್ಲಿ ಉಳಿದ ಹಣದಿಂದ ನಿಡ್ಪಳ್ಳಿ ಶ್ರೀ ಶಾಂತಾದುರ್ಗಾ ದೇವಸ್ಥಾನಕ್ಕೆ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಿಡ್ಪಳ್ಳಿ ಪುತ್ತಿಲ ಅಭಿಮಾನಿಗಳು ಈ ಕೊಡುಗೆಯನ್ನು ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ. ಚುನಾವಣೆಯಲ್ಲಿ ಹಣ ಸಂಗ್ರಹ, ಖರ್ಚು – ವೆಚ್ಚಗಳನ್ನು ಕಾರ್ಯಕರ್ತರೇ ನೋಡಿಕೊಂಡಿದ್ದು, ತಾನು ಆ ವಿಷಯದಲ್ಲಿ ತಲೆ ಕೆಡಿಸಿಕೊಂಡಿಲ್ಲ ಎಂದು ಅರುನ್ ಕುಮಾರ್ ಪುತ್ತಿಲ ಅವರು ಹೇಳಿಕೆ ನೀಡಿರುವುದನ್ನು ಸ್ಮರಿಸಿಕೊಳ್ಳಬಹುದು.

ಪುತ್ತಿಲ ಅಭಿಮಾನಿಗಳಿಂದ ನಿಡ್ಪಳ್ಳಿ ದೇವಳಕ್ಕೆ ಕೊಡುಗೆ Read More »

error: Content is protected !!
Scroll to Top