ರಾಜಕೀಯ

ಬೆಟ್ಟಂಪಾಡಿಯಲ್ಲಿ ಬೂತ್ ವಿಜಯ ಅಭಿಯಾನ

ಪುತ್ತೂರು: ಬೆಟ್ಟಂಪಾಡಿ ಗ್ರಾಮದಲ್ಲಿ ಬೂತ್ ವಿಜಯ ಅಭಿಯಾನದ ಅಂಗವಾಗಿ ಶಂಕರ್ ಅವರ ಮನೆಯಲ್ಲಿ ಸೋಮವಾರ ಬಿಜೆಪಿ ಧ್ವಜವನ್ನು ಹಸ್ತಾಂತರಿಸಿ, ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪುತ್ತೂರು ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಜಗನ್ನಾಥ ರೈ ಕೊಮ್ಮಂಡ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಟ್ಟಂಪಾಡಿಯಲ್ಲಿ ಬೂತ್ ವಿಜಯ ಅಭಿಯಾನ Read More »

13.90 ಲಕ್ಷ ರೂ.ನ ಪರ್ಪುಂಜ ಶಾಲಾ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಾಸಕರ ಅನುದಾನದಿಂದ ಪರ್ಪುಂಜ ಸ.ಹಿ.ಪ್ರಾ. ಶಾಲೆಗೆ 13.90 ಲಕ್ಷ ರೂ.ನಲ್ಲಿ ಹೊಸ ಕೊಠಡಿಗೆ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಜ. 1ರಂದು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಸಂಜೀವ ಮಠಂದೂರು, ಸರಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಯಾವುದೇ ಕೊರತೆ ಆಗಬಾರದು ಎಂಬ ನೆಲೆಯಲ್ಲಿ ಸರಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಪುತ್ತೂರಿನ 111 ಶಾಲೆಗಳಿಗೆ ನೂತನ ಕೊಠಡಿ ನಿರ್ಮಾಣಕ್ಕಾಗಿ 5 ಕೋಟಿ ರೂ. ಅನುದಾನ

13.90 ಲಕ್ಷ ರೂ.ನ ಪರ್ಪುಂಜ ಶಾಲಾ ನೂತನ ಕೊಠಡಿಗೆ ಶಿಲಾನ್ಯಾಸ, ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು Read More »

ಕುಟ್ಟಿನೋಪಿನಡ್ಕ ಶಾಲೆಯ ನೂತನ ಕಾಮಗಾರಿಗೆ ಶಿಲಾನ್ಯಾಸ, ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಜಿಲ್ಲೆಯಲ್ಲಿ ಪುತ್ತೂರಿಗೆ ಮಾತ್ರ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಎಂದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಕುಟ್ಟಿನೋಪಿನಡ್ಕ ಪ್ರಾಥಮಿಕ ಶಾಲಾ ತರಗತಿ ಕಟ್ಟಡಕ್ಕೆ ಮಂಜೂರಾದ 13.90 ಲಕ್ಷ ರೂ.ನ ಕಾಮಗಾರಿಗೆ ಶಿಲಾನ್ಯಾಸ ಹಾಗೂ 3.30 ಲಕ್ಷ ರೂ.ನ ಸ್ಮಾರ್ಟ್ ಕ್ಲಾಸ್, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಶಾಲೆಗಳಿಗೆ ಉಚಿತ ಶಿಕ್ಷಣ, ಉಚಿತ ಬಿಸಿಊಟ, ಉಚಿತ ಸಮವಸ್ತ್ರ, ಪೌಸ್ಟಿಕ ಆಹಾರ, ಪ್ರತಿಭಾವಂತ ಅಧ್ಯಾಪಕರು, ನೂತನ ಶಾಲಾ ಕೊಠಡಿ, ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಗ್ರಾಮೀಣ ಮಕ್ಕಳ ಭವಿಷ್ಯದ ದೃಷ್ಠಿಯಿಂದ ದ.ಕ. ಜಿಲ್ಲೆಯಲ್ಲಿ

ಕುಟ್ಟಿನೋಪಿನಡ್ಕ ಶಾಲೆಯ ನೂತನ ಕಾಮಗಾರಿಗೆ ಶಿಲಾನ್ಯಾಸ, ಶುದ್ಧ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆ | ಜಿಲ್ಲೆಯಲ್ಲಿ ಪುತ್ತೂರಿಗೆ ಮಾತ್ರ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಎಂದ ಶಾಸಕ ಸಂಜೀವ ಮಠಂದೂರು Read More »

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ

ಪುತ್ತೂರು: ಭಾರತ್ ಜೋಡೋ ಯಾತ್ರೆಯನ್ನು ತಡೆಯುವ ಉದ್ದೇಶದಿಂದ ರಾಹುಲ್ ಗಾಂಧಿಯವರಿಗೆ ಕೇಂದ್ರ ಸರಕಾರ ಪತ್ರ ಬರೆಯುತ್ತದೆ. ಆದರೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವಾಗ ಇದಾವುದೇ ನಿಯಮಾವಳಿ ಅನ್ವಯವಾಗುವುದಿಲ್ಲವೇ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಪ್ರಶ್ನಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಮುಂದುವರಿಯುತ್ತಿದ್ದಂತೆ ಕೇಂದ್ರ ಸಚಿವರಾದ ಮನ್ಸೂರ್ ಮಾಂಡವಿಯಾ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುತ್ತಾರೆ. ನಿಮ್ಮ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಲ್ಲ ಎಂದು ಆರೋಪಿಸುತ್ತಾರೆ. ಅಂದರೆ ಇದು ಯಾತ್ರೆಯನ್ನು

ಭಾರತ್ ಜೋಡೋ ಯಾತ್ರೆಯ ನಿರ್ಬಂಧ ಅಮಿತ್ ಶಾಗೇಕಿಲ್ಲ | ಪುತ್ತೂರು ಕಾಂಗ್ರೆಸ್ ಪ್ರಶ್ನೆ Read More »

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ

ಪುತ್ತೂರು: “ಎನನ್ ಬದ್ಕಾಯ ಮಗ…” ತನ್ನ ಅನಾರೋಗ್ಯದ ಸಮಯದಲ್ಲಿ ನೆರವಾದ ಶಾಸಕ ಸಂಜೀವ ಮಠಂದೂರು ಅವರಿಗೆ ಮಹಿಳೆಯೊಬ್ಬರು ಕೃತಜ್ಞತೆ ಸಲ್ಲಿಸಿದ್ದ ಭಾವುಕ ಕ್ಷಣವಿದು. ಕೆಲ ದಿನಗಳ ಹಿಂದೆ ಪುರಭವನದಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ಮಠಂದೂರು ಅವರು ಹೊರಬರುತ್ತಿದ್ದಂತೆ, ಮಹಿಳೆಯೊಬ್ಬರು ಶಾಸಕರ ಕೈಹಿಡಿದು ತನ್ನ ಒಡಲಿನ ಮಾತುಗಳನ್ನು ಹೊರಗೆಡವಿದ ಬಗೆ ಇದು. ಕಳೆದ ಕೆಲ ದಿನಗಳಿಂದ ಬೇರೆ ಬೇರೆ ಸಾಲುಗಳನ್ನು ಹೊದ್ದುಕೊಂಡು, ಶಾಸಕರ ಫೊಟೋವೊಂದು ವೈರಲ್ ಆಗಿತ್ತು. ಹೆಚ್ಚಿನ ಮಂದಿ ತಮ್ಮ ಸಂದೇಹವನ್ನು ತೋಡಿಕೊಂಡಿದ್ದರೂ ಕೂಡ. ಮಹಿಳೆಯ ಕಣ್ಣಲ್ಲಿ ಕೃತಜ್ಞತಾ

ಎನನ್ ಬದ್ಕಾಯ ಮಗ… | ಶಾಸಕ ಮಠಂದೂರಿಗೆ ಕೃತಜ್ಞತೆ ಸಲ್ಲಿಸಿದ್ದ ಮಹಿಳೆ | ವೈರಲ್ ಆಗಿದ್ದ ಫೊಟೋದ ಅಸಲಿ ಕಥೆ ಇಲ್ಲಿದೆ ನೋಡಿ Read More »

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ?

ಪುತ್ತೂರು: ಒಂದರ ಬೆನ್ನಿಗೆ ಇನ್ನೊಂದರಂತೆ ಹೊರಬರುತ್ತಿರುವ ಆಡಿಯೋ ತುಣುಕುಗಳು ಚುನಾವಣೆಗೆ ತಯಾರಿಯೇ? ಹೌದು ಎನ್ನುತ್ತಿವೆ ಬಲ್ಲಮೂಲಗಳು. ಚುನಾವಣೆ ಇನ್ನೇನು ಬಂದೇ ಬಿಟ್ಟಿತು ಎನ್ನುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹೊಸ ವರಸೆಗಳು ಆರಂಭವಾಗತೊಡಗುತ್ತವೆ. ಹೇಳಿಕೆಗಳ ವಾರ್, ವೀಡಿಯೋ ರಿಲೀಸ್ ಹೀಗೆ ಅನೇಕ ರೀತಿ. ಆದರೆ ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಆಡಿಯೋ ವಾರ್ ಆರಂಭವಾಗಿವೆ. ಈ ಆಡಿಯೋ ವಾರ್ ಯಾರನ್ನು ಗುರಿಯಾಗಿಸಿಕೊಂಡಿವೆ? ಉದ್ದೇಶವಾದರೂ ಏನು? ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮಸಿ ಎರಚುವ ಹುನ್ನಾರವೇ? ಹೀಗೆ ಹತ್ತು ಹಲವು ಪ್ರಶ್ನೆಗಳು

ಸರಣಿ ಆಡಿಯೋ ರಿಲೀಸ್: ಚುನಾವಣೆಗೆ ಭರ್ಜರಿ ತಯಾರಿಯೇ? Read More »

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರಡ್ಕ – ಪರಿಯಾಲ್ತಾಡ್ಕ ಪ್ರದೇಶದಲ್ಲಿ 9.75 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಪ್ರಮುಖರಾದ ಹರೀಶ್ ಭಟ್, ಉದಯ ಬಾಸ್ಕರ, ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಬಳಂತಿಮೊಗರು, ಕೇಪು ಪಂಚಾಯತ್ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ, ಪುಣಚ ಮಹಾಶಕ್ತಿಕೆಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್, ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಪುಣಚ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ, ವ್ಯಾಪಾರ ಪ್ರಕೋಷ್ಠದ ಸಂಚಾಲಕ

ಸಾರಡ್ಕ-ಪರಿಯಾಲ್ತಡ್ಕ: 9.75 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ

ಪುತ್ತೂರು: ಪುಣಚ  ಗ್ರಾಮದ ಕೃಷ್ಣಮೂಲೆಯಿಂದ ಬರೆಂಜ ಮಲಿಪಾಡಿ  ನೀಡ್ಪಳಾ ಕುರುಡುಕಟ್ಟೆ ಪ- ಜಾತಿ ಪ ಪಂಗಡ  ಕಾಲೋನಿ ರಸ್ತೆಗೆ ಸೇತುವೆ ನಿರ್ಮಾಣ ಮತ್ತು ರಸ್ತೆ ಅಭಿವೃದ್ಧಿಗೆ  2 ಕೋಟಿ 73 ಲಕ್ಷ ರೂ. ಅನುದಾನದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷೆ ಪ್ರತಿಭಾ, ಬಲ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಬಾಜಾಪ ಮಂಡಲ  ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಾಜಾಪ  ಪ್ರಕೋಷ್ಠದ ಶ್ರೀಕಾಂತ್ ಪೂಂಜಾ, ಶಕ್ತಿ ಕೇಂದ್ರದ

ಕುರುಡುಕಟ್ಟೆ ಪ.ಜಾತಿ, ಪ.ಪಂಗಡ ಕಾಲನಿ ರಸ್ತೆಗೆ ಸೇತುವೆ, ರಸ್ತೆ: 2.73 ಕೋಟಿ ರೂ.ನ ಯೋಜನೆಗೆ ಶಂಕುಸ್ಥಾಪನೆ Read More »

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು

ಪುತ್ತೂರು: ಆರ‍್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ೧ ಕೋಟಿ ೬೦ ಲಕ್ಷ ರೂ.ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಡಿ. 15ರಂದು ನಡೆಯಿತು. ಕಾರ್ಯಕ್ರಮ ಕೊನೆಯ ಭಾಗವಾದ ಸಮಾರೋಪ ಸಮಾರಂಭ ಕಾರ್ಯಕ್ರಮ ಸಂಟ್ಯಾರಿನ ಯತೀಶ್ ದೇವ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರೂ, ಪ್ರಗತಿಪರ ಸಾವಯವ ಕೃಷಿಕರಾದ ಎ.ಪಿ ಸದಾಶಿವ ಭಟ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಶಾಸಕ ಸಂಜೀವ ಮಠoದೂರು ಮಾತನಾಡಿ, ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಗೆ 1.60

ಆರ್ಯಾಪು ಗ್ರಾ.ಪಂ.ನ ಶಿಲಾನ್ಯಾಸ ಕಾರ್ಯಕ್ರಮ ಸಮಾರೋಪ: 1.60 ಕೋಟಿ ರೂ.ನ ಕಾಮಗಾರಿ ಶುರು Read More »

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ

ಶಿಗ್ಗಾಂವ್ ತಾಲ್ಲೂಕಿನಲ್ಲಿ ಶೀಘ್ರದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ರಾರಂಭವಾಗುತ್ತದೆ. ಬೇರೆ ಬೇರೆ ತಂತ್ರಜ್ಞಾನದಲ್ಲಿ ಆಧುನಿಕ ತರಬೇತಿ ಕೇಂದ್ರಕ್ಕೆ ಮುಂದಿನ ತಿಂಗಳು ಅದಕ್ಕೆ ಅಡಿಗಲ್ಲು ಹಾಕಲಿದ್ದೇನೆ. ಈ ಮೂಲಕ ಶಿಗ್ಗಾಂವ್ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಮಾಡುವ ಇಚ್ಛೆ ನನ್ನದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ಶಿಗ್ಗಾಂವ್ ನೂತನ ಬಸ್ ಘಟಕ ಮತ್ತು ಚಾಲನಾ ಹಾಗೂ ತಾಂತ್ರಿಕ ತರಬೇತಿ ಕೇಂದ್ರದ ಶಂಕುಸ್ಥಾಪನಾ

ಶಿಗ್ಗಾಂವ್ ನಲ್ಲಿ ದೊಡ್ಡ ಪ್ರಮಾಣದಲ್ಲಿ ಕೌಶಲ್ಯ ಅಭಿವೃದ್ಧಿ ಆಗಲಿದೆ – ಸಿಎಂ ಬೊಮ್ಮಾಯಿ Read More »

error: Content is protected !!
Scroll to Top